ಬೀದರ್: ವಿಧಾನ ಪರಿಷತ್ ಚುನಾವಣೆ ಘೋಷಣೆಯಾಗಿದ್ದು, ಈಗ ಬಿಜೆಪಿ ಅವರು ಸುಳ್ಳು ಹೇಳಿಕೊಂಡು ಬರುತ್ತಿದ್ದಾರೆ. ಬಿಜೆಪಿ ಎಂದರೆ ಭಾರತೀಯ ಜೂಟಾ ಪಾರ್ಟಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಬೀದರ್ ನಲ್ಲಿ ಸುದ್ದಿಗೋಷ್ಠಿ ಮಾಡಿದ ಖಂಡ್ರೆ, ಗಾಂಧಿಜೀ ಅವರ ಸ್ವರಾಜ್ ಕಲ್ಪನೆಯನ್ನು ಪೂರ್ತಿಯಾಗಿ ಮಾಡದೆ ಗಾಂಧಿಜೀಯನ್ನು ದುರುಪಯೋಗ ಮಾಡಿಕೊಳ್ಳುತ್ತಿದ್ದೀರಿ. ಬಹಿರಂಗವಾಗಿ ಗಾಂಧಿಜಿ ಕೊಲೆ ಮಾಡಿದ ಗೋಡ್ಸೆಯ ದೇವಾಲಯ ಕಟ್ಟಲು ಹೋರಟಿದ್ದೀರಿ ಎಂದು ಜನ ಸ್ವರಾಜ್ ಮಾಡುತ್ತಿರುವ ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟರು. ಇದನ್ನೂ ಓದಿ: 70 ವರ್ಷದ ದೇಶದ ಸಾಧನೆಯನ್ನು ಪ್ರಶ್ನಿಸುತ್ತಿರುವುದು ದುರದೃಷ್ಟಕರ: ಭೂಪೇಶ್ ಬಘೇಲ್
ಪಂಚ ರಾಜ್ಯಗಳ ಚುನಾವಣೆ ಇದ್ದು, ಚುನಾವಣೆಯ ದೃಷ್ಟಿಯಿಂದ ಹೆದರಿ ಪ್ರಧಾನಿ ಮೋದಿ ಅವರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದ್ದಾರೆ. ಇದು ಪ್ರಜಾಪ್ರಭುತ್ವ ಹಾಗೂ ರೈತರಿಗೆ ಸಿಕ್ಕ ಜಯ ಜೊತೆಗೆ ಬೆಂಬಲ ನೀಡಿದ್ದ ವಿರೋಧ ಪಕ್ಷಗಳ ಜಯ ಎಂದರು.
ಕೇಂದ್ರ ಸಚಿವ ಭಗವಂತ್ ಖೂಬಾ ರಸಗೊಬ್ಬರದ ಕೊರತೆ ಇಲ್ಲ ಎನ್ನುತ್ತಿದ್ದಾರೆ. ಆದರೆ ಒಂದೂವರೆ ತಿಂಗಳಿನಿಂದ ರಸಗೊಬ್ಬರದ ಕೊರತೆ ಇದೆ. ನೀವೇ ಹೋಗಿ ರಸಗೊಬ್ಬರದ ಅಂಗಡಿಗಳಲ್ಲಿ ಡಿಎಪಿ ರಸಗೊಬ್ಬರ ಕೇಳಿ ಆದ್ರೆ ರಸಗೊಬ್ಬರ ಸಿಗಲ್ಲ. ಏಕೆಂದರೆ ರಸಗೊಬ್ಬರ ಕೊರತೆ ಇದೆ ಎಂದು ಖೂಬಾ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅನುಷ್ಕಾ ಸಂಗೀತ ಸಮಾರಂಭದಲ್ಲಿ ಕುಣಿದು ಕುಪ್ಪಳಿಸಿದ ಆಲಿಯಾ