ತುಮಕೂರು: ಶ್ರೀ ಶಿವಕುಮಾರ ಸ್ವಾಮೀಜಿ ಶಿವೈಕ್ಯಗೊಂಡ ಹಿನ್ನೆಲೆಯಲ್ಲಿ ಕ್ಯಾತಸಂದ್ರ ರೈಲ್ವೆ ನಿಲ್ದಾಣದ ಬಳಿ ಪ್ರತಿಯೊಂದು ರೈಲುಗಳು ಸ್ಟಾಪ್ ನೀಡುತ್ತಿವೆ.
ಮಠದ ಸಮೀಪವೇ ಕ್ಯಾತಸಂದ್ರ ರೈಲ್ವೆ ನಿಲ್ದಾಣ ಇದೆ. ಈ ಹಿಂದೆ ಪ್ಯಾಸೆಂಜರ್ ರೈಲು ಮಾತ್ರ ಕ್ಯಾತಸಂದ್ರ ರೈಲು ನಿಲ್ದಾಣದಲ್ಲಿ ನಿಂತು ಮುಂದೆ ಸಾಗುತ್ತಿತ್ತು. ಆದರೆ ಈಗ ಲಕ್ಷಾಂತರ ಭಕ್ತರು ರೈಲಿನಲ್ಲಿ ಶ್ರೀಗಳ ದರ್ಶನಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕೆ ಕ್ಯಾತಸಂದ್ರದ ಬಳಿ ಸ್ಟಾಪ್ ನೀಡಲು ರೈಲ್ವೆ ಇಲಾಖೆ ವ್ಯವಸ್ಥೆ ಮಾಡಿದೆ.
ಅಷ್ಟೇ ಅಲ್ಲದೇ ಮಠದ ಬಳಿ ಗಂಟೆಗೆ 20 ಕಿ.ಮೀ ವೇಗದಲ್ಲಿ ಮಾತ್ರ ರೈಲು ಸಂಚಾರ ಮಾಡುತ್ತಿದೆ. ಲಕ್ಷಾಂತರ ಭಕ್ತರು ರೈಲ್ವೆ ಹಳಿ ಕ್ರಾಸ್ ಮಾಡುತ್ತಿರುವ ಕಾರಣ ಮಠದ ಬಳಿ ರೈಲು ನಿಧಾನವಾಗಿ ಚಲಿಸುತ್ತಿದೆ. ಭಕ್ತರು ರೈಲ್ವೆ ಹಳಿ ದಾಟುವ ಜಾಗದಲ್ಲೂ ರೈಲ್ವೆ ಪೊಲೀಸರು ಭದ್ರತೆ ನಿಯೋಜನೆ ಮಾಡಿದ್ದಾರೆ.
ಸುಮಾರು 60 ಜನ ರೈಲ್ವೆ ರಕ್ಷಣಾ ಸಿಬ್ಬಂದಿಯಿಂದ ಮಠದ ಬಳಿಯಿರುವ ರೈಲ್ವೆ ಹಳಿ ಬಳಿ ಭದ್ರತೆ ನೀಡುತ್ತಿದ್ದು, ರೈಲು ಬರುವಾಗ ಯಾರಾದರೂ ಹಳಿ ದಾಟುವಾಗ ಅವಸರ ಮಾಡಬಹುದೆಂದು ಮುನ್ನೆಚ್ಚರಿಕಾ ಕ್ರಮವಾಗಿ ರೈಲ್ವೆ ಹಳಿ ಪಕ್ಕದಲ್ಲೇ ರೈಲ್ವೆ ಪೊಲೀಸರು ರಕ್ಷಣೆಗೆ ನಿಂತಿದ್ದಾರೆ.
https://www.youtube.com/watch?v=N87G5rvOTYs
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv