Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಸೆಂಬರ್‌ ಅಂತ್ಯಕ್ಕೆ ವಾರಣಾಸಿಯಲ್ಲಿ ಕರ್ನಾಟಕ ರೇಷ್ಮೆ ಮಾರುಕಟ್ಟೆ ಕಾರ್ಯಾರಂಭ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಡಿಸೆಂಬರ್‌ ಅಂತ್ಯಕ್ಕೆ ವಾರಣಾಸಿಯಲ್ಲಿ ಕರ್ನಾಟಕ ರೇಷ್ಮೆ ಮಾರುಕಟ್ಟೆ ಕಾರ್ಯಾರಂಭ

Bengaluru City

ಡಿಸೆಂಬರ್‌ ಅಂತ್ಯಕ್ಕೆ ವಾರಣಾಸಿಯಲ್ಲಿ ಕರ್ನಾಟಕ ರೇಷ್ಮೆ ಮಾರುಕಟ್ಟೆ ಕಾರ್ಯಾರಂಭ

Public TV
Last updated: November 20, 2021 10:12 pm
Public TV
Share
3 Min Read
end of December Karnataka silk market will launch in Varanasi uttar pradesh Narayana Gowda 3
SHARE

ಬೆಂಗಳೂರು: ಕರ್ನಾಟಕ ರೇಷ್ಮೆ ಮಾರುಕಟ್ಟೆ ವಿಸ್ತರಣೆ ಸಂಬಂಧ ಉತ್ತರ ಪ್ರದೇಶದ ವಾರಣಾಸಿಗೆ ಕೈಗೊಂಡಿದ್ದ ಪ್ರವಾಸ ಫಲಪ್ರವಾಗಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ತಿಳಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಸುಮಾರು 3 ಸಾವಿರ ಮೆಟ್ರಿಕ್ ಟನ್ ರೇಷ್ಮೆಗೆ ಬೇಡಿಕೆ ಇದೆ. ಸುಮಾರು 18,189 ಕುಟುಂಬಗಳು ರೇಷ್ಮೆ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಆದರೆ ಕೇವಲ 258 ಮೆಟ್ರಿಕ್ ಟನ್ ಕಚ್ಚಾ ರೇಷ್ಮೆ ಮಾತ್ರ ಉತ್ಪಾದಿಸಲಾಗುತ್ತಿದೆ. ಹಾಗಾಗಿ ಕರ್ನಾಟಕದ ಸೇರಿದಂತೆ ಬೇರೆ ರಾಜ್ಯಗಳ ಮೇಲೆ ಬನರಾಸ್ ನೇಕಾರರು ಅವಲಂಬಿತರಾಗಿದ್ದಾರೆ. ವಾರಣಾಸಿಯಲ್ಲಿ ರೇಷ್ಮೆಗೆ ಹೆಚ್ಚಿನ ಬೇಡಿಕೆ ಇದ್ದು, ಕರ್ನಾಟಕ ರೇಷ್ಮೆ ಮಂಡಳಿಯ ಮಾರುಕಟ್ಟೆಯನ್ನು ಸ್ಥಾಪಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

end of December Karnataka silk market will launch in Varanasi uttar pradesh Narayana Gowda 2

ನವೆಂಬರ್ 18 ರಂದು ವಾರಣಾಸಿಯ ಬನಾರಸ್ ವಿಶ್ವವಿದ್ಯಾಲಯದಲ್ಲಿ ಉತ್ತರ ಪ್ರದೇಶ ಸರ್ಕಾರದ ರೇಷ್ಮೆ ಇಲಾಖೆ ಅಧಿಕಾರಿಗಳು, ರೇಷ್ಮೆ ರೀಲರ್ಸ್ ಹಾಗೂ ನೇಕಾರರ ಜೊತೆ ಸಭೆ ನಡೆಸಿ, ರೇಷ್ಮೆ ಮಾರುಕಟ್ಟೆ ಸ್ಥಾಪಿಸುವ ಸಮಗ್ರ ಚರ್ಚೆ ನಡೆಸಲಾಯಿತು.

ವಾರಣಾಸಿಯಲ್ಲಿ ಕರ್ನಾಟಕ ರೇಷ್ಮೆ ಮಾರುಕಟ್ಟೆ ಸ್ಥಾಪಿಸುವ ಕರ್ನಾಟಕ ಸರ್ಕಾರದ ಪ್ರಸ್ತಾವನೆಗೆ ಯುಪಿ ಸರ್ಕಾರ ತಕ್ಷಣ ಸ್ಪಂದಿಸಿದೆ. ವಾರಣಾಸಿಯ ಸಾರಂಗ್ ತಲಾಬ್‌ನಲ್ಲಿ ಕರ್ನಾಟಕ ರೇಷ್ಮೆ ಮಾರಾಟ ಮಂಡಳಿಗೆ(ಕೆಎಸ್‌ಎಂಬಿ) ಜಾಗ ನೀಡಿದ್ದು, ಅಲ್ಲಿ ಮಳಿಗೆ ತೆಗೆದು ರೇಷ್ಮೆ ಮಾರುಕಟ್ಟೆ ಆರಂಭಿಸಲು ಒಪ್ಪಿಗೆ ಸೂಚಿಸಿದೆ. ಶೀಘ್ರದಲ್ಲೇ ಯುಪಿ ಸರ್ಕಾರ, ರಾಷ್ಟ್ರೀಯ ಕೈಮಗ್ಗ ಅಭಿವೃದ್ಧಿ ನಿಗಮ ಹಾಗೂ ರಾಜ್ಯ ಸರ್ಕಾರದ ನಡುವೆ MOU ಮಾಡಿಕೊಳ್ಳಲಾಗುತ್ತದೆ. ಒಡಂಬಡಿಕೆ ಪ್ರಕ್ರಿಯೆಗಳು ಪೂರ್ಣವಾದ ಕೂಡಲೇ ಅಗತ್ಯವಿರುವ ಕಾಮಗಾರಿಗಳನ್ನು ಪೂರ್ಣಗೊಳಿಸಿ, ಡಿಸೆಂಬರ್ ಅಂತ್ಯದೊಳಗೆ ಮಾರುಕಟ್ಟೆ ಪ್ರಾರಂಭಿಸಲಾಗುತ್ತದೆ.

ವಾರಣಾಸಿ ಸೇರಿದಂತೆ ಉತ್ತರ ಪ್ರದೇಶದಲ್ಲಿ ರೇಷ್ಮೆಗೆ ಬೇಡಿಕೆ ಹೆಚ್ಚಿದ್ದರೂ ಉತ್ತರ ಪ್ರದೇಶದಲ್ಲಿ ಕೇವಲ 7,984 ಎಕರೆಯಲ್ಲಿ‌ ಮಾತ್ರ ಹಿಪ್ಪುನೇರಳೆ ಬೆಳೆಯಲಾಗುತ್ತಿದೆ. ಹಾಗಾಗಿ , ಉತ್ತರ ಪ್ರದೇಶದಲ್ಲಿ ಉತ್ಪಾದನೆ ಹೆಚ್ಚಿಸಲು ಕರ್ನಾಟಕ ಸರ್ಕಾರದ ರೇಷ್ಮೆ ಇಲಾಖೆ ಸಿದ್ದಪಡಿಸಿದ್ದ ವರದಿ ಸಲ್ಲಿಸಲಾಯಿತು. ಇದನ್ನೂ ಓದಿ: ರಾಜಸ್ಥಾನ- ಎಲ್ಲ ಸಚಿವರಿಂದ ರಾಜೀನಾಮೆ ಪಡೆದ ಗೆಹ್ಲೋಟ್‌

end of December Karnataka silk market will launch in Varanasi uttar pradesh Narayana Gowda 1

ಕರ್ನಾಟಕದಲ್ಲಿ ಬಳಸುತ್ತಿರುವ ತಂತ್ರಜ್ಞಾನ, ರೈತರಿಗೆ ನೀಡುತ್ತಿರುವ ಸೌಲಭ್ಯಗಳು, ಮಾರುಕಟ್ಟೆ ವ್ಯವಸ್ಥೆ ಹಾಗೂ ರೇಷ್ಮೆಯಿಂದ ಉತ್ಪಾದಿಸಲಾಗುತ್ತಿರುವ ಉಪ ಉತ್ಪನ್ನಗಳ ಬಗ್ಗೆಯೂ ತಿಳಿಸಿಕೊಡಲಾಯಿತು. ಅಲ್ಲದೇ ಉತ್ತರ ಪ್ರದೇಶದಲ್ಲಿ ರೇಷ್ಮೆ ಉತ್ಪಾದನೆ ಹೆಚ್ಚಿಸಲು ಅಗತ್ಯವಿರುವ ತಂತ್ರಜ್ಞಾನ ಸೇರಿದಂತೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.

ಇದಲ್ಲದೇ, ಬನರಾಸ್ ಸೀರೆ ನೇಯ್ಗೆಗೆ ಹೆಸರುವಾಸಿ ಆಗಿರುವ ಲಲ್ಲಾಪುರ ಪ್ರದೇಶಕ್ಕೆ ಸಚಿವ ಡಾ.ನಾರಾಯಣಗೌಡ ಅವರು ಭೇಟಿ ನೀಡಿ ನೇಕಾರರ ಜೊತೆ ಮಾತುಕತೆ ನಡೆಸಿದರು. ವಾರಣಾಸಿಯಲ್ಲಿ ಕರ್ನಾಟಕ ರೇಷ್ಮೆ ಮಾರುಕಟ್ಟೆ ಸ್ಥಾಪಿಸುತ್ತಿರುವ ಮಾಹಿತಿ ನೀಡಿ, ಕರ್ನಾಟಕದ ರೇಷ್ಮೆಯನ್ನು ಖರೀದಿಸುವಂತೆ ನೇಕಾರರನ್ನು ಮನವೊಲಿಸಿದರು.

Ramanagara Silk Market C

ಮಾರುಕಟ್ಟೆ ಸ್ಥಾಪನೆ:
ಬನರಾಸ್ ಸೀರೆ ನೇಯ್ಗೆಗೆ ಸೇರಿದಂತೆ ವಾರಣಾಸಿ ನೇಕಾರರಿಗೆ ಅಗತ್ಯವಿರುವ ಗುಣಮಟ್ಟದ ರೇಷ್ಮೆ ಪೂರೈಸಲು ಕೆಎಸ್‌ಎಂಬಿ ಸಿದ್ಧವಿದೆ. ಈ ಬಗ್ಗೆ ಉತ್ತರ ಪ್ರದೇಶದ ಅಧಿಕಾರಿಗಳ ಜೊತೆ ಉತ್ತಮವಾದ ಸಭೆಯಾಗಿದ್ದು, ತಕ್ಷಣವೇ ಮಾರುಕಟ್ಟೆಗೆ ಜಾಗ ಗುರುತಿಸಿದ್ದಾರೆ. ಎಂಒಯು ಸೇರಿದಂತೆ ಎಲ್ಲಾ‌ ಕಾನೂನುನಾತ್ಮಕ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ, ಡಿಸೆಂಬರ್ ಅಂತ್ಯದೊಳಗೆ ಕರ್ನಾಟಕ ಮಾರುಕಟ್ಟೆ ಆರಂಭಿಸಲು ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುವುದು. ಕರ್ನಾಟಕ ರೇಷ್ಮೆಗೆ ಉತ್ತಮ ಮಾರುಕಟ್ಟೆ ಕಲ್ಪಿಸಿಕೊಡುವ ನಮ್ಮ ಯೋಚನೆಗೆ ವಾರಣಾಸಿ ಪ್ರವಾಸವೂ ಫಲಪ್ರದವಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಚಿವ ಡಾ.ನಾರಾಯಣ ಗೌಡ ಅವರ ನೇತೃತ್ವದ ನಿಯೋಗದಲ್ಲಿ ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ರೇಷ್ಮೆ ಇಲಾಖೆ ಆಯುಕ್ತ ಪೆದ್ದಪ್ಪಯ್ಯ, ಎಂಡಿ ಅನುರಾಧ ಸೇರಿದಂತೆ 9 ಜನರ ಅಧಿಕಾರಿಗಳು ವಾರಣಾಸಿಗೆ ತೆರಳಿದ್ದರು.

TAGGED:karnatakaSilkuttar pradeshVaranasiಉತ್ತರ ಪ್ರದೇಶನಾರಾಯಣ ಗೌಡಬನರಾಸ್‌ರೇಷ್ಮೆ
Share This Article
Facebook Whatsapp Whatsapp Telegram

Cinema news

gilli fan tattoo bigg boss
BBK 12: ಬಿಗ್‌ಬಾಸ್ ಗಿಲ್ಲಿಯ ಅಭಿಮಾನಿ ಕೈ ಮೇಲೆ ಟ್ಯಾಟೂ!
Cinema Latest Top Stories TV Shows
rakshitha rashika bigg boss
ನಿಂಗೆ ಗಿಲ್ಲಿ ಬೇಕು: ರಕ್ಷಿತಾ ವಿರುದ್ಧ ಗುಡುಗಿ ಕಳಪೆ ಕೊಟ್ಟ ರಾಶಿಕಾ
Cinema Latest Top Stories TV Shows
Samantha
`ಮಾ ಇಂಟಿ ಬಂಗಾರಂ’.. ಸಮಂತಾ ರಗಡ್ ಅವತಾರ..!
Cinema Latest South cinema Top Stories
Bigg Boss Ashwini Gowda and dhruvanth
ಇನ್ನೆರಡೇ ದಿನದಲ್ಲಿ ಮನೆಯಿಂದ ಇಬ್ರು ಹೋಗ್ತಾರೆ ಎಂದಿದ್ದಕ್ಕೆ ಬಿಕ್ಕಿ ಬಿಕ್ಕಿ ಅತ್ತ ಧ್ರುವಂತ್
Cinema Latest Top Stories TV Shows

You Might Also Like

Vijayalakshmi Darshan
Crime

ದರ್ಶನ್‌ ಪತ್ನಿ ವಿರುದ್ಧ ಅಶ್ಲೀಲ ಕಾಮೆಂಟ್‌ ಕೇಸ್‌ – 6 ಮಂದಿ ವಿರುದ್ಧ ಚಾರ್ಜ್‌ಶೀಟ್‌

Public TV
By Public TV
15 minutes ago
Ram Mandir
Latest

Ayodhya | ರಾಮ ಮಂದಿರದ 15 ಕಿಮೀ ವ್ಯಾಪ್ತಿಯಲ್ಲಿ ಮಾಂಸಾಹಾರ ವಿತರಣೆ ನಿಷೇಧ!

Public TV
By Public TV
21 minutes ago
Nelamangala Wife Suicide copy
Bengaluru City

200 ರೂ. ವಿಚಾರಕ್ಕೆ ಗಂಡ-ಹೆಂಡತಿ ನಡುವೆ ಗಲಾಟೆ; ಪತ್ನಿ ಆತ್ಮಹತ್ಯೆ

Public TV
By Public TV
49 minutes ago
Iran Protest 2 1
Latest

ಇರಾನ್‌ನಲ್ಲಿ ಭುಗಿಲೆದ್ದ ಹಿಂಸಾಚಾರ – ರಾಜಧಾನಿಯಲ್ಲೇ 217 ಮಂದಿ ಬಲಿ

Public TV
By Public TV
57 minutes ago
Khawaja Asif Benjamin Netanyahu
Latest

ಬೆಂಜಮಿನ್ ನೆತನ್ಯಾಹು ಅಪಹರಿಸಿ – ಅಮೆರಿಕ, ಟರ್ಕಿಗೆ ಪಾಕ್ ಒತ್ತಾಯ

Public TV
By Public TV
2 hours ago
Yeshwanthpur Flyover Mini Tempo Accident
Bengaluru City

ಫ್ಲೈಓವರ್ ಡಿವೈಡರ್‌ಗೆ ಗುದ್ದಿದ ಮಿನಿ ಟೆಂಪೋ – ತಪ್ಪಿದ ಅನಾಹುತ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?