ಇಸ್ಲಾಮಾಬಾದ್: ಭಾರತೀಯ ಸೇನೆ (Indian Army) ನಡೆಸಿದ `ಆಪರೇಷನ್ ಸಿಂಧೂರ’ದಿಂದಾಗಿ ಪಾಕ್ ತತ್ತರಿಸಿ ಹೋಗಿದ್ದು, ಪಾಕಿಸ್ತಾನದಲ್ಲಿ (Pakistan) ಸದ್ಯ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ.
ಏ.22ರಂದು ಪಹಲ್ಗಾಮ್ನ (Pahalgam Terrorist Attack) ಬೈಸರನ್ ಕಣಿವೆಯಲ್ಲಿ ನಡೆದ ಭಯೋತ್ಪಾದಕರ ಉಗ್ರರ ದಾಳಿಯಲ್ಲಿ 26 ಜನರು ಪ್ರಾಣತೆತ್ತರು. ಇದಾದ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದೆ. ಇದರ ಮಧ್ಯೆ ಉಗ್ರರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ `ಆಪರೇಷನ್ ಸಿಂಧೂರ’ ಹೆಸರಿನಲ್ಲಿ ಮಂಗಳವಾರ ತಡರಾತ್ರಿ 1:44ರ ಸುಮಾರಿಗೆ ಪಾಕ್ನ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ, ಸೇಡು ತೀರಿಸಿಕೊಂಡಿದೆ.ಇದನ್ನೂ ಓದಿ:
ಭಾರತದ ವಾಯುದಾಳಿಯಲ್ಲಿ 80ಕ್ಕೂ ಹೆಚ್ಚು ಉಗ್ರರು ಹತ್ಯೆಯಾಗಿದ್ದಾರೆ. ಹೀಗಾಗಿ ಪಾಕ್ನಲ್ಲಿ ತುರ್ತು ಪರಿಸ್ಥಿತಿ ಘೋಷಣೆಯಾಗಿದೆ. ಆದರೆ ಈ ಕುರಿತು ಪಾಕ್ ಪ್ರಧಾನಿ ಶೆಹಬಾಜ್ ಷರೀಫ್ ಪ್ರತಿಕ್ರಿಯಿಸಿದ್ದು, ಈ ದಾಳಿಯಲ್ಲಿ ಅಮಾಯಕ ಪಾಕಿಸ್ತಾನಿಗಳ ಜೀವಹಾನಿಯಾಗಿದೆ. ಪಾಕಿಸ್ತಾನಿಗಳ ಆತ್ಮರಕ್ಷಣೆಗಾಗಿ ಇದಕ್ಕೆ ಪ್ರತೀಕಾರ ತೀರಿಸಿಕೊಳ್ಳುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇದರ ನಡುವೆ ಪಾಕ್ ಉಗ್ರರ ಸಾವಿನ ಅಂಕಿ-ಸಂಖ್ಯೆಯನ್ನು ಮುಚ್ಚಿಡಲು ಪ್ರಯತ್ನಿಸಿದೆ. ಭಾರತದ ಏರ್ಸ್ಟ್ರೈಕ್ನಲ್ಲಿ 26 ಜನರು ಸಾವನ್ನಪ್ಪಿದ್ದು, 40 ಜನರಿಗೆ ಗಾಯವಾಗಿದೆ. 6 ಸ್ಥಳಗಳ ಮೇಲೆ ದಾಳಿ ನಡೆದಿದೆ ಎಂದು ಪಾಕಿಸ್ತಾನ ಹೇಳಿಕೊಂಡಿದೆ.ಇದನ್ನೂ ಓದಿ: