Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಚುನಾವಣೆ ಆಯೋಗ, ಇವಿಎಂ ವಿಶ್ವಾಸಾರ್ಹತೆ ಕಳೆದುಕೊಂಡಿದೆ, ಅದಕ್ಕಾಗಿ ಬ್ಯಾಲೆಟ್ ಪೇಪರ್ ಜಾರಿ: ಹೆಚ್‌ಕೆ ಪಾಟೀಲ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಚುನಾವಣೆ ಆಯೋಗ, ಇವಿಎಂ ವಿಶ್ವಾಸಾರ್ಹತೆ ಕಳೆದುಕೊಂಡಿದೆ, ಅದಕ್ಕಾಗಿ ಬ್ಯಾಲೆಟ್ ಪೇಪರ್ ಜಾರಿ: ಹೆಚ್‌ಕೆ ಪಾಟೀಲ್

Bengaluru City

ಚುನಾವಣೆ ಆಯೋಗ, ಇವಿಎಂ ವಿಶ್ವಾಸಾರ್ಹತೆ ಕಳೆದುಕೊಂಡಿದೆ, ಅದಕ್ಕಾಗಿ ಬ್ಯಾಲೆಟ್ ಪೇಪರ್ ಜಾರಿ: ಹೆಚ್‌ಕೆ ಪಾಟೀಲ್

Public TV
Last updated: September 6, 2025 3:22 pm
Public TV
Share
3 Min Read
HK Patil
SHARE

ಬೆಂಗಳೂರು: ಇವಿಎಂ (EVM) ತನ್ನ ವಿಶ್ವಾಸಾರ್ಹತೆ ಕಳೆದುಕೊಂಡಿದೆ. ಹೀಗಾಗಿ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ (Ballot Paper) ಬಳಕೆಗೆ ನಿರ್ಧಾರ ಮಾಡಿದೆ ಎಂದು ಕಾನೂನು ಸಚಿವ ಹೆಚ್.ಕೆ ಪಾಟೀಲ್ (HK Patil) ಬ್ಯಾಲೆಟ್ ಪೇಪರ್ ನಿರ್ಧಾರ ಸಮರ್ಥನೆ ಮಾಡಿಕೊಂಡಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಕ್ಯಾಬಿನೆಟ್ ನಿರ್ಧಾರ ವಿಚಾರಕ್ಕೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ಇವಿಎಂ ಬಗ್ಗೆ ಕರ್ನಾಟಕ ಮಾತ್ರವಲ್ಲ ದೇಶದ ಅನೇಕ ರಾಜ್ಯಗಳು ಇವಿಎಂ ಅಕ್ರಮ ಆಗುತ್ತಿದೆ ಎಂದು ಅನುಮಾನ ಇದೆ. ಹ್ಯಾಕ್ ಮಾಡುತ್ತಾರೆ ಎಂಬುದರ ಬಗ್ಗೆ ಅನುಮಾನ ಇದೆ. ಮಹಾರಾಷ್ಟ್ರ ಚುನಾವಣೆಯಲ್ಲಿ ಕೊನೆಯ 1 ಗಂಟೆಯಲ್ಲಿ 5 ಗಂಟೆಯಷ್ಟು ಹಾಕಲಾಗದ ಮತ ಹಾಕುವ ವ್ಯವಸ್ಥೆ ಕೊನೆ ಘಳಿಗೆಯಲ್ಲಿ ಆಗಿದೆ. ಇವಿಎಂ ತಮ್ಮ ವಿಶ್ವಾಸಾರ್ಹತೆ ಕಳೆದುಕೊಂಡಿದೆ. 2018ರಲ್ಲಿ ನಮ್ಮ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ಇವಿಎಂ ವಿರುದ್ಧ ಮಾಡಿತ್ತು. ಅವತ್ತು ನಾನು ಬಳಿಕ ಮಾಹಿತಿ ಪುರಾವೆ ಸಲ್ಲಿಕೆ ಮಾಡಿದ್ದೇನೆ. ಅಂದಿನ ಸಭಾಪತಿಗಳಾಗಿದ್ದವರು ಕಾಗೇರಿ ಅವರು. ಚರ್ಚೆ ಆದ ಮೇಲೆ ಚುನಾವಣೆ ಆಯೋಗಕ್ಕೆ ಸ್ಪೀಕರ್ ಕಾಗೇರಿ ಪತ್ರ ಬರೆದರು. ಆಗ ಚುನಾವಣೆ ಆಯೋಗ ನಮ್ಮ ಬಗ್ಗೆ ಸದನದಲ್ಲಿ ಚರ್ಚೆ ಮಾಡಬಾರದು ಅಂತ ವಾಪಸ್ ಬರೆದರು. ಆದರೆ ಇವಿಎಂ ಅನುಮಾನದ ಬಗ್ಗೆ ಆಯೋಗ ವಿವರಣೆ ಕೊಡಲಿಲ್ಲ. ಪ್ರಜಾಪ್ರಭುತ್ವದಲ್ಲಿ ಒಂದು ಸಂಸ್ಥೆಯಲ್ಲಿ ಆ ಕಾರ್ಯದಲ್ಲಿ ಅನುಮಾನ ಬಂದಾಗ ಪಾರದರ್ಶಕವಾಗಿ ಪರಿಹಾರ ಮಾಡಬೇಕು. ಆದರೆ ನಮಗೆ ರಕ್ಷಣೆ ಇದೆ ಅಂತ ಆಯೋಗ ಮಾತಾಡೋದು ಸರಿಯಲ್ಲ ಎಂದು ಚುನಾವಣೆ ಆಯೋಗದ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ಗೆ ಆಹ್ವಾನ – ಹೈಕೋರ್ಟ್ ಮೆಟ್ಟಿಲೇರಿದ ಪ್ರತಾಪ್ ಸಿಂಹ

ballot paper counting india

ಇವಿಎಂ ಪರಿಣಾಮದ ಬಗ್ಗೆ ಹಿಂದೆಯೇ ಹೇಳಿದ್ದೆವು. ಕರ್ನಾಟಕದಲ್ಲಿ ಇವಿಎಂ ಬಗ್ಗೆ ಅನುಮಾನ ಇದೆ. ಹೀಗಾಗಿ ನಮ್ಮ ಸರ್ಕಾರಕ್ಕೆ ಇರುವ ಅಧಿಕಾರದಲ್ಲಿ ಬ್ಯಾಲೆಟ್ ಪೇಪರ್ ಚುನಾವಣೆ ಆಗೋ ನಿರ್ಧಾರ ಮಾಡಿದ್ದೇವೆ. ಚುನಾವಣೆ ಆಯೋಗದ ಮ್ಯಾನುಯಲ್‌ನಲ್ಲಿ 15 ವರ್ಷ ಆದ ಮೇಲೆ ಇವಿಎಂ ನಿರ್ಣಾಮ ಮಾಡಬೇಕು. ಹೇಗೆ ಮಾಡಬೇಕು ಅಂತ ಪದ್ದತಿ ಇದೆ. ಆದರೆ ಆಯೋಗ ಇದನ್ನ ಲೆಕ್ಕಕ್ಕೆ ತೆಗೆದುಕೊಂಡಿಲ್ಲ. ಅನೇಕ ರಾಜ್ಯದಲ್ಲಿ ಟ್ರಕ್ ಗಟ್ಟಲೆ ಇವಿಎಂ ಹೋಗೋದು ನೋಡಿದ್ದೇವೆ. ಅನೇಕ ಪ್ರದೇಶದಲ್ಲಿ ಇವಿಎಂ ಮಿಷನ್ ಬಿದ್ದಿರೋದು ನೋಡಿದ್ದೇವೆ. ಚುನಾವಣೆ ಆಯೋಗ ನಿಯಮ ಗಾಳಿಗೆ ತೂರಿ ಕೆಲಸ ಮಾಡುತ್ತಿದೆ. ಚುನಾವಣೆ ಆಯೋಗ ವಿಶ್ವಾಸಾರ್ಹತೆ ಕಳೆದುಕೊಂಡಿದೆ. ಹೀಗಾಗಿ ಅನುಮಾನ ಹೋಗಲಾಡಿಸಲು ಬ್ಯಾಲೆಟ್ ಪೇಪರ್‌ನಲ್ಲಿ ಚುನಾವಣೆ ಮಾಡಲು ಸರ್ಕಾರ ನಿರ್ಧಾರ ಮಾಡಿದೆ. ಕ್ಯಾಬಿನೆಟ್‌ನಲ್ಲಿ ನಿರ್ಣಯ ಮಾಡಿದೆ ಎಂದರು. ಇದನ್ನೂ ಓದಿ: ಪಾಕಿಸ್ತಾನ ಜೊತೆಗಿನ ಯುದ್ಧ ಮೇ 10ಕ್ಕೆ ಕೊನೆಗೊಂಡಿಲ್ಲ: ಭಾರತೀಯ ಸೇನಾ ಮುಖ್ಯಸ್ಥ

ಬ್ಯಾಲೆಟ್ ಪೇಪರ್ ಜಾರಿ ಮಾಡಲು ಅಗತ್ಯ ಇರೋ ಕಾನೂನು ತಿದ್ದುಪಡಿ ಬೇಕಾದರೆ ಮಾಡುತ್ತೇವೆ. ನಿಯಮ ಬದಲಾವಣೆ ಇದ್ದರೆ ನಿಯಮ ಬದಲಾವಣೆ ಮಾಡುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ಧರ್ಮಸ್ಥಳ ಕೇಸ್;‌ ಕೇರಳ ಕಮ್ಯುನಿಸ್ಟ್‌ ಪಕ್ಷದ ಸಂಸದನ ಮುಂದೆ ಬುರುಡೆ ಇಟ್ಟಿದ್ದ ಗ್ಯಾಂಗ್‌

ಇವಿಎಂ ಮೇಲೆ ಅನುಮಾನ ಇದ್ದರೆ ಕರ್ನಾಟಕದಲ್ಲಿ ಸರ್ಕಾರ ವಿಸರ್ಜನೆ ಮಾಡಿ ಚುನಾವಣೆ ಎದುರಿಸಲಿ ಎಂಬ ಬಿಜೆಪಿ ಆಗ್ರಹಕ್ಕೆ ತಿರುಗೇಟು ಕೊಟ್ಟ ಅವರು, ಎಂಪಿ, ವಿಧಾನಸಭೆ ಚುನಾವಣೆ ಬ್ಯಾಲೆಟ್ ಪೇಪರ್ ಮಾಡೋಣ ಅಂತ ಬಿಜೆಪಿ ಹೇಳಲಿ. ಕೇಂದ್ರ ಸರ್ಕಾರ ಬ್ಯಾಲೆಟ್ ಪೇಪರ್ ವ್ಯವಸ್ಥೆ ಘೋಷಣೆ ಮಾಡಲಿ. ಆಮೇಲೆ ಕರ್ನಾಟಕದಲ್ಲಿ ನಾವು ಚುನಾವಣೆ ಮತ್ತೆ ಎದುರಿಸುತ್ತೇವೆ ಎಂದು ತಿರುಗೇಟು ಕೊಟ್ಟರು. ಇದನ್ನೂ ಓದಿ: ಬುರುಡೆ ಕೇಸಲ್ಲಿ ಸೆಂಥಿಲ್ ಹೆಸರು – ಶಾಸಕ ಜನಾರ್ದನ ರೆಡ್ಡಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲು

ಬಸವರಾಜ್ ಬೊಮ್ಮಾಯಿ ಅವರ ಮೇಲೆ ವಿಶೇಷ ಅಭಿಪ್ರಾಯ ಇದೆ. ಅವರ ಜೊತೆ ಚುನಾವಣೆ ರಿಫಾರ್ಮ್ಸ್ ಬಗ್ಗೆ ಚರ್ಚೆ ಮಾಡಿದ್ದೇವೆ. ಕರ್ನಾಟಕದಲ್ಲಿ ಹ್ಯಾಕಥಾನ್ ಮಾಡಿ ಅಂತ ಚುನಾವಣೆ ಆಯೋಗಕ್ಕೆ ಹೇಳಿದ್ದೆವು. ಆದರೆ ಆಯೋಗ ಮಾಡಲಿಲ್ಲ. ಚುನಾವಣೆ ಆಯೋಗ ಯಾವುದೇ ಪರೀಕ್ಷೆಗೆ ಒಪ್ಪಲಿಲ್ಲ. ಬಿಜೆಪಿ ರಾಜಕೀಯವಾಗಿ ಈಗ ಹೇಳುತ್ತಿದೆ. ಅಧಿವೇಶನದಲ್ಲಿ ಸರ್ವಾನುಮತದಿಂದ ಇದರ ಬಗ್ಗೆ ನಿರ್ಣಯ ಆಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಮೋದಿ ನನ್ನ ಒಳ್ಳೆಯ ಸ್ನೇಹಿತ: ಮತ್ತೆ ಯೂಟರ್ನ್‌ ಹೊಡೆದ ಟ್ರಂಪ್‌

ಮಹಾರಾಷ್ಟ್ರ ಚುನಾವಣೆಯಲ್ಲಿ ಕೊನೆ ಘಳಿಗೆಯಲ್ಲಿ ಅಕ್ರಮದ ವೋಟಿಂಗ್ ಆಯಿತು. ಇಂತಹ ಅಕ್ರಮ 10% ಕೂಡಾ ಹಿಂದಿನ ಬ್ಯಾಲೆಟ್ ಪೇಪರ್ ವ್ಯವಸ್ಥೆ ಇದ್ದಾಗ ಆಗಿರಲಿಲ್ಲ. ಬ್ಯಾಲೆಟ್ ಪೇಪರ್ ತರಲು ಕಾನೂನು ತಿದ್ದುಪಡಿ ಮಾಡುತ್ತೇನೆ. ರಾಜ್ಯಪಾಲರು ಕಾನೂನಿನ ಪರ ಇರಬೇಕು, ಸಂವಿಧಾನದ ಪರ ಇರಬೇಕು. ಸಂವಿಧಾನ ಪರ ಮಾಡೋ ಕೆಲಸ ಯಾರು ತಡೆಯೋಕೆ ಆಗಲ್ಲ. ರಾಜ್ಯಪಾಲ ಬಿಲ್ ಪಾಸ್ ಮಾಡಬೇಕಾಗುತ್ತದೆ ಎಂದು ಒತ್ತಾಯಿಸಿದರು. ಇದನ್ನೂ ಓದಿ: ಉತ್ತರ ಭಾರತದಲ್ಲಿ ನಿರಂತರ ಮಳೆಯಿಂದ ಭಾರೀ ಹಾನಿ – ಪಂಜಾಬ್‌ನಲ್ಲಿ ಪ್ರವಾಹದಿಂದಾಗಿ 45 ಮಂದಿ ಸಾವು

TAGGED:ballot paperbengaluruECIevmhk Patilಇವಿಎಂಚುನಾವಣೆ ಆಯೋಗಬೆಂಗಳೂರುಬ್ಯಾಲೆಟ್ ಪೇಪರ್ಹೆಚ್‍ಕೆ ಪಾಟೀಲ್
Share This Article
Facebook Whatsapp Whatsapp Telegram

Cinema news

Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’ಯಾಗಿ ಬದಲು
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World
Dhurandhar 2 Trailer
ರಿಲೀಸ್‌ಗೂ ಮುನ್ನವೇ 100 ಕೋಟಿ ಬಾಚಿದ ಧುರಂಧರ್‌-2
Bollywood Cinema Latest Top Stories
chandanavana film critics academy awards
ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಪ್ರಶಸ್ತಿ – ಅತಿ ಹೆಚ್ಚು ನಾಮನಿರ್ದೇಶಿತರು ಯಾರು?
Cinema Latest Sandalwood Top Stories

You Might Also Like

Hassan Students
Districts

ಸೆಕೆಂಡ್‌ ಪಿಯು ಪರೀಕ್ಷೆಯಲ್ಲಿ ರಿಪೀಟರ್ಸ್‌ ಪ್ರಶ್ನೆಪತ್ರಿಕೆ ನೀಡಿ ಯಡವಟ್‌- ವಿದ್ಯಾರ್ಥಿಗಳಿಗೆ ಶಾಕ್‌

Public TV
By Public TV
21 minutes ago
sharanuprakash patil
Bengaluru City

ನೀಟ್ ವ್ಯವಸ್ಥೆ ರಾಜ್ಯದಲ್ಲಿ ರದ್ದು ಮಾಡೋದಿಲ್ಲ: ಶರಣ ಪ್ರಕಾಶ್ ಪಾಟೀಲ್

Public TV
By Public TV
1 hour ago
KSRTC
Bengaluru City

ಯುಗಾದಿ, ರಂಜಾನ್ – KSRTCಯಿಂದ ಹೆಚ್ಚುವರಿ ಬಸ್ ಸೇವೆ, ವಿಶೇಷ ರಿಯಾಯಿತಿ ಘೋಷಣೆ

Public TV
By Public TV
1 hour ago
Donald Trump
Latest

ಟ್ರಂಪ್‌ಗೆ ಮುಖಭಂಗ – ಯುದ್ಧ ನೌಕೆಗಳನ್ನು ಕಳುಹಿಸಲ್ಲ ಎಂದ ಮಿತ್ರ ದೇಶಗಳು

Public TV
By Public TV
1 hour ago
ಸಾಂದರ್ಭಿಕ ಚಿತ್ರ
Bellary

ಕಡಿವಾಣ ಹಾಕಬೇಕಿದ್ದ ಪೊಲೀಸರೇ ಅಕ್ರಮಗಳಿಗೆ ಬೆಂಗಾವಲು – ಸಿಬ್ಬಂದಿ ಮೇಲೆ ವರ್ಗಾವಣೆ ತೂಗುಗತ್ತಿ

Public TV
By Public TV
1 hour ago
Iran War LPG Gas Shortage 12 Commercial LPG Cylinder found in the HK Patil program Gadag
Districts

ಗ್ಯಾಸ್ ಸಿಲಿಂಡರ್‌ಗೆ ಜನರ ಪರದಾಟ – ಹೆಚ್‌ಕೆ ಪಾಟೀಲ್‌ ಕಾರ್ಯಕ್ರಮದಲ್ಲಿ 12 ಸಿಲಿಂಡರ್ ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?