ಅನ್ನ ಕೊಟ್ಟ ದೇವರಿಗೆ ಏನೂ ಆಗಲ್ಲ: ನೌಕರರ ಕಣ್ಣೀರು

Public TV
1 Min Read
coffee day employee collage copy

ಚಿಕ್ಕಮಗಳೂರು: ಉದ್ಯಮಿ ಸಿದ್ಧಾರ್ಥ್ ಅವರು ನಾಪತ್ತೆಯಾದ ಹಿನ್ನೆಲೆಯಲ್ಲಿ ಕೆಫೆ ಕಾಫಿ ಡೇ ನೌಕರರು ಕಣ್ಣೀರು ಹಾಕುತ್ತಿದ್ದಾರೆ.

ಚಿಕ್ಕಮಗಳೂರಿನಲ್ಲಿರುವ ಕಾಫಿ ಡೇಗೆ ಸೇರಿದ ಕಾಫಿ ಕ್ಯೂರಿಂಗ್ ಘಟಕದ ನೌಕರರು ಕಣ್ಣೀರು ಹಾಕುತ್ತಿದ್ದಾರೆ. ನಮಗೆ ಕೆಲಸ ಕೊಟ್ಟ ಧಣಿಗೆ ಏನೂ ಆಗದಿರಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತ ಕಣ್ಣೀರು ಹಾಕುತ್ತಿದ್ದಾರೆ.

VG Siddhartha

ನಮಗೆಲ್ಲಾ ಅನ್ನ ಕೊಟ್ಟಂತಹ ಧಣಿಗೆ ಯಾವುದೇ ರೀತಿಯ ತೊಂದರೆ ಆಗದೇ ದೇವರು ಅವರನ್ನು ವಾಪಸ್ ಕಳುಹಿಸಲಿ. ನಾವು ಕಾಫಿ ಡೇ ಎಲ್ಲ ಸಿಬ್ಬಂದಿ ಸಂಬಳ ಬಿಟ್ಟು ಅವರಿಗೆ ತೊಂದರೆಯಾಗಬಾರದು ಎಂದು ದೇವರಲ್ಲಿ ಬೇಡಿಕೊಳ್ಳುತ್ತೇವೆ. ನನಗೆ ಹಾಗೂ ನನ್ನ ಪತ್ನಿಗೆ ಅವರು ಅನ್ನ ಕೊಟ್ಟ ದೇವರು. ಅವರು ಕ್ಷೇಮವಾಗಿ ಬರಲಿ ಎಂದು ಸಿಬ್ಬಂದಿಯೊಬ್ಬರು ಸಿದ್ಧಾರ್ಥ್ ಅವರನ್ನು ನೆನೆಸಿಕೊಂಡು ಭಾವುಕರಾದರು.

ಸಿದ್ಧಾರ್ಥ್ ಅವರು ನನಗೆ 10 ವರ್ಷದಿಂದ ಅನ್ನ ಕೊಡುತ್ತಿದ್ದಾರೆ. ಅವರಿಗೆ ಏನೂ ಆಗಲ್ಲ. ಕಾರ್ಮಿಕರಿಗೆ ಯಾವುದೇ ತೊಂದರೆ ಆಗಲ್ಲ. ಸಿದ್ಧಾರ್ಥ್ ಅವರು 50 ಸಾವಿರ ಜನರಿಗೆ ಅನ್ನ ನೀಡಿದ್ದು, ಎಲ್ಲವೂ ಒಳ್ಳೆಯದು ಆಗುತ್ತದೆ ಎಂದು ನೌಕರ ಕಣ್ಣೀರು ಹಾಕಿದ್ದಾರೆ.

siddarth 4

ಇತ್ತ ಸಿದ್ಧಾರ್ಥ್ ಅವರು ನಿಗೂಢವಾಗಿ ನಾಪತ್ತೆಯಾಗಿದ್ದಕ್ಕೆ ಅವರ ಎಬಿಸಿ ಕಾಫಿ ಕ್ಯೂರಿಂಗ್ ಕಂಪನಿಯನ್ನು ಬಂದ್ ಮಾಡಲಾಗಿದೆ. ಪ್ರತಿ ದಿನದಂತೆ ಸಿಬ್ಬಂದಿ ಇಂದು ಕೂಡ ಕೆಲಸಕ್ಕೆ ಹಾಜರಾಗಿದ್ದಾರೆ. ಆದರೆ ಸಿದ್ಧಾರ್ಥ್ ಅವರು ನಾಪತ್ತೆಯಾದ ಹಿನ್ನೆಲೆಯಲ್ಲಿ ಇದೀಗ ಕಂಪನಿಯನ್ನು ಬಂದ್ ಮಾಡಲಾಗಿದೆ. ಸಿದ್ಧಾರ್ಥ್ ಅವರು ಎಬಿಸಿ ಸೇರಿದಂತೆ ಹಲವು ಕಂಪನಿಯ ಮಾಲೀಕರಾಗಿದ್ದು, ಆ ಕಂಪನಿಯಲ್ಲಿ ಇದೇ ಪರಿಸ್ಥಿತಿ ಇದೆ ಎಂದು ಹೇಳಲಾಗುತ್ತಿದೆ. ಸಿದ್ಧಾರ್ಥ್ ನಾಪತ್ತೆಯಾಗಿದ್ದ ಕಾರಣ ಕಾರ್ಮಿಕರು, ಸಿಬ್ಬಂದಿ ಆತಂಕಗೊಂಡಿದ್ದಾರೆ.

https://www.youtube.com/watch?v=9H9GW25r8zA

Share This Article
Leave a Comment

Leave a Reply

Your email address will not be published. Required fields are marked *