ಆನೇಕಲ್‍ನಲ್ಲಿ ವಿದ್ಯುತ್ ಶಾಕ್‍ಗೆ ಯುವ ಇಂಜಿನಿಯರ್ ಬಲಿ

Public TV
1 Min Read
engineer dies by electrocution in anekal

-ಕಂಪನಿ ನಿರ್ಲಕ್ಷ್ಯಕ್ಕೆ ಕುಟುಂಬಸ್ಥರ ಆಕ್ರೋಶ

ಆನೇಕಲ್: ವಿದ್ಯುತ್ ಶಾಕ್‍ನಿಂದ (Electricution) ಯುವ ಇಂಜಿನಿಯರ್ (Engineer) ಸಾವಿಗೀಡಾದ ಘಟನೆ ತಾಲೂಕಿನ (Anekal) ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಯಸ್ಕಾವ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಕಾರ್ಖಾನೆಯಲ್ಲಿ ಈ ದುರ್ಘಟನೆ ಸಂಭವಿಸಿದೆ

ಬೆಂಗಳೂರಿನ (Bengaluru) ನಿವಾಸಿ ಕೌಶಿಕ್ (27) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಪ್ಯಾನಲ್ ಬೋರ್ಡ್ ತಯಾರು ಮಾಡಬೇಕಾದರೆ ವಿದ್ಯುತ್ ತಗಲಿದೆ. ಕೂಡಲೆ ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ. ಆದರೆ ಆಸ್ಪತ್ರೆಗೆ ಹೋಗುವ ಮಾರ್ಗ ಮಧ್ಯೆಯೇ ಅವರು ಸಾವಿಗೀಡಾಗಿದ್ದಾರೆ ಎಂದು ತಿಳಿದು ಬಂದಿದೆ.

ಕಂಪನಿಯಲ್ಲಿ ಕೆಲಸ ಮಾಡಬೇಕಾದರೆ ಯಾವುದೇ ಸುರಕ್ಷತೆ ಇರಲಿಲ್ಲ. ಹೀಗಾಗಿ ಕಾರ್ತಿಕ್ ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅಲ್ಲದೇ ಕಂಪನಿಯಿಂದ ಕೈಗೆ ಗ್ಲೌಸ್ ಸಹ ನೀಡದೆ ನಿರ್ಲಕ್ಷ ತೋರಿದೆ. ಇದರಿಂದ ಮಗನನ್ನು ಕಳೆದುಕೊಂಡಿದ್ದೇವೆ ಎಂದು ತಾಯಿ ಕಣ್ಣೀರಿಟ್ಟಿದ್ದಾರೆ.

ಜಿಗಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article