ಬೆಂಗಳೂರು: ಎಂಜಿನಿಯರಿಂಗ್ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕೊಠಡಿಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ರಾಜಗೋಪಾಲನಗರದಲ್ಲಿ ನಡೆದಿದೆ.
ಎಂ.ಎಸ್ ರಾಮಯ್ಯ ಎಂಜಿನಿಯರಿಂಗ್ ಕಾಲೇಜಿನ ಸಾಯಿಶ್ರೀ (22) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಮೃತ ಸಾಯಿಶ್ರೀ ಹಾಸ್ಟೆಲ್ನಲ್ಲಿದ್ದು ಓದುತ್ತಿದ್ದಳು. ಆದರೆ ಕಳೆದ ಕೆಲವು ದಿನಗಳಿಂದ ಯಾರೊಂದಿಗೂ ಮಾತನಾಡುತ್ತಿರಲಿಲ್ಲ. ಅಲ್ಲದೇ ಒಬ್ಬಂಟಿಯಾಗಿ ಇರಲು ಇಷ್ಟಪಡುತ್ತಿದ್ದಳು ಎನ್ನಲಾಗಿದೆ.
ಶುಕ್ರವಾರ ಸಂಜೆ ಹಾಸ್ಟೆಲ್ ಕೊಠಡಿಯಲ್ಲಿ ಯಾರು ಇಲ್ಲದ ಸಮಯ ನೋಡಿ ಸಾಯಿಶ್ರೀ ನೇಣು ಹಾಕಿಕೊಂಡಿದ್ದಾಳೆ. ಆತ್ಮಹತ್ಯೆಗೆ ಯಾವುದೇ ಕಾರಣಗಳು ತಿಳಿದು ಬಂದಿಲ್ಲ.
ಈ ಕುರಿತು ರಾಜಗೋಪಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.