ಬೆಂಗಳೂರು: ಅರಣ್ಯ ಹಕ್ಕು ಕಾಯ್ದೆಯಡಿ ಸೌಲಭ್ಯಕ್ಕಾಗಿ ಪಟ್ಟಾ ಜಮೀನು ಹೊಂದಿರುವವರೂ ಅರ್ಜಿ ಹಾಕಿದ್ದರೆ ಪರಿಶೀಲಿಸಿ ಕೈಬಿಡುವಂತೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ (Eshwar Khandre) ಸೂಚಿಸಿದ್ದಾರೆ.
ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಸೂಚನೆ ನೀಡಿದ ಅವರು, ಅರಣ್ಯ ಹಕ್ಕು ಕಾಯ್ದೆಯಡಿ ಅರ್ಹ ಫಲಾನುಭವಿಗಳಿಗೆ ಅಂದರೆ 2005ರ ಡಿ.13ಕ್ಕೆ ಮೊದಲು ಜೀವನೋಪಾಯಕ್ಕಾಗಿ ಅರಣ್ಯ ಭೂಮಿ ಬಳಸುತ್ತಿರುವ ಮತ್ತು ಅರಣ್ಯದಲ್ಲಿ ವಾಸಿಸುತ್ತಿರುವವರಿಗೆ ಅನ್ಯಾಯವಾಗದಂತೆ ರಾಜ್ಯ ಸರ್ಕಾರ ಕ್ರಮ ವಹಿಸಿದೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಕನ್ನಡ ಬರೆಯಲು ಪರದಾಡಿದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ
Advertisement
Advertisement
ಅರಣ್ಯ ಹಕ್ಕು ಕಾಯ್ದೆಯಡಿ ಇನ್ನೂ ಸಾವಿರಾರು ಅರ್ಜಿಗಳು ಇತ್ಯರ್ಥವಾಗದೆ ಬಾಕಿ ಉಳಿದಿರುವುದನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಕಂದಾಯ ಭೂಮಿ (ಪಟ್ಟಾ ಜಮೀನು) ಮಾಲೀಕತ್ವ ಹೊಂದಿರುವವರು ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರೆ ಪರಿಶೀಲಿಸಿ ಕ್ರಮವಹಿಸಲು ಸೂಚಿಸಿದ್ದಾರೆ. ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿರುವವರಿಂದ ತಮಗಾಗಲಿ, ತಮ್ಮ ಕುಟುಂಬದ ಸದಸ್ಯರಿಗಾಗಲಿ 2005ರ ಡಿಸೆಂಬರ್ 13ಕ್ಕೆ ಮೊದಲು ಅರಣ್ಯ ಮತ್ತು ಪಟ್ಟಾ ಜಮೀನು ಸೇರಿದಂತೆ 3 ಎಕರೆಗಿಂತ ಹೆಚ್ಚು ಜಮೀನು ಇರಲಿಲ್ಲ ಎಂಬ ಬಗ್ಗೆ ಸ್ವಯಂ ಘೋಷಣೆ (ಡಿಕ್ಲರೇಷನ್) ಬರೆಸಿಕೊಳ್ಳಲು ತಿಳಿಸಿದ್ದಾರೆ.
Advertisement
Advertisement
ನಮೂನೆ-ಎಯಲ್ಲಿರುವ ಅಂಶಗಳನ್ನು ಕಡ್ಡಾಯವಾಗಿ ಮತ್ತು ನಿಯಮಾನುಸಾರ ಪರಿಶೀಲಿಸಲು ಹಾಗೂ ತಪ್ಪು/ಸುಳ್ಳು ಮಾಹಿತಿ ಒದಗಿಸಿ, ಕ್ಲೇಮ್ ಅರ್ಜಿ ಸಲ್ಲಿಸಿರುವವರನ್ನು ಅರಣ್ಯಹಕ್ಕು ಕಾಯಿದೆ ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲು ಸೂಚಿಸಿದ್ದಾರೆ.ಇದನ್ನೂ ಓದಿ: ವರ `ಚೋಲಿ ಕೆ ಪೀಚೆ ಕ್ಯಾ ಹೈ’ ಡ್ಯಾನ್ಸ್ ಮಾಡಿದ್ದಕ್ಕೆ ಮದ್ವೆ ನಿಲ್ಲಿಸಿದ ವಧುವಿನ ತಂದೆ