Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಕಾರಣವಾದ 10 ಅಂಶಗಳು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಕಾರಣವಾದ 10 ಅಂಶಗಳು

Latest

ಉತ್ತರ ಪ್ರದೇಶದಲ್ಲಿ ಬಿಜೆಪಿ ಗೆಲುವಿಗೆ ಕಾರಣವಾದ 10 ಅಂಶಗಳು

Public TV
Last updated: March 12, 2017 12:55 pm
Public TV
Share
4 Min Read
modi win 2
SHARE

ನವದೆಹಲಿ: ಉತ್ತರ ಪ್ರದೇಶದಲ್ಲಿ ಮೋದಿ ಸುನಾಮಿಗೆ ಎಸ್‍ಪಿ ಕಾಂಗ್ರೆಸ್ ಮೈತ್ರಿಕೂಟ, ಬಿಎಸ್‍ಪಿ ಧೂಳೀಪಟವಾಗಿದೆ. ಹೀಗಾಗಿ ಬಿಜೆಪಿ ಗೆಲುವಿಗೆ ಕಾರಣವಾದ 10 ಅಂಶಗಳನ್ನು ಇಲ್ಲಿ ನೀಡಲಾಗಿದೆ.

1. ಮೋದಿ ಮುಖ:
ಉತ್ತರ ಪ್ರದೇಶದಲ್ಲಿ ಮೋದಿ ಮುಖವನ್ನು ಇಟ್ಟುಕೊಂಡೇ ಬಿಜೆಪಿ ನಾಯಕರು ಪ್ರಚಾರ ಮಾಡಿದ್ದರು. ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ಮೋದಿಗಾಗಿ ಬಿಜೆಪಿ ಮತ ನೀಡಿ ಎಂದಿದ್ದು ವರವಾಗಿದೆ. ಅಷ್ಟೇ ಅಲ್ಲದೇ ಮೋದಿ ತಮ್ಮ ಭಾಷಣದಲ್ಲಿ ಸ್ಕ್ಯಾಮ್(ಸಮಾಜವಾದಿ, ಕಾಂಗ್ರೆಸ್, ಅಖಿಲೇಶ್ ಯಾದವ್, ಮಾಯಾವತಿ), ಕಸಬ್ (ಕಾಂಗ್ರೆಸ್, ಸಮಾಜವಾದಿ ಪಾರ್ಟಿ, ಬಹುಜನ ಸಮಾಜವಾದಿ ಪಾರ್ಟಿ) ಹೋಲಿಸಿ ವಾಗ್ದಾಳಿ ನಡೆಸುವ ಮೂಲಕ ಮೂರು ಪಕ್ಷಗಳ ಒಂದೇ ತಟ್ಟೆಗೆ ತಂದು ಬಿಜೆಪಿ ಪರ ಅಲೆಯನ್ನು ಸೃಷ್ಟಿಸುವಲ್ಲಿ ಸಫಲರಾದರು.

2. ನೋಟ್‍ಬ್ಯಾನ್:
ನವೆಂಬರ್ 8ರ ನೋಟು ಬ್ಯಾನ್ ಬಳಿಕ ಬಿಜೆಪಿ ವಿವಿಧ ರಾಜ್ಯಗಳ ಸ್ಥಳೀಯ ಆಡಳಿತ ಮತ್ತು ಪಾಲಿಕೆ ಚುನಾವಣೆ ಯಶಸ್ಸನ್ನು ಗಳಿಸಿತ್ತು. ಈ ಫಲಿತಾಂಶ ಉತ್ತರ ಪ್ರದೇಶದಲ್ಲಿ ಪರಿವರ್ತನೆಯಾಗಿದೆ. ಬಿಎಸ್‍ಪಿ, ಕಾಂಗ್ರೆಸ್, ಎಸ್‍ಪಿ ನೋಟ್‍ಬ್ಯಾನ್ ವಿರುದ್ಧ ಎಷ್ಟೇ ಪ್ರತಿಭಟಿಸಿದರೂ ಜನ ಮಾತ್ರ ಬಿಜೆಪಿಗೆ ಮತ ನೀಡಿದ್ದಾರೆ.

3. ಎಸ್‍ಪಿ ಆಂತರಿಕ ಕಿತ್ತಾಟ:
ಅಖಿಲೇಶ್ ಯಾದವ್, ಮುಲಾಯಂ ಸಿಂಗ್ ಯಾದವ್, ಶಿವಪಾಲ್ ಜಗಳದಿಂದಾಗಿ ಜನ ರೋಸಿ ಹೋಗಿದ್ದರು. ತದ ನಂತರ ನಮ್ಮಲ್ಲಿ ಒಗ್ಗಟ್ಟು ಇದೆ ಎಂದು ಬಿಂಬಿಸಿದ್ದರು. ಆದರೆ ಇವರ ಕಿತ್ತಾಟ ನಾಟಕವನ್ನು ನೋಡುತ್ತಿದ್ದ ಜನ ಈ ಬಾರಿ ಬಿಜೆಪಿಯ ಕೈ ಹಿಡಿದಿದ್ದಾರೆ.

4. ಕಾಂಗ್ರೆಸ್ ಮೈತ್ರಿಕೂಟ:
ಲೋಕಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋತಿದ್ದ ಕಾಂಗ್ರೆಸ್ ಬಿಹಾರದಲ್ಲಿ ಯಶಸ್ವಿಯಾದಂತೆ ಉತ್ತರ ಪ್ರದೇಶಲ್ಲಿ ಎಸ್‍ಪಿ ಜೊತೆಗೂಡಿ ಮೈತ್ರಿ ಮಾಡಿಕೊಂಡಿತ್ತು. ಆದರೆ ಪ್ರಶಾಂತ್ ಕಿಶೋರ್ ಈ ತಂತ್ರಗಾರಿಕೆ ವೈಫಲ್ಯ ಕಂಡಿದ್ದು ಮೈತ್ರಿಕೂಟಕ್ಕೆ ಹೀನಾಯ ಸೋಲಾಗಿದೆ. ಆಡಳಿತ ವಿರೋಧಿ ಅಲೆ ಇರುವಾಗಲೇ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು ಬಿಜೆಪಿ ಗೆಲ್ಲಲು ವರದಾನವಾಯ್ತು.

5. ಮಾಯಾವತಿ ವೈಫಲ್ಯ:
ಹಿಂದುಳಿದ ವರ್ಗಗಳ ಮತಗಳನ್ನು ಪಡೆದು ದಲಿತ ಮಹಿಳಾ ಮುಖ್ಯಮಂತ್ರಿಯಾಗಿದ್ದ ಮಾಯಾವತಿ ಈ ಬಾರಿ ಚುನಾವಣಾ ನಡೆಯುವ ಮೊದಲೇ ಸೋಲನ್ನು ಒಪ್ಪಿಕೊಂಡಿದ್ದಂತೆ ಕಾಣುತಿತ್ತು. ಎಸ್‍ಪಿ ಕಾಂಗ್ರೆಸ್ ಮೈತ್ರಿ ಕೂಟ ಮತ್ತು ಬಿಜೆಪಿಯ ಅಬ್ಬರದ ಪ್ರಚಾರ ನಡುವೆ ಬಿಎಸ್‍ಪಿ ಮಂಕಾಗಿತ್ತು. ಇದರ ಜೊತೆ ಹಣ ಪಡೆದು ಟಿಕೆಟ್ ಹಂಚಿಕೆ ಮಾಡಿದ್ದರು ಎನ್ನುವ ಆರೋಪವೂ ಮಾಯಾವತಿ ವಿರುದ್ಧ ಕೇಳಿ ಬಂದಿತ್ತು.

6. ಮುಖ್ಯಮಂತ್ರಿ ಅಭ್ಯರ್ಥಿ ಇಲ್ಲ:
ಕಾಂಗ್ರೆಸ್ ಎಸ್‍ಪಿಯ ಅಖಿಲೇಶ್ ಯಾದವ್ ಮುಂದಿನ ಮುಖ್ಯಮಂತ್ರಿ ಎಂದು ಪ್ರಕಟಿಸಿದ್ದರೆ, ಬಿಎಸ್‍ಪಿಯಿಂದ ಮಾಯಾವತಿ ಮುಖ್ಯಮಂತ್ರಿ ರೇಸ್‍ನಲ್ಲಿದ್ದರು. ಆದರೆ ಈ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿಯ ಹೆಸರನ್ನು ಪ್ರಕಟಿದೇ ಚುನಾವಣೆಗೆ ಇಳಿದಿತ್ತು. ಇದರಿಂದಾಗಿ ಬಿಜೆಪಿ ನಾಯಕರ ಆಂತರಿಕ ಜಗಳಕ್ಕೆ ಆಸ್ಪದವೇ ಇರಲಿಲ್ಲ. ಎಲ್ಲ ನಾಯಕರ ಹೋರಾಟ ಮತ್ತು ತಳ ಮಟ್ಟದಲ್ಲಿ ಪಕ್ಷವನ್ನು ಸಂಘಟಿಸಿದ್ದು ಬಿಜೆಪಿಯ ಗೆಲುವಿಗೆ ಕಾರಣವಾಯ್ತು.

7. ಕೈ ಹಿಡಿದ ಯುವ ಮತದಾರರು:
ಈ ಹಿಂದಿನ ಜಾತಿ ರಾಜಕಾರಣವನ್ನು ಬಿಟ್ಟು ಬಿಜೆಪಿ ಈ ಬಾರಿ ಯುವ ಜನತೆಯನ್ನು ಗುರಿಯಾಗಿಸಿಕೊಂಡು ಪ್ರಚಾರ ನಡೆಸಿದ್ದರು. ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿ ಐಟಿ ಸೆಲ್ ಕಾಂಗ್ರೆಸ್, ಎಸ್‍ಪಿ, ಬಿಎಸ್‍ಪಿ ವೈಫಲ್ಯಗಳನ್ನು ಪ್ರಚಾರ ಮಾಡಿತ್ತು. ಈ ಪ್ರಚಾರದಿಂದಾಗಿ ಹೊಸ ಮತದಾರರು ಬಿಜೆಪಿಗೆ ಮತ ನೀಡಿದ್ದಾರೆ ಎನ್ನುವ ವಿಶ್ಲೇಷಣೆ ಈಗ ಆರಂಭವಾಗಿದೆ.

8. ಮೈತ್ರಿ ಲಾಭ:
ಬಿಜೆಪಿ ಅಪ್ನಾ ದಳ(ಎಸ್) ಮತ್ತು ಸುಹಲ್ದೇವ್ ಭಾರತೀಯ ಸಮಾಜ ಪಾರ್ಟಿ (ಎಸ್‍ಬಿಎಸ್‍ಪಿ) ಜೊತೆ ಮೈತ್ರಿ ಮಾಡಿಕೊಂಡಿತ್ತು ಪೂರ್ವಾಂಚಲ ಮತ್ತು ಮಧ್ಯ ಉತ್ತರ ಪ್ರದೇಶದ ಪಟೇಲ್ ಕುಮಿ ದಳವನ್ನು ಅಪ್ನಾ ದಳ ಪ್ರತಿನಿಧಿಸಿದರೆ, ಎಸ್‍ಬಿಎಸ್‍ಪಿ 17 ಹಿಂದುಳಿದ ವರ್ಗಗಳನ್ನು ಪೂರ್ವ ಉತ್ತರ ಪ್ರದೇಶ ಪ್ರತಿನಿದಿಸುತ್ತದೆ. ಈ ಎರಡು ಪಕ್ಷಗಳ ಜೊತೆಗಿನ ಮೈತ್ರಿ ಬಿಜೆಪಿಗೆ ವರವಾಗಿದೆ.

9. ಹಿಂದುತ್ವ ಟ್ರಂಪ್ ಕಾರ್ಡ್:
19.98 ಕೋಟಿ ಜನ ಸಂಖ್ಯೆಯಲ್ಲಿ 14.05 ಕೋಟಿ ಮತದರಾರ ಪೈಕಿ ಹಿಂದುಳಿದ ವರ್ಗ ಶೇ.34.7, ದಲಿತರು ಶೇ. 20.5, ಮುಸ್ಲಿಮ್ ಶೇ.19, ಬ್ರಾಹ್ಮಣ ಶೇ.10.5, ಬುಡಕಟ್ಟು ಜನಾಂಗ ಶೇ.2, ವೈಶ್ಯ ಶೇ.4.3, ಠಾಕೂರ್ ಶೇ.7.6 ಮಂದಿ ಇದ್ದರು. ಆದರೆ ಬಿಜೆಪಿ ಯಾವೊಬ್ಬ ಮುಸ್ಲಿಮ್ ಧರ್ಮದ ವ್ಯಕ್ತಿಗೆ ಟಿಕೆಟ್ ಹಂಚಿಕೆ ಮಾಡಿರಲಿಲ್ಲ. ಈ ವಿಚಾರವನ್ನೇ ಇಟ್ಟುಕೊಂಡು ವಿರೋಧಿಗಳು ಬಿಜೆಪಿ ವಿರುದ್ಧ ಪ್ರಚಾರ ಮಾಡಿದ್ದರು. ಆದರೆ ಬಿಜೆಪಿ ಹಿಂದುಳಿದ ವರ್ಗ, ಮೇಲ್ವರ್ಗ, ದಲಿತರ ಮತಗಳನ್ನು ಬುಟ್ಟಿಗೆ ಹಾಕಿಕೊಳ್ಳುವ ಮೂಲಕ ವಿಜಯ ಸಾಧಿಸಿದೆ.

10. ಕೋಮು ಗಲಾಟೆ ಇಲ್ಲ:
ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗೆ ಮುನ್ನ ಕೋಮು ಗಲಾಟೆ ನಡೆಯುವುದು ಉತ್ತರಪ್ರದೇಶಲ್ಲಿ ಸಾಮಾನ್ಯ. ಆದರೆ ಈ ಬಾರಿ ಒಂದೇ ಒಂದು ಕೋಮು ಗಲಾಟೆಯಾಗಿಲ್ಲ. ಮಂಗಳವಾರ ಲಕ್ನೋದಲ್ಲಿ ಶಂಕಿತ ಐಸಿಸ್ ಉಗ್ರನ ಹತ್ಯೆ ಮಾಡಲಾಗಿತ್ತು. ಆದರೆ ಈ ಎನ್‍ಕೌಂಟರ್ ಫೇಕ್ ಆಗಿದ್ದು, ಅಖಿಲೇಶ್ ಯಾದವ್ ಸರ್ಕಾರ ಚುನಾವಣೆಗೂ ಮುನ್ನ ಕೋಮುಗಲಾಟೆ ಸೃಷ್ಟಿಸಲು ಉಗ್ರ ನಿಗ್ರಹ ದಳದ ಮೂಲಕ ಈ ಎನ್‍ಕೌಂಟರ್ ಮಾಡಲಾಗಿದೆ ಎಂದು ಈಗ ಅಲ್ಲಿನ ಸ್ಥಳಿಯ ಮುಸ್ಲಿಮ್ ನಾಯಕರು ಆರೋಪಿಸಿದ್ದಾರೆ.

ಈ ಎಲ್ಲ ಕಾರಣದ ಜೊತೆಗೆ ಸರ್ಜಿಕಲ್ ಸ್ಟ್ರೈಕ್ ಎಫೆಕ್ಟ್, ಕೇಂದ್ರ ಸರ್ಕಾರದ ಯಶಸ್ವಿ ಯೋಜನೆಗಳು, ಮುಸ್ಲಿಂಯೇತರ ಓಬಿಸಿ ವರ್ಗ ಬಿಜೆಪಿಯನ್ನು ಕೈ ಹಿಡಿದ ಕಾರಣ ಬಿಜೆಪಿ ಈ ಬಾರಿ ಉತ್ತರ ಪ್ರದೇಶದಲ್ಲಿ ಜಯಭೇರಿ ಬಾರಿಸಿದೆ.

ಮಧ್ಯಾಹ್ನ 1 ಗಂಟೆಯ ಟ್ರೆಂಡ್ಸ್ ಪ್ರಕಾರ ಬಿಜೆಪಿ 307 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ, ಎಸ್‍ಪಿ ಕಾಂಗ್ರೆಸ್ 82, ಬಿಎಸ್‍ಪಿ 18, ಇತರರು 6 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.

2012ರ ಚುನಾವಣೆಯಲ್ಲಿ ಎಸ್‍ಪಿ 224, ಬಿಎಸ್‍ಪಿ 80, ಬಿಜೆಪಿ 47, ಕಾಂಗ್ರೆಸ್ 28 ಸ್ಥಾನಗಳನ್ನು ಗೆದ್ದುಕೊಂಡಿತ್ತು.

ಇದನ್ನೂ ಓದಿ: ಬಿಹಾರ ಚುನಾವಣೆಯ ಸೋಲಿನ ಪಾಠದಿಂದಾಗಿ ಉತ್ತರಪ್ರದೇಶದಲ್ಲಿ ಜಯಭೇರಿ ಬಾರಿಸಿತು ಬಿಜೆಪಿ. ಪಕ್ಷ ಸಂಘಟನೆಯಾಗಿದ್ದು ಹೇಗೆ?

WATCH: BJP UP state president Keshav Prasad Maurya celebrates in Lucknow as BJP leading in Uttar Pradesh pic.twitter.com/PkH2RNMAqm

— ANI UP (@ANINewsUP) March 11, 2017

BJP workers rejoice post the trends show a saffron wave #ResultsWithTimesNow
Live: https://t.co/7RmKS3b6zu pic.twitter.com/5j86pkYPm5

— TIMES NOW (@TimesNow) March 11, 2017

TAGGED:bjpbspcongresselection resultsmodisputtar pradeshಉತ್ತರಪ್ರದೇಶಕಾಂಗ್ರೆಸ್ನೋಟ್ ಬ್ಯಾನ್ಬಿಜೆಪಿಮೋದಿ
Share This Article
Facebook Whatsapp Whatsapp Telegram

Cinema news

Captains room locked Will Sudeep give Gilli a severe punishment
ಕ್ಯಾಪ್ಟನ್ ರೂಂಗೆ ಬೀಗ; ಗಿಲ್ಲಿಗೆ ಸುದೀಪ್ ನೀಡ್ತಾರಾ ಕಠಿಣ ಶಿಕ್ಷೆ?
Latest Sandalwood South cinema
time fix for the kiccha sudeep mark movie trailer
ಕಿಚ್ಚನ ಮಾರ್ಕ್ ಸಿನಿಮಾ ಟ್ರೈಲರ್‌ಗೆ ಟೈಮ್ ಫಿಕ್ಸ್
Cinema Latest Sandalwood South cinema Top Stories
Shivarajkumar
‌ `ಗುಮ್ಮಡಿ ನರಸಯ್ಯ’ ಬಯೋಪಿಕ್ ಚಿತ್ರಕ್ಕೆ ಮುಹೂರ್ತ
Cinema Latest South cinema Top Stories
Kantara star Rishab Shetty and Hombale Films fulfills the promise Bhoota Kola seeks blessings of Panjurli Daiva 2
ದೈವದ ಅಭಯ: ರಿಷಬ್ ಟೀಮ್‌ನಲ್ಲಿ ಸಂಚಲನ
Dakshina Kannada Latest South cinema Top Stories

You Might Also Like

DOCTOR
Bengaluru City

ಇಂಡಿಗೋ ವಿಮಾನಗಳ ಸಮಸ್ಯೆ – ಪಿಜಿ ವೈದ್ಯಕೀಯ ಪ್ರವೇಶಕ್ಕೆ ದಿನಾಂಕ ವಿಸ್ತರಣೆ

Public TV
By Public TV
5 minutes ago
Pralhad Joshi
Latest

ಸೌರಶಕ್ತಿಗೆ 3ನೇ ಅತಿದೊಡ್ಡ ಕೊಡುಗೆದಾರ ರಾಷ್ಟ್ರ ಭಾರತ: ಪ್ರಹ್ಲಾದ್ ಜೋಶಿ

Public TV
By Public TV
27 minutes ago
yogi adityanath
Latest

ಯಮರಾಜ ನಿಮಗಾಗಿ ಕಾಯುತ್ತಿದ್ದಾನೆ: ಕ್ರಿಮಿನಲ್‌ಗಳ ಎನ್‌ಕೌಂಟರ್‌ ಬಗ್ಗೆ ಯೋಗಿ ಆದಿತ್ಯನಾಥ್‌ ಮಾತು

Public TV
By Public TV
1 hour ago
south africa set a target of 271 for india in the odi final at visakhapatnam
Cricket

ಕುಲ್ದೀಪ್‌, ಪ್ರಸಿದ್ಧ್‌ ಕಮಾಲ್;‌ ಆಫ್ರಿಕಾ ಆಲೌಟ್‌ – ಭಾರತಕ್ಕೆ 271 ರನ್‌ಗಳ ಗುರಿ

Public TV
By Public TV
2 hours ago
siddaramaiah dk shivakumar
Hassan

ನಾನು ಮಾತು ಕೊಡಲ್ಲ, ಕೊಟ್ಟ ಮೇಲೆ ಮಾಡೇ ಮಾಡ್ತೀವಿ: ಸಿದ್ದರಾಮಯ್ಯ

Public TV
By Public TV
2 hours ago
Brijesh Patel Venkatesh Prasad KSCA
Bengaluru City

ನಾಳೆ ಕೆಎಸ್‌ಸಿಎ ಚುನಾವಣಾ ಮತದಾನ – ವೆಂಕಟೇಶ್ ಪ್ರಸಾದ್ V/S ಬ್ರಿಜೇಶ್ ಪಟೇಲ್ ಬಣಗಳ ನಡುವೆ ಜಿದ್ದಾಜಿದ್ದಿನ ಕಣ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?