Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಖಾಸಗಿ ಎಂಜಿನಿಯರಿಂಗ್ ಶುಲ್ಕ ಹೆಚ್ಚಳ ಇಲ್ಲ, ಇತರೆ ಶುಲ್ಕಕ್ಕೆ ರೂ 20,000 ಮಿತಿ: ಅಶ್ವಥ್ ನಾರಾಯಣ್

Public TV
Last updated: September 29, 2021 5:13 pm
Public TV
Share
3 Min Read
ASHWATHNARYAN 5
SHARE

– ಎಲ್ಲಾ ಶುಲ್ಕ ಕೆಇಎ ಯಲ್ಲೇ ಪಾವತಿ

ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಖಾಸಗಿ ಕಾಲೇಜುಗಳ ಎಂಜಿನಿಯರಿಂಗ್ ಕೋರ್ಸಿನ ಶುಲ್ಕದಲ್ಲಿ ಯಾವುದೇ ಹೆಚ್ಚಳ ಮಾಡದೇ ಹಿಂದಿನ ದರವನ್ನೇ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ್ ಹೇಳಿದ್ದಾರೆ.

ASHWATHNARAYAN

ಕರ್ನಾಟಕ ಅನುದಾನ ರಹಿತ ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳ ಸಂಘ (ಕೆಯುಪಿಇಸಿಎ) ಮತ್ತು ಕರ್ನಾಟಕ ಧಾರ್ಮಿಕ ಮತ್ತು ಭಾಷಾ ಅಲ್ಪಸಂಖ್ಯಾತರ ವೃತ್ತಿ ಪರ ಕಾಲೇಜುಗಳ ಸಂಘದ (ಕೆಆರ್‍ಎಲ್‍ಎಂಪಿಸಿಎ) ಪ್ರತಿನಿಧಿಗಳ ಜೊತೆ ಇಂದು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಯಿತು ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು. ಇದನ್ನೂ ಓದಿ: ಹೊಸ ಶಿಕ್ಷಣ ನೀತಿಯಲ್ಲಿ ಕಾಂಬಿನೇಶನ್‍ನಿಂದ ಕೋರ್ಸ್, ಸಬ್ಜೆಕ್ಟ್‌ಗೆ ಬದಲಾಯಿಸಲಾಗಿದೆ: ಅಶ್ವಥ್ ನಾರಾಯಣ್

ASHWATNARAYAN

ಸರ್ಕಾರಿ ಕೋಟಾದಡಿ ಪ್ರವೇಶಾತಿ ಪಡೆಯುವವರಿಗೆ ರೂ 65,340, ರೂ 58,806 ಈ ಎರಡು ಸ್ಲ್ಯಾಬ್ ಗಳಲ್ಲಿ ಶುಲ್ಕಗಳು ಮುಂದುವರಿಯಲಿವೆ. ಖಾಸಗಿ ಕಾಲೇಜುಗಳು ‘ಇತರೆ ಶುಲ್ಕ’ ನೆಪದಲ್ಲಿ ಮಿತಿಮೀರಿ ಕಟ್ಟಿಸಿಕೊಳ್ಳುವುದಕ್ಕೂ ಕಡಿವಾಣ ಹಾಕಿ, ಗರಿಷ್ಠ ಮಿತಿಯನ್ನು 20 ಸಾವಿರ ರೂಪಾಯಿಕ್ಕೆ ನಿಗದಿಪಡಿಸಲಾಗಿದೆ. ಹಲವು ಕಾಲೇಜುಗಳು ಇತರೆ ಶುಲ್ಕದ ನೆಪದಲ್ಲಿ 70 ಸಾವಿರದವರೆಗೂ ಶುಲ್ಕ ವಸೂಲಿ ಮಾಡುತ್ತಿವೆ ಎನ್ನುವ ಆರೋಪಗಳ ಹಿನ್ನೆಲೆಯಲ್ಲಿ ಈ ತೀರ್ಮಾನ ಮಾಡಲಾಗಿದೆ. ಇದಕ್ಕೆ ಕಾಲೇಜು ಸಂಘದ ಪ್ರತಿನಿಧಿಗಳು ಕೂಡ ಒಪ್ಪಿಗೆ ಸೂಚಿಸಿದ್ದಾರೆ ಎಂದು ಸಚಿವರು ವಿವರಿಸಿದರು.

ಇನ್ನು ಮುಂದೆ ಪ್ರವೇಶ ಶುಲ್ಕ, ಇತರೆ ಶುಲ್ಕ, ಕೌಶಲ ಶುಲ್ಕ ಇದ್ಯಾವುದನ್ನೂ ನೇರವಾಗಿ ಕಾಲೇಜಿನಲ್ಲಿ ಕಟ್ಟುವಂತಿಲ್ಲ. ಇವೆಲ್ಲವನ್ನೂ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ)ದಲ್ಲಿಯೇ ಪಾವತಿಸಬೇಕು. ಟ್ಯೂಷನ್ ಶುಲ್ಕ ಸೇರಿದಂತೆ ಇತರೆ ಶುಲ್ಕವನ್ನು ಕಟ್ಟಿಸಿಕೊಳ್ಳುವ ಮುನ್ನ ಪ್ರತಿಯೊಂದು ಕಾಲೇಜು ಯಾವ್ಯಾವ ಉದ್ದೇಶಕ್ಕೆ ಇದನ್ನು ಕಟ್ಟಿಸಿಕೊಳ್ಳಲಾಗುತ್ತದೆ ಎಂಬುದನ್ನು ಕೆಎಇ. ತಾಂತ್ರಿಕ ಶಿಕ್ಷಣ ಇಲಾಖೆ, ವಿಟಿಯು ಗಳಿಗೆ ಮಾಹಿತಿ ಕೊಡಬೇಕು. ಇದನ್ನು ಕಾಲೇಜುಗಳಲ್ಲಿ ಕಟ್ಟಲು ಅವಕಾಶ ಇರುವುದಿಲ್ಲ. ಕೆಇಎ ಗೇ ಕಟ್ಟಬೇಕು. ಜೊತೆಗೆ ವೆಬ್ ಸೈಟ್ ನಲ್ಲಿ ಪ್ರಕಟಿಸಬೇಕು ಎಂದರು.

ಈ ಶೈಕ್ಷಣಿಕ ಸಾಲಿನಲ್ಲಿ ವೃತ್ತಿಪರ ಶಿಕ್ಷಣಕ್ಕೆ ಫೀಸ್ ಹೆಚ್ಚಳ ಇರುವುದಿಲ್ಲ.

ಇಂದು ಕರ್ನಾಟಕ ವೃತ್ತಿಪರ ಶಿಕ್ಷಣ ಸಂಸ್ಥೆಗಳ (ಪ್ರವೇಶ ನಿಯಂತ್ರಣ ಮತ್ತು ಶುಲ್ಕ ನಿಗದಿ) ಅಧಿನಿಯಮ 2006ರಂತೆ ಸೀಟು ಹಂಚಿಕೆ, ಶುಲ್ಕ ನಿಗದಿ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಯಿತು.

1/3 pic.twitter.com/szr4fpdkcD

— Dr. Ashwathnarayan C. N. (@drashwathcn) September 29, 2021

ವಿಶ್ವವಿದ್ಯಾಲಯ ಶುಲ್ಕವನ್ನು ಈ ಮುಂಚೆ ಆಯಾ ಕಾಲೇಜಿನಲ್ಲಿ ಕಟ್ಟಬಹುದಿತ್ತು. ಆದರೆ, ಇನ್ನು ಮುಂದೆ ಅದನ್ನು ಕೂಡ ಕೆಇಎಯಲ್ಲಿ ಕಟ್ಟಬೇಕು. ಈ ಮುಂಚೆ ಈ ಶುಲ್ಕ ಕಟ್ಟಿಸಿಕೊಳ್ಳುವಲ್ಲಿ ಇದ್ದ ಗೊಂದಲವನ್ನು ನಿವಾರಿಸುವುದಕ್ಕಾಗಿ ಈ ಕ್ರಮ ತೆಗೆದುಕೊಳ್ಳಲಾಗಿದೆ. ಕೆಲವು ಕಾಲೇಜುಗಳು ವಿದ್ಯಾರ್ಥಿಗಳನ್ನು ಉದ್ಯಮಗಳಿಗೆ ಸಜ್ಜುಗೊಳಿಸಿ ಅವರ ನೇಮಕಾತಿ ಸಾಧ್ಯತೆ ಹೆಚ್ಚಿಸುವುದಕ್ಕಾಗಿ ನೀಡುತ್ತಿದ್ದ ಹೆಚ್ಚುವರಿ ತರಬೇತಿಗಾಗಿ ಕೌಶಲ ಶುಲ್ಕ (ಸ್ಕಿಲ್ ಫೀಸ್) ಕಟ್ಟಿಸಿಕೊಳ್ಳುತ್ತಿದ್ದವು. ಇದು ಐಚ್ಛಿಕವಾಗಿದ್ದು, ಒಂದೊಂದು ಕಾಲೇಜಿನಲ್ಲಿ ಒಂದೊಂದು ರೀತಿ ಶುಲ್ಕ ಇರುತ್ತಿತ್ತು. ಈಗ ಇದಕ್ಕೆ ಕೂಡ ಗರಿಷ್ಠ ರೂ 20,000 ಮಿತಿ ನಿಗದಿಗೊಳಿಸಲಾಗಿದೆ. ಇದರಲ್ಲಿ 10,000ರೂ, 15,000ರೂ ಹಾಗೂ 20,ರೂ, ಹೀಗೆ ಮೂರು ಹಂತಗಳಿರುತ್ತವೆ. ವಿ.ಟಿ.ಯು. ತಂಡವು ಕಾಲೇಜುಗಳ ಪರಿಶೀಲನೆ ನಡೆಸಿ ಯಾವ ಕಾಲೇಜಿನಲ್ಲಿ ಎಷ್ಟು ಕಟ್ಟಿಸಿಕೊಳ್ಳಬೇಕು ಎಂದು ನಿಗದಿಗೊಳಿಸಲಿದೆ. ಅದರಂತೆ ಈ ಶುಲ್ಕವನ್ನು ಕೆಇಎಗೆ ಕಟ್ಟಬೇಕಾಗುತ್ತದೆ ಎಂದು ವಿವರಿಸಿದರು. ಇದನ್ನೂ ಓದಿ: ಅಧಿಕಾರಕ್ಕೆ ಬಂದ್ರೆ ಮಹಿಳೆಯರ ಸಾಲ ಮನ್ನಾ ಮಾಡಿ – ಹೆಚ್‍ಡಿಕೆಗೆ ಪತ್ನಿ ಅನಿತಾ ಸಲಹೆ

ಎಂಜಿನಿಯರಿಂಗ್ ಕೋರ್ಸ್ ಶುಲ್ಕವನ್ನು 30% ಹೆಚ್ಚಿಸಲು ಖಾಸಗಿ ಕಾಲೇಜುಗಳು ಸರ್ಕಾರಕ್ಕೆ ಬೇಡಿಕೆ ಮುಂದಿಟ್ಟಿದ್ದವು. ವಿಟಿಯು ಕುಲಪತಿ ಕರಿಸಿದ್ದಪ್ಪ ನೇತೃತ್ವದ ಸಮಿತಿಯು ಶೇ 15ರಿಂದ ಶೇ 20ರವರೆಗೆ ಹೆಚ್ಚಳ ಮಾಡಬಹುದೆಂದು ವರದಿಯಲ್ಲಿ ಅಭಿಪ್ರಾಯಪಟ್ಟಿತ್ತು. ಆದರೆ, ಕೋವಿಡ್ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಈ ವರ್ಷ ಶುಲ್ಕ ಹೆಚ್ಚಳ ಮಾಡದಿರಲು ಖಾಸಗಿ ಕಾಲೇಜುಗಳ ಒಕ್ಕೂಟಗಳ ಮನವೊಲಿಸಲಾಯಿತು ಎಂದರು.

ಕುಪೇಕಾದ ತಾಂತ್ರಿಕ ಸಮಿತಿಯ ಅಧ್ಯಕ್ಷ ಮಂಜುನಾಥ ಭಂಡಾರಿ, ಸದಸ್ಯರಾದ ಚಂದ್ರಶೇಖರ್ ರಾಜು, ರಮೇಶ್ ರಾಜು, ಉನ್ನತ ಶಿಕ್ಷಣ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ್, ಗಣೇಶ್ ಕಾರ್ಣಿಕ್ ಮತ್ತಿತರರು ಇದ್ದರು. ಇದನ್ನೂ ಓದಿ: ವಿಕೃತಕಾಮಿ ಉಮೇಶ್ ರೆಡ್ಡಿಗೆ ಗಲ್ಲು ಶಿಕ್ಷೆ ಪ್ರಕಟಿಸಿದ ಹೈಕೋರ್ಟ್

TAGGED:Ashwath NarayanEngineering CoursefeesPublic TVstudentsಅಶ್ವಥ್ ನಾರಾಯಣ್ಎಂಜಿನಿಯರಿಂಗ್ ಕಾಲೇಜುಪಬ್ಲಿಕ್ ಟಿವಿವಿದ್ಯಾರ್ಥಿಗಳುಶುಲ್ಕ
Share This Article
Facebook Whatsapp Whatsapp Telegram

You Might Also Like

05
Districts

ʻಕಾಂತಾರ ಚಾಪ್ಟರ್-1ʼ ಶೂಟಿಂಗ್‌ ವೇಳೆ ಮತ್ತೊಂದು ಅವಘಡ – ರಿಷಬ್‌ ಶೆಟ್ಟಿ ಸೇರಿ 30 ಮಂದಿ ಅಪಾಯದಿಂದ ಪಾರು!

Public TV
By Public TV
3 hours ago
Iran Israel
Latest

ಇರಾನ್‌ ಮೇಲೆ ಯಾವುದೇ ಕ್ಷಣದಲ್ಲೂ ದಾಳಿ – ದೊಡ್ಡ ಎಚ್ಚರಿಕೆ ಕೊಟ್ಟ ಇಸ್ರೇಲ್‌

Public TV
By Public TV
3 hours ago
allu arjun received gaddar film award as best actor for pushpa 2 movie 2
Cinema

ಸಿಎಂ ರೇವಂತ್ ರೆಡ್ಡಿ ಕೈಯಿಂದ ಉತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ಅಲ್ಲು ಅರ್ಜುನ್‌

Public TV
By Public TV
3 hours ago
01 NEW 1
Big Bulletin

ಬಿಗ್‌ ಬುಲೆಟಿನ್‌ 14 June 2025 ಭಾಗ 1

Public TV
By Public TV
4 hours ago
02 NEW
Big Bulletin

ಬಿಗ್‌ ಬುಲೆಟಿನ್‌ 14 June 2025 ಭಾಗ 2

Public TV
By Public TV
4 hours ago
Honeymoon Murder
Crime

ಪತಿ ಕೊಲೆ ಬಳಿಕ ಇಂದೋರ್‌ನ ಫ್ಲ್ಯಾಟ್‌ನಲ್ಲಿ ವಾಸವಿದ್ದ ಹನಿಮೂನ್ ಹಂತಕಿ

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?