ಚಾಮರಾಜನಗರ: ಬಂಡೀಪುರದಲ್ಲಿ ಒಂಟಿ ಸಲಗವೊಂದು (Elephant) ರಸ್ತೆಗೆ ಇಳಿದ ಪರಿಣಾಮ ಸುಮಾರು 3-4 ಕಿಲೋ ಮೀಟರ್ ಟ್ರಾಫಿಕ್ ಜಾಮ್ (Traffic Jam )ಉಂಟಾಗಿದೆ.
ವೀಕೆಂಡ್ ಹಿನ್ನೆಲೆ ತಮಿಳುನಾಡಿನ ಊಟಿ ಮೂಲಕ ಕರ್ನಾಟಕಕ್ಕೆ ಬರುತ್ತಿರುವ ಪ್ರಯಾಣಿಕರು ಗಜರಾಜನ ಕಾಟಕ್ಕೆ ಹೈರಣಾಗಿದ್ದಾರೆ. ರಾತ್ರಿ 9 ಗಂಟೆಗೆ ಸಂಚಾರ ಬಂದ್ ಹಿನ್ನಲೆಯಲ್ಲಿ ಪ್ರಯಾಣಿಕರಲ್ಲಿ ಆತಂಕ ಇನ್ನೂ ಹೆಚ್ಚಾಗಿದೆ.
ಇತ್ತೀಚೆಗೆ ತರಕಾರಿ ವಾಹನಗಳಿಗಾಗಿ ಗಜರಾಜ ಆಗಾಗ ರಸ್ತೆಗಿಳಿಯುತ್ತಿದ್ದ. ಅದನ್ನೇ ಅಭ್ಯಾಸ ಮಾಡಿಕೊಂಡು ಈಗ ರಸ್ತೆಯಲ್ಲೇ ನಿಂತು ವಾಹನ ಸವಾರರಿಗೆ ಆತಂಕ ಮೂಡಿಸಿದ್ದಾನೆ.
ಅರಣ್ಯ ಸಿಬ್ಬಂದಿ ಸ್ಥಳದಲ್ಲಿ ಮೊಕ್ಕಾಂ ಹೂಡಿದ್ದಾರೆ. ಕಾಡಾನೆಯನ್ನು ರಸ್ತೆಯಿಂದ ಪಕ್ಕಕ್ಕೆ ಸರಿಸಲು ಹರಸಾಹಸಪಡುತ್ತಿದ್ದಾರೆ.