Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಐಟಿ ವೃತ್ತಿಪರರ ವರ್ಕ್ ಫ್ರಮ್ ಹೋಮ್ ಜುಲೈ 31ರ ವರೆಗೆ ವಿಸ್ತರಣೆ

Public TV
Last updated: April 28, 2020 7:12 pm
Public TV
Share
4 Min Read
DCM CN Ashwath Narayan
SHARE

ಬೆಂಗಳೂರು: ಕೋವಿಡ್-19 ಹಿನ್ನೆಲೆಯಲ್ಲಿ ಐಟಿ ವೃತ್ತಿಪರರು ಮುಂದಿನ ಜುಲೈ 31ರ ವರೆಗೆ ಮನೆಯಿಂದಲೇ ಕೆಲಸ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಕೊರೊನಾ ಲಾಕ್‍ಡೌನ್ ನಿರ್ಬಂಧದಿಂದ ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಆಗಿರುವ ಸಮಸ್ಯೆಗಳ ಕುರಿತಂತೆ ಎಲ್ಲಾ ರಾಜ್ಯಗಳ ಮಾಹಿತಿ ತಂತ್ರಜ್ಞಾನ ಸಚಿವರ ಜತೆ ನಡೆಸಿದ ವೀಡಿಯೋ ಕಾನ್ಫರೆನ್ಸ್ ನಲ್ಲಿ ಕೇಂದ್ರ ಐಟಿ ಮತ್ತು ದೂರಸಂಪರ್ಕ ಖಾತೆ ಸಚಿವ ರವಿ ಶಂಕರ್ ಪ್ರಸಾದ್ ಅವರು ಈ ವಿಷಯ ಪ್ರಕಟಿಸಿದ್ದಾರೆ.

DCM CN Ashwath Narayan a

ಲಾಕ್ ಡೌನ್ ಬಳಿಕ ರಾಜ್ಯ ಐಟಿ ವಲಯ ಎದುರಿಸುತ್ತಿರುವ ಸವಾಲುಗಳು, ಕಂಡುಕೊಂಡಿರುವ ಪರಿಹಾರಗಳು ಹಾಗೂ ರಾಜ್ಯ ಸರ್ಕಾರ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ಕೇಂದ್ರ ಸಚಿವರಿಗೆ ವಿವರಿಸಿದ ಐಟಿ-ಬಿಟಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವತ್ಥನಾರಾಯಣ, ರಾಜ್ಯದ ಐಟಿ ವೃತ್ತಿ ಪರರಿಗೆ ಮುಂದಿನ ವರ್ಷ ಮಾರ್ಚ್ ವರೆಗೂ ಮನೆಯಿಂದಲೇ ಕೆಲಸ ಮಾಡಲು ಅವಕಾಶ ಕಲ್ಪಿಸಬೇಕೆಂದು ಕೋರಿದರು. ಈ ಮನವಿಗೆ ಸ್ಪಂದಿಸಿದ ಕೇಂದ್ರ ಸಚಿವರು, ಸದ್ಯ ಜುಲೈ 31ರ ವರೆಗೆ ವರ್ಕ್ ಫ್ರಮ್ ಹೋಂ ಸೌಲಭ್ಯ ವಿಸ್ತರಣೆ ಮಾಡಲಾಗುವುದು. ಪರಿಸ್ಥಿತಿ ನೋಡಿಕೊಂಡು ನಂತರ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು.

ಐಟಿ ವಲಯ ಸದ್ಯ ಹಲವಾರು ಸಂಕಷ್ಟಗಳನ್ನು ಎದುರಿಸುತ್ತಿದ್ದು, ರಾಜ್ಯದ ಐಟಿ ವೃತ್ತಿಪರರ ಜತೆ ಪ್ರತ್ಯೇಕ ವೀಡಿಯೋ ಕಾನ್ಫರೆನ್ಸ್ ನಡೆಸಬೇಕೆಂಬ ಡಾ. ಅಶ್ವತ್ಥನಾರಾಯಣ ಅವರ ಮನವಿಗೂ ಸಕಾರಾತ್ಮಕವಾಗಿ ಸ್ಪಂದಿಸಿದ ರವಿ ಶಂಕರ್ ಪ್ರಸಾದ್, ಶೀಘ್ರದಲ್ಲೇ ವೀಡಿಯೋ ಕಾನ್ಫರೆನ್ಸ್ ನಡೆಸುವ ಭರವಸೆ ನೀಡಿದರು.

Interacted with Shri @rsprasad, Hon’ble Union Minister for IT and communications along with IT ministers from all the states via Video Conference. Discussed and shared our thoughts on road ahead in tackling challenges to combat #COVID19. #TechnologyForCovid19 pic.twitter.com/KW6WsMiUei

— Dr. Ashwathnarayan C. N. (@drashwathcn) April 28, 2020

ಕಾರ್ಯ ತಂತ್ರ ಸಮಿತಿ:
‘ಕೋವಿಡ್‍ನಂಥ ಪರಿಸ್ಥಿತಿ ಎದುರಾದಾಗ ಐಟಿ ಹಾಗೂ ಸಂಬಂಧಿತ ವಲಯಗಳು ಯಾವ ರೀತಿ ಕಾರ್ಯ ನಿರ್ವಹಿಸಬೇಕು. ವಿಪತ್ತಿನ ಸಂದರ್ಭದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿ, ಪರಿಹಾರ ಕ್ರಮಗಳ ಬಗ್ಗೆ ರೂಪುರೇಷೆ ಸಿದ್ಧಪಡಿಸಲು ರಾಷ್ಟ್ರ ಮಟ್ಟದ ಕಾರ್ಯತಂತ್ರ ಸಮಿತಿ ರಚಿಸಲಾಗುವುದು,’ ಎಂದು ಕೆಂದ್ರ ಸಚಿವರು ತಿಳಿಸಿದರು.

‘ಐಟಿ ವಲಯ ಮಾತ್ರವಲ್ಲದೆ, ಎಲ್ಲಾ ರಾಜ್ಯಗಳು ಅನ್ವೇಷಣೆ, ಸ್ಟಾರ್ಟ್ ಅಪ್‍ಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಇ-ಆಡಳಿತ, ಇ-ಪಾಸ್‍ಗಳ ಪರಿಣಾಮಕಾರಿ ಜಾರಿಗೆ ಗಮನ ಹರಿಸಲಾಗುವುದು. ಜತೆಗೆ, ಕೋವಿಡ್ ಸಮಸ್ಯೆ ಎದುರಾದಾಗಿನಿಂದ ಬಹುತೇಕ ಎಲ್ಲ ವಲಯಗಳ ಕೆಲಸದ ರೀತಿ ನೀತಿ ಬದಲಾಗಿದ್ದು, ಶೇ. 80ರಷ್ಟು ಐಟಿ ವೃತ್ತಿಪರರು ಮನೆಯಿಂದಲೇ ಕೆಲಸ ಮಾಡುತ್ತಿದ್ದಾರೆ. ಬಹುತೇಕ ಎಲ್ಲ ಕೆಲಸ ಕಾರ್ಯಗಳು ಆನ್‍ಲೈನ್ ಮೂಲಕವೇ ನಡೆಯುತ್ತಿದೆ. ಇದಕ್ಕೆ ಅನುಕೂಲವಾಗುವಂತೆ ಭಾರತ್ ನೆಟ್ ಯೋಜನೆ ಮೂಲಕ ದೇಶದ ಮೂಲೆಮೂಲೆಗೂ ಇಂಟರ್ ನೆಟ್ ಸಂಪರ್ಕ ಜಾಲ ಬಲಪಡಿಸಲಾಗುತ್ತದೆ,’ ಎಂದು ರವಿ ಶಂಕರ್ ಪ್ರಸಾದ್ ಹೇಳಿದರು.

544833 make in india 020217

ಮೇಕ್ ಇನ್ ಇಂಡಿಯಾ:
‘ಮೇಕ್ ಇನ್ ಇಂಡಿಯಾ ಯೋಜನೆಗಳ ಕಾರ್ಯರೂಪಕ್ಕೆ ಇದು ಸಕಾಲ. ಕೋವಿಡ್ ನಂತರದಲ್ಲಿ ದೇಶದ ಆರ್ಥಿಕತೆಯ ಪುನಶ್ಚೇತನಕ್ಕೆ ಮೇಕ್ ಇನ್ ಇಂಡಿಯಾ ಯೋಜನೆಗೆ ಹೆಚ್ಚು ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ನಾವು ತಕ್ಕ ಮಟ್ಟಿನ ಯಶಸ್ಸು ಪಡೆದಿದ್ದರೂ, ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಆದ್ಯತೆ ನೀಡಬೇಕಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಬರುವುದಕ್ಕೂ ಮೊದಲು ದೇಶದಲ್ಲಿ ಇದ್ದ ಮೊಬೈಲ್ ಉತ್ಪಾದಕ ಸಂಸ್ಥೆಗಳ ಸಂಖ್ಯೆ 2 ರಿಂದ 268ಕ್ಕೆ ಏರಿದೆ. ಮೇಕ್ ಇನ್ ಇಂಡಿಯಾ ಯೋಜನೆ ಯಶಸ್ಸಿಗೆ ಇದು ಅತ್ಯುತ್ತಮ ಉದಾಹರಣೆ,’ ಎಂದು ವಿವರಿಸಿದರು.

ಆನ್‍ಲೈನ್ ಆರೋಗ್ಯ ಸೇವೆ:
‘ಕೋವಿಡ್ ನಂತರ ಆರೋಗ್ಯ ಸೇವೆಯಲ್ಲೂ ತಂತ್ರಜ್ಞಾನದ ಬಳಕೆ ಹೆಚ್ಚಿದ್ದು ಆನ್‍ಲೈನ್ ಆರೋಗ್ಯ ವ್ಯವಸ್ಥೆಗೆ ಹೆಚ್ಚು ಒತ್ತು ನೀಡಲಾಗಿದೆ. ಕರ್ನಾಟಕ ಸೇರಿಂದಂತೆ ಮಹಾರಾಷ್ಟ್ರ, ತಮಿಳುನಾಡು, ತೆಲಂಗಾಣ ಹಾಗೂ ತಮಿಳುನಾಡಿನಲ್ಲಿ ಆನ್‍ಲೈನ್ ಆರೋಗ್ಯ ಸೇವೆ ಉತ್ತಮವಾಗಿದ್ದು, ಇತರ ರಾಜ್ಯಗಳಲ್ಲೂ ಇದು ವಿಸ್ತರಣೆ ಆಗಬೇಕು,’ ಎಂದರು.

All the IT Ministers of State Governments expressed solidarity and commitment to work together as team India in our collective fight against #COVID19. pic.twitter.com/Zt6rHRizV0

— Ravi Shankar Prasad (@rsprasad) April 28, 2020

ಆಪ್ತ ಮಿತ್ರ ಹೆಲ್ಪ್ ಲೈನ್:
ಶಿಕ್ಷಣ, ಅಗತ್ಯ ವಸ್ತುಗಳ ಪೂರೈಕೆ ಮುಂತಾದ ಹಲವು ಕಾರ್ಯಗಳಲ್ಲಿ ತಂತ್ರಜ್ಞಾನವನ್ನು ಸಮರ್ಥವಾಗಿ ಬಳಸಿಕೊಂಡು ಪರಿಹಾರ ಒದಗಿಸುವಲ್ಲಿ ರಾಜ್ಯ ಸರ್ಕಾರ ಯಶಸ್ವಿಯಾಗಿದೆ ಎಂಬುದನ್ನು ಡಾ. ಅಶ್ವತ್ಥನಾರಾಯಣ ವೀಡಿಯೋ ಕಾನ್ಫರೆನ್ಸ್ ನಲ್ಲಿ ವಿವರಿಸಿದರು.

‘500ಕ್ಕೂ ಹೆಚ್ಚು ವೃತ್ತಿಪರರು ‘ಆಪ್ತ ಮಿತ್ರ ಹೆಲ್ಪ್ ಲೈನ್’ನ ಕಾಲ್ ಸೆಂಟರ್ ನಲ್ಲಿ ಹಗಲಿರುಳು ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರತಿ ನಿತ್ಯ ಸುಮಾರು 50 ಸಾವಿರ ಕರೆಗಳನ್ನು ಸ್ವೀಕರಿಸಿ, ಜನರ ಅಗತ್ಯಗಳಿಗೆ ಸ್ಪಂದಿಸುತ್ತಿದ್ದಾರೆ. ಇ-ಕಾಮರ್ಸ್ ಗೆ ಪರ್ಯಾಯವಾದ ವ್ಯವಸ್ಥೆ ಕಂಡುಕೊಂಡಿದ್ದು, ರೆಡ್ ಝೋನ್‍ನಲ್ಲಿರುವ ಜನ ಮನೆಯಿಂದ ಹೊರ ಬರುವ ಅಗತ್ಯ ಬಾರದಂತೆ ಎಲ್ಲಾ ವಸ್ತುಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸುವ ಕೆಲಸ ಆಗುತ್ತಿದೆ. ದಿನಸಿ, ಹಾಲು, ಔಷಧ, ತರಕಾರಿ ಮುಂತಾದ ವಸ್ತುಗಳನ್ನು ಮನೆಗೆ ತಲುಪಿಸಲು ವಿಧಿಸುತ್ತಿರುವ ದರ ಕೇವಲ 10 ರೂಪಾಯಿ. ಒಂದೇ ರೀತಿಯ ಸೇವೆ (ಪರಿಹಾರ ಸಾಮಗ್ರಿಗಳು) ಬೇರೆ ಬೇರೆ ಇಲಾಖೆಗಳಿಂದ ಪುನರಾವರ್ತನೆ ಆಗದಂತೆ ತಡೆಯಲು ತಂತ್ರಜ್ಞಾನದ ಮೊರೆ ಹೋಗಲಾಗಿದೆ,’ ಎಂದು ಉಪಮುಖ್ಯಮಂತ್ರಿ ತಿಳಿಸಿದರು.

IT Ministers shared their best practices and innovations. To enable learning from each other and sharing of innovations, I have asked @GoI_Meity to prepare a digital platform. pic.twitter.com/PxhG6gCWQd

— Ravi Shankar Prasad (@rsprasad) April 28, 2020

TAGGED:Central GovernmentDCM CN Ashwath NarayanIT-BTKovid-19Public TVRavi Shankar PrasadState GovernmentUnion Ministerಅಶ್ವತ್ಥನಾರಾಯಣಐಟಿ-ಬಿಟಿಕೇಂದ್ರ ಸಚಿವ ರವಿಶಂಕರ್ ಪ್ರಸಾದ್ಕೇಂದ್ರ ಸರ್ಕಾರಕೋವಿಡ್ 19ಪಬ್ಲಿಕ್ ಟಿವಿರಾಜ್ಯ ಸರ್ಕಾರ
Share This Article
Facebook Whatsapp Whatsapp Telegram
Leave a Comment

Leave a Reply

Your email address will not be published. Required fields are marked *

Cinema News

mammootty
ಅನಾರೋಗ್ಯದಿಂದ ಚೇತರಿಸಿಕೊಂಡ ಮಮ್ಮುಟ್ಟಿ; ಚೇತರಿಕೆ ಬೆನ್ನಲ್ಲೇ ಗುಡ್‌ನ್ಯೂಸ್
Cinema Latest South cinema Top Stories
Prabhas Anuksha
ಫ್ಯಾನ್ಸ್‌ಗೆ ಗುಡ್‌ನ್ಯೂಸ್ ಕೊಟ್ಟ ಪ್ರಭಾಸ್-ಅನುಷ್ಕಾ
Cinema Latest South cinema Top Stories
Chahal Dhanashree
ಚಹಲ್‌ಗೆ ಟಕ್ಕರ್ ಕೊಟ್ಟ ಮಾಜಿ ಪತ್ನಿ ಧನಶ್ರೀ
Cinema Cricket Latest Top Stories
amitabh bacchan house
ಮುಂಬೈನಲ್ಲಿ ನಿಲ್ಲದ ವರುಣಾರ್ಭಟ – ಬಾಲಿವುಡ್ ನಟ, ನಟಿಯರ ಮನೆಗಳು ಜಲಾವೃತ
Cinema Latest National Top Stories
Rukmini Vasanth Pot Making
ಕೈಯ್ಯಾರೆ ಮಣ್ಣಿನ ಮಡಿಕೆ ಮಾಡಿದ ಕಾಂತಾರ ಕನಕವತಿ ರುಕ್ಮಿಣಿ ವಸಂತ್
Cinema Latest Sandalwood Top Stories

You Might Also Like

Rekha Gupta 2
Latest

ಸಾರ್ವಜನಿಕ ಹಿತದೃಷ್ಟಿಗೆ ಸೇವೆ ಸಲ್ಲಿಸುವ ನಮ್ಮ ಸಂಕಲ್ಪದ ಮೇಲೆ ಹೇಡಿತನದ ಕೃತ್ಯ: ಹಲ್ಲೆ ಬಗ್ಗೆ ದೆಹಲಿ ಸಿಎಂ ರಿಯಾಕ್ಷನ್‌

Public TV
By Public TV
1 hour ago
Vijayapura
Districts

ಮಳೆಯಿಂದ ನಷ್ಟ ಅನುಭವಿಸಿದ 2 ಕುಟುಂಬಗಳಿಗೆ ಆರ್ಥಿಕ ನೆರವು ನೀಡಿದ ಎಂ.ಬಿ ಪಾಟೀಲ್

Public TV
By Public TV
1 hour ago
c.n.manjunath nirmala sitharaman
Latest

ಇಮ್ಯೂನೋಥೆರಪಿಗೆ ಬಳಸುವ ಔಷಧ & ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್‌ ಸುಂಕಕ್ಕೆ ವಿನಾಯಿತಿಗೆ ಮನವಿ

Public TV
By Public TV
2 hours ago
Amit shah
Latest

ಉತ್ತರ ಪ್ರದೇಶದ ಜಲಾಲಾಬಾದ್ ಪಟ್ಟಣಕ್ಕೆ ಪರಶುರಾಮಪುರಿ ಎಂದು ಮರುನಾಮಕರಣ

Public TV
By Public TV
2 hours ago
big bulletin 20 August 2025 part 1
Big Bulletin

ಬಿಗ್‌ ಬುಲೆಟಿನ್‌ 20 August 2025 ಭಾಗ-1

Public TV
By Public TV
2 hours ago
big bulletin 20 August 2025 part 2
Big Bulletin

ಬಿಗ್‌ ಬುಲೆಟಿನ್‌ 20 August 2025 ಭಾಗ-2

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?