ನವದೆಹಲಿ: ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್ ಮುನಿಯಪ್ಪ ಅವರು (K.H. Muniyappa) ನವದೆಹಲ್ಲಿ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಅವರನ್ನು ಭೇಟಿಯಾಗಿದ್ದಾರೆ. ಬಳಿಕ, ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಕೈಗಾರಿಕೆ ಬೇಡಿಕೆ ಆಧಾರಿತ ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಮಂಜೂರು ಮಾಡುವಂತೆ ಮನವಿ ಮಾಡಿದ್ದಾರೆ.
Advertisement
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನಲ್ಲಿ ಉದ್ಯಮ ಪೋರ್ಟಲ್ ಅಡಿಯಲ್ಲಿ 45,000 MSME ಘಟಕಗಳು ನೋಂದಣಿಯಾಗಿದ್ದು, ಅಂದಾಜು ನಾಲ್ಕು ಲಕ್ಷ ಜನರಿಗೆ ಉದ್ಯೋಗಾವಕಾಶಗಳನ್ನು ಒದಗಿಸುತ್ತಿವೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯು ನುರಿತ ಮತ್ತು ಕೌಶಲ್ಯ ರಹಿತ ಯುವಕರನ್ನು ಒಳಗೊಂಡಂತೆ ಗಮನಾರ್ಹ ಕಾರ್ಯಪಡೆಯನ್ನು ಹೊಂದಿದೆ ಎಂದು ಕೇಂದ್ರ ಸಚಿವರ ಗಮನಕ್ಕೆ ತಂದಿದ್ದಾರೆ.
Advertisement
Advertisement
ಬೇಡಿಕೆ ಆಧಾರಿತ ಕೌಶಲ್ಯ ತರಬೇತಿ ಕಾರ್ಯಕ್ರಮಗಳ ಮೂಲಕ ಈ ಉದ್ಯಮಗಳಲ್ಲಿ ಪರಿಣಾಮಕಾರಿಯಾಗಿ ಉದ್ಯೋಗ ಮಾಡಬಹುದು. ಅಂತಹ ತರಬೇತಿಯನ್ನು ನೀಡುವ ಮೂಲಕ, ನಾವು ಉದ್ಯಮದ ಅವಶ್ಯಕತೆಗಳು ಮತ್ತು ಲಭ್ಯವಿರುವ ಮಾನವ ಸಂಪನ್ಮೂಲಗಳ ನಡುವಿನ ಅಂತರವನ್ನು ಕಡಿಮೆ ಮಾಡಬಹುದಾಗಿದೆ ಎಂದು ಚರ್ಚಿಸಿದ್ದಾರೆ.
Advertisement
ಈ ನಿಟ್ಟಿನಲ್ಲಿ ದೇವನಹಳ್ಳಿ ತಾಲೂಕಿಗೆ ಎನ್ಎಸ್ಐಸಿ ತಾಂತ್ರಿಕ ಸೇವಾ ಕೇಂದ್ರ/ಬಹು ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಮಂಜೂರು ಮಾಡುವಂತೆ ವಿನಂತಿಸಿದರು. ರಸ್ತೆ, ವಿದ್ಯುತ್, ನೀರು ಸರಬರಾಜು ಸೇರಿದಂತೆ ಅಗತ್ಯವಿರುವ ಭೂಮಿ ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಿದೆ. ಬಹು ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆಗೆ ಅನುಕೂಲವಾಗುವಂತೆ ಈ ಯೋಜನೆಗೆ ಶೀಘ್ರವೇ ಮಂಜೂರಾತಿ ನೀಡಿಲು ಸಚಿವರಲ್ಲಿ ಮನವಿ ಮಾಡಿದ್ದಾರೆ.