ವಿಜಯಪುರ: ವಿದ್ಯುತ್ ತಗುಲಿ ಸಹೋದರರಿಬ್ಬರು ಸ್ಥಳದಲ್ಲೇ ಧಾರುಣ ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಇಂಡಿ ತಾಲೂಕಿನ ಭತಗುಣಕಿ ಗ್ರಾಮದಲ್ಲಿ ನಡೆದಿದೆ.
ಮುದ್ದುಗೌಡ ಅಪ್ಪಾಸಾಹೇಬ್ ಪಾಟೀಲ್ ಹಾಗೂ ಶಿವರಾಜ್ ಅಪ್ಪಾಸಾಹೇಬ್ ಪಾಟೀಲ್ ಮೃತ ಸಹೋದರರು. ಅಣ್ಣ ಮುದ್ದುಗೌಡ ಮೋಟಾರ್ ಆನ್ ಮಾಡಲು ಹೋದಾಗ ಕರೆಂಟ್ ತಗುಲಿದೆ. ಈ ವೇಳೆ ಅಣ್ಣನನ್ನು ರಕ್ಷಿಸಲು ಹೋದಾಗ ತಮ್ಮ ಶಿವರಾಜ್ಗೂ ವಿದ್ಯುತ್ ತಗುಲಿ ಸಾವನ್ನಪ್ಪಿದ್ದಾರೆ.
ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.