Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಟ ರಾಜೇಶ್ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರ ಸಂತಾಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ನಟ ರಾಜೇಶ್ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರ ಸಂತಾಪ

Cinema

ನಟ ರಾಜೇಶ್ ನಿಧನಕ್ಕೆ ವಿವಿಧ ಕ್ಷೇತ್ರಗಳ ಗಣ್ಯರ ಸಂತಾಪ

Public TV
Last updated: February 19, 2022 4:06 pm
Public TV
Share
3 Min Read
RAJESH 1
SHARE

ಹಿರಿಯ ನಟ ರಾಜೇಶ್ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಕನ್ನಡ ಚಿತ್ರರಂಗದ ಹಿರಿಯ ನಟ ರಾಜೇಶ್ ಅವರು ಇಂದು ನಮ್ಮನ್ನು ಅಗಲಿದ್ದಾರೆ. ಅವರು ಅತ್ಯಂತ ಪ್ರೌಢಿಮೆಯ ಅಭಿನಯವನ್ನು ಪ್ರದರ್ಶಿಸುತ್ತಿದ್ದ ಕಲಾವಿದರಾಗಿದ್ದರು. ಅವರ ಸಿನಿಮಾಗಳು ಮನದಾಳದಲ್ಲಿದೆ. ಯಾವುದೇ ಪಾತ್ರವನ್ನು ನೀಡಿದರೂ ಸುಲಲಿತವಾಗಿ ಅಭಿನಯಿಸುವ ಸಾಮರ್ಥ್ಯ ಅವರಲ್ಲಿತ್ತು.

BASAVARJ BOMMAI

ಕಲಾಸೇವೆಯನ್ನು ಅವರು ಅತ್ಯಂತ ಪ್ರಾಮಾಣಿಕತೆಯಿಂದ ಮಾಡಿದ್ದಾರೆ. ತಾನು ದೊಡ್ಡ ನಟನೆಂಬ ಆಡಂಬರವಿಲ್ಲದೇ ಬದುಕಿದ ಅತ್ಯಂತ ಸರಳಜೀವಿ. ಅವರ ಅಗಲಿಕೆಯಿಂದ ಕನ್ನಡ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಅಗಲಿಕೆಯ ದು:ಖವನ್ನು ಭರಿಸುವ ಶಕ್ತಿಯನ್ನು ಕುಟುಂಬದವರಿಗೆ ಭಗವಂತ ನೀಡಲಿ ಹಾಗೂ ಅವರ ಆತ್ಮಕ್ಕೆ ಶಾಂತಿ ದೊರೆಯಲಿ” ಎಂದು ತಿಳಿಸಿದ್ದಾರೆ. ಇದನ್ನೂ ಓದಿ : ಪ್ರೇಮಂ ಪೂಜ್ಯಂ ಬೆಡಗಿಗೆ ಈಗ ಜೂಲಿಯಟ್

ಡಿ.ಕೆ. ಶಿವಕುಮಾರ್ ಸಂತಾಪ 
ಹಿರಿಯ ನಟ ರಾಜೇಶ್ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ. ‘ರಾಜೇಶ್ ಅವರು ಹಿರಿಯ ನಟರು, ಅತ್ಯುತ್ತಮ ಕಲಾವಿದರು. ನಾವು ಅವರ ಚಿತ್ರಗಳನ್ನು ನೋಡಿ ಬೆಳೆದವರು. ಅವರ ಅಗಲಿಕೆ ನೋವು ತಂದಿದೆ. ರಾಜೇಶ್ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಅವರು ಸಂತಾಪ ನುಡಿಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ : ತೆಲುಗಿನ ಚೊಚ್ಚಲ ಚಿತ್ರದ ಮುಹೂರ್ತದಲ್ಲಿ ಕಾಣಲಿಲ್ಲ ದುನಿಯಾ ವಿಜಯ್

d k shivakumar

ಗಿರಿಜಾ ಲೋಕೇಶ್ ಕಂಬನಿ 
ರಾಜೇಶ್ ಅವರ ಜೊತೆ ನಾಟಕಗಳಲ್ಲಿ ಅಭಿನಯಿಸಿದ್ದೇನೆ ಕಲೆಯಲ್ಲಿ ತುಂಬಾ ಶ್ರದ್ದೆ ಅವರಿಗೆ ಹದಿನಾರನೇ ವಯಸ್ಸಿನಲ್ಲಿ ನಾನು ‌ಅವರೊಟ್ಟಿಗೆ ನಾಟಕದಲ್ಲಿ ಅಭಿನಯಿಸಿದ್ದೇನೆ. ಕಾಸ್ಟ್ಯೂಮ್, ಹೇರ್ ಸ್ಟೈಲ್, ಬಾಡಿ ಲಾಂಗ್ವೇಜ್ ಯಾವುದೇ ಇರಲಿ ಅಲ್ಲಿ ಶಿಸ್ತು ಬಯಸುತ್ತಿದ್ದರು. ಪಾತ್ರದಲ್ಲಿ ಪರಕಾಯ ಪ್ರವೇಶ ಮಾಡುತ್ತಿದ್ದರು ಅವರಿಂದ ನೋಡಿ ತುಂಬಾ ಕಲಿತಿದ್ದೇವೆ. ಅವರು ಶಿಸ್ತುಬದ್ದ ಜೀವನ ನಡೆಸಿದ್ದರು. ಇದನ್ನು ಓದಿ : ಪಾರ್ವತಮ್ಮ ರಾಜ್ ಕುಮಾರ್ ಮತ್ತು ಬೆಳ್ಳಿ ಬಟ್ಟಲು ಸ್ಟೋರಿ ಹೇಳಿದ ರಂಗಾಯಣ ರಘು

girija lokesh

ಆರೋಗ್ಯದ ಬಗ್ಗೆ ತುಂಬಾ ಕಾಳಜಿ ವಹಿಸಿದ್ದರು. ಕಲಾವಿದರು ಅಡ್ಡದಿಡ್ಡಿ ದೇಹ ಬೆಳೆಸಬಾರದು, ನೀಟಾಗಿರಬೇಕು. ಫಿಟ್ ಅಂಡ್ ಫೈನ್ ಆಗಿರಬೇಕು ಎನ್ನುತ್ತಿದ್ದರು. ಬೆಳುವಲದ‌ ಮಡಿಲಲ್ಲಿ ಚಿತ್ರದಲ್ಲಿ ರಾಜೇಶ್ ಅವರ ಮಗಳಾಗಿ ಅಭಿನಯಿಸಿದ್ದೇನೆ ಅವರು ಸಂತೃಪ್ತ ಜೀವನ ನಡೆಸಿ ಹೋಗಿದ್ದಾರೆ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಕಂಬನಿ ಮಿಡಿದಿದ್ದಾರೆ ಹಿರಿಯ ನಟಿ ಗಿರಿಜಾ ಲೋಕೇಶ್. ಇದನ್ನೂ ಓದಿ : ರಾಮ್ ಪೋತಿನೇನಿ ಸಿನಿಮಾಗೆ ಅಖಂಡ ಡೈರೆಕ್ಟರ್ ನಿರ್ದೇಶನ

chandru

ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಚಂದ್ರು 
ರಾಜೇಶ್ ಅಂತಿಮ ದರ್ಶನ ಪಡೆದ ಮಾತನಾಡಿದ ಚಂದ್ರು, “ರಾಜೇಶ್ ಆತ್ಮೀಯರು ಹಾಗೂ ನನ್ನ ಮಾರ್ಗದರ್ಶಕರು. ರಾಜ್ ಕುಮಾರ್ , ಉದಯ್ ಕುಮಾರ್, ಕಲ್ಯಾಣ್ ಕುಮಾರ್ ಸಾಲಿನವರು ಅಭಿನಯಕ್ಕೆ ನವರಸಗಳನ್ನು ತುಂಬಿದವರು. ರಂಗಭೂಮಿಯಲ್ಲಿ ಪಳಗಿದವರು, ಅದ್ಬುತ ಅಭಿನಯ ಮಾಡುತ್ತಿದ್ದರು. ಅವರ ಜೊತೆಗೆ ಬೇರೆಯವರು ಅದ್ಬುತವಾಗಿ ನಟಿಸಬೇಕು‌ ಎನ್ನುತ್ತಿದ್ದರು. ಇಂಗ್ಲಿಷ್ ಪಾಂಡಿತ್ಯವೂ ಇತ್ತು. ಕನ್ನಡ ಪಾಂಡಿತ್ಯವೂ ಇತ್ತುಅವರೊಟ್ಟಿಗೆ ಅಭಿನಯಿಸಿದ್ದೇನೆ. ತುಂಬು ಜೀವನ ಮಾಡಿ‌ ಹೋಗಿದ್ದಾರೆ. ರಾಜ್ ಕುಮಾರ್, ಕಲ್ಯಾಣ್ ಕುಮಾರ್, ಉದಯ್ ಕುಮಾರ್, ರಾಜೇಶ್ ಸೇರಿದಂತೆ ದಿಗ್ವಿಜರ ಪರಂಪರೆಯವರ ಜೊತೆ ಸಿನಿಮಾ ಮಾಡುವ ಭಾಗ್ಯ ನನ್ನದು” ಎಂದು ಚಂದ್ರು. ಇದನ್ನೂ ಓದಿ : ಹಿರಿಯ ನಟ ರಾಜೇಶ್ ಅವರ ಅಪರೂಪದ ಫೋಟೋಗಳು

tara anuradha

ತಾರಾ ಅನುರಾಧ ಸಂತಾಪ 
ನಮ್ಮ ಚಿತ್ರರಂಗದ ಹಿರಿಯರನ್ನ ಕಳೆದುಕೊಂಡಿದ್ದೇವೆ. ಅವರ ಕೆಲಸ, ಸಿನಿಮಾಗಳು ನಮಗೆ ಅವರ ನೆನಪು ಉಳಿಯುವಂತೆ ಮಾಡುತ್ತವೆ ಎಂದಿದ್ದಾರೆ ರಾಷ್ಟ್ರ ಪ್ರಶಸ್ತಿ ವಿಜೇತೆ ನಟಿ ತಾರಾ ಅನುರಾಧ.

TAGGED:Basavaraj Bommaid k shivakumarfilm newsgirija lokeskannada filmmukyamantri chandrurajesh actorsandalwoodTara Anuradhaಗಿರಿಜಾ ಲೋಕೇಶ್ಡಿ.ಕೆ.ಶಿವಕುಮಾರ್ತಾರಾ ಅನುರಾಧಬಸವರಾಜ್ ಬೊಮ್ಮಾಯಿಮುಖ್ಯಮಂತ್ರಿ ಚಂದ್ರು
Share This Article
Facebook Whatsapp Whatsapp Telegram

Cinema news

Zee Short Film Contest
ಹೊಸ ಪ್ರತಿಭೆಗಳ ಹುಡುಕಾಟಕ್ಕೆ ಜೀ ಕಿರುಚಿತ್ರ ಸ್ಪರ್ಧೆ
Cinema Latest Top Stories
Krishna Vamshi serial
ಕೃಷ್ಣವಂಶಿ: ನಾಚಿಕೆ ಕೃಷ್ಣನ ಜೊತೆ ವಂಶಿ ಡೇಟ್ ಫಿಕ್ಸ್
Cinema Latest Sandalwood Top Stories
Whispers of the River
ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ವಿಭಿನ್ನ ಪ್ರಯತ್ನ
Cinema Latest Sandalwood Top Stories
Darshan 6
ಜೈಲಿನಲ್ಲಿ ಟಿವಿ ಕೊಟ್ಟಿದ್ದಕ್ಕಾಗಿ ಜಡ್ಜ್‌ಗೆ ಥ್ಯಾಂಕ್ಸ್‌ ಹೇಳಿ ನೇರ ಕೋರ್ಟ್ ವಿಚಾರಣೆಗೆ ದರ್ಶನ್‌ ಮನವಿ
Cinema Crime Karnataka Latest Main Post

You Might Also Like

Vijayapura Kidney Donate
Districts

9 ತಿಂಗಳಿನಿಂದ ಬಳಲುತ್ತಿದ್ದ ಸೊಸೆಗೆ ಕಿಡ್ನಿ ದಾನ ಮಾಡಿದ ಅತ್ತೆ

Public TV
By Public TV
16 minutes ago
Murugesh Nirani
Kalaburagi

ಕಾಂಗ್ರೆಸ್ ಸರ್ಕಾರ ಗೊಂದಲ ಬಿಟ್ಟು ಸೂಕ್ತ ಆಡಳಿತ ನಡೆಸಲಿ: ಮುರುಗೇಶ್ ನಿರಾಣಿ

Public TV
By Public TV
19 minutes ago
shivamogga murder
Crime

ಶಿವಮೊಗ್ಗದಲ್ಲಿ ಅನ್ಯಕೋಮಿನ ಅಪ್ರಾಪ್ತರಿಂದ SSLC ವಿದ್ಯಾರ್ಥಿ ಹತ್ಯೆ – ಇಬ್ಬರು ಅಪ್ರಾಪ್ತರ ಬಂಧನ

Public TV
By Public TV
55 minutes ago
MP RENUKACHARYA
Bengaluru City

ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನಕ್ಕೆ ಪತ್ರ ಬರೆದಿರೋದು ಬಂಡಾಯದ ಸೂಚನೆ – ರೇಣುಕಾಚಾರ್ಯ

Public TV
By Public TV
1 hour ago
shepherds bengaluru
Bengaluru City

ಕುರಿ ಕಾಯುವವರನ್ನ ಕುರಿಗಾಹಿಗಳ ನಿಗಮಕ್ಕೆ ಅಧ್ಯಕ್ಷನಾಗಿ ಮಾಡಬೇಕು – ಸಿಎಂಗೆ ಕುರಿಗಾಹಿಗಳ ಮನವಿ

Public TV
By Public TV
2 hours ago
Pawan Hans
Crime

ಅಂಡಮಾನ್ ಕರಾವಳಿಯಲ್ಲಿ ಪವನ್ ಹನ್ಸ್ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?