Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜಮ್ಮು-ಕಾಶ್ಮೀರದ ಸೋಪೂರ್‌ನಲ್ಲಿ ಎನ್‌ಕೌಂಟರ್ – ಉಗ್ರರ ಒಳನುಸುಳುವಿಕೆ ತಡೆಯಲು ಕೇಂದ್ರ ಮಾಸ್ಟರ್‌ ಪ್ಲ್ಯಾನ್‌!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಜಮ್ಮು-ಕಾಶ್ಮೀರದ ಸೋಪೂರ್‌ನಲ್ಲಿ ಎನ್‌ಕೌಂಟರ್ – ಉಗ್ರರ ಒಳನುಸುಳುವಿಕೆ ತಡೆಯಲು ಕೇಂದ್ರ ಮಾಸ್ಟರ್‌ ಪ್ಲ್ಯಾನ್‌!

Latest

ಜಮ್ಮು-ಕಾಶ್ಮೀರದ ಸೋಪೂರ್‌ನಲ್ಲಿ ಎನ್‌ಕೌಂಟರ್ – ಉಗ್ರರ ಒಳನುಸುಳುವಿಕೆ ತಡೆಯಲು ಕೇಂದ್ರ ಮಾಸ್ಟರ್‌ ಪ್ಲ್ಯಾನ್‌!

Public TV
Last updated: August 24, 2024 6:52 pm
Public TV
Share
2 Min Read
jammu and kashmir terror attack
SHARE

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu and Kashmir) ಸೋಪೋರ್‌ನಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಶನಿವಾರ ಗುಂಡಿನ ಚಕಮಕಿ (Sopore Encounter) ನಡೆದಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ಘಟನೆ ನಂತರ ಎಚ್ಚೆತ್ತ ಭದ್ರತಾ ಸಿಬ್ಬಂದಿ ಗುಂಡಿನ ದಾಳಿಗೆ ಪ್ರತಿದಾಳಿ ನಡೆಸಿದರು. ತಕ್ಷಣವೇ ಪಡೆಗಳು ಸೋಪೋರ್‌ನ ವಾಟರ್‌ಗಾಮ್ ಪ್ರದೇಶವನ್ನು ಸುತ್ತುವರಿದು ಉಗ್ರರನ್ನು ಬೇಟೆಯಾಡಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಸದ್ಯ ಕಾರ್ಯಾಚರಣೆ ಮುಂದುವರಿದಿದೆ. ಇದನ್ನೂ ಓದಿ: ಅಸ್ಸಾಂ ಲೈಂಗಿಕ ದೌರ್ಜನ್ಯ ಆರೋಪಿ ಪೊಲೀಸರಿಂದ ಎಸ್ಕೇಪ್ ವೇಳೆ ಕೆರೆಗೆ ಬಿದ್ದು ಸಾವು

JAMMU KASHMIR TERRORIST ATTACK

ಕಳೆದ ಐದು ದಿನಗಳ ಹಿಂದೆಯಷ್ಟೇ ಉಧಮ್‌ಪುರದಲ್ಲಿ ಗಸ್ತು ಪಡೆಯ ಮೇಲೆ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಕೇಂದ್ರೀಯ ಮೀಸಲು ಪೊಲೀಸ್ ಪಡೆ (CRPF)ಯ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದರು. ದಾಳಿಯಲ್ಲಿ ಸಿಆರ್‌ಪಿಎಫ್‌ನ 187 ಬೆಟಾಲಿಯನ್‌ನ ಇನ್ಸ್‌ಪೆಕ್ಟರ್ ಕುಲದೀಪ್ ಕುಮಾರ್ ಗುಂಡೇಟಿನಿಂದ ಗಾಯಗೊಂಡರು. ಇದನ್ನೂ ಓದಿ: ಪೋಲೆಂಡ್, ಉಕ್ರೇನ್ ಪ್ರವಾಸ ಮುಗಿಸಿ ಪ್ರಧಾನಿ ಮೋದಿ ಭಾರತಕ್ಕೆ ವಾಪಸ್

J&K ನಲ್ಲಿ ಭಯೋತ್ಪಾದಕ ದಾಳಿಗಳ ಹೆಚ್ಚಳ:
ಜಮ್ಮು ಮತ್ತು ಕಾಶ್ಮೀರ ಪ್ರದೇಶದಲ್ಲಿ ಇತ್ತೀಚೆಗೆ ಭಯೋತ್ಪಾದಕ ದಾಳಿಗಳು ಹೆಚ್ಚಾಗುತ್ತಿವೆ ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ. ಏಕೆಂದರೆ ಇತ್ತೀಚೆಗೆ ದೋಡಾದ ಎನ್‌ಕೌಂಟರ್‌ನಲ್ಲಿ ಸೇನಾಧಿಕಾರಿ ಕ್ಯಾಪ್ಟನ್‌ ದೀಪಕ್‌ ಸಿಂಗ್‌ ಸಾವನ್ನಪ್ಪಿದ್ದರು, ಇದಕ್ಕೂ ಮುನ್ನ ಶಿವಗಢ-ಅಸ್ಸಾರ್‌ ಪ್ರದೇಶದ ಕಾರ್ಯಾಚರಣೆ ವೇಳೆ ಅರಣ್ಯ ಪ್ರದೇಶ ಭಾಗದಲ್ಲಿ ಅಧಿಕಾರಿಯೊಬ್ಬರಿಗೆ ಗುಂಡೇಟು ತಗುಲಿತ್ತು.

Soldiers Gunfight With Terrorists In jammu kashmir

ಹಾಗಾಗಿಯೇ ಈ ತಿಂಗಳ ಆರಂಭದಲ್ಲಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಸಹ ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ಭಯೋತ್ಪಾದಕ ದಾಳಿಗಳ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ್ದರು. ದೆಹಲಿಯ ಸೌತ್ ಬ್ಲಾಕ್‌ನಲ್ಲಿ ಎನ್‌ಎಸ್‌ಎ ಅಜಿತ್ ದೋವಲ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಅವರೊಂದಿಗೆ ಮಾತುಕತೆ ನಡೆದಿ ಭದ್ರತೆಯ ಬಗ್ಗೆ ಸುದೀರ್ಘ ಚರ್ಚೆ ನಡೆಸಲಾಗಿತ್ತು. ಇದನ್ನೂ ಓದಿ: ಕೃಷ್ಣ ಜನ್ಮಾಷ್ಟಮಿ: ಬೆಂಗಳೂರಿನ ಇಸ್ಕಾನ್ ಟೆಂಪಲ್‌ ಬಳಿ ಸಂಚಾರ ಮಾರ್ಗದಲ್ಲಿ ಬದಲಾವಣೆ

ಕ್ರಿಯಾ ಯೋಜನೆಗೆ ಪ್ಲ್ಯಾನ್‌:
ಕಾಶ್ಮೀರ ಕಣಿವೆಯನ್ನು ಭದ್ರ ಪಡಿಸಿರುವ ಕೇಂದ್ರ ಸರ್ಕಾರ ಇದೀಗ ಜಮ್ಮುವನ್ನು ಗುರಿಯಾಗಿಸುತ್ತಿರುವ ಉಗ್ರರನ್ನು ಮಟ್ಟಹಾಕಲು ಮುಂದಾಗಿದೆ. ಅದಕ್ಕಾಗಿ ಜಮ್ಮು ಪ್ರದೇಶದಲ್ಲಿ ಭದ್ರತೆ ಹೆಚ್ಚಿಸುವ ಅಗತ್ಯತೆಗಳನ್ನು ಗುರುತಿಸಿದೆ. ಜಮ್ಮು ಮತ್ತು ಕಾಶ್ಮೀರ ಪ್ರವೇಶಿಸಲು ಭಯೋತ್ಪಾದಕರು ಕಂಡುಕೊಂಡಿರುವ ಒಳನುಸುಳುವಿಕೆ ಮಾರ್ಗಗಳನ್ನು ಗುರುತಿಸಿ ಅನಾಹುತಕ್ಕೆ ತಡೆಹಾಕುವುದು ಈ ಯೋಜನೆಯ ಪ್ರಾಥಮಿಕ ಉದ್ದೇಶವಾಗಿದೆ. ಇದನ್ನೂ ಓದಿ: ಮಹಾರಾಷ್ಟ್ರ| ಉಕ್ಕಿನ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ – 22 ಮಂದಿಗೆ ಗಾಯ

ಕಾಶ್ಮೀರ ಬಿಟ್ಟು ಜಮ್ಮುವಿನತ್ತ ಚಿತ್ತ ಹರಿಸಿದ್ದೇಕೆ?
2014 ರಿಂದ 2018ರ ಅವಧಿ ಜಮ್ಮು ಮತ್ತು ಕಾಶ್ಮೀರ ಸ್ಥಳಗಳು ಉಗ್ರರ ಸ್ವರ್ಗವಾಗಿತ್ತು. 2014ರಿಂದ 2018ರ ವರೆಗೆ ಜಮ್ಮು ಮತ್ತು ಕಾಶ್ಮೀರದಲ್ಲಿ 1,708 ಉಗ್ರರ ದಾಳಿಗಳು ನಡೆದಿದ್ದವು, 2018ರಿಂದ 2022ರ ವರೆಗೆ 761 ಉಗ್ರರ ದಾಳಿಗಳು ನಡೆದು 174 ಮಂದಿ ಸಾವನ್ನಪ್ಪಿದ್ದರು. ಇದಕ್ಕೆ ಪ್ರತಿದಾಳಿ ನಡೆಸಿದ್ದ ಸೇನೆ (Indian Army) 626 ಉಗ್ರರನ್ನು ಬಲಿ ಪಡೆದಿತ್ತು. 2023ರಲ್ಲಿ ಜಮ್ಮು ಪ್ರದೇಶದಲ್ಲಿ ಮಾತ್ರವೇ ಸುಮಾರು 40 ಭಯೋತ್ಪಾದಕ ದಾಳಿಗಳು ನಡೆದಿರುವುದಾಗಿ ಸೇನೆ ಹೇಳಿದೆ. 2019ರಲ್ಲಿಕೇಂದ್ರ ಸರ್ಕಾರ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿತು. ಆ ನಂತರ ಹೆಚ್ಚಿನ ದಾಳಿ ನಡೆಯುತ್ತಿದ್ದ ಕಾಶ್ಮೀರ ಕಣಿವೆ ಪ್ರದೇಶದಲ್ಲಿ ದೀರ್ಘಕಾಲದ ಶಾಂತಿ ನೆಲೆಸಿತ್ತು. ಹೆಚ್ಚಿನ ಭದ್ರತಾ ಪಡೆಗಳು ಕಾಶ್ಮೀರ ಕಣಿವೆ ಪ್ರದೇಶದಲ್ಲಿ ಬೀಡುಬಿಟ್ಟ ಕಾರಣ ಉಗ್ರರು ಜಮ್ಮುವನ್ನು ಟಾರ್ಗೆಟ್‌ ಮಾಡಿ ದಾಳಿ ನಡೆಸುತ್ತಿದ್ದಾರೆ ಎಂದು ವರದಿಗಳು ಉಲ್ಲೇಖಿಸಿವೆ.

TAGGED:CRPFJammu and Kashmirsecurity forcesSopore EncounterTrroristsಜಮ್ಮು ಮತ್ತು ಕಾಶ್ಮೀರಟೆರರಿಸ್ಟ್ಸಿಆರ್‍ಪಿಎಫ್ಸೋಪೋರ್‌ಸೋಪೋರ್‌ ಎನ್‌ಕೌಂಟರ್‌
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

rahul gandhi
Bengaluru City

ಕರ್ನಾಟಕ ಬಿಜೆಪಿ ವಿರುದ್ಧ 40% ಕಮೀಷನ್‌ ಜಾಹೀರಾತು – ರಾಹುಲ್‌ಗೆ ರಿಲೀಫ್‌, ವಿಚಾರಣೆಯೇ ರದ್ದು

Public TV
By Public TV
2 hours ago
Ramanagar Arrest
Districts

16.8 ಲಕ್ಷ ಮೌಲ್ಯದ 120 ಗ್ರಾಂ ಚಿನ್ನದ ಗಟ್ಟಿ ಕಳ್ಳತನ – ಇಬ್ಬರು ಅರೆಸ್ಟ್

Public TV
By Public TV
3 hours ago
Fire breaks out at bike garage more than 8 bikes burnt Ilkal Bagalkote
Bagalkot

ಬೈಕ್ ಗ್ಯಾರೇಜ್‌ಗೆ ಬೆಂಕಿ- 8ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಭಸ್ಮ

Public TV
By Public TV
3 hours ago
IMRAN KHAN
Cricket

ಕಪಿಲ್, ಸುನಿಲ್ ಗವಾಸ್ಕರ್ ಸೇರಿ 14 ಕ್ರಿಕೆಟ್ ದಿಗ್ಗಜರಿಂದ ಪಾಕ್‌ಗೆ ಪತ್ರ – ಇಮ್ರಾನ್‌ಗೆ ವೈದ್ಯಕೀಯ ಸೇವೆ ನೀಡುವಂತೆ ಮನವಿ

Public TV
By Public TV
4 hours ago
IAF Rafale main
Bengaluru City

ಭಾರತದಲ್ಲೇ ತಯಾರಾಗಲಿದೆ ರಫೇಲ್‌ ಹ್ಯಾಮರ್‌ – ಈ ಕ್ಷಿಪಣಿಯ ವಿಶೇಷತೆ ಏನು?

Public TV
By Public TV
4 hours ago
Yadagiri Bus Accident
Crime

ಶಾಲಾ ಬಸ್ಸಿನಿಂದ ಇಳಿಸಿ ರಿವರ್ಸ್ ತೆಗೆಯುವಾಗ ಹರಿದ ಬಸ್ – ಬಾಲಕ ಸಾವು

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?