ರೇವಣ್ಣಗೆ ಕ್ಲೀನ್ ಚಿಟ್ ಕೊಟ್ಟ ಚುನಾವಣಾ ಆಯೋಗ

Public TV
1 Min Read
Revanna 3

ಬೆಂಗಳೂರು: ರಾಜ್ಯಸಭಾ ಚುನಾವಣೆ ವೇಳೆ ಜೆಡಿಎಸ್ ಶಾಸಕ ಹೆಚ್‌ಡಿ ರೇವಣ್ಣ ಅವರ ಮತ ತಿರಸ್ಕೃತವಾಗುತ್ತದೆ ಎಂಬ ಮಾತು ಕೇಳಿ ಬರುತ್ತಿತ್ತು. ಆದರೆ ಅವರ ಮತ ಸಿಂಧು ಎಂದು ಚುನಾವಣಾ ಅಧಿಕಾರಿ ಅಧಿಕೃತವಾಗಿ ತಿಳಿಸಿದ್ದಾರೆ.

ರೇವಣ್ಣ ಮತವನ್ನು ಹಾಕಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಬ್ಯಾಲೆಟ್ ಪೇಪರ್ ತೋರಿಸಿದ್ದರು. ಜೆಡಿಎಸ್ ಶಾಸಕರಿಗೆ ಮಾತ್ರ ತೋರಿಸಬೇಕಾದ ರೇವಣ್ಣ ಡಿಕೆಶಿಗೆ ತೋರಿಸಿದ್ದಾರೆ ಎಂದು ಬಿಜೆಪಿ ಏಜೆಂಟರು ಕೊಠಡಿಯಲ್ಲಿ ಆಕ್ಷೇಪ ವ್ಯಕ್ತಪಡಿಸಿದ್ದರು. ಅಲ್ಲದೇ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ರೇವಣ್ಣ ಅವರ ಮತವನ್ನು ತಿರಸ್ಕೃತಗೊಳಿಸಬೇಕೆಂದು ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದರು. ಇದನ್ನೂ ಓದಿ: ಆ ಮನುಷ್ಯನಿಗೆ ಮಾನ, ಮರ್ಯಾದೆ ಇದ್ರೆ ರಾಜೀನಾಮೆ ಕೊಡಲಿ: ಶ್ರೀನಿವಾಸ್ ಗೌಡ ವಿರುದ್ಧ ಹೆಚ್‌ಡಿಕೆ ಕಿಡಿ

Revanna 1 1

ದೂರಿನನ್ವಯ ಚುನಾವಣಾಧಿಕಾರಿಗಳು ಸಿಸಿಟಿವಿ ಫೂಟೇಜ್ ಸೇರಿದಂತೆ ಎಲ್ಲಾ ರೀತಿಯ ಪರಿಶೀಲನೆ ನಡೆಸಿದ್ದಾರೆ. ರೇವಣ್ಣ ಕೇವಲ ಜೆಡಿಎಸ್ ಏಜೆಂಟರಿಗೆ ತೋರಿಸಿ ಮತ ಹಾಕಿದ್ದಾರೆ. ಕಾಂಗ್ರೆಸ್ ಏಜೆಂಟರಿಗೆ ತೋರಿಸಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲೂ ಮತ ಅಸಿಂಧು ಆಗುವುದಿಲ್ಲ ಎಂದು ಚುನಾವಣಾ ಅಧಿಕಾರಿ ವಿಶಾಲಾಕ್ಷಿ ಆದೇಶ ನೀಡಿದ್ದಾರೆ. ಇದನ್ನೂ ಓದಿ: ರಾಜ್ಯಸಭಾ ಚುನಾವಣೆ: ಜೆಡಿಎಸ್‌ಗೆ ಬಿಗ್ ಶಾಕ್ ಕೊಟ್ಟ ಗುಬ್ಬಿ ಶ್ರೀನಿವಾಸ್

ಚುನಾವಣಾಧಿಕಾರಿಯ ಆದೇಶ ಪ್ರಶ್ನಿಸಿ ಕೇಂದ್ರ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು ನೀಡುವ ಸಾಧ್ಯತೆಯಿದೆ. ತಮ್ಮ ದೂರನ್ನು ಪರಿಶೀಲಿಸುವಂತೆ ಕೈ ಪಾಳಯದಿಂದ ಪತ್ರ ಬರೆಯುವ ಸಾಧ್ಯತೆಯಿದೆ.

Share This Article
Leave a Comment

Leave a Reply

Your email address will not be published. Required fields are marked *