Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಸ್ತುವಾರಿ ಸಚಿವರಿಂದ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಉಸ್ತುವಾರಿ ಸಚಿವರಿಂದ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ

Districts

ಉಸ್ತುವಾರಿ ಸಚಿವರಿಂದ ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿಗಳ ಪರಿಶೀಲನೆ

Public TV
Last updated: January 5, 2020 3:53 pm
Public TV
Share
2 Min Read
smg smart city eshwarappa 3 1
SHARE

ಶಿವಮೊಗ್ಗ: ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳನ್ನು ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಅವರು, ಯೋಜನೆ ಅನುಷ್ಠಾನಗೊಳಿಸುವ ಪೂರ್ವದಲ್ಲಿ ಸ್ಥಳೀಯ ಜನರ ಅಭಿಪ್ರಾಯಗಳನ್ನು ಸಹ ಪಡೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಚಿವರು ಇಂದು ಶಿವಮೊಗ್ಗ ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳ ಸ್ಥಳ ಪರಿಶೀಲನೆ ನಡೆಸಿದರು. ನೆಹರು ಕ್ರೀಡಾಂಗಣ, ಜಯನಗರ ಕನ್ಸರ್ವೆನ್ಸಿ ಕಾಮಗಾರಿ, ರಾಜೇಂದ್ರ ನಗರ ಚಾನೆಲ್ ಬಳಿಯ ಕಾಮಗಾರಿ, ವಿನಾಯಕ ಪಾರ್ಕ್ ಬಸವನಗುಡಿ ಮತ್ತು ನಗರ ಕೇಂದ್ರ ಗ್ರಂಥಾಲಯಕ್ಕೆ ಭೇಟಿ ನೀಡಿ ಡಿಜಿಟಲ್ ಲೈಬ್ರರಿ ಯೋಜನೆ ಅನುಷ್ಠಾನದ ಪರಿಶೀಲನೆ ನಡೆಸಿದರು.

smg smart city eshwarappa

ಕಾಮಗಾರಿ ಅನುಷ್ಠಾನ ಪೂರ್ವದಲ್ಲಿ ಮತ್ತು ಅನುಷ್ಠಾನದ ವೇಳೆ ಸ್ಥಳೀಯ ಜನರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಅವರೊಂದಿಗೆ ಚರ್ಚಿಸಿ ಯೋಜನೆ ರೂಪಿಸಬೇಕು. ಸ್ಥಳೀಯರ ಅಭಿಪ್ರಾಯಗಳನ್ನು ಸ್ವೀಕರಿಸಿದ ಬಳಿಕ ಕಾಮಗಾರಿ ಆರಂಭಿಸಿದರೆ ಜನರಿಗೆ ಉಪಯೋಗಕರವಾದ ರೀತಿಯಲ್ಲಿ ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯವಾಗುತ್ತದೆ. ಆರಂಭದಲ್ಲಿ ಕುಂಟುತ್ತಾ ಸಾಗುತ್ತಿದ್ದ ಸ್ಮಾರ್ಟ್ ಸಿಟಿ ಯೋಜನೆ ಕಾಮಗಾರಿಗಳು ಕಳೆದ 6 ತಿಂಗಳಿನಿಂದ ಚುರುಕಿನಿಂದ ನಡೆಯುತ್ತಿದೆ ಎಂದು ಅವರು ತಿಳಿಸಿದರು.

ಎಲ್ಲಾ ಕಾಮಗಾರಿಗಳನ್ನು ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ. ಎಲ್ಲಾ ಟೆಂಡರ್ ಪ್ರಕ್ರಿಯೆ ಆದಷ್ಟು ಬೇಗನೆ ಪೂರ್ಣಗೊಳಿಸಿ ಕಾರ್ಯಾದೇಶ ನೀಡಲು ತಿಳಿಸಲಾಗಿದೆ. ನಗರದ ಮಧ್ಯ ಭಾಗದಲ್ಲಿ ಹರಿದು ಹೋಗಿರುವ ಚಾನೆಲ್‍ಗಳನ್ನು ಸ್ವಚ್ಛಗೊಳಿಸುವ ಕುರಿತು ಜಿಲ್ಲಾಧಿಕಾರಿ ಅವರು ಮೂರು ದಿನಗಳ ಒಳಗಾಗಿ ಸಂಬಂಧಪಟ್ಟ ಇಲಾಖಾ ಅಧಿಕಾರಿಗಳ ಸಭೆ ಕರೆದು ಕ್ರಮ ಕೈಗೊಳ್ಳುವರು. ಚಾನೆಲ್‍ನಲ್ಲಿ ತಿಳಿಯಾದ ನೀರು ಸದಾ ಕಾಲ ನಿಲ್ಲುವಂತೆ ಮಾಡಲು ಬ್ಯಾರೇಜ್ ನಿರ್ಮಾಣ ಸೇರಿದಂತೆ ಅಗತ್ಯ ಕ್ರಮಕೈಗೊಳ್ಳಲಾಗುವುದು ಎಂದರು.

smg smart city eshwarappa 1

ಇನ್ನು ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದಲ್ಲಿ ಸುಮಾರು 20 ಸಾವಿರ ಎಲ್‍ಇಡಿ ದೀಪಗಳನ್ನು ಅಳವಡಿಸಲಾಗುತ್ತಿದ್ದು, ಟೆಂಡರ್ ಹಂತದಲ್ಲಿದೆ. ಇದರ ಸರಿಯಾದ ನಿರ್ವಹಣೆಗೂ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದರು.

ಸಚಿವರು ನೆಹರು ಕ್ರೀಡಾಂಗಣದಲ್ಲಿ ಕಾಮಗಾರಿ ಪರಿಶೀಲನೆಗೆ ತೆರಳಿದ ಸಂದರ್ಭದಲ್ಲಿ ನಾಗರಿಕರು ಹಲವು ಬೇಡಿಕೆಗಳನ್ನು ಮುಂದಿರಿಸಿದರು. ಕ್ರೀಡಾಂಗಣದಲ್ಲಿ ಸರಿಯಾದ ಶೌಚಾಲಯ ವ್ಯವಸ್ಥೆ ಮಾಡಬೇಕು. ಬೆಳಕಿನ ವ್ಯವಸ್ಥೆ, ಅಗತ್ಯವಿರುವ ಎಲ್ಲಾ ಕಡೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ಕ್ರೀಡಾಂಗಣವನ್ನು ಸುಸ್ಥಿತಿಯಲ್ಲಿರಿಸಲು ಕ್ರಮ, ಪಾರ್ಕಿಂಗ್ ಪ್ರತ್ಯೇಕ ವ್ಯವಸ್ಥೆ ಸೇರಿದಂತೆ ಹಲವು ಬೇಡಿಕೆಗಳನ್ನು ಸಚಿವರ ಮುಂದಿರಿಸಿದರು. ಕ್ರೀಡಾಳುಗಳೊಂದಿಗೆ ಸಮಾಲೋಚನೆ ನಡೆಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಂತೆ ಸಚಿವರು ಸೂಚನೆ ನೀಡಿದರು.

smg smart city eshwarappa 4

ಡಿಜಿಟಲ್ ಲೈಬ್ರರಿ ಉತ್ತಮ ಯೋಜನೆಯಾಗಿದ್ದು, ಶಾಲಾ ಕಾಲೇಜು ಮಕ್ಕಳಿಗೆ ಅತ್ಯಂತ ಉಪಯುಕ್ತವಾಗಿದೆ. ಶಿಕ್ಷಣ ಸಚಿವರಿಂದ ಈ ಯೋಜನೆಯನ್ನು ಅಧಿಕೃತವಾಗಿ ಉದ್ಘಾಟಿಸಲು ಸಮಯ ನಿಗದಿಪಡಿಸುವಂತೆ ಸಚಿವರು ತಿಳಿಸಿದರು. ಈ ವೇಳೆ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಉಪ ಮೇಯರ್ ಚನ್ನಬಸಪ್ಪ, ಯೋಜನಾ ನಿರ್ದೇಶಕ ಡಾ.ನಾಗೇಂದ್ರ ಹೊನ್ನಳ್ಳಿ ಸೇರಿದಂತೆ ಅಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

TAGGED:eshwarappaProjectPublic TVshivamoggasmart cityಈಶ್ವರಪ್ಪಪಬ್ಲಿಕ್ ಟಿವಿಯೋಜನೆ ಕಾಮಗಾರಿಶಿವಮೊಗ್ಗಸ್ಮಾರ್ಟ್ ಸಿಟಿ
Share This Article
Facebook Whatsapp Whatsapp Telegram

Cinema news

Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories
Mohanlal CJ Roy 1
ಸಿಜೆ ರಾಯ್‌ ‘ಸ್ನೇಹಿತನಿಗೂ ಮಿಗಿಲು’ – ನಟ ಮೋಹನ್ ಲಾಲ್ ಭಾವನಾತ್ಮಕ ಪೋಸ್ಟ್‌
Bengaluru City Cinema Latest South cinema Top Stories
yash mother pushpa compound demolition 1
ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ
Cinema Hassan Latest Main Post Sandalwood
Hanumanthu Lamani CY Roy
ಹಣ ನೀಡಿ ನನ್ನ ಬದುಕಿಗೆ ದಾರಿ ದೀಪವಾಗಿದ್ರಿ, ನಿಮ್ಮ ಋಣ ಮರೆಯೋಕಾಗಲ್ಲ – ಸಿಜೆ ರಾಯ್ ನೆನೆದು ಹನುಮಂತು ಭಾವುಕ
Bengaluru City Cinema Districts Karnataka Latest Sandalwood Top Stories

You Might Also Like

Leopard 1
Districts

ನಂಜನಗೂಡು | ಬೈಕ್‌ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿ – ಮಗು ಸೇರಿ ಮೂವರಿಗೆ ಗಾಯ

Public TV
By Public TV
12 minutes ago
Amit Shah 2
Latest

ಮೊಮೊ ಫ್ಯಾಕ್ಟರಿಯಲ್ಲಿ ಯಾರ ಹಣ ಹೂಡಿಕೆಯಾಗಿದೆ? – ಬಂಗಾಳ ಸರ್ಕಾರದ ಭ್ರಷ್ಟಾಚಾರವೇ ದುರಂತಕ್ಕೆ ಕಾರಣ: ಶಾ ಕಿಡಿ

Public TV
By Public TV
27 minutes ago
jamkhandi judge visits government school in alabala village
Bagalkot

ಜಮಖಂಡಿ | ಚರಂಡಿ ನೀರಲ್ಲಿ ತಟ್ಟೆ ತೊಳೆದ ಮಕ್ಕಳ ವಿಡಿಯೋ ವೈರಲ್‌ – ಶಾಲೆಗೆ ಜಡ್ಜ್‌ ಭೇಟಿ

Public TV
By Public TV
37 minutes ago
CJ Roy Pradeep Eshwar
Districts

ಸಿಜೆ ರಾಯ್ ಅವರೇ ಗುಂಡು ಹೊಡೆದುಕೊಂಡ್ರಾ, ಬೇರೆ ಯಾರಾದ್ರೂ ಹೊಡೆದ್ರಾ? – ಪ್ರದೀಪ್ ಈಶ್ವರ್ ಅನುಮಾನ

Public TV
By Public TV
50 minutes ago
CJ Roy 6
Bengaluru City

ಉದ್ಯಮಿ ಸಿಜೆ ರಾಯ್ ಪ್ರಕರಣ ತನಿಖೆ ಚುರುಕು – ಕುಟುಂಬಸ್ಥರ ವಿಚಾರಣೆ, ಹೇಳಿಕೆ ದಾಖಲು

Public TV
By Public TV
1 hour ago
fish
Latest

ಉಡುಪಿ| ಕತ್ತರಿಸಿ ಹದಗೈದ ಮೇಲೂ ಮೀನು ಜೀವಂತ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?