Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಾಜಿನಗರದ ಇಎಸ್‍ಐ ಹೃದ್ರೋಗ ವಿಭಾಗದ ವೈಫಲ್ಯಕ್ಕೆ ಭ್ರಷ್ಟಾಚಾರ ಕಾರಣ: ಎಎಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜಾಜಿನಗರದ ಇಎಸ್‍ಐ ಹೃದ್ರೋಗ ವಿಭಾಗದ ವೈಫಲ್ಯಕ್ಕೆ ಭ್ರಷ್ಟಾಚಾರ ಕಾರಣ: ಎಎಪಿ

Bengaluru City

ರಾಜಾಜಿನಗರದ ಇಎಸ್‍ಐ ಹೃದ್ರೋಗ ವಿಭಾಗದ ವೈಫಲ್ಯಕ್ಕೆ ಭ್ರಷ್ಟಾಚಾರ ಕಾರಣ: ಎಎಪಿ

Public TV
Last updated: September 15, 2021 1:49 pm
Public TV
Share
2 Min Read
aap
SHARE

ಬೆಂಗಳೂರು: ರಾಜಾಜಿನಗರದ ಇಎಸ್‍ಐ ಆಸ್ಪತ್ರೆಯಲ್ಲಿರುವ ಜಯದೇವ ಹೃದ್ರೋಗ ಸಂಸ್ಥೆಯ ಕಾರ್ಡಿಯಾಲಜಿ ವಿಭಾಗದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಆಡಳಿತ ಮಂಡಳಿಯ ಹಣದ ದಾಹಕ್ಕೆ ನೂರಾರು ರೋಗಿಗಳು ಬಲಿಯಾಗಿದ್ದಾರೆ ಎಂದು ನಗರ ಎಎಪಿ ಅಧ್ಯಕ್ಷ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.

aap 1

ಕಾರ್ಡಿಯಾಲಜಿ ವಿಭಾಗವನ್ನು ಬನ್ನೇರುಘಟ್ಟಕ್ಕೆ ಸ್ಥಳಾಂತರ ಮಾಡುವುದನ್ನು ಖಂಡಿಸಿ ಆಮ್ ಆದ್ಮಿ ಪಾರ್ಟಿಯು ರಾಜಾಜಿನಗರದ ಇಎಸ್‍ಐ ಆಸ್ಪತ್ರೆ ಎದುರು ಬುಧವಾರ ಪ್ರತಿಭಟನೆ ನಡೆಸಿತು. ಇದನ್ನೂ ಓದಿ: ಆಸ್ಪತ್ರೆಯಿಂದ ಜಯದೇವ ಹೃದ್ರೋಗ ಘಟಕ ಸ್ಥಳಾಂತರ- ಸುರೇಶ್ ಕುಮಾರ್ ಸ್ಪಷ್ಟನೆ

esi

ಪ್ರತಿಭಟನೆಯಲ್ಲಿ ಮಾತನಾಡಿದ ಬೆಂಗಳೂರು ನಗರ ಎಎಪಿ ಅಧ್ಯಕ್ಷ ಮೋಹನ್ ದಾಸರಿ, “ಇಎಸ್‍ಐಯಲ್ಲಿರುವ ಹೃದ್ರೋಗ ವಿಭಾಗದಲ್ಲಿ 50ಕ್ಕೂ ಹೆಚ್ಚು ವೆಂಟಿಲೇಟರ್ ಬೆಡ್‍ಗಳಿವೆ, ಅತ್ಯಾಧುನಿಕ ಸೌಲಭ್ಯಗಳಿವೆ. 15 ಸರ್ಜನ್‍ಗಳು, ನೂರಾರು ಸಿಬ್ಬಂದಿ ಅಲ್ಲಿಗೆ ನೇಮಕಗೊಂಡಿದ್ದಾರೆ. ಬೇರೆಲ್ಲ ಆಸ್ಪತ್ರೆಗಳಲ್ಲಿ ಬೆಡ್‍ಗಳು ಭರ್ತಿಯಾಗಿದ್ದರೂ ಕೂಡ ಇಲ್ಲಿ ಬೆಡ್‍ಗಳು ಖಾಲಿಯಿರಲು ಕಾರಣವೇನು ಎಂದು ನಾವು ಯೋಚಿಸಬೇಕು. ಕಾರ್ಡಿಯಾಲಜಿ ವಿಭಾಗದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಖಾಸಗಿ ಆಸ್ಪತ್ರೆಗಳೊಂದಿಗೆ ಅಕ್ರಮ ಒಳ ಒಪ್ಪಂದ ಮಾಡಿಕೊಂಡಿರುವ ಇಲ್ಲಿನ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಆಸ್ಪತ್ರೆಯನ್ನು ಹಾಳುಗೆಡವುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.  ಇದನ್ನೂ ಓದಿ: ಅಂಗಾಂಗಗಳನ್ನು ದಾನ ಮಾಡಿ – ಡೆತ್‍ನೋಟ್ ಬರೆದು ಉಡುಪಿಯ ಬಿಜೆಪಿ ನಾಯಕಿ ಆತ್ಮಹತ್ಯೆ

2011-12ರಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ರಾಜಾಜಿನಗರದ ಇಎಸ್‍ಐ ಆಸ್ಪತ್ರೆಯೊಂದಿಗೆ ಎಂಒಯು ಮಾಡಿಕೊಂಡಿದೆ. ಆ ಪ್ರಕಾರ ಇಎಸ್‍ಐ ಆಸ್ಪತ್ರೆಯಲ್ಲಿ ವಾರ್ಷಿಕ 15 ಕೋಟಿ ರೂ. ಮೊತ್ತದ ವಹಿವಾಟು ನಡೆಯಬೇಕು ಎಂದು ಗುರಿ ನಿಗದಿ ಪಡಿಸಲಾಗಿದೆ. ಈ ರೀತಿಯ ಒಪ್ಪಂದವು ಆರೋಗ್ಯ ಇಲಾಖೆಯ ವ್ಯಾಪಾರಿ ಪ್ರವೃತ್ತಿಯನ್ನು ತೋರಿಸುತ್ತದೆ. ಚಿಕಿತ್ಸೆಯನ್ನು ಸೇವೆಯನ್ನು ಪರಿಗಣಿಸುವ ಬದಲು ವ್ಯಾಪಾರವೆಂದು ಸರ್ಕಾರವೇ ಪರಿಗಣಿಸಿರುವುದು ನಾಚಿಕೆಗೇಡು. ಜಯದೇವ ಆಸ್ಪತ್ರೆಯೊಂದಿಗಿನ ಒಪ್ಪಂದ ನವೆಂಬರ್‍ನಲ್ಲಿ ಅಂತ್ಯವಾದ ನಂತರ ಖಾಸಗಿ ಆಸ್ಪತ್ರೆ ಜೊತೆ ಒಪ್ಪಂದಕ್ಕೆ ಸಿದ್ಧತೆ ನಡೆಸಲಾಗುತ್ತಿರುವುದು ಖಂಡನೀಯ. ಇಎಸ್‍ಐ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಎಲ್ಲ ಅಕ್ರಮಗಳಿಗೆ ಇಲ್ಲಿನ ಆಡಳಿತ ಮಂಡಳಿ ನೇರ ಕಾರಣ. ಮಂಡಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಿ ಪ್ರಧಾನಿ, ರಾಷ್ಟ್ರಪತಿ, ಸಿಬಿಐ ಹಾಗೂ ಕೇಂದ್ರ ಕಾರ್ಮಿಕ ಇಲಾಖೆಗೆ ದೂರು ನೀಡುತ್ತೇವೆ” ಎಂದು ಮೋಹನ್ ದಾಸರಿ ಹೇಳಿದರು.

ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರದ ಉಪಾಧ್ಯಕ್ಷರಾದ ಬಿ.ಟಿ.ನಾಗಣ್ಣ ಮಾತನಾಡಿ, “ಇಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕುವುದರ ಜೊತೆಗೆ, ಕಾರ್ಮಿಕರಿಗೆ ಮಾತ್ರ ಸೀಮಿತವಾಗಿರುವ ಹೃದ್ರೋಗ ವಿಭಾಗವನ್ನು ಎಲ್ಲ ಸಾರ್ವಜನಿಕರಿಗೆ ವಿಸ್ತರಿಸಬೇಕು. ರಾಜಾಜಿನಗರ, ಮಲ್ಲೇಶ್ವರ ಹಾಗೂ ಸುತ್ತಮುತ್ತಲಿನ ಜನರಿಗೆ ಇದರಿಂದ ಉಪಯೋಗವಾಗುತ್ತದೆ. ಆಸ್ಪತ್ರೆಯಲ್ಲಿರುವ ಸೌಲಭ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು. ಕೋವಿಡ್ ಆತಂಕವಿರುವ ಈ ಸಂದರ್ಭದಲ್ಲಿ ಆಸ್ಪತ್ರೆಗಳನ್ನು ಇನ್ನಷ್ಟು ಆಧುನೀಕರಣಗೊಳಿಸಲು ಮುಂದಾಗುವ ಬದಲು ಇರುವ ಸೌಲಭ್ಯಗಳನ್ನೂ ಕಿತ್ತುಕೊಳ್ಳುತ್ತಿರುವುದು ಖಂಡನೀಯ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ, ಪಕ್ಷದ ಮುಖಂಡರಾದ ರಾಜಶೇಖರ್ ದೊಡ್ಡಣ್ಣ, ದಿನೇಶ್ ಕುಮಾರ್, ಪ್ರಕಾಶ್ ನೆಡಂಗಡಿ, ಡಾ. ಸತೀಶ್ ಕುಮಾರ್, ಚನ್ನಬಸಪ್ಪ ಹಾಗೂ ಇತರೆ ಮುಖಂಡರು, ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

TAGGED:aapbengaluruESI Hospitalprotestಇಎಸ್‍ಐ ಆಸ್ಪತ್ರೆಎಎಪಿಪ್ರತಿಭಟನೆಬೆಂಗಳೂರು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

mobile ban
Bengaluru City

ರಾಜ್ಯದ 16 ವರ್ಷದೊಳಗಿನ ಮಕ್ಕಳಿಗೆ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ನಿಷೇಧ?

Public TV
By Public TV
4 minutes ago
hassan couple suicide
Crime

ಬದುಕು ಕೊಟ್ಟ ಅಪ್ಪ-ಅಮ್ಮನ ಬಗ್ಗೆ ನಿರ್ಲಕ್ಷ್ಯ; ತುತ್ತು ಊಟಕ್ಕೂ ಪರದಾಡಿ ವೃದ್ಧ ದಂಪತಿ ಆತ್ಮಹತ್ಯೆ

Public TV
By Public TV
28 minutes ago
daily horoscope dina bhavishya
Astrology

ದಿನ ಭವಿಷ್ಯ 23-02-2026

Public TV
By Public TV
1 hour ago
Bagalkote 4
Bagalkot

ಬಾಗಲಕೋಟೆ | ಕಲ್ಲು ತೂರಾಟ ನಡೆದ ಮಸೀದಿ ಎದುರೇ ಮತ್ತೆ ಶಿವಾಜಿ ಜಯಂತಿ ಆಚರಣೆಗೆ ನಿರ್ಧಾರ

Public TV
By Public TV
9 hours ago
Ahmedabad Modi Stadium
Cricket

ಸತತ 13 ಪಂದ್ಯ ಗೆಲ್ಲುವ ಕನಸು ಭಗ್ನ – ಸೋತರೂ ಮೊದಲ ಸ್ಥಾನದಲ್ಲಿದೆ ಭಾರತ

Public TV
By Public TV
9 hours ago
Ind vs Sa 2
Cricket

ಕಳಪೆ ಬೌಲಿಂಗ್‌, ಬ್ಯಾಟಿಂಗ್‌ಗೆ ಬೆಲೆತೆತ್ತ ಭಾರತ – ದಕ್ಷಿಣ ಆಫ್ರಿಕಾ ವಿರುದ್ಧ ಹೀನಾಯ ಸೋಲು

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?