ಮ್ಯಾಂಚೆಸ್ಟರ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಅಂತಿಮ ಟೆಸ್ಟ್ ಪಂದ್ಯ ಕೊರೊನಾದಿಂದಾಗಿ ರದ್ದುಗೊಂಡಿದೆ. ಈ ಮೂಲಕ ಸರಣಿಯಲ್ಲಿ 2-1 ಅಂತರದಲ್ಲಿ ಮುನ್ನಡೆ ಸಾಧಿಸಿದ್ದ ಭಾರತಕ್ಕೆ ಕೊರೊನಾ ಕಾಟಕೊಟ್ಟಿದೆ.
4ನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಭಾರತ ತಂಡದ ಕೋಚ್ ರವಿಶಾಸ್ತ್ರಿಗೆ ಕೊರೊನಾ ಪಾಸಿಟಿವ್ ವರದಿಯಾಗಿತ್ತು. ಬಳಿಕ ಅವರ ಸಂಪರ್ಕದಲ್ಲಿದ್ದ ಮೂವರು ಸಹಾಯಕ ಸಿಬ್ಬಂದಿಗಳಾದ ಬೌಲಿಂಗ್ ಕೋಚ್ ಭರತ್ ಅರುಣ್, ಫೀಲ್ಡಿಂಗ್ ಕೋಚ್ ಆರ್.ಶ್ರೀಧರ್ ಮತ್ತು ಫಿಸಿಯೋ ನಿತೀನ್ ಪಟೇಲ್ ಅವರನ್ನು ಕ್ವಾರಂಟೈನ್ಗೆ ಒಳಪಡಿಸಲಾಗಿತ್ತು. ಇದನ್ನೂ ಓದಿ: ಟಿ20 ವಿಶ್ವಕಪ್ಗೆ ಟೀಂ ಇಂಡಿಯಾಗೆ ಧೋನಿ ಮೆಂಟರ್
ನಿನ್ನೆ ಮತ್ತೋರ್ವ ಸಹಾಯಕ ಸಿಬ್ಬಂದಿಗೆ ಕೊರೊನಾ ದೃಢವಾದ ಬೆನ್ನಲ್ಲೇ ಭಾರತದ ಅಭ್ಯಾಸವನ್ನು ಮೊಟಕುಗೊಳಿಸಲಾಗಿತ್ತು. ಹಾಗಾಗಿ ಇಂದಿನ 5ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಭಾರತದ ಆಟಗಾರರಿಗೆ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಎಲ್ಲಾ ಆಟಗಾರರ ರಿಪೋರ್ಟ್ ಕೂಡ ನೆಗೆಟಿವ್ ಬಂದಿತ್ತು. ಆದರೂ ಕೂಡ ಅಂತಿಮ ಕ್ಷಣದಲ್ಲಿ ಪಂದ್ಯ ರದ್ದು ಗೊಳಿಸಲು ಉಭಯ ತಂಡಗಳು ಒಪ್ಪಿಗೆ ಸೂಚಿಸಿ ಕೋವಿಡ್-19 ಹಿನ್ನೆಲೆ ಪಂದ್ಯ ರದ್ದುಗೊಂಡಿದೆ. ಇದನ್ನೂ ಓದಿ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಸಿಎಂ
ಟೆಸ್ಟ್ ಸರಣಿಯಲ್ಲಿ ಮೊದಲ ಪಂದ್ಯ ಡ್ರಾ ಆಗಿದ್ದರೆ, ಎರಡನೇ ಪಂದ್ಯ ಭಾರತ ತಂಡ ಜಯಗಳಿಸಿತ್ತು. ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ಜಯಗಳಿಸಿ 1-1 ಸಮಬಲ ಸಾಧಿಸಿತ್ತು. ಬಳಿಕ ಓವೆಲ್ನಲ್ಲಿ ನಡೆದ ನಾಲ್ಕನೇ ಟೆಸ್ಟ್ ಪಂದ್ಯವನ್ನು ಭರ್ಜರಿಯಾಗಿ ಗೆದ್ದಿರುವ ಭಾರತ ತಂಡ ಸರಣಿಯಲ್ಲಿ 2-1 ಮುನ್ನಡೆ ಪಡೆದುಕೊಂಡಿತ್ತು. ಇದೀಗ ಐದನೇ ಟೆಸ್ಟ್ ಪಂದ್ಯ ರದ್ದುಕೊಂಡಿರುವುದರಿಂದ ಸರಣಿ ಗೆಲುವಿನ ಬಗ್ಗೆ ಇನ್ನೂ ನಿರ್ಧಾರ ತೆಗೆದುಕೊಂಡಿಲ್ಲ.