Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮಾಸಾಂತ್ಯಕ್ಕೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ: ಈಶ್ವರ ಖಂಡ್ರೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮಾಸಾಂತ್ಯಕ್ಕೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ: ಈಶ್ವರ ಖಂಡ್ರೆ

Bengaluru City

ಮಾಸಾಂತ್ಯಕ್ಕೆ ಬನ್ನೇರುಘಟ್ಟದಲ್ಲಿ ಚಿರತೆ ಸಫಾರಿ: ಈಶ್ವರ ಖಂಡ್ರೆ

Public TV
Last updated: June 10, 2024 3:19 pm
Public TV
Share
2 Min Read
eshwar Khandre
SHARE

ಬೆಂಗಳೂರು: ಬನ್ನೇರುಘಟ್ಟ (Bannerughatta) ಜೈವಿಕ ಉದ್ಯಾನದಲ್ಲಿ ಹಾಲಿ ಇರುವ ಸಿಂಹ, ಹುಲಿ ಸಫಾರಿಯ ಜೊತೆಗೆ ಜೂನ್ ಮಾಸಾಂತ್ಯದೊಳಗೆ ಚಿರತೆ ಸಫಾರಿ ಆರಂಭಿಸಲು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ.ಖಂಡ್ರೆ ಸೂಚನೆ ನೀಡಿದ್ದಾರೆ.

ವಿಕಾಸ ಸೌಧದ ಸಚಿವರ ಕಾರ್ಯಾಲಯದಲ್ಲಿ ನಡೆದ ಮೃಗಾಲಯ ಪ್ರಾಧಿಕಾರದ 156ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರಾಜ್ಯದಲ್ಲಿರುವ ವಿವಿಧ ಮೃಗಾಲಯಗಳಿಗೆ ಪ್ರವಾಸಿಗರನ್ನು ಹೆಚ್ಚು ಸೆಳೆಯಲು ಮತ್ತು ಆದಾಯ ಹೆಚ್ಚಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಪರಾಮರ್ಶಿಸಿದರು.

ಮೈಸೂರು ಶ್ರೀ ಚಾಮರಾಜೇಂದ್ರ ಮಾಲಯ ಹಾಗೂ ಕಾರಂಜಿ ಕೆರೆ ಮಧ್ಯ ಭಾಗದಲ್ಲಿ ಸಾರ್ವಜನಿಕ, ಖಾಸಗಿ ಪಾಲುದಾರಿಕೆ (ಪಿಪಿಪಿ) ಮಾದರಿಯಲ್ಲಿ ಅಕ್ವೇರಿಯಂ (ಮತ್ಸ್ಯಾಗಾರ) ನಿರ್ಮಿಸಲು, ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲು ಸಮಾಲೋಚನಾ ಸಂಸ್ಥೆ ಆಯ್ಕೆ ಮಾಡಲು 15 ದಿನಗಳ ಒಳಗಾಗಿ ಪ್ರಸ್ತಾವನೆ ಮಂಡಿಸಲು ಸೂಚಿಸಲಾಯಿತು.

bannerughatta 2 1

ಮೈಸೂರು ಮೃಗಾಲಯ ಮತ್ತು ಕಾರಂಜಿ ಕೆರೆ ಪ್ರಕೃತಿ ಉದ್ಯಾನದಲ್ಲಿ ಕ್ಯಾಮೆರಾ ಕಾಂಬೋ ಟಿಕೆಟ್ ಪರಿಚಯಿಸಿ, ಸ್ಥಿರ ಕ್ಯಾಮರಾಗೆ 150 ರೂ. ಮತ್ತು ವಿಡಿಯೋ ಕ್ಯಾಮರಾಗೆ 300 ರೂ. ದರ ವಿಧಿಸಲು ಅನುಮತಿಸಲಾಯಿತು. ಅದೇ ರೀತಿ ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನವನದಲ್ಲಿ ಪಿಪಿಪಿ ಮಾದರಿಯಲ್ಲಿ ಸಿಹಿ ನೀರು ಮತ್ತು ಉಪ್ಪು ನೀರಿನ ಮತ್ಸ್ಯಾಗಾರಗಳನ್ನು ನಿರ್ಮಿಸಲು ಈಗಾಗಲೇ ನಡೆದಿರುವ ಪರಿಕಲ್ಪನೆ ಅಧ್ಯಯನ ವರದಿ ಮತ್ತು ಕಾರ್ಯಸಾಧ್ಯತೆ ವರದಿ ಪರಿಶೀಲಿಸಿ ಜಾಗತಿಕ ಮಾನದಂಡಗಳ ರೀತ್ಯ ಮತ್ಸ್ಯಾಗಾರ ನಿರ್ಮಾಣಕ್ಕೆ ಅನುಮೋದನೆ ನೀಡಲಾಯಿತು.

ಮೃಗಾಲಯಗಳಲ್ಲಿ ವನ್ಯಜೀವಿ ಪಶುವೈದ್ಯರ ಕೊರತೆ ಆಗದಂತೆ ಮತ್ತು ಮೃಗಾಲಯದಲ್ಲಿರುವ ವನ್ಯಜೀವಿಗಳು ಸೋಂಕು ಇತ್ಯಾದಿಯಿಂದ ಸಾವಿಗೀಡಾಗದಂತೆ ಕ್ರಮ ವಹಿಸಲು ಪಶುವೈದ್ಯರ ನೇಮಕಾತಿಯ ಬಗ್ಗೆ ಚರ್ಚಿಸಿ, ವೈದ್ಯರ ನೇಮಕಾತಿಗೆ ಅನುಮೋದನೆ ನೀಡಲಾಯಿತು.

ಚಿತ್ರದುರ್ಗದ ಆಡು ಮಲ್ಲೇಶ್ವರ ಕಿರು ಮೃಗಾಲಯಕ್ಕೆ ಸ್ಥಳೀಯ ಪಶುವೈದ್ಯಾಧಿಕಾರಿಗಳ ಸೇವೆ ಪಡೆಯಲು ಘಟನೋತ್ತರ ಅನುಮೋದನೆ ನೀಡಲಾಯಿತು.

ಇತರ ನಿರ್ಣಯಗಳು:
>. ಬನ್ನೇರುಘಟ್ಟ ಜೈವಿಕ ಉದ್ಯಾನದ ಪ್ರಾಣಿ, ಪಕ್ಷಿಗಳಿಗೆ ಮತ್ತು ಪ್ರವಾಸಿಗರಿಗೆ ಅನುಕೂಲವಾಗುವಂತೆ ಬೆಂಗಳೂರು ಜಲಮಂಡಳಿಯಿಂದ ಕಾವೇರಿ ನೀರು ಒದಗಿಸಲು ಈಗಾಗಲೇ ಸರ್ಕಾರ ಅನುಮತಿ ನೀಡಿದ್ದು,, ಕೊಳವೆ ಮಾರ್ಗ ಅಳವಡಿಕೆ ಕಾಮಗಾರಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೀರು ಹರಿಸು ಕ್ರಮ ಕೈಗೊಳ್ಳಲು ಸಮ್ಮತಿ.

>. ಬನ್ನೇರುಘಟ್ಟ ಉದ್ಯಾನದಲ್ಲಿ ನೇರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಮತ್ತು 21 ಸಾವಿರ ಮಾಸಿಕ ವೇತನ ಮೀರಿದ 153 ಸಿಬ್ಬಂದಿಗೆ ಸಿ.ಜಿ.ಎಚ್.ಎಸ್. ದರದಂತೆ ವೈದ್ಯಕೀಯ ವೆಚ್ಚ ಭರಿಸಲು ಅನುಮೋದನೆ.

>. ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನ ವ್ಯಾಪ್ತಿಯಲ್ಲಿ ನಿರ್ಮಾಣ ಮಾಡಲಾಗಿರುವ ರಣಹದ್ದು ಸಂರಕ್ಷಣಾ ಸಂತಾನೋತ್ಪತ್ತಿ ಕೇಂದ್ರವನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸ್ಯಾಟಲೈಟ್ ಕೇಂದ್ರವಾಗಿ ಕಾರ್ಯನಿರ್ವಹಣೆಗೆ ಅನುಮೋದನೆ.

>. ಗದಗ ಮೃಗಾಲಯದ ವಿಸ್ತರಣೆ ಮತ್ತು ಅಭಿವೃದ್ಧಿಗೆ 13.20 ಎಕೆ ಜಮೀನು ಭೂಸ್ವಾಧೀನ ಮತ್ತು ಮೃಗಾಲಯದ ಸಿಬ್ಬಂದಿಗೆ ರಿಯಾಯಿತಿ ದರದಲ್ಲಿ ಮಧ್ಯಾಹ್ನದ ಊಟ ಪೂರೈಕೆಗೆ ಸಮ್ಮತಿ.

TAGGED:Bannerughattabengalurucheetah safarieshwar khandreಈಶ್ವರ್ ಖಂಡ್ರೆಚಿರತೆ ಸಫಾರಿಬನ್ನೇರುಘಟ್ಟಬೆಂಗಳೂರು
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

lungi ngidi Injury
Cricket

ಕ್ಯಾಚ್‌ ಹಿಡಿಯುವಾಗ ಕೆಳಗೆ ಬಿದ್ದ ಲುಂಗಿ ಎನ್‌ಗಿಡಿ ತಲೆಗೆ ತೀವ್ರ ಪೆಟ್ಟು – ಮೈದಾನಕ್ಕೆ ಬಂತು ಅಂಬುಲೆನ್ಸ್‌

Public TV
By Public TV
13 minutes ago
Sara Govindu
Bengaluru City

ಚೇತನ್‌ ಒಬ್ಬ ಅರೆಹುಚ್ಚ, ನಿರುದ್ಯೋಗಿ, ಮುಠ್ಠಾಳ, ರಾಜ್ಯದಿಂದ ಗಡೀಪಾರು ಮಾಡ್ಬೇಕು – ಸಾರಾ ಗೋವಿಂದು ಕಿಡಿ

Public TV
By Public TV
17 minutes ago
k.l.rahul
Cricket

IPLನಲ್ಲಿ ಇತಿಹಾಸ ಬರೆದ ಕನ್ನಡಿಗ ಕೆ.ಎಲ್.ರಾಹುಲ್‌; 150 ರನ್‌ ಗಳಿಸಿದ ಮೊದಲ ಭಾರತೀಯ – ಅಭಿಷೇಕ್‌ ದಾಖಲೆ ಉಡೀಸ್‌

Public TV
By Public TV
48 minutes ago
bmtc bus accident engineering student dies in bengaluru
Bengaluru City

ಸ್ಕೂಟರ್‌ಗೆ ಡಿಕ್ಕಿಯಾಗಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ತಲೆ ಮೇಲೆ ಹರಿದ ಬಿಎಂಟಿಸಿ ಬಸ್‌

Public TV
By Public TV
1 hour ago
CRIME
Crime

ಮದ್ವೆ ಆಗ್ಬೇಕಿದ್ದ ಯುವತಿಯನ್ನ ಫ್ಲ್ಯಾಟ್‌ಗೆ ಬರಲು ಹೇಳಿ ಸೆಕ್ಸ್ ಉತ್ತೇಜಕ ಮಾತ್ರೆ ಸೇವನೆ – ಹೃದಯಾಘಾತದಿಂದ ಸರ್ಕಾರಿ ಅಧಿಕಾರಿ ಸಾವು

Public TV
By Public TV
2 hours ago
kundapura temple theft
Crime

ಕುಂದಾಪುರ ದೇವಸ್ಥಾನದಲ್ಲಿ ಕಳವು ಕೇಸ್‌ – ಇಬ್ಬರು ಆರೋಪಿಗಳ ಬಂಧನ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?