ಆತನ ಮುಖ ನೋಡಲು ಇಷ್ಟವಿಲ್ಲ, ಸಭೆಗೂ ಬರಲ್ಲ: ಈಶ್ವರಪ್ಪ

Public TV
1 Min Read
eshwarappa 2

ಶಿವಮೊಗ್ಗ: ಆ ಅಯೋಗ್ಯ ಇರುವವರೆಗೆ ಯಾವುದೇ ಸಭೆಗೆ ಬರೋದಿಲ್ಲ ಎಂದು ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ವೀಕ್ಷಣೆಗೆ ಬಂದಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್ ಈಶ್ವರಪ್ಪ ಅವರು ಹರಿಹಾಯ್ದಿದ್ದಾರೆ.

ಇಂದು ನಗರದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ವೀಕ್ಷಣೆಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಈಶ್ವರಪ್ಪ ಅವರು ತೆರಳಿ ಪರಿಶೀಲನೆ ನಡೆಸಿದರು. ಈ ವೇಳೆ ಸಂಸದ ರಾಘವೇಂದ್ರ ಅವರು ಸಚಿವ ಈಶ್ವರಪ್ಪ ಅವರಿಗೆ ಫೋನ್ ಕರೆ ಮಾಡಿ ನಗರದ ವೈದ್ಯಕೀಯ ಸಂಸ್ಥೆಯಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬರುವಂತೆ ಆಹ್ವಾನಿಸಿದ್ದಾರೆ. ಸಂಸದರೊಂದಿಗೆ ಮಾತನಾಡುತ್ತಿದ್ದ ವೇಳೆ ಸಚಿವರು ಆ ಅಯೋಗ್ಯ ವೈದ್ಯಕೀಯ ಸಂಸ್ಥೆಯ ನಿರ್ದೇಶಕ ಡಾ. ಲೇಪಾಕ್ಷಿ ನಿರ್ದೇಶಕನ ಹುದ್ದೆಯಲ್ಲಿ ಇರುವವರೆಗೆ ನಾನು ವೈದ್ಯಕೀಯ ಸಂಸ್ಥೆಯ ಯಾವುದೇ ಕಾರ್ಯಕ್ರಮ, ಸಭೆಯಲ್ಲಿ ಭಾಗವಹಿಸುವುದಿಲ್ಲ ಎಂದು ಕಿಡಿಕಾರಿದರು.

smg smart city eshwarappa

ಆತನ ಮುಖ ನೋಡುವುದಕ್ಕೂ ನನಗೆ ಇಷ್ಟವಿಲ್ಲ. ಆ ಅಯೋಗ್ಯನನ್ನು ಮೊದಲು ತೆಗೆದು ಹಾಕು. ಆ ಮೇಲೆ ನೀನು ಕರೆಯುವ ವೈದ್ಯಕೀಯ ಸಂಸ್ಥೆಯ ಎಲ್ಲಾ ಕಾರ್ಯಕ್ರಮ, ಸಭೆಯಲ್ಲಿ ಭಾಗವಹಿಸುತ್ತೇನೆ ಎಂದು ಖಾರವಾಗಿಯೇ ಪ್ರತಿಕ್ರಿಯಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಈಶ್ವರಪ್ಪ ಹಾಗೂ ವೈದ್ಯಕೀಯ ಸಂಸ್ಥೆಯ ನಿರ್ದೇಶಕ ಡಾ. ಲೇಪಾಕ್ಷಿ ನಡುವೆ ಮನಸ್ತಾಪವಿದೆ ಎಂಬುದು ಸಾಬೀತಾದಂತಾಗಿದೆ. ಅಷ್ಟಕ್ಕು ಜಿಲ್ಲಾ ಉಸ್ತುವಾರಿ ಸಚಿವರಿಗೆ ಒಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡಿಸಲು ಸಾಧ್ಯವಾಗುತ್ತಿಲ್ಲವಾ ಎಂಬ ಅನುಮಾನ ಸಹ ಘಟನೆ ಬಳಿಕ ನಾಗರೀಕರಲ್ಲಿ ಕಾಡಲಾರಂಭಿಸಿದೆ.

Share This Article
Leave a Comment

Leave a Reply

Your email address will not be published. Required fields are marked *