Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ ಕುಟುಂಬದಲ್ಲಿ 20-23 ವರ್ಷಕ್ಕೆ ಮತ್ತೊಬ್ಬ ಸೂಪರ್ ಸ್ಟಾರ್ ಹುಟ್ಟಿ ಬರ್ತಾನೆ: ಜಗ್ಗೇಶ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜ್ ಕುಟುಂಬದಲ್ಲಿ 20-23 ವರ್ಷಕ್ಕೆ ಮತ್ತೊಬ್ಬ ಸೂಪರ್ ಸ್ಟಾರ್ ಹುಟ್ಟಿ ಬರ್ತಾನೆ: ಜಗ್ಗೇಶ್

Bengaluru City

ರಾಜ್ ಕುಟುಂಬದಲ್ಲಿ 20-23 ವರ್ಷಕ್ಕೆ ಮತ್ತೊಬ್ಬ ಸೂಪರ್ ಸ್ಟಾರ್ ಹುಟ್ಟಿ ಬರ್ತಾನೆ: ಜಗ್ಗೇಶ್

Public TV
Last updated: November 17, 2021 1:17 pm
Public TV
Share
3 Min Read
Jaggesh Puneeth
SHARE

ಬೆಂಗಳೂರು: ಡಾ.ರಾಜ್‍ಕುಮಾರ್ ಕುಟುಂಬದಲ್ಲಿ 20-23 ವರ್ಷಕ್ಕೆ ಮತ್ತೊಬ್ಬ ಸೂಪರ್ ಸ್ಟಾರ್ ಹುಟ್ಟಿ ಬರುತ್ತಾನೆ ಎಂದು ನಟ ಜಗ್ಗೇಶ್ ಭವಿಷ್ಯ ನುಡಿದಿದ್ದಾರೆ.

Contents
  • ಮಗುವಿನಂತಹ ಮನಸ್ಸು!
  • ವಾಪಸ್ ಬರುತ್ತಾನೆ!

ಬೆಂಗಳೂರಿನ ಅರಮನೆ ಮೈದಾನದಲ್ಲಿ ಮಂಗಳವಾರ ನಡೆದ ಪುನೀತ ನಮನ ಕಾರ್ಯಕ್ರಮದಲ್ಲಿ ಜಗ್ಗೇಶ್ ಅವರು ಅನೇಕ ವಿಚಾರಗಳನ್ನು ಹಂಚಿಕೊಂಡು ಭಾವುಕವಾಗಿ ಮಾತನಾಡಿದ್ದಾರೆ. ಈ ವೇಳೆ, ನಮ್ಮ ಬದುಕಿನಲ್ಲಿ ಇಂತಹ ದಿನ ಬರುತ್ತೆ ಎಂದು ನಾವು ಅಂದುಕೊಂಡಿರಲಿಲ್ಲ. ಅದರಲ್ಲಿಯೂ ವಿಶೇಷವಾಗಿ ನನಗೆ ಇನ್ನೂ ಈ ವಿಚಾರ ನನ್ನ ಮೆದುಳಿಗೆ ಹೋಗಿಲ್ಲ. ಕಾರಣ ಅಪ್ಪು ಜೊತೆ ನಾನು ತಿಂಗಳಿಗೆ ಎರಡು ಬಾರಿಯಾದರೂ ಮಾತನಾಡುತ್ತಿದ್ದೆ ಎಂದು ನೆನೆದರು.

Puneeth Rajukumar Geethanamana basavaraj bommoa yediyurappa dks hivakumar ashok

ರಾಜ್‍ಕುಮಾರ್ ಕುಟುಂಬದಲ್ಲಿ 20-23 ವರ್ಷಕ್ಕೆ ಮತ್ತೊಬ್ಬ ಸೂಪರ್ ಸ್ಟಾರ್ ಹುಟ್ಟಿಬರುತ್ತಾನೆ. ನಾವು ಇರುತ್ತೇವೂ, ಇಲ್ಲವೋ ಗೊತ್ತಿಲ್ಲ. ಆದರೆ ನೀವು ನೆನಪಿನಲ್ಲಿ ಇಟ್ಟುಕೊಳ್ಳಿ. 20-23 ವರ್ಷದಲ್ಲಿ ಆಕಸ್ಮಿಕವಾಗಿ ಒಬ್ಬ ಸೂಪರ್ ಸ್ಟಾರ್ ಬರುತ್ತಾನೆ. ನೀವು ನೆನಪಿನಲ್ಲಿ ಇಟ್ಟುಕೊಳ್ಳಿ ಅವನೇ ನಿಮ್ಮ ಪುನೀತ್. ನನ್ನ ಆತ್ಮ ಹೇಳುತ್ತಿದೆ. ಅವನು ವಾಪಸ್ಸು ಬರುತ್ತಾನೆ ಎಂದು ಭವಿಷ್ಯದ ಬಗ್ಗೆ ಮಾತನಾಡಿದರು. ಇದನ್ನೂ ಓದಿ: ಯುವರತ್ನನಿಗೆ ಪದ್ಮಶ್ರೀ ನೀಡಲು ಶಿಫಾರಸ್ಸಿಗೆ ತೀರ್ಮಾನ

ಭವಿಷ್ಯದಲ್ಲಿ ಪುನೀತ್ ಬಹಳ ವಿಶೇಷವಾಗಿ ಬರುತ್ತಾನೆ. ಪೂರ್ಣ ಆಯುಷ್ಯವನ್ನು ಇಟ್ಟುಕೊಂಡು ಬರುತ್ತಾನೆ. ಏಕೆಂದರೆ ಆತನಿಗೆ ಭವಿಷ್ಯದಲ್ಲಿ ಇನ್ನೂ ಮಾಡಬೇಕು ಎಂಬ ಆಸೆ ಅವನಲ್ಲಿ ಇತ್ತು. ಅದಕ್ಕೆ ಅವನು ಮತ್ತೆ ಬರುತ್ತಾನೆ. ಶಾಸ್ತ್ರಗಳನ್ನು ನೋಡಿದರೆ ಕೆಲವು ಗ್ರಹ-ಗತಿಗಳು ದಾಟುವ ಸಮಯದಲ್ಲಿ ಈ ರೀತಿ ಆಗುತ್ತೆ ಎಂದು ಹೇಳಿದರು.

Jaggesh

ನಮ್ಮ ಸಂತೋಷ ಆನಂದ್ ರಾಮ್ ನನಗಾಗಿ ಒಂದು ಸ್ಕ್ರಿಪ್ಟ್ ಸಿದ್ಧ ಪಡಿಸಿದಾಗ ಪುನೀತ್ ನಾನು ಸಹ ಆ ಕಥೆಯನ್ನು ಕೇಳಬೇಕು ಎಂದು ಆತನೂ ಸಹ ಸ್ಕ್ರಿಪ್ಟ್ ಅನ್ನು ಕೇಳಿದ. ಆತನಿಗೆ ನನ್ನ ಸ್ಕ್ರಿಪ್ಟ್ ಕೇಳಬೇಕು ಎನ್ನುವ ಯಾವ ಅವಶ್ಯಕತೆಯೂ ಸಹ ಇರಲಿಲ್ಲ. ಅಂತಹ ಒಳ್ಳೆಯ ಮನಸ್ಸು ಅವನದ್ದು. ಅಪ್ಪು ಸಾಯುವ ಕೊನೆ ಐದು ದಿನಗಳಿರಬೇಕಾದರೆ ಈ ಘಟನೆ ನಡೆದಿತ್ತು. ಮಲೇಶ್ವರಂಗೆ ಅವರು ಬಂದಿರುವ ಸುದ್ದಿ ಕೇಳಿ ನಾನು ಸಹ ಹೋದೆ. ಆ ವೇಳೆ ನಾನು ಮಾಡಿದ ತಮಾಷೆಯನ್ನು ಕೇಳಿ ಎಷ್ಟು ನಗುತ್ತಿದ್ದ ಎಂದು ನೆನೆದರು.

ಮಗುವಿನಂತಹ ಮನಸ್ಸು!

ಪುನೀತ್ ಸುಧಾರಾಣಿ ಮನೆಯ ಬಳಿ ಪಾರ್ಕಿಂಗ್ ಮಾಡಬೇಕಾದರೆ 1 ರಿಂದ ಒಂದೂವರೆ ನಿಮಿಷದವರೆಗೂ ಅವನು ನನಗೆ ಟಾಟಾ ಮಾಡುತ್ತಿದ್ದ. ಆದರೆ ಎಂದೂ ನನಗೆ ಅವನು ಟಾಟಾ ಮಾಡಿಲ್ಲ. ಎಂತಹ ಮಗುವಿನಂತಹ ಮನಸ್ಸು ಇವನದ್ದು ಎಂದು ನಾನು ಮನಸ್ಸಿನಲ್ಲಿ ಹೇಳಿಕೊಂಡಿದ್ದೆ ಎಂದರು.

ಇವತ್ತು ನನ್ನದು ಎಂಥಹ ದೌರ್ಭಾಗ್ಯ ಎಂದರೆ ಇಂದು ಈ ಕಾರ್ಯಕ್ರಮದಲ್ಲಿ ಮಾತನಾಡುವುದು. ಇಂತಹ ಪರಿಸ್ಥಿತಿ ಯಾರಿಗೂ ಬರಬಾರದು. ನಾವು 60ರ ಗಡಿಗೆ ಬಂದಿದ್ದೇವೆ. ಅವನು ನಮ್ಮನ್ನು ಕಳಿಸಿಕೊಂಡಬೇಕಿತ್ತು. ಆದರೆ ಇಂದು ನಾವು ಅವನನ್ನು ಕಳುಹಿಸಿಕೊಂಡುವ ಸಮಯ ಬಂದಿದೆ. ಇದಕ್ಕಿಂತ ದೌರ್ಭಾಗ್ಯ ಮತ್ತೊಂದಿಲ್ಲ ಎಂದು ಭಾವಿಸುತ್ತೇನೆ ಎಂದರು.

ಕನ್ನಡ ಚಿತ್ರರಂಗಕ್ಕೆ ಬಹಳ ಗಟ್ಟಿಯಾದ ನಟ. ಬೇರೆ ಯಾವುದೇ ಭಾಷೆಯ ಸಿನಿಮಾಗಳ ಬಗ್ಗೆ ಮಾತನಾಡಿದಾಗ ನಾವು ಇದ್ದೇವೆ ಎಂದು ನಿರೂಪಿಸುವ 4-5 ನಟರಲ್ಲಿ ಈತನೂ ಒಬ್ಬ. ಇದನ್ನು ಎಂದೂ ನಿರೀಕ್ಷೆ ಮಾಡಿರಲಿಲ್ಲ. ಆದರೆ ನಾವು ನಮಗೆ ಸಮಾಧಾನ ಮಾಡಿಕೊಳ್ಳಬೇಕಾಗುತ್ತೆ ಎಂದು ತಿಳಿಸಿದರು.

ನಾನು 4-5 ವರ್ಷಗಳಿಂದ ಹೆಚ್ಚು ಯಾರನ್ನೂ ಭೇಟಿಯಾಗುತ್ತಿಲ್ಲ. ನನಗೆ ಬೇರೆ ಕಡೆ ಸಂತೋಷ ಸಿಗುತ್ತಿದೆ, ಅದರ ಬಳಿ ಹೆಚ್ಚು ಒಲವು ತೋರಿಸುತ್ತಿದ್ದೇನೆ. ಆದರೆ ಈತನ ಸಾವಿನ ಸುದ್ದಿ ಕೇಳಿದ ಮೇಲೆ ನನಗೆ ಇದ್ದ 20-30% ಆಶಾಭಾವ ಹೋಯಿತು. ಆದರೆ ನಮಗೆ ನಾವೇ ಸಮಾಧಾನ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

Puneeth Rajukumar Geethanamana 7

ವಾಪಸ್ ಬರುತ್ತಾನೆ!

ಭಗವದ್ಗೀತೆಯಲ್ಲಿ ಸಾವು ದೇಹಕ್ಕೆ ಮಾತ್ರ, ಆತ್ಮಕ್ಕೆ ಅಲ್ಲ ಎಂದು ಶ್ರೀಕೃಷ್ಣ ಬಹಳ ಸ್ಪಷ್ಟವಾಗಿ ಹೇಳಿದ್ದಾನೆ. ಪುನೀತ್ ಈಗ ರಾಜ್‍ಕುಮಾರ್ ಬಟ್ಟೆಯನ್ನು ಕಳಚಿ ಹೋಗಿದ್ದಾನೆ. ಮತ್ತೆ ವಾಪಸ್ ಬರುತ್ತಾನೆ ಎಂದು ಹೇಳಿದರು. ಇದನ್ನೂ ಓದಿ: ಮಧ್ಯಪ್ರದೇಶ ಸಿಎಂ ಭೇಟಿಯಾದ ಸಚಿನ್

ಕಲಾವಿದ ಅದೃಷ್ಟವಂತ ಎಂಬುದಕ್ಕೆ ಪುನೀತ್ ನಿದರ್ಶನವಾಗಿದೆ. ಕಲಾವಿದ ಸತ್ತರೂ ನೂರಾರು ವರ್ಷ ನೆನಪಿನಲ್ಲಿ ಉಳಿಯುತ್ತಾನೆ. ಅದೇ ದೇವರು ಒಬ್ಬ ಕಲಾವಿದನಿಗೆ ಕೊಟ್ಟ ದೊಡ್ಡ ಉಡುಗೂರೆಯಾಗಿದೆ. ಅದಕ್ಕೆ ಆತ ಮಾಡಿದಂತಹ ಕೆಲಸ, ಹಾಡಿದಂತಹ ಮಾತು ಎಲ್ಲವೂ ನಮ್ಮ ಬಳಿಯೇ ಇರುತ್ತೆ. ಆತನಿಗೆ ಶ್ರದ್ಧಾಂಜಲಿ ಹೇಳಲು ನನಗೆ ಮನಸ್ಸಿಲ್ಲ. ನಾನು ಹೇಳುವುದಿಲ್ಲ. ಅವನು ಮತ್ತೆ ವಾಪಸ್ಸು ಬರುತ್ತಾನೆ ಎಂದು ತಿಳಿಸಿದರು.

ಆತ ಇದ್ದಾಗ ಯಾರಿಗೂ ಏನೂ ತಿಳಿಯಲಿಲ್ಲ. ಆದರೆ ಆತ ಹೋದ ನಂತರ ಜಗತ್ತಿನಲ್ಲಿ ಎಲ್ಲವೂ ನಶ್ವರ. ದೇವರು ಎಂಬವನು ಒಂದು ಕರೆಯನ್ನು ಕೊಟ್ಟಾಗ ಎಲ್ಲವನ್ನು ಬಿಟ್ಟು ಹೋಗಬೇಕು ಎನ್ನುವ ಒಂದು ಸಣ್ಣ ಸಂದೇಶವನ್ನು ನಮಗೆ ಹೇಳಿಕೊಟ್ಟಿದ್ದಾನೆ ಎಂದು ಹೇಳಿದರು.

TAGGED:jaggeshPuneet NamaPuneet Rajkumarಜಗ್ಗೇಶ್ಪುನೀತ್ ನಮನಪುನೀತ್ ರಾಜ್‍ಕುಮಾರ್
Share This Article
Facebook Whatsapp Whatsapp Telegram

Cinema news

Kamal Haasan Donald Trump
ನಿಮ್ಮ ಕೆಲಸ ಎಷ್ಟಿದೆ ಅದನ್ನಷ್ಟೇ ನೋಡಿಕೊಳ್ಳಿ – ಟ್ರಂಪ್‌ ವಿರುದ್ಧ ಕಮಲ್‌ ಹಾಸನ್‌ ಕಿಡಿ
Cinema Latest National South cinema Top Stories
Jr NTR
ಬೆಂಗ್ಳೂರಲ್ಲಿ ಜ್ಯೂ.ಎನ್‍ಟಿಆರ್ ನೋಡಲು ಮುಗಿಬಿದ್ದ ಫ್ಯಾನ್ಸ್ – ಪೊಲೀಸರಿಂದ ಲಾಠಿಚಾರ್ಜ್‌
Bengaluru City Cinema Latest Top Stories
Dhurandhar 2 Trailer
ದುರಂಧರ್ 2 ಟ್ರೈಲರ್‌ ರಿಲೀಸ್ – ರಿವೆಂಜ್ ಮೋಡ್‌ನಲ್ಲಿ ರಣವೀರ್ ಸಿಂಗ್
Bollywood Cinema Latest Top Stories
Rajath Kishan
ಬೆದರಿಕೆ, ನಿಂದನೆ ಆರೋಪ – ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR
Bengaluru City Cinema Districts Karnataka Latest Sandalwood Top Stories

You Might Also Like

papamma nari narayani
Bengaluru City

ಬೀಜ ಮಾತೆ ಪಾಪಮ್ಮಗೆ ನಾರಿ ನಾರಾಯಣಿ ಗೌರವ

Public TV
By Public TV
16 minutes ago
vidhyarani jayaswami nari narayani
Bengaluru City

ಶರಣ್ಯ ಫಾರ್ಮ್ಸ್ ರೂವಾರಿಗೆ ವಿದ್ಯಾರಾಣಿ ಜಯಸ್ವಾಮಿಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
41 minutes ago
jayashri nari narayani
Bengaluru City

ವ್ಹೀಲ್‌ಚೇರ್‌ನಲ್ಲಿ ರೊಟ್ಟಿ ಮಾರುತ್ತಿರುವ ಜಯಶ್ರೀಗೆ ನಾರಿ ನಾರಾಯಣಿ ಗೌರವ

Public TV
By Public TV
2 hours ago
shashikala nari narayani
Bengaluru City

ಶಶಿ ಸೋಪ್ಸ್ ಆ್ಯಂಡ್ ಡೆಟರ್ಜೆಂಟ್ಸ್ ಸಂಸ್ಥೆಯ ಶಶಿಕಲಾಗೆ ನಾರಿ ನಾರಾಯಣಿ ಸನ್ಮಾನ

Public TV
By Public TV
2 hours ago
nari narayani mahadevamma
Bengaluru City

ಅನಾಥ ಶವಗಳಿಗೆ ಮುಕ್ತಿ ನೀಡೋ ಮಹದೇವಮ್ಮಗೆ ನಾರಿ ನಾರಾಯಣಿ ಪ್ರಶಸ್ತಿ

Public TV
By Public TV
3 hours ago
Public TV Nari Narayani Award 2026 Blind Cricketer Deepika
Bengaluru City

ಕ್ರಿಕೆಟ್‌ ಪಟು ದೀಪಿಕಾಗೆ ‘ನಾರಿ ನಾರಾಯಣಿ’ ಪ್ರಶಸ್ತಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?