Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿಆರ್ ಎಲೆಕ್ಷನ್ ಸೋತಿದ್ದಕ್ಕೆ ರ‍್ಯಾಗಿಂಗ್- ಮನನೊಂದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿಆರ್ ಎಲೆಕ್ಷನ್ ಸೋತಿದ್ದಕ್ಕೆ ರ‍್ಯಾಗಿಂಗ್- ಮನನೊಂದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

Bengaluru City

ಸಿಆರ್ ಎಲೆಕ್ಷನ್ ಸೋತಿದ್ದಕ್ಕೆ ರ‍್ಯಾಗಿಂಗ್- ಮನನೊಂದು ಎಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

Public TV
Last updated: February 7, 2018 11:59 am
Public TV
Share
2 Min Read
RAGGING DEATH COLLAGE
SHARE

ಬೆಂಗಳೂರು: ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಜರಾಜೇಶ್ವರಿ ನಗರದ ಚನ್ನಸಂದ್ರದ ಶಬರಿ ಅಪಾರ್ಟ್ ಮೆಂಟ್ ನಲ್ಲಿ ನಡೆದಿದೆ.

ಮೇಘನಾ(18) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿನಿ. ಮೇಘನಾ ಕುಮಾರಸ್ವಾಮಿ ಲೇಔಟ್‍ನ ದಯಾನಂದಸಾಗರ ಕಾಲೇಜಿನಲ್ಲಿ 2ನೇ ಸೆಮಿಸ್ಟರ್ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದಳು.

ಕಾಲೇಜಿನಲ್ಲಿ ನಡೆದ ಕ್ಲಾಸ್ ರೆಪ್ರೆಸೆಂಟೇಟಿವ್ ಎಲೆಕ್ಷನ್ ನಲ್ಲಿ ಮೇಘನಾ ಭಾಗವಹಿಸಿದ್ದಳು. ಆದರೆ ಆ ಎಲೆಕ್ಷನ್ ನಲ್ಲಿ ಸೋತಿದ್ದಕ್ಕೆ ತರಗತಿಯ ಇತರೆ ವಿದ್ಯಾರ್ಥಿಗಳು ಮೇಘನಾಳನ್ನು ರ‍್ಯಾಗಿಂಗ್ ಮಾಡುತ್ತಿದ್ದರು ಎನ್ನಲಾಗಿದೆ. ಈ ವಿಚಾರದ ಬಗ್ಗೆ ಮೇಘನಾ ತನ್ನ ಪೋಷಕರ ಹತ್ತಿರ ಹೇಳಿಕೊಂಡಿದ್ದಳು.

RAGGING DEATH 2

ನನ್ನ ಮಗಳು ಸಿಆರ್ ಆಗಬೇಕೆಂದು ಸೌದಾಮಿನಿ ವಿರುದ್ಧ ಎಲೆಕ್ಷನ್ ನಲ್ಲಿ ನಿಂತಳು. ಮೆಜಾರಿಟಿ ಇದೆ, ನಾನು ಎಲೆಕ್ಷನ್ ಗೆ ನಿಲ್ಲುತ್ತೇನೆ ಎಂದು ಹೇಳಿದ್ದಳು. ಆಗ ಅವಳು ನಾಯಿ ಎಂದು ಹೇಳಿದ್ದಾಳೆ. ಆಗ ನನ್ನ ಮಗಳು ಕೂಡ ನಾಯಿ ಎಂದು ಹೇಳಿದ್ದಾಳೆ. ಅಷ್ಟೇ ಅಲ್ಲದೇ ಕ್ಲಾಸಿನಲ್ಲಿದ್ದ 70 ಜನರಿಗೆ ನನ್ನ ಮಗಳು ಕೆಟ್ಟವಳು ಎಂದು ಮೆಸೇಜ್ ಕಳುಹಿಸಿದ್ದಾಳೆ. ಆ ಮೆಸೇಜ್‍ನಿಂದ ನನ್ನ ಮಗಳ ಜೊತೆ ಯಾರೂ ಮಾತನಾಡುತ್ತಿರಲಿಲ್ಲ. ಸೌದಾಮಿನಿ, ನಿಖಿಲ್, ನಿಖಿತಾ, ಪೂಜಾ ಹಾಗೂ ಸಂಧ್ಯಾ ಇವರನ್ನ ಕೂಡಲೇ ಬಂಧಿಸಬೇಕು ಎಂದು ಮೇಘನಾ ತಾಯಿ ಹೇಳಿದ್ದಾರೆ.

RAGGING DEATH 4

ನನ್ನ ಮಗಳು ರ‍್ಯಾಂಕ್ ವಿದ್ಯಾರ್ಥಿನಿ. ಅವಳು ನೋಟ್ಸ್ ಕೇಳಿದರು ಯಾರೂ ಆಕೆಗೆ ನೀಡುತ್ತಿರಲಿಲ್ಲ. ಮಗಳ ಸಮಸ್ಯೆ ಬಗ್ಗೆ ಮಾತನಾಡಲು ಕಾಲೇಜಿನ ಎಚ್‍ಒಡಿ ರಾಜ್‍ಕುಮಾರ್ ಮರಿಸ್ವಾಮಿ ಅವರನ್ನು ಕೇಳಲು ಹೋದಾಗ ಅವರು ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಳ್ಳಲಿಲ್ಲ. ನಿಮ್ಮ ಮಗಳು ಸಿಇಟಿ ಕೋಟಾದಿಂದ ಬಂದಿರೋದೋ ಅಥವಾ ಪೇಮೆಂಟ್ ಕೋಟಾದಿಂದ ಬಂದಿರೋದೋ ಎಂದು ಹಿಯಾಳಿಸಿದರು. ನಿಖಿಲ್ ನಾನು ಪೇಮೆಂಟ್ ಕೋಟಾದಿಂದ ಬಂದಿದ್ದೇನೆ ಎಂದು ಹೇಳಿದ ಕೂಡಲೇ ಆತನನ್ನು ಅಲ್ಲಿಂದ ಕಳುಹಿಸಿದರು. ನಾನು ನನ್ನ ಮಗಳು ಸಿಇಟಿ ಕೋಟಾದಿಂದ ಬಂದಿದ್ದಾಳೆಂದು ಹೇಳಿದ್ದಕ್ಕೆ ಸ್ವಲ್ಪ ಅನುಸರಿಸಿ ಹೋಗಬೇಕೆಂದು ಹೇಳಿದ್ರು ಅಂತ ತಿಳಿಸಿದ್ದಾರೆ.

RAGGING DEATH 3

ಸ್ವಲ್ಪ ದಿನದ ನಂತರ ಪರೀಕ್ಷೆಯ ಫಲಿತಾಂಶ ಬಂದಾಗ ಆ ವಿದ್ಯಾರ್ಥಿಗಳು ಫೇಲ್ ಆಗಿದ್ದಾರೆಂದು ಮೇಘನಾ ಹೇಳಿದ್ದಳು. ನಂತರ ಮಾರನೇ ದಿನವೇ ದುಡ್ಡು ಕೊಟ್ಟು ಆ ವಿಷಯದಲ್ಲಿ ಪಾಸ್ ಮಾಡಿಕೊಂಡಿದ್ದಾರೆ ಎಂದು ತಿಳಿಸಿದಳು. ಅಷ್ಟೇ ಅಲ್ಲದೇ ನನ್ನ ಮಗಳು ಕಾಲೇಜಿಗೆ ರಜೆ ಹಾಕಿ ಮಾರನೇ ದಿನ ಹೋಗಿ ನೋಟ್ಸ್ ಕೇಳಿದರೆ ನಾನು ಕೋಡುವುದಿಲ್ಲ ಎಂದು ಹೇಳುತ್ತಿದ್ದರು. ಸೌದಾಮಿನಿ ಸಿಆರ್ ಆದ ನಂತರ ವಾಟ್ಸಪ್ ಗ್ರೂಪ್ ನಲ್ಲಿ ನನ್ನ ಮಗಳ ನಂಬರ್ ಬ್ಲಾಕ್ ಮಾಡಿದ್ದಳು. ಅವಳಿಗೆ ಯಾವ ನೋಟ್ಸ್ ಬರದಂತೆ ಮಾಡಿದ್ದಳು ಎಂದು ಮೇಘನಾ ತಾಯಿ ತಿಳಿಸಿದ್ದಾರೆ.

RAGGING DEATH 6

ನನ್ನ ಮಗಳಿಗೆ ಆದ ಅನ್ಯಾಯ ಕೇಳಿದಾಗ ಯಾರೂ ನನ್ನ ಮಾತನ್ನು ಕೇಳುತ್ತಿರಲಿಲ್ಲ. ಅಲ್ಲಿ ನಮ್ಮ ಮಾತನ್ನು ಯಾರೂ ಕೇಳುವುದಿಲ್ಲ. ಎಲ್ಲ ಒಂದು ಗುಂಪಾಗಿದ್ದಾರೆ. ಅವರ ಮುಂದೆ ನಾವು ಗೆಲ್ಲಲ್ಲು ಆಗಲ್ಲ, ನಾವು ಸೋತಿದ್ದೇವೆ. ನಾವೇ ಇವರ ಮುಂದೆ ಸೋಲಬೇಕು ಎಂದು ಮೇಘನಾ ಹೇಳುತ್ತಿದ್ದಳು. ಸಿಆರ್ ವಿಷಯಕ್ಕೆ ಜಗಳ ಆಗಿ ಸೌದಾಮಿನಿ ಇಡೀ ಕ್ಲಾಸ್‍ಗೆ ನನ್ನ ಮಗಳ ಜೊತೆ ಸೇರಬಾರದು ಎಂದು ಮೆಸೇಜ್ ಮಾಡುತ್ತಿದ್ದಳು. ಇದ್ದರಿಂದ ನನ್ನ ಮಗಳು ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮೇಘನಾ ತಾಯಿ ಹೇಳಿದ್ದಾರೆ.

RAGGING DEATH 7

ಮೇಘನಾ ತಂದೆ ಚಂದ್ರಶೇಖರ್ ಅಂಧರಾಗಿದ್ದು, ಅವರ ಪತ್ನಿ ಲತಾ ಪತಿಯನ್ನ ಕೆಲಸಕ್ಕೆ ಬಿಡಲು ಹೋಗಿದ್ದ ವೇಳೆ ಮೇಘನಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೇಘನಾ ಪೋಷಕರು ಕಣ್ಣು ದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ.

ಆರ್‍ಆರ್ ನಗರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

RAGGING DEATH 5

RAGGING DEATH 8

RAGGING DEATH 1

TAGGED:bengaluruelectionPublic TVraggingstudentsuicideಆತ್ನಹತ್ಯೆಎಲೆಕ್ಷನ್ಪಬ್ಲಿಕ್ ಟಿವಿಬೆಂಗಳೂರುರ‍್ಯಾಗಿಂಗ್ವಿದ್ಯಾರ್ಥಿನಿ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Delhi Assembly Bomb Threat
Crime

ದೆಹಲಿ ವಿಧಾನಸಭೆಗೆ ಮತ್ತೆ ಬಾಂಬ್ ಬೆದರಿಕೆ

Public TV
By Public TV
30 minutes ago
vinod raj auto drivers
Bengaluru Rural

ಆಟೋ ಚಾಲಕರ ಕಷ್ಟಕ್ಕೆ ಮಿಡಿದ ನಟ ವಿನೋದ್ ರಾಜ್

Public TV
By Public TV
41 minutes ago
Jail
Court

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ – ಆರೋಪಿಗೆ 20 ವರ್ಷ ಜೈಲು ಶಿಕ್ಷೆ, 7 ಲಕ್ಷ ದಂಡ

Public TV
By Public TV
41 minutes ago
nitish kumar bihar cm oath
Latest

ರಾಜ್ಯಸಭೆ ಸದಸ್ಯರಾಗಿ ಶುಕ್ರವಾರ ನಿತೀಶ್ ಕುಮಾರ್ ಪ್ರಮಾಣ ಸ್ವೀಕಾರ – ಏ.14 ರಂದು ಬಿಹಾರಕ್ಕೆ ನೂತನ ಸಿಎಂ?

Public TV
By Public TV
59 minutes ago
congress flag
Latest

ಬಾರಾಮತಿ ಉಪಚುನಾವಣೆ; ಸ್ಪರ್ಧೆಯಿಂದ ಹಿಂದೆ ಸರಿದ ಕಾಂಗ್ರೆಸ್

Public TV
By Public TV
1 hour ago
karnataka High Court
Bengaluru City

ಶಾಲೆಗಳಲ್ಲಿ `ವಂದೇ ಮಾತರಂ’ ಆರು ಚರಣಗಳೊಂದಿಗೆ ಹಾಡೋದು ಕಡ್ಡಾಯ – ಹೈಕೋರ್ಟ್‌ನಿಂದ ಅರ್ಜಿ ವಜಾ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?