Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯನವರಿಗೆ ಪಾಠ ಮಾಡಲು ನಾನು ಎಲ್‍ಕೆಜಿ ಟೀಚರ್ ಅಲ್ಲ: ಈಶ್ವರಪ್ಪ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿದ್ದರಾಮಯ್ಯನವರಿಗೆ ಪಾಠ ಮಾಡಲು ನಾನು ಎಲ್‍ಕೆಜಿ ಟೀಚರ್ ಅಲ್ಲ: ಈಶ್ವರಪ್ಪ

Districts

ಸಿದ್ದರಾಮಯ್ಯನವರಿಗೆ ಪಾಠ ಮಾಡಲು ನಾನು ಎಲ್‍ಕೆಜಿ ಟೀಚರ್ ಅಲ್ಲ: ಈಶ್ವರಪ್ಪ

Public TV
Last updated: January 25, 2022 1:55 pm
Public TV
Share
3 Min Read
ESHWARAPPA 5
SHARE

ಶಿವಮೊಗ್ಗ: ಸಿದ್ದರಾಮಯ್ಯನವರಿಗೆ ಪಾಠ ಮಾಡಲು ನಾನು ಎಲ್‍ಕೆಜಿ ಟೀಚರ್ ಅಲ್ಲ. ಇಂತಹ ವ್ಯಕ್ತಿಗಳು ಯಾಕೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಬೇಕಿತ್ತು. ಸೋತ ಬಳಿಕ ಸಿದ್ದರಾಮಯ್ಯ ಬಹಳ ಪಾಠ ಹೇಳುವ ಕೆಲಸ ಮಾಡುತ್ತಿದ್ದಾರೆ. ಇವರ ಪಾಠ ರಾಜ್ಯದ ಜನ ಒಪ್ಪಲ್ಲ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

siddaramaiah 5

ಇತ್ತೀಚೆಗಷ್ಟೇ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಸರ್ಕಾರದ ಬೊಕ್ಕಸದಲ್ಲಿ ಹಣವಿಲ್ಲ, ಸಾಲದಲ್ಲಿಯೇ ಮುಳುಗಿ, ಸಾಲದಲ್ಲಿಯೇ ಏಳುತ್ತದೆ ಎಂದು ಹೇಳಿದ್ದರು. ಈ ಕುರಿತಂತೆ ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಈಶ್ವರಪ್ಪ ಅವರು, ಸಿದ್ದರಾಮಯ್ಯ ಸಿಎಂ ಆದಾಗ ವಜ್ರ ವೈಡೂರ್ಯಗಳನ್ನು ರಸ್ತೆಯ ಮೇಲೆ ಮಾರಾಟ ಮಾಡಲಾಗುತ್ತಿತ್ತಾ? ಯಾರೂ ಮನೆಗೆ ಬೀಗ ಹಾಕಲಾಗುತ್ತಿರಲಿಲ್ವಾ. ವಿಜಯನಗರ ಸಾಮ್ರಾಜ್ಯವಾಗಿತ್ತಾ? ಈಗ ಮಾತ್ರ ಸಾಲ ಮಾಡಲಾಗುತ್ತಿದೆಯಾ? ತಾನೂ ಮುಖ್ಯಮಂತ್ರಿ ಆಗಿದ್ದಾಗ ಒಂದು ರೂಪಾಯಿನೂ ಸಾಲಮಾಡಿಲ್ಲವೆಂದು ಹೇಳಲಿ ನೋಡೋಣ. ಸರ್ಕಾರ ಎಂದಾಗ ಸಾಲ ಮಾಡುವುದು ಇರುತ್ತದೆ. ತೀರಿಸುವುದು ಇರುತ್ತದೆ. ಸಿದ್ದರಾಮಯ್ಯನವರಿಗೆ ಪಾಠ ಮಾಡಲು ನಾನು ಎಲ್‍ಕೆಜಿ ಟೀಚರ್ ಅಲ್ಲ. ಇಂತಹ ವ್ಯಕ್ತಿಗಳು ಯಾಕೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಬೇಕಿತ್ತು. ಸೋತ ಬಳಿಕ ಸಿದ್ದರಾಮಯ್ಯ ಬಹಳ ಪಾಠ ಹೇಳುವ ಕೆಲಸ ಮಾಡುತ್ತಿದ್ದಾರೆ. ಇವರ ಪಾಠ ರಾಜ್ಯದ ಜನ ಒಪ್ಪಲ್ಲ. ನಿಮ್ಮ ಅಧಿಕಾರದ ಅವಧಿಯಲ್ಲಿ ಮಾಡಬಾರದ ತಪ್ಪು ಮಾಡಿದ್ದೀರಾ. ಅದಕ್ಕಾಗಿ ಜನ ಸೋಲಿಸಿದ್ದಾರೆ. ಈಗ ನಿಮ್ಮ ಪಕ್ಷದ ಸಂಘಟನೆ ಮಾಡಿ, ವಿರೋಧ ಪಕ್ಷದವರಾಗಿ ಸರ್ಕಾರದ ತಪ್ಪು ಏನಂತ ತಿಳಿಸಿ. ಬೇಕಾದರೆ ಹೋರಾಟ ಮಾಡಿ. ಕೋವಿಡ್ ಹೋಗುವವರೆಗೂ ತಡೆದುಕೊಳ್ಳಿ. ಈಗ ಮೇಕೆದಾಟು ಪಾದಯಾತ್ರೆ ಬಿಟ್ಟು ಮಹದಾಯಿ ಹಿಡಿದುಕೊಂಡಿದ್ದಾರೆ ಎಂದು ಕಿಡಿಕಾರಿದರು.

DKSHIVAKUMAR SIDDARAMAIAH 3

ಮಹದಾಯಿ ಹೋರಾಟ ನಮ್ಮ ಹೋರಾಟವೆಂದು ಸಿದ್ದರಾಮಯ್ಯ ಮತ್ತು ಡಿಕೆಶಿ ಎದೆ ಮುಟ್ಟಿಕೊಂಡು ಹೇಳಲಿ. ಈ ಹಿಂದೆ ಸೋನಿಯಾಗಾಂಧಿ ಅವರು ಗೋವಾ ಚುನಾವಣೆ ಸಂದರ್ಭದಲ್ಲಿ ಮಹದಾಯಿಯ ಒಂದು ಹನಿಯನ್ನು ಕರ್ನಾಟಕಕ್ಕೆ ನೀಡಲ್ಲ ಅಂದಿದ್ದರು. ಇದನ್ನು ಸಿದ್ದರಾಮಯ್ಯ ಮತ್ತು ಡಿಕೆಶಿ ಇಲ್ಲವೆಂದು ಹೇಳಲಿ ನೋಡೋಣ, ಕಾಂಗ್ರೆಸ್ ಪಕ್ಷ ಮಹದಾಯಿ ವಿರುದ್ಧವೆಂಬುದು ಸಾಬೀತಾಗುತ್ತದೆ. ಸೋನಿಯಾ ಗಾಂಧಿ ಈಗಲಾದರೂ ಸಾಬೀತುಪಡಿಸಲಿ ಕಾಂಗ್ರೆಸ್ ಮಹದಾಯಿ ವಿರುದ್ಧವಿಲ್ಲ ಎಂದು ಸವಾಲೊಡ್ಡಿದರು. ಇದನ್ನೂ ಓದಿ: ನನ್ನ ಜೊತೆ ಬಿಜೆಪಿ, ಜೆಡಿಎಸ್‍ನ ಕೆಲ ಶಾಸಕರು ಸಂಪರ್ಕದಲ್ಲಿದ್ದಾರೆ: ಸಿದ್ದರಾಮಯ್ಯ

Sonia Gandhi

ಜಿಲ್ಲಾ ಉಸ್ತುವಾರಿ ಬದಲಾವಣೆ ವಿಚಾರ: ಈ ಬಗ್ಗೆ ಚರ್ಚೆ ಮುಂದುವರೆಸುವುದು ನಿಲ್ಲಿಸಿ, ಎಲ್ಲಾ ಸಚಿವರಿಗೆ ಮತ್ತು ಶಾಸಕರಿಗೆ ಮನವಿ ಮಾಡುತ್ತೇನೆ. ಉಸ್ತುವಾರಿ ಬದಲಾಯಿಸಿರುವುದು ಸ್ವಾಗತಾರ್ಹ. ಈ ಹಿಂದಿನ ಸರ್ಕಾರದ ಅವಧಿಯಲ್ಲಿಯೂ ಈ ರೀತಿ ನಡೆದಿತ್ತು. ನಾನು ಈ ಹಿಂದೆ ಬಿಜಾಪುರ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೆ. ನಾನು ನನ್ನ ಜಿಲ್ಲೆಯಲ್ಲಿಯೇ ಇರಬೇಕೆಂಬ ದಾಟಿಯ ಮಾತುಗಳು ಇಲ್ಲಿಗೆ ನಿಲ್ಲಿಸಿ. ದೇವರ ಪಲ್ಲಕ್ಕಿಯನ್ನು ಎಡಗಡೆ ಹೊತ್ತರೇನೂ? ಬಲಗಡೆ ಹೊತ್ತರೇನು? ಪಲ್ಲಕ್ಕಿ ಪಲ್ಲಕ್ಕಿನೇ. ನನಗೆ ಅದೇ ಜಿಲ್ಲೆ ಬೇಕು ಮತ್ತು ಇದೇ ಜಿಲ್ಲೆ ಬೇಕು ಎಂಬ ವಾದ ಬೇಡ. ಬೇರೆ ಜಿಲ್ಲೆಗಳ ಪರಿಸ್ಥಿತಿ ತಿಳಿದುಕೊಳ್ಳಲಾಗಿದೆ. ಈ ಜಿಲ್ಲೆ ಆಯಾ ಜಿಲ್ಲೆಗಳ ಪರಿಸ್ಥಿತಿ ತಿಳಿದುಕೊಂಡಂತೆ ಆಗುತ್ತದೆ. ಚುನಾವಣೆ ಹತ್ತಿರದಲ್ಲಿರುವಾಗ ಆಯಾ ಜಿಲ್ಲಾ ಪರಿಸ್ಥಿತಿ, ಕಾರ್ಯಕರ್ತರ ಅಭಿಲಾಷೆ ತಿಳಿದುಕೊಂಡತಾಗುತ್ತದೆ. ಆಯಾ ಜಿಲ್ಲೆಯ ಉಸ್ತುವಾರಿಗಳು ಸಮೀಕ್ಷೆ ಮಾಡಿ ವರದಿ ನೀಡುತ್ತಾರೆ. ಆ ಜಿಲ್ಲೆಯ ಸಂಘಟನೆ ಮತ್ತು ಅಭಿವೃದ್ಧಿಯ ಬಗ್ಗೆ ಉಸ್ತುವಾರಿಗಳು ನೋಡಿಕೊಳ್ಳುತ್ತಾರೆ ಎಂದರು.

Ashok

ಮಾಧುಸ್ವಾಮಿ, ಆರ್. ಅಶೋಕ್ ಜಿಲ್ಲಾ ಉಸ್ತುವಾರಿ ವಿವಾರ: ಮಾಧುಸ್ವಾಮಿ ಮತ್ತು ಆರ್ ಅಶೋಕ್ ಗೆ ಜಿಲ್ಲಾ ಉಸ್ತುವಾರಿ ನೀಡದಿರುವ ವಿಚಾರ. ಎಲ್ಲರಿಗೂ ಎಲ್ಲವೂ ಕೊಡಬೇಕೆಂದು ಇಲ್ಲ. ಸರ್ಕಾರದ ಮತ್ತು ಪಕ್ಷದ ಹಿತದೃಷ್ಠಿಯಿಂದ ನಮ್ಮ ನಾಯಕರು ತೀರ್ಮಾನ ಕೈಗೊಳ್ಳುತ್ತಾರೆ. ಆ ತೀರ್ಮಾನಕ್ಕೆ ಅಶೋಕ್ ಮತ್ತು ಮಾಧುಸ್ವಾಮಿ ಬದ್ಧರಾಗಿರುತ್ತಾರೆ ಎಂದರು. ಜೊತೆಗೆ ನೆಮ್ಮದಿಯಾಗಿ ಎಲ್ಲರೂ ಒಟ್ಟಾಗಿ ಸೇರಿ ಕೆಲಸ ಮಾಡಿಕೊಂಡು ಹೋಗೋಣ, ಈ ನಿಟ್ಟಿನಲ್ಲಿ ಸರ್ವ ಪಕ್ಷಗಳ ಸಭೆ ಕರೆಯಲಾಗುತ್ತದೆ. ಸಭೆಗೆ ಬಂದರೆ ಸಂತೋಷ, ಬರದಿದ್ದರೆ ಇಲ್ಲ. ಎಲ್ಲರೂ ಒಟ್ಟಾಗಿ ಕೆಲಸ ಮಾಡಿಕೊಂಡು ಹೋಗಬೇಕೆಂಬ ಅಭಿಲಾಷೆ ಸಿಎಂ ಹೊಂದಿದ್ದಾರೆ ಎಂದು ವಿರೋಧ ಪಕ್ಷಗಳಿಗೆ ಕಿವಿ ಮಾತು ಹೇಳಿದರು. ಇದನ್ನೂ ಓದಿ: 2-3 ವಾರಗಳಲ್ಲಿ 3ನೇ ಅಲೆ ಕಡಿಮೆಯಾಗುತ್ತೆ: ಸುಧಾಕರ್

ಯತ್ನಾಳ್ ಹೇಳಿಕೆ ವಿಚಾರ: ಈ ಅಭಿಪ್ರಾಯ ಬಿಜೆಪಿಯದು ಅಲ್ಲ. ಯಾರಾದರೂ ಒಬ್ಬ ಶಾಸಕರು ಹೇಳಿದ್ದಾರಾ? ಅದು ಯತ್ನಾಳ್ ಅವರ ವೈಯುಕ್ತಿಕ ಅಭಿಪ್ರಾಯ. ಯತ್ನಾಳ್ ಮತ್ತು ರೇಣುಕಾಚಾರ್ಯ ಚರ್ಚೆ ಮಾಡಿರುವುದಕ್ಕೆ ವಿಶೇಷ ಅರ್ಥ ಕಲ್ಪಿಸುವುದು ಬೇಡ. ಸಭೆ ಯಾರು ಬೇಕಾದರೂ ನಡೆಸಬಹುದು. ನೆಗೆಟಿವ್ ಯೋಚನೆ ಮಾಡುವುದು ಬೇಡ. ಪಾಸಿಟಿವ್ ಯೋಚಿಸೋಣ. ಮುಂಬರುವ ಚುನಾವಣೆ ಬಗ್ಗೆ ಚರ್ಚೆ ಮಾಡಿರಬಹುದು. ಎಲ್ಲವೂ ಕೆಟ್ಟದಾಗಿ ಯೋಚನೆ ಮಾಡಿದರೆ ತಪ್ಪಾಗುತ್ತದೆ ಎಂದು ತಿಳಿಸಿದರು.

TAGGED:eshwarappamahadayimekedatushivamoggasiddaramaiahಈಶ್ವರಪ್ಪಮಹದಾಯಿಮೇಕೆದಾಟುಶಿವಮೊಗ್ಗಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Singer Mangli
`ಸರ್ಸೆ ಸೆರಗ ಸರ್ಸೆ’ ಹಾಡು ವಿವಾದ | ಉದ್ದೇಶಪೂರ್ವಕವಲ್ಲ, ನಿಮ್ಮ ಭಾವನೆಗಳನ್ನು ಗೌರವಿಸುತ್ತೇವೆ: ಕ್ಷಮೆಯಾಚಿಸಿದ ಗಾಯಕಿ ಮಂಗ್ಲಿ
Cinema Latest Top Stories
ಕಾಂತಾರ ಚಾಪ್ಟರ್‌ 1 ಶೂಟಿಂಗ್‌ನಲ್ಲಿ ರಿಷಬ್‌ ಶೆಟ್ಟಿ
ಅಧ್ಯಾಯ 2 ಇಲ್ಲಿಂದ ಶುರು – ಯುಗಾದಿಯಂದೇ ಅಭಿಮಾನಿಗಳ ತಲೆಗೆ ಹುಳ ಬಿಟ್ಟ ರಿಷಬ್‌
Cinema Latest Main Post Sandalwood
Nora Fatehi 1
`ಸರ್ಸೆ ಸೆರಗ ಸರ್ಸೆ’ ಹಿಂದಿ ಹಾಡು ವಿವಾದ – ನಟಿ ನೋರಾ ಫತೇಹಿ ವಿರುದ್ಧ ಫತ್ವಾ
Cinema Latest National Top Stories
Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood

You Might Also Like

Stunt and Crash Reels Hubballi BJP leader Veeresh Sangaladas son dies
Dharwad

ಸ್ಟಂಟ್ & ಕ್ರ್ಯಾಶ್ ರೀಲ್ಸ್‌ ಹುಚ್ಚಾಟ – ಹುಬ್ಬಳ್ಳಿ ಬಿಜೆಪಿ ಮುಖಂಡ ವೀರೇಶ್ ಸಂಗಳದ ಪುತ್ರ ಬಲಿ

Public TV
By Public TV
1 hour ago
Bengaluru Fire
Districts

ನಡುರಸ್ತೆಯಲ್ಲೇ ಧಗಧಗನೇ ಹೊತ್ತಿಯುರಿದ ಕಾರು

Public TV
By Public TV
1 hour ago
manish tewari
Latest

ಇರಾನ್‌ ಯುದ್ಧ| ಕಾಂಗ್ರೆಸ್‌ನಲ್ಲಿ ಬಿರುಕು – ತರೂರ್‌ ಬಳಿಕ ಕೇಂದ್ರದ ನಡೆಯನ್ನು ಬೆಂಬಲಿಸಿದ ಮನೀಶ್‌ ತಿವಾರಿ

Public TV
By Public TV
2 hours ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
2 hours ago
bjp flag
Bagalkot

ಕಾಂಗ್ರೆಸ್‌ನಲ್ಲಿ ಟಿಕೆಟ್‌ಗೆ ಫೈಟ್‌ – ದಾವಣಗೆರೆ, ಬಾಗಲಕೋಟೆಯಲ್ಲಿ ಬಿಜೆಪಿಗೆ ಸಿಗುತ್ತಾ ಗೆಲುವು?

Public TV
By Public TV
2 hours ago
Chitradurga Acid Attack
Chitradurga

ವಿಚ್ಛೇದಿತ ಪತ್ನಿ ಸೇರಿ ಐವರ ಮೇಲೆ ಆ್ಯಸಿಡ್ ದಾಳಿ – ಬಳಿಕ ಮಚ್ಚಿನಿಂದ ಹಲ್ಲೆ ನಡೆಸಿ ಪತಿ ಎಸ್ಕೇಪ್‌

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?