ಮೈಸೂರು: ಕೆ.ಆರ್. ಎಸ್ ಜಲಾಶಯದ ಮುಂಭಾಗದಲ್ಲಿ 120 ಅಡಿ ಎತ್ತರ ಕಾವೇರಿ ಮಾತೆಯ ಪ್ರತಿಮೆ ನಿರ್ಮಾಣ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಆರಂಭದಲ್ಲೆ ವಿರೋಧ ವ್ಯಕ್ತವಾಗಿದೆ.
ಮೈಸೂರಿನ ಇನ್ ಸ್ಟಿಟ್ಯೂಟ್ ಆಫ್ ಇಂಜಿನಿಯರ್ ನಲ್ಲಿ ನಡೆದ ಸಭೆಯಲ್ಲಿ ನಿವೃತ್ತ ಎಂಜಿನಿಯರ್ ಗಳು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಕಾವೇರಿ ಪ್ರತಿಮೆ ಹಾಗೂ ಡಿಸ್ನಿಲ್ಯಾಂಡ್ ಮಾದರಿಯಲ್ಲಿ ಬೃಂದಾವನವನ್ನು ಅಭಿವೃದ್ಧಿ ಪಡಿಸಲು ಮುಂದಾದ್ರೆ ಇದು ಕೆ.ಆರ್. ಅಣೆಕಟ್ಟೆಗೆ ಕಂಟಕವಾಗಲಿದೆ ಎಂದು ಎಚ್ವರಿಕೆ ನೀಡಿದ್ರು.
ಸುಮಾರು 20ಕ್ಕೂ ಹೆಚ್ಚು ನುರಿತ ಹಿರಿಯ ಎಂಜಿನಿಯರ್ ಗಳು ಸಭೆ ನಡೆಸಿ ಸರ್ಕಾರಕ್ಕೆ ಮನವಿ ಮಾಡಲು ಮುಂದಾಗಿದ್ದಾರೆ. ಇದೊಂದು ಅವೈಜ್ಞಾನಿಕ ಯೋಜನೆಯಾಗಿದ್ದು, 120 ಅಡಿ ಎತ್ತರ ನಿರ್ಮಾಣ ಮಾಡಬೇಕಾದರೆ ಸುಮಾರು 40 ಅಡಿ ಆಳದಿಂದ ಅಡಿಪಾಯ ತೆಗೆಯಬೇಕಾಗುತ್ತೆ. ಅಷ್ಟೇ ಅಲ್ಲದೆ ಡ್ಯಾಂ ಭೂಕಂಪನ ವಲಯದಲ್ಲಿ ನಿರ್ಮಿಸಿರುವುದರಿಂದ ಡ್ಯಾಂ ಬಿರುಕು ಬಿಡುತ್ತದೆ ಎಂಬ ಅಭಿಪ್ರಾಯ ಪಟ್ಟರು.
ಡ್ಯಾಂ ಬಳಿ ಡಿಸ್ನಿಲ್ಯಾಂಡ್ ಮಾದರಿ ನಿರ್ಮಾಣ ಮಾಡಲು ಸುಮಾರು 400 ಎಕ್ಕರೆ ಪ್ರದೇಶ ಬೇಕಾಗುತ್ತೆ. ಇದರಿಂದ ಡ್ಯಾಂ ಸುತ್ತಮುತ್ತಲು ಕೃಷಿ ಪ್ರದೇಶ ಇರುವ ಕಾರಣ ರೈತರ ಜಮೀನನ್ನು ವಶಕ್ಕೆ ಪಡೆಯಬೇಕಾಗುತ್ತೆ ಇದು ಸರಿಯಾದ ನಿರ್ಧಾರವಲ್ಲ ಅಂತಾ ರೈತ ಮುಖಂಡರು ಅಭಿಪ್ರಾಯ ವ್ಯಕ್ತಪಡಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್ಬುಕ್ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews