Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಸ್ತುವಾರಿ ಸಚಿವರಿಂದ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಉಸ್ತುವಾರಿ ಸಚಿವರಿಂದ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ

Districts

ಉಸ್ತುವಾರಿ ಸಚಿವರಿಂದ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ

Public TV
Last updated: January 5, 2020 3:53 pm
Public TV
Share
2 Min Read
smg smart city eshwarappa 3 1
SHARE

ಶಿವಮೊಗ್ಗ: ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಅವರು, ಯೋಜನೆ ಅನುಷ್ಠಾನಗೊಳಿಸುವ ಪೂರ್ವದಲ್ಲಿ ಸ್ಥಳೀಯ ಜನರ ಅಭಿಪ್ರಾಯಗಳನ್ನು ಸಹ ಪಡೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಚಿವರು ಇಂದು ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು. ನೆಹರು ಕ್ರೀಡಾಂಗಣ, ಜಯನಗರ ಕನ್ಸರ್ವೆನ್ಸಿ ಕಾಮಗಾರಿ, ರಾಜೇಂದ್ರ ನಗರ ಚಾನೆಲ್ ಬಳಿಯ ಕಾಮಗಾರಿ, ವಿನಾಯಕ ಪಾರ್ಕ್ ಬಸವನಗುಡಿ ಮತ್ತು ನಗರ ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡಿ ಡಿಜಿಟಲ್ ಲೈಬ್ರರಿ ಯೋಜನೆ ಅನುಷ್ಠಾನದ ಪರಿಶೀಲನೆ ನಡೆಸಿದರು.

smg smart city eshwarappa

ಕಾಮಗಾರಿ ಅನುಷ್ಠಾನ ಪೂರ್ವದಲ್ಲಿ ಮತ್ತು ಅನುಷ್ಠಾನದ ವೇಳೆ ಸ್ಥಳೀಯ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರೊಂದಿಗೆ ಚರ್ಚಿಸಿ ಯೋಜನೆ ರೂಪಿಸಬೇಕು. ಸ್ಥಳೀಯರ ಅಭಿಪ್ರಾಯಗಳನ್ನು ಸ್ವೀಕರಿಸಿದ ಬಳಿಕ ಕಾಮಗಾರಿ ಆರಂಭಿಸಿದರೆ ಜನರಿಗೆ ಉಪಯೋಗಕರವಾದ ರೀತಿಯಲ್ಲಿ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗುತ್ತದೆ. ಆರಂಭದಲ್ಲಿ ಕುಂಟುತ್ತಾ ಸಾಗುತ್ತಿದ್ದ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳು ಕಳೆದ 6 ತಿಂಗಳಿನಿಂದ ಚುರುಕಿನಿಂದ ನಡೆಯುತ್ತಿದೆ ಎಂದು ಅವರು ತಿಳಿಸಿದರು.

ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಎಲ್ಲಾ ಟೆಂಡರ್ ಪ್ರಕ್ರಿಯೆ ಆದಷ್ಟು ಬೇಗನೆ ಪೂರ್ಣಗೊಳಿಸಿ ಕಾರ್ಯಾದೇಶ ನೀಡಲು ತಿಳಿಸಲಾಗಿದೆ. ನಗರದ ಮಧ್ಯ ಭಾಗದಲ್ಲಿ ಹರಿದು ಹೋಗಿರುವ ಚಾನೆಲ್‍ಗಳನ್ನು ಸ್ವಚ್ಛಗೊಳಿಸುವ ಕುರಿತು ಜಿಲ್ಲಾಧಿಕಾರಿ ಅವರು ಮೂರು ದಿನಗಳ ಒಳಗಾಗಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳ ಸಭೆ ಕರೆದು ಕ್ರಮ ಕೈಗೊಳ್ಳುವರು. ಚಾನೆಲ್‍ನಲ್ಲಿ ತಿಳಿಯಾದ ನೀರು ಸದಾ ಕಾಲ ನಿಲ್ಲುವಂತೆ ಮಾಡಲು ಬ್ಯಾರೇಜ್ ನಿರ್ಮಾಣ ಸೇರಿದಂತೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.

smg smart city eshwarappa 1

ಇನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಸುಮಾರು 20 ಸಾವಿರ ಎಲ್‍ಇಡಿ ದೀಪಗಳನ್ನು ಅಳವಡಿಸಲಾಗುತ್ತಿದ್ದು, ಟೆಂಡರ್ ಹಂತದಲ್ಲಿದೆ. ಇದರ ಸರಿಯಾದ ನಿರ್ವಹಣೆಗೂ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಸಚಿವರು ನೆಹರು ಕ್ರೀಡಾಂಗಣದಲ್ಲಿ ಕಾಮಗಾರಿ ಪರಿಶೀಲನೆಗೆ ತೆರಳಿದ ಸಂದರ್ಭದಲ್ಲಿ ನಾಗರಿಕರು ಹಲವು ಬೇಡಿಕೆಗಳನ್ನು ಮುಂದಿರಿಸಿದರು. ಕ್ರೀಡಾಂಗಣದಲ್ಲಿ ಸರಿಯಾದ ಶೌಚಾಲಯ ವ್ಯವಸ್ಥೆ ಮಾಡಬೇಕು. ಬೆಳಕಿನ ವ್ಯವಸ್ಥೆ, ಅಗತ್ಯವಿರುವ ಎಲ್ಲಾ ಕಡೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಕ್ರೀಡಾಂಗಣವನ್ನು ಸುಸ್ಥಿತಿಯಲ್ಲಿರಿಸಲು ಕ್ರಮ, ಪಾರ್ಕಿಂಗ್ ಪ್ರತ್ಯೇಕ ವ್ಯವಸ್ಥೆ ಸೇರಿದಂತೆ ಹಲವು ಬೇಡಿಕೆಗಳನ್ನು ಸಚಿವರ ಮುಂದಿರಿಸಿದರು. ಕ್ರೀಡಾಳುಗಳೊಂದಿಗೆ ಸಮಾಲೋಚನೆ ನಡೆಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಂತೆ ಸಚಿವರು ಸೂಚನೆ ನೀಡಿದರು.

smg smart city eshwarappa 4

ಡಿಜಿಟಲ್ ಲೈಬ್ರರಿ ಉತ್ತಮ ಯೋಜನೆಯಾಗಿದ್ದು, ಶಾಲಾ ಕಾಲೇಜು ಮಕ್ಕಳಿಗೆ ಅತ್ಯಂತ ಉಪಯುಕ್ತವಾಗಿದೆ. ಶಿಕ್ಷಣ ಸಚಿವರಿಂದ ಈ ಯೋಜನೆಯನ್ನು ಅಧಿಕೃತವಾಗಿ ಉದ್ಘಾಟಿಸಲು ಸಮಯ ನಿಗದಿಪಡಿಸುವಂತೆ ಸಚಿವರು ತಿಳಿಸಿದರು. ಈ ವೇಳೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಉಪ ಮೇಯರ್ ಚನ್ನಬಸಪ್ಪ, ಯೋಜನಾ ನಿರ್ದೇಶಕ ಡಾ.ನಾಗೇಂದ್ರ ಹೊನ್ನಳ್ಳಿ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

TAGGED:eshwarappaProjectPublic TVshivamoggasmart cityಈಶ್ವರಪ್ಪಪಬ್ಲಿಕ್ ಟಿವಿಯೋಜನೆ ಕಾಮಗಾರಿಶಿವಮೊಗ್ಗಸ್ಮಾರ್ಟ್ ಸಿಟಿ
Share This Article
Facebook Whatsapp Whatsapp Telegram

Cinema news

Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories
Dhurandhar 2 ranveer singh
ರಿಲೀಸ್‌ ದಿನವೇ ಎಲ್ಲಾ ಬಾಕ್ಸಾಫೀಸ್‌ ರೆಕಾರ್ಡ್‌ ಉಡೀಸ್‌ ಮಾಡಿದ ಧುರಂಧರ್‌ 2‌ – ಗಳಿಸಿದ್ದೆಷ್ಟು?
Bollywood Cinema Latest Main Post
Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories

You Might Also Like

K.R Puram Accident
Bengaluru City

ಬೆಂಗಳೂರು | ನಿಂತಿದ್ದ ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ – ಸ್ಥಳದಲ್ಲೇ ಮೂವರು ಸಾವು 

Public TV
By Public TV
4 minutes ago
Israeli Nuclear Site Hit
Latest

ಇಸ್ರೇಲ್‌ನ ನ್ಯೂಕ್ಲಿಯರ್‌ ಸೌಲಭ್ಯವಿರುವ ಪಟ್ಟಣಗಳ ಮೇಲೆ ಇರಾನ್‌ ಕ್ಷಿಪಣಿ ಸುರಿಮಳೆ – 100ಕ್ಕೂ ಹೆಚ್ಚು ಮಂದಿಗೆ ಗಾಯ

Public TV
By Public TV
4 minutes ago
Oil
Dakshina Kannada

ಚೀನಾಗೆ ತೆರಳುತ್ತಿದ್ದ ಟ್ಯಾಂಕರ್‌ ಯೂಟರ್ನ್‌ – ಮಂಗಳೂರಿಗೆ ಬರ್ತಿದೆ 7.7 ಲಕ್ಷ ಬ್ಯಾರೆಲ್ ಕಚ್ಚಾ ತೈಲವಿರುವ ಹಡಗು

Public TV
By Public TV
8 hours ago
Lamborghini Car
Bengaluru City

ಬೆಂಗ್ಳೂರಲ್ಲಿ ಮುಂದುವರಿದ ಐಷಾರಾಮಿ ಕಾರುಗಳ ದರ್ಬಾರ್ – ರಾಜಾರೋಷವಾಗಿ ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್

Public TV
By Public TV
8 hours ago
War
Latest

ಮಧ್ಯಪ್ರಾಚ್ಯ ಬಿಕ್ಕಟ್ಟು; ಭಾರತಕ್ಕೆ ʻಕರೆಂಟ್‌ ಶಾಕ್‌ʼ ಎದುರಾಗುತ್ತಾ? – ವಿದ್ಯುತ್ ಕಾರ್ಯದರ್ಶಿ ಹೇಳಿದ್ದೇನು?

Public TV
By Public TV
9 hours ago
Randeep singh surjewala
Bagalkot

ದಾವಣಗೆರೆಯಲ್ಲಿ ಸಮರ್ಥ್‌ ಶಾಮನೂರಿಗೆ ಕಾಂಗ್ರೆಸ್‌ ಟಿಕೆಟ್‌ ಫಿಕ್ಸ್‌..?

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?