Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜಾಜಿನಗರದ ಇಎಸ್‍ಐ ಹೃದ್ರೋಗ ವಿಭಾಗದ ವೈಫಲ್ಯಕ್ಕೆ ಭ್ರಷ್ಟಾಚಾರ ಕಾರಣ: ಎಎಪಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಜಾಜಿನಗರದ ಇಎಸ್‍ಐ ಹೃದ್ರೋಗ ವಿಭಾಗದ ವೈಫಲ್ಯಕ್ಕೆ ಭ್ರಷ್ಟಾಚಾರ ಕಾರಣ: ಎಎಪಿ

Bengaluru City

ರಾಜಾಜಿನಗರದ ಇಎಸ್‍ಐ ಹೃದ್ರೋಗ ವಿಭಾಗದ ವೈಫಲ್ಯಕ್ಕೆ ಭ್ರಷ್ಟಾಚಾರ ಕಾರಣ: ಎಎಪಿ

Public TV
Last updated: September 15, 2021 1:49 pm
Public TV
Share
2 Min Read
aap
SHARE

ಬೆಂಗಳೂರು: ರಾಜಾಜಿನಗರದ ಇಎಸ್‍ಐ ಆಸ್ಪತ್ರೆಯಲ್ಲಿರುವ ಜಯದೇವ ಹೃದ್ರೋಗ ಸಂಸ್ಥೆಯ ಕಾರ್ಡಿಯಾಲಜಿ ವಿಭಾಗದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಆಡಳಿತ ಮಂಡಳಿಯ ಹಣದ ದಾಹಕ್ಕೆ ನೂರಾರು ರೋಗಿಗಳು ಬಲಿಯಾಗಿದ್ದಾರೆ ಎಂದು ನಗರ ಎಎಪಿ ಅಧ್ಯಕ್ಷ ಮೋಹನ್ ದಾಸರಿ ಆಕ್ರೋಶ ವ್ಯಕ್ತಪಡಿಸಿದರು.

aap 1

ಕಾರ್ಡಿಯಾಲಜಿ ವಿಭಾಗವನ್ನು ಬನ್ನೇರುಘಟ್ಟಕ್ಕೆ ಸ್ಥಳಾಂತರ ಮಾಡುವುದನ್ನು ಖಂಡಿಸಿ ಆಮ್ ಆದ್ಮಿ ಪಾರ್ಟಿಯು ರಾಜಾಜಿನಗರದ ಇಎಸ್‍ಐ ಆಸ್ಪತ್ರೆ ಎದುರು ಬುಧವಾರ ಪ್ರತಿಭಟನೆ ನಡೆಸಿತು. ಇದನ್ನೂ ಓದಿ: ಆಸ್ಪತ್ರೆಯಿಂದ ಜಯದೇವ ಹೃದ್ರೋಗ ಘಟಕ ಸ್ಥಳಾಂತರ- ಸುರೇಶ್ ಕುಮಾರ್ ಸ್ಪಷ್ಟನೆ

esi

ಪ್ರತಿಭಟನೆಯಲ್ಲಿ ಮಾತನಾಡಿದ ಬೆಂಗಳೂರು ನಗರ ಎಎಪಿ ಅಧ್ಯಕ್ಷ ಮೋಹನ್ ದಾಸರಿ, “ಇಎಸ್‍ಐಯಲ್ಲಿರುವ ಹೃದ್ರೋಗ ವಿಭಾಗದಲ್ಲಿ 50ಕ್ಕೂ ಹೆಚ್ಚು ವೆಂಟಿಲೇಟರ್ ಬೆಡ್‍ಗಳಿವೆ, ಅತ್ಯಾಧುನಿಕ ಸೌಲಭ್ಯಗಳಿವೆ. 15 ಸರ್ಜನ್‍ಗಳು, ನೂರಾರು ಸಿಬ್ಬಂದಿ ಅಲ್ಲಿಗೆ ನೇಮಕಗೊಂಡಿದ್ದಾರೆ. ಬೇರೆಲ್ಲ ಆಸ್ಪತ್ರೆಗಳಲ್ಲಿ ಬೆಡ್‍ಗಳು ಭರ್ತಿಯಾಗಿದ್ದರೂ ಕೂಡ ಇಲ್ಲಿ ಬೆಡ್‍ಗಳು ಖಾಲಿಯಿರಲು ಕಾರಣವೇನು ಎಂದು ನಾವು ಯೋಚಿಸಬೇಕು. ಕಾರ್ಡಿಯಾಲಜಿ ವಿಭಾಗದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಖಾಸಗಿ ಆಸ್ಪತ್ರೆಗಳೊಂದಿಗೆ ಅಕ್ರಮ ಒಳ ಒಪ್ಪಂದ ಮಾಡಿಕೊಂಡಿರುವ ಇಲ್ಲಿನ ಅಧಿಕಾರಿಗಳು ಉದ್ದೇಶಪೂರ್ವಕವಾಗಿ ಆಸ್ಪತ್ರೆಯನ್ನು ಹಾಳುಗೆಡವುತ್ತಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.  ಇದನ್ನೂ ಓದಿ: ಅಂಗಾಂಗಗಳನ್ನು ದಾನ ಮಾಡಿ – ಡೆತ್‍ನೋಟ್ ಬರೆದು ಉಡುಪಿಯ ಬಿಜೆಪಿ ನಾಯಕಿ ಆತ್ಮಹತ್ಯೆ

2011-12ರಲ್ಲಿ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯು ರಾಜಾಜಿನಗರದ ಇಎಸ್‍ಐ ಆಸ್ಪತ್ರೆಯೊಂದಿಗೆ ಎಂಒಯು ಮಾಡಿಕೊಂಡಿದೆ. ಆ ಪ್ರಕಾರ ಇಎಸ್‍ಐ ಆಸ್ಪತ್ರೆಯಲ್ಲಿ ವಾರ್ಷಿಕ 15 ಕೋಟಿ ರೂ. ಮೊತ್ತದ ವಹಿವಾಟು ನಡೆಯಬೇಕು ಎಂದು ಗುರಿ ನಿಗದಿ ಪಡಿಸಲಾಗಿದೆ. ಈ ರೀತಿಯ ಒಪ್ಪಂದವು ಆರೋಗ್ಯ ಇಲಾಖೆಯ ವ್ಯಾಪಾರಿ ಪ್ರವೃತ್ತಿಯನ್ನು ತೋರಿಸುತ್ತದೆ. ಚಿಕಿತ್ಸೆಯನ್ನು ಸೇವೆಯನ್ನು ಪರಿಗಣಿಸುವ ಬದಲು ವ್ಯಾಪಾರವೆಂದು ಸರ್ಕಾರವೇ ಪರಿಗಣಿಸಿರುವುದು ನಾಚಿಕೆಗೇಡು. ಜಯದೇವ ಆಸ್ಪತ್ರೆಯೊಂದಿಗಿನ ಒಪ್ಪಂದ ನವೆಂಬರ್‍ನಲ್ಲಿ ಅಂತ್ಯವಾದ ನಂತರ ಖಾಸಗಿ ಆಸ್ಪತ್ರೆ ಜೊತೆ ಒಪ್ಪಂದಕ್ಕೆ ಸಿದ್ಧತೆ ನಡೆಸಲಾಗುತ್ತಿರುವುದು ಖಂಡನೀಯ. ಇಎಸ್‍ಐ ಆಸ್ಪತ್ರೆಯಲ್ಲಿ ನಡೆಯುತ್ತಿರುವ ಎಲ್ಲ ಅಕ್ರಮಗಳಿಗೆ ಇಲ್ಲಿನ ಆಡಳಿತ ಮಂಡಳಿ ನೇರ ಕಾರಣ. ಮಂಡಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಆಗ್ರಹಿಸಿ ಪ್ರಧಾನಿ, ರಾಷ್ಟ್ರಪತಿ, ಸಿಬಿಐ ಹಾಗೂ ಕೇಂದ್ರ ಕಾರ್ಮಿಕ ಇಲಾಖೆಗೆ ದೂರು ನೀಡುತ್ತೇವೆ” ಎಂದು ಮೋಹನ್ ದಾಸರಿ ಹೇಳಿದರು.

ಆಮ್ ಆದ್ಮಿ ಪಾರ್ಟಿಯ ಬೆಂಗಳೂರು ನಗರದ ಉಪಾಧ್ಯಕ್ಷರಾದ ಬಿ.ಟಿ.ನಾಗಣ್ಣ ಮಾತನಾಡಿ, “ಇಲ್ಲಿನ ಅಕ್ರಮಗಳಿಗೆ ಕಡಿವಾಣ ಹಾಕುವುದರ ಜೊತೆಗೆ, ಕಾರ್ಮಿಕರಿಗೆ ಮಾತ್ರ ಸೀಮಿತವಾಗಿರುವ ಹೃದ್ರೋಗ ವಿಭಾಗವನ್ನು ಎಲ್ಲ ಸಾರ್ವಜನಿಕರಿಗೆ ವಿಸ್ತರಿಸಬೇಕು. ರಾಜಾಜಿನಗರ, ಮಲ್ಲೇಶ್ವರ ಹಾಗೂ ಸುತ್ತಮುತ್ತಲಿನ ಜನರಿಗೆ ಇದರಿಂದ ಉಪಯೋಗವಾಗುತ್ತದೆ. ಆಸ್ಪತ್ರೆಯಲ್ಲಿರುವ ಸೌಲಭ್ಯಗಳ ಬಗ್ಗೆ ಜನರಿಗೆ ಮಾಹಿತಿ ನೀಡಬೇಕು. ಕೋವಿಡ್ ಆತಂಕವಿರುವ ಈ ಸಂದರ್ಭದಲ್ಲಿ ಆಸ್ಪತ್ರೆಗಳನ್ನು ಇನ್ನಷ್ಟು ಆಧುನೀಕರಣಗೊಳಿಸಲು ಮುಂದಾಗುವ ಬದಲು ಇರುವ ಸೌಲಭ್ಯಗಳನ್ನೂ ಕಿತ್ತುಕೊಳ್ಳುತ್ತಿರುವುದು ಖಂಡನೀಯ ಎಂದು ಹೇಳಿದರು.

ಪ್ರತಿಭಟನೆಯಲ್ಲಿ ಎಎಪಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ. ಸದಂ, ಪಕ್ಷದ ಮುಖಂಡರಾದ ರಾಜಶೇಖರ್ ದೊಡ್ಡಣ್ಣ, ದಿನೇಶ್ ಕುಮಾರ್, ಪ್ರಕಾಶ್ ನೆಡಂಗಡಿ, ಡಾ. ಸತೀಶ್ ಕುಮಾರ್, ಚನ್ನಬಸಪ್ಪ ಹಾಗೂ ಇತರೆ ಮುಖಂಡರು, ನೂರಾರು ಕಾರ್ಯಕರ್ತರು ಭಾಗವಹಿಸಿದ್ದರು.

TAGGED:aapbengaluruESI Hospitalprotestಇಎಸ್‍ಐ ಆಸ್ಪತ್ರೆಎಎಪಿಪ್ರತಿಭಟನೆಬೆಂಗಳೂರು
Share This Article
Facebook Whatsapp Whatsapp Telegram

Cinema news

ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories
TVK Vijay
ಅಫಿಡವಿಟ್‌ನಲ್ಲಿ 105 ಕೋಟಿ ವ್ಯತ್ಯಾಸ – ನಾಮಪತ್ರ ತಿರಸ್ಕಾರ ಆತಂಕದಲ್ಲಿ ವಿಜಯ್‌
Cinema Court Latest Main Post National
Maharashtra Man Arrest
ಮಹಾರಾಷ್ಟ್ರ ‘ಲವ್ ಟ್ರ್ಯಾಪ್’ ಸಂತ್ರಸ್ತೆ ಆತ್ಮಹತ್ಯೆಗೆ ಯತ್ನ – ಮತ್ತೋರ್ವ ಆರೋಪಿ ಅಂದರ್
Cinema Latest National Top Stories

You Might Also Like

AS Ponnanna
Districts

ಕೊಡಗಿನ ಹೋಂ ಸ್ಟೇಯಲ್ಲಿ ವಿದೇಶಿ ಮಹಿಳೆ ರೇಪ್ ಆರೋಪ – ಇಬ್ಬರನ್ನು ಬಂಧಿಸಲಾಗಿದೆ: ಪೊನ್ನಣ್ಣ

Public TV
By Public TV
15 minutes ago
Nikhil Kumaraswamy
Bengaluru City

ಪಕ್ಷ ಕಟ್ಟಲು ಕಾರ್ಯಕರ್ತರು ಸಿದ್ಧರಿದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್ ಕುಮಾರಸ್ವಾಮಿ

Public TV
By Public TV
20 minutes ago
Delhi Police
Crime

ಹಿರಿಯ ಕಂದಾಯ ಅಧಿಕಾರಿ ಮಗಳ ಮೇಲೆ ಅತ್ಯಾಚಾರ ಎಸಗಿ ಹತ್ಯೆ – ಮನೆಗೆಲಸದವನ ಮೇಲೆ ಶಂಕೆ

Public TV
By Public TV
36 minutes ago
Jayanagar Escape Case
Bengaluru City

ಜಿಮ್ ಟ್ರೈನರ್‌ನನ್ನು ಪ್ರೀತಿಸಿ, ಮದ್ವೆಯಾದವ್ಳು ಪರಾರಿ – ಅಣ್ಣನ ಜೊತೆಯೇ ತಂಗಿ ಓಡಿಹೋದ್ಳು: ಪತಿ ಅಳಲು

Public TV
By Public TV
1 hour ago
lokayukta officials arrest two policemen for accepting bribe in bagalkote badami
Bagalkot

ಲಂಚಕ್ಕೆ ಕೈಯೊಡ್ಡಿ ರೆಡ್‌ಹ್ಯಾಂಡ್ ಆಗಿ `ಲೋಕಾ’ ಬಲೆಗೆ ಬಿದ್ದ ಪಿಎಸ್‌ಐ

Public TV
By Public TV
1 hour ago
Kiren Rijiju
Latest

ʻಮೋದಿ ಟೆರರಿಸ್ಟ್ʼ ಎಂದ ಖರ್ಗೆ ವಿರುದ್ಧ ಚುನಾವಣಾ ಆಯೋಗದ ಮೆಟ್ಟಿಲೇರಿದ ಬಿಜೆಪಿ ನಿಯೋಗ

Public TV
By Public TV
1 hour ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?