ಶಿವಮೊಗ್ಗ: ಕಳೆದ 15 ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹೆಣ್ಣಾನೆ ಗಂಗೆ(80) ಮೃತಪಟ್ಟದೆ.
ತಾಲೂಕಿನ ಸಕ್ರೆಬೈಲು ಆನೆ ಬಿಡಾರದಲ್ಲಿದ್ದ ಗಂಗೆಗೆ ಕಳೆದ ಎರಡು ವರ್ಷದ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದಳು. ಅಂದಿನಿಂದ ಆನೆಗೆ ಕಾಲ ಕಾಲಕ್ಕೆ ಸೂಕ್ತ ಚಿಕಿತ್ಸೆ ನೀಡಲಾಗುತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಸಾವನ್ನಪ್ಪಿದ್ದಾಳೆ.
ಅರಣ್ಯ ಸಿಬ್ಬಂದಿ 1971 ರಲ್ಲಿ ಗಂಗೆಯನ್ನು ಕಾಕನಕೋಟೆಯಲ್ಲಿ ಸೆರೆ ಹಿಡಿದು, ಸಕ್ರೆಬೈಲಿಗೆ ಕರೆ ತಂದಿದ್ದರು. ಸಕ್ರೆಬೈಲಿನ ಆನೆ ಬಿಡಾರಕ್ಕೆ ಬಂದ ನಂತರ ಎಲ್ಲರ ಪ್ರೀತಿಯ ಆನೆಯಾಗಿತ್ತು. ಮೃತ ಗಂಗೆ ಆರು ಮರಿಗಳಿಗೆ ಜನ್ಮ ನೀಡಿದ್ದಳು. ಅಲ್ಲದೆ ಕಾಡಾನೆಗಳನ್ನು ಸೆರೆ ಹಿಡಿಯುವಾಗ ಗಂಗೆಯನ್ನು ಬಳಸಲಾಗುತ್ತಿತ್ತು. ಇದನ್ನೂ ಓದಿ: ನಾವು ಹಿಂದೂಗಳನ್ನು ಮತಾಂತರ ಮಾಡ್ತೇವೆ ಏನ್ ಮಾಡ್ತೀರಾ- ಚರ್ಚ್ ಫಾದರ್ ಅವಾಜ್
ಕಳೆದ 15 ದಿನಗಳಿಂದ ಆನೆಯ ಆರೋಗ್ಯದಲ್ಲಿ ತೀವ್ರ ಏರುಪೇರಾಗಿತ್ತು. ವೈದ್ಯರು ಬಿಡಾರದಲ್ಲಿಯೇ ಚಿಕಿತ್ಸೆ ನೀಡುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದೆ. ನಿಯಮದ ಪ್ರಕಾರ ಆನೆಯ ಮೃತದೇಹದ ಅಂತ್ಯಸಂಸ್ಕಾರವನ್ನು ಅರಣ್ಯ ಸಿಬ್ಬಂದಿ ನೆರವೇರಿಸಿದರು.