ಬೈರತಿ ಸುರೇಶ್ ಪುತ್ರನೊಂದಿಗೆ ಎಸ್ ವಿಶ್ವನಾಥ್ ಪುತ್ರಿ ನಿಶ್ಚಿತಾರ್ಥ -ಊಟದಲ್ಲಿ ಜೊತೆಯಾದ ಡಿಕೆಶಿ, ಗೆಹ್ಲೋಟ್

Public TV
1 Min Read
DCM GOVERNOR

ಬೆಂಗಳೂರು: ಸಚಿವ ಬೈರತಿ ಸುರೇಶ್ (Byrati Suresh) ಅವರ ಪುತ್ರ ಸಂಜಯ್ ಹಾಗೂ ಶಾಸಕ ಎಸ್ ಆರ್ ವಿಶ್ವನಾಥ್ (SR Vishwanath) ಅವರ ಪುತ್ರಿ ಅಪೂರ್ವ ಅವರ ನಿಶ್ಚಿತಾರ್ಥ ಕಾರ್ಯಕ್ರಮ ಬೆಂಗಳೂರಿನ (Bengaluru) ಖಾಸಗಿ ಹೋಟೆಲ್‌ನಲ್ಲಿ (Hotel) ಬುಧವಾರ ನಡೆದಿದೆ.

DCM BAIRATHI SURESH

ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್ (DK Shivakumar) ಹಾಗೂ ಅವರ ಪತ್ನಿ ಉಷಾ ಅವರು ಪಾಲ್ಗೊಂಡಿದ್ದರು. ಸಚಿವ ಡಾ ಎಂ ಸಿ ಸುಧಾಕರ್ (Dr MC Sudhakar), ಶಾಸಕ ಶರತ್ ಬಚ್ಚೇಗೌಡ (Sharath Kumar Bache Gowda) ಉಪಸ್ಥಿತರಿದ್ದರು. ಇದನ್ನೂ ಓದಿ : ಸೆ.9ವರೆಗೆ ದರ್ಶನ್‌ಗೆ ನ್ಯಾಯಾಂಗ ಬಂಧನ – ಇಂದೇ ಶಿರಾ ಮಾರ್ಗವಾಗಿ ಬಳ್ಳಾರಿ ಜೈಲಿಗೆ ಶಿಫ್ಟ್‌

ಇದೇ ಸಂದರ್ಭದಲ್ಲಿ ಡಿಸಿಎಂ ಮತ್ತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಜೊತೆಯಲ್ಲಿ ಕುಳಿತು ಊಟ ಸವಿದಿದ್ದಾರೆ. ಇದನ್ನೂ ಓದಿ : ಖರ್ಗೆ ಒಂದೇ ವಿಳಾಸಕ್ಕೆ ಮೂರು ಸೈಟು, ಸರ್ಕಾರಕ್ಕೆ 500 ಕೋಟಿ ನಷ್ಟ: ನಾರಾಯಣಸ್ವಾಮಿ

Share This Article