Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Karnataka

ರಾಜ್ಯಪಾಲನಾಗಲ್ಲ, ವಿಜ್ಞಾನಿಯಾಗಿಯೇ ಇರ್ತೀನಿ: ಕೇಂದ್ರದ ಆಫರ್ ತಿರಸ್ಕರಿಸಿದ್ದ ಯು.ಆರ್.ರಾವ್

Public TV
Last updated: July 24, 2017 1:34 pm
Public TV
Share
3 Min Read
UR Rao udupi
SHARE

ಉಡುಪಿ: ಇಸ್ರೋ ಮಾಜಿ ಅಧ್ಯಕ್ಷ ಪ್ರೊ. ಯು. ಆರ್ ರಾವ್ ಅವರಿಗೆ ಮಹಾರಾಷ್ಟ್ರ ರಾಜ್ಯದ ರಾಜ್ಯಪಾಲರಾಗುವ ಅವಕಾಶ ಸಿಕ್ಕಿತ್ತು. ಆದರೆ ನಾನು ವಿಜ್ಞಾನಿಯಾಗಿಯೇ ಮುಂದುವರೆಯುತ್ತೇನೆ. ರಾಜಕಾರಣಿಯಾಗುವುದಿಲ್ಲ ಎಂದು ಹೇಳಿ ತನಗೆ ಸಿಕ್ಕಿದ್ದ ಆಫರ್ ಅನ್ನು ಅವರು ನಯವಾಗಿ ತಿರಸ್ಕರಿಸಿದ್ದರು.

ಯು.ಆರ್ ರಾವ್ ಉಡುಪಿ ಜಿಲ್ಲೆಯ ಅದಮಾರು ಗ್ರಾಮದವರು. ಬಾಲ್ಯದ ಶಿಕ್ಷಣ ಉಡುಪಿಯಲ್ಲಿ ಮುಗಿಸಿದ ಉಡುಪಿ ರಾಮಚಂದ್ರ ರಾವ್ ಅವರಿಗೆ ಮಹಾರಾಷ್ಟ್ರ ರಾಜ್ಯಪಾಲರಾಗುವ ಅವಕಾಶ ಸಿಕ್ಕಿತ್ತು ಎನ್ನುವ ಮಾಹಿತಿಯನ್ನು ರಾವ್ ಕುಟುಂಬಸ್ಥರು ಹೊರಹಾಕಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ರಾವ್ ಸಂಬಂಧಿ ಅದಮಾರು ಶ್ರೀಪತಿ ಆಚಾರ್ಯ, ಇಂದಿರಾಗಾಂಧಿ ಪ್ರಧಾನಿಯಾಗಿದ್ದಾಗ ರಾವ್ ಅವರಿಗೆ ಮಹಾರಾಷ್ಟ್ರದ ರಾಜ್ಯಪಾಲ ಹುದ್ದೆಯ ಆಫರ್ ಕೊಟ್ಟಿದ್ದರು. ನಾನು ವಿಜ್ಞಾನಿ. ರಾಜಕಾರಣಿಯಾಗಲು ಬಯಸುವುದಿಲ್ಲ ಎಂದು ಪ್ರಧಾನಿಯಿಂದ ಬಂದ ನಿವೇದನೆಯನ್ನು ನಯವಾಗಿ ತಿರಸ್ಕರಿಸಿದ್ದರು ಎಂದು ಅವರು ನೆನಪು ಮಾಡಿಕೊಂಡಿದ್ದಾರೆ. ಪ್ರೊಫೆಸರ್ ರಾವ್ ಅವರು ವಿಜ್ಞಾನ ಕ್ಷೇತ್ರಕ್ಕೆ ಕೊಟ್ಟ ಕೊಡುಗೆ ಅಪಾರ. ಅವರಿಂದ ದೇಶಕ್ಕೆ- ವಿಶ್ವಕ್ಕೆ ಸಿಕ್ಕ ಕೊಡುಗೆ ಮಹತ್ತರವಾದದ್ದು ಎಂದು ಅವರು ಹೇಳಿದರು.

ur rao 2

ಯು. ಆರ್ ರಾವ್ ಪ್ರೌಢಶಿಕ್ಷಣವನ್ನು ಉಡುಪಿಯ ಮಿಷನ್ ಕಂಪೌಡಿನ ಕ್ರಿಶ್ಚಿಯನ್ ಹೈಸ್ಕೂಲಿನಲ್ಲಿ ಪೂರೈಸಿದ್ದರು. ತಾಯಿ ಕೃಷ್ಣವೇಣಿ ಅವರ ಮನೆ ಉಡುಪಿಯ ಅದಮಾರುವಿನಲ್ಲಿತ್ತು. ಅಲ್ಲೇ ರಾವ್ ಅವರ ಶಿಕ್ಷಣ ಆರಂಭವಾಗಿತ್ತು. ಅದಮಾರುವಿನ ಮನೆ ಸದ್ಯ ಬಿದ್ದು ಹೋಗಿದೆ. ರಾವ್ ಅವರ ತಂದೆ ಕಟ್ಟಿಸಿದ ಉಡುಪಿಯ ಬನ್ನಂಜೆಯ ಮನೆಯನ್ನು ಯು.ಆರ್ ರಾವ್ ಬಾವ ಖರೀದಿ ಮಾಡಿ ಸದ್ಯ ಅಲ್ಲೇ ನೆಲೆಸಿದ್ದಾರೆ.

ಅಡುಗೆ ಭಟ್ಟನ ಮಗ ವಿಜ್ಞಾನಿ: ಯು.ಆರ್ ರಾವ್ ತಂದೆ ಲಕ್ಷ್ಮೀನಾರಾಯಣ ಅವರು ಬಹಳ ಚೆನ್ನಾಗಿ ಆಡುಗೆ ಮಾಡುತ್ತಿದ್ದರು. ಚೆನ್ನಾಗಿ ಅಡುಗೆ ಮಾಡಿ- ಅದರಲ್ಲಿ ಬಂದ ದುಡ್ಡಿನಲ್ಲಿ ಯು.ಆರ್ ರಾವ್ ಅವರಿಗೆ ಶಿಕ್ಷಣ ಕೊಡಿಸಿದ್ದರು. ಬಳ್ಳಾರಿಯಲ್ಲಿ ಕ್ಯಾಟರಿಂಗ್ ಬ್ಯುಸಿನೆಸ್ ಮಾಡುತ್ತಿದ್ದ ರಾಜ್ ತಂದೆ, ಆ ಭಾಗದಲ್ಲಿ ಅಡುಗೆ ವಿಚಾರದಲ್ಲಿ ಭಾರೀ ಹೆಸರುವಾಸಿಯಾಗಿದ್ದರು. ಕುಟುಂಬವನ್ನು ಸಾಕಿ ಸಲಹಿದ್ದು, ಮಕ್ಕಳ ವಿದ್ಯಾಭ್ಯಾಸ ಮಾಡಿಸಿದ್ದು, ಮನೆ ಕಟ್ಟಿಸಿದ್ದು ಎಲ್ಲವೂ ಬಾಣಸಿಗ ವೃತ್ತಿಯಿಂದಲೇ.

ಭಾರತ ರತ್ನ ಸಿಗಬೇಕಿತ್ತು: ಯು.ಆರ್ ರಾವ್ ಅವರಿಗೆ ಭಾರತ ರತ್ನ ಗೌರವ ನೀಡಬೇಕಿತ್ತು. ಪದ್ಮ ಪ್ರಶಸ್ತಿ ನೀಡಿದ್ದು ಗೌರವದ ಸಂಗತಿಯೇ ಆಗಿದೆ. ಆದ್ರೆ ಇದಕ್ಕಿಂತ ಹೆಚ್ಚಿನ ಸನ್ಮಾನ ರಾವ್ ಅವರಿಗೆ ಸಿಗಬೇಕಿತ್ತು ಎಂದು ಹೇಳಿದರು. ಅವರು ಭಾರತಕ್ಕೆ ಬರುವ ಮನಸ್ಸು ಮಾಡಿದ್ದೇ ದೊಡ್ಡ ವಿಚಾರ. ಅಮೆರಿಕದಲ್ಲಿ ಇರುತ್ತಿದ್ದರೆ ಇನ್ನಷ್ಟು ಉನ್ನತ ಹುದ್ದೆಗೆ ಹೋಗುತ್ತಿದ್ದರೋ ಏನೋ..? ಎಲ್ಲವನ್ನೂ ತ್ಯಜಿಸಿ ಅವರು ತಾಯ್ನಾಡಿನ ಸೇವೆಗೆ ಬಂದಿದ್ದು ದೊಡ್ಡ ವಿಷಯ ಎಂದು ಶ್ರೀಪತಿ ಆಚಾರ್ಯ ತಿಳಿಸಿದರು.

 

ಯು.ಆರ್.ರಾವ್ ಸೋಮವಾರ ಬೆಳಗಿನ ಜಾವ ಸುಮಾರು 2.30ರ ಸಮಯದಲ್ಲಿ ಮೃತಪಟ್ಟಿದ್ದಾರೆ. ವಿಜ್ಞಾನಿಯ ನಿಧನಕ್ಕೆ ನಾಡಿನ ಗಣ್ಯರೆಲ್ಲ ಸಂತಾಪ ಸೂಚಿಸಿದ್ದಾರೆ. ರಾವ್ ಭಾರತದ ಮೊದಲ ಕೃತಕ ಉಪಗ್ರಹ ಆರ್ಯಭಟ ದಲ್ಲಿಯೂ ಕೆಲಸ ನಿರ್ವಹಿಸಿದ್ದರು. ಇದೇ ತಿಂಗಳು ಹೃದಯ ಸಂಬಂಧಿ ಕಾಯಿಲೆಗೆ ಸಂಬಂಧಿಸಿದಂತೆ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದರು.

1984 ಮತ್ತು 1994ರ ಅವಧಿಯಲ್ಲಿ ರಾವ್ ಇಸ್ರೋದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಇದಕ್ಕೂ ಮೊದಲು ಸತೀಶ್ ಧವನ್ ಸಂಸ್ಥೆಯ ಮುಖ್ಯಸ್ಥರಾಗಿಯೂ ಕಾರ್ಯ ನಿರ್ವಹಿಸಿದ್ದರು. ರಾವ್ ಉಡುಪಿ ಜಿಲ್ಲೆಯ ಆದ್ಮಾಪುರ ಗ್ರಾಮದಲ್ಲಿ ಜನಸಿದ್ದರು. ರಾವ್ ಅವರು ದೇಶದ ಶ್ರೇಷ್ಠ ವಿಜ್ಞಾನಿಗಳಾದ ಸತೀಶ್ ಧವನ್, ವಿಕ್ರಂ ಸಾರಾಭಾಯ್, ಎಂ.ಜಿ.ಕೆಮೆನನ್ ಅವರ ಅನೇಕ ಪ್ರೊಜೆಕ್ಟ್ ನಲ್ಲಿ ಭಾಗಿಯಾಗಿದ್ದರು.

ಇದೇ ವರ್ಷ ರಾವ್ ಅವರಿಗೆ ಭಾರತ ಸರ್ಕಾರದಿಂದ ಪದ್ಮ ವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಪ್ರಶಸ್ತಿ ಬಂದ ವೇಳೆ `ಇದು ನನಗೆ ಮರಣೋತ್ತರವಾಗಿ ನೀಡಲಾಗುತ್ತದೆ ಎಂದು ತಿಳಿದಿದ್ದೆ’ ಎಂದು ರಾವ್ ಹಾಸ್ಯ ಮಾಡಿದ್ದರು.

 

Saddened by demise of renowned scientist, Professor UR Rao. His remarkable contribution to India's space programme will never be forgotten.

— Narendra Modi (@narendramodi) July 24, 2017

ಇಸ್ರೋವನ್ನು ಜಗತ್ತಿನ ಉತ್ಕೃಷ್ಟ ಬಾಹ್ಯಾಕಾಶ ಸಂಸ್ಥೆಯಾಗಿ ರೂಪಿಸುವಲ್ಲಿ ರಾವ್ ಅವರ ದೂರದರ್ಶಿತ್ವದ ಕೊಡುಗೆ ಅಪಾರ. ನಾಡು ಅವರ ಸಾಧನೆಗಳನ್ನು ಸದಾ ಸ್ಮರಿಸುತ್ತದೆ. pic.twitter.com/2yaISSd8AX

— CM of Karnataka (@CMofKarnataka) July 24, 2017

ಖ್ಯಾತ ಬಾಹ್ಯಾಕಾಶ ವಿಜ್ಞಾನಿ, ಮಾಜಿ ಇಸ್ರೋ ಮುಖ್ಯಸ್ಥ ಪ್ರೊ.ಯು.ಆರ್.ರಾವ್ ಅವರ ನಿಧನದ ಸುದ್ದಿ ಆಘಾತ ತಂದಿದೆ, ನಾಡು ಶೋಕತಪ್ತವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ pic.twitter.com/Tv2FpSBgk1

— CM of Karnataka (@CMofKarnataka) July 24, 2017

From the launch of Aryabhatta to the MOM, Prof UR Rao's contributions have taken @isro to unparalleled heights. V sad to learn of his demise https://t.co/61BWKQIaHg

— Rahul Gandhi (@RahulGandhi) July 24, 2017

U R RAO 4

U R RAO 3

U R RAO 2

TAGGED:karnatakascientistspaceudupiUR Raoಇಸ್ರೋಉಡುಪಿಮಹಾರಾಷ್ಟ್ರಯುಆರ್ ರಾವ್ರಾಜ್ಯಪಾಲ
Share This Article
Facebook Whatsapp Whatsapp Telegram

You Might Also Like

Metro Nandini Shop
Bengaluru City

ಅಮೂಲ್‌ಗೆ ಮಣೆಹಾಕಿದ್ದ BMRCLಗೆ ಮುಖಭಂಗ- ಮೆಟ್ರೋ ನಿಲ್ದಾಣಗಳಲ್ಲಿ 20 ನಂದಿನಿ ಮಳಿಗೆ ತೆರೆಯಲು ಅವಕಾಶ

Public TV
By Public TV
36 minutes ago
Vidhana Soudha
Bengaluru City

ನಂದಿಬೆಟ್ಟದಲ್ಲಿ ನಡೆಯಬೇಕಿದ್ದ ಸಚಿವ ಸಂಪುಟ ಸಭೆ ರದ್ದು – ವಿಧಾನಸೌಧಕ್ಕೆ ಶಿಫ್ಟ್

Public TV
By Public TV
57 minutes ago
DK Shivakumar 8
Bengaluru City

ನಾವಿರುವವರೆಗೂ ಎಸ್ಕಾಂಗಳ ಖಾಸಗೀಕರಣಕ್ಕೆ ಅವಕಾಶವಿಲ್ಲ: ಡಿ.ಕೆ ಶಿವಕುಮಾರ್

Public TV
By Public TV
1 hour ago
Jyotiraditya Scindia Yaduveer Wadiyar
Districts

ಕೊಡಗಿನಲ್ಲಿ BSNL ಸೇವೆ ಸರಿಪಡಿಸಲು ಕೇಂದ್ರ ಸಚಿವರಿಗೆ ಯದುವೀರ್‌‌ ಒಡೆಯರ್‌ ಮನವಿ

Public TV
By Public TV
1 hour ago
Labour
Bengaluru City

ಕೆಲಸದ ಅವಧಿ 9ರಿಂದ 10ಗಂಟೆಗೆ ಹೆಚ್ಚಳಕ್ಕೆ ಸರ್ಕಾರ ಚಿಂತನೆ – ಕಾರ್ಮಿಕ ಸಂಘಟನೆಗಳ ವಿರೋಧ

Public TV
By Public TV
2 hours ago
Chevireddy Arrested In Bengaluru Airport
Bengaluru City

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಆಂಧ್ರ ಮಾಜಿ ಸಚಿವ ಚೆವಿ ರೆಡ್ಡಿ ಅರೆಸ್ಟ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?