ಕರಾವಳಿ ಮೀನುಗಾರರಿಂದ ಚುನಾವಣೆ ಸಾಮೂಹಿಕ ಬಹಿಷ್ಕಾರ!

Public TV
1 Min Read
KWR

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕರಾವಳಿ ಮೀನುಗಾರರು ಸಾಮೂಹಿಕವಾಗಿ ಚುನಾವಣಾ ಬಹಿಷ್ಕಾರಕ್ಕೆ ಮುಂದಾಗಿದ್ದಾರೆ.

ಈ ಕುರಿತು ಜಿಲ್ಲಾ ಮೀನುಗಾರರ ಸಂಘದ ಅಧ್ಯಕ್ಷರಾದ ಗಣಪತಿ ಮಾಂಗ್ರೆ ಮಾತನಾಡಿ, ಕಳೆದ ಡಿಸೆಂಬರಿನಲ್ಲಿ ನಾಪತ್ತೆಯಾಗಿದ್ದ ಮೀನುಗಾರರ ಬಗ್ಗೆ ಸಮರ್ಪಕವಾಗಿ ಕ್ರಮಕೈಗೊಳ್ಳದ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಅಸಡ್ಡೆ ತೋರಿದ್ದು, ಪರಿಣಾಮ ಪಕ್ಷಾತೀತವಾಗಿ ಚುನಾವಣೆ ಬಹಿಷ್ಕರಿಸುತ್ತೇವೆ ಎಂದು ತಿಳಿಸಿದ್ದಾರೆ.

UDP FISH 3

ಚುನಾವಣಾ ಬಹಿಷ್ಕಾರದ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸುತ್ತೇವೆ. ಮೀನುಗಾರರ ಪತ್ತೆಗೆ ಸರ್ಕಾರಗಳು ಅಸಡ್ಡೆ ತೋರದೆ ಕ್ರಮಕೈಗೊಳ್ಳಬೇಕಿದೆ ಎಂದಿದ್ದಾರೆ.

ಡಿಸೆಂಬರ್ 13 ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದ ಸುವರ್ಣ ತ್ರಿಭುಜ ಎನ್ನುವ ಬೋಟ್ ಮಹಾರಾಷ್ಟ್ರದ ರತ್ನಗಿರಿಯಲ್ಲಿ ಕಾಣೆಯಾಗಿತ್ತು. ಘಟನೆಯಲ್ಲಿ ಜಿಲ್ಲೆಯ ಐದು ಜನ ಹಾಗೂ ಮಲ್ಪೆಯ ಇಬ್ಬರು ಕಾಣೆಯಾಗಿದ್ದರು. ಈ ಹಿನ್ನಲೆಯಲ್ಲಿ ಕರಾವಳಿ ಭಾಗದಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಮೀನುಗಾರರನ್ನು ಹುಡುಕಿಕೊಡಬೇಕೆಂದು ರಾಜ್ಯ, ಕೇಂದ್ರ ಸರ್ಕಾರಗಳಿಗೆ ಮನವಿ ನೀಡಿದ್ದರು. ಆದರೆ ಇದುವರೆಗೂ ಕೂಡ ಮೀನುಗಾರರ ಬಗ್ಗೆ ಯಾವುದೇ ರೀತಿಯ ಸುಳಿವು ಲಭ್ಯವಾಗಿಲ್ಲ.

udp fisherman

Share This Article
Leave a Comment

Leave a Reply

Your email address will not be published. Required fields are marked *