Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Court

ಜೈಲುಗಳಲ್ಲಿ ಜಾತಿ ಆಧಾರಿತ ತಾರತಮ್ಯ ಅಸಾಂವಿಧಾನಿಕ – ತಾರತಮ್ಯ ನಡೆದರೆ ಆಯಾ ರಾಜ್ಯಗಳೇ ಹೊಣೆ: ಸುಪ್ರೀಂ

Public TV
Last updated: October 3, 2024 4:09 pm
Public TV
Share
2 Min Read
SUPREME COURT
SHARE

– ರಿಜಿಸ್ಟ್ರಾರ್‌ಗಳಲ್ಲಿನ ಜಾತಿ ಕಾಲಂ ತೆಗೆದು ಹಾಕಬೇಕೆಂದ ಕೋರ್ಟ್‌

ನವದೆಹಲಿ: ದೇಶದ ಜೈಲುಗಳಲ್ಲಿ (Jail_ ನಡೆಯುತ್ತಿರುವ ಜಾತಿ ಆಧಾರಿತ ತಾರತಮ್ಯ ಅಸಾಂವಿಧಾನಿಕ, ಈ ತಾರತಮ್ಯವನ್ನು ಸಹಿಸಲಾಗುವುದಿಲ್ಲ. ಒಂದು ವೇಳೆ ಜಾತಿ ಆಧಾರಿತ ತಾರತಮ್ಯ ಜೈಲುಗಳಲ್ಲಿ ನಡೆದರೇ ಆಯಾ ರಾಜ್ಯಗಳೇ ಹೊಣೆ ಎಂದು ಸುಪ್ರೀಂ ಕೋರ್ಟ್ (Supreme Court) ಕಟ್ಟುನಿಟ್ಟಿನ ಆದೇಶ ನೀಡಿದೆ.

ಈ ಬಗ್ಗೆ ವಿಚಾರಣೆ ನಡೆಸಿದ ಸಿಜೆಐ ಡಿ.ವೈ ಚಂದ್ರಚೂಡ್ (DY Chandrachud) ನೇತೃತ್ವದ ತ್ರಿಸದಸ್ಯ ಪೀಠ, ಕೆಳವರ್ಗದವರಿಗೆ ಸ್ವಚ್ಛತೆ ಮತ್ತು ಕಸಗುಡಿಸುವ ಕಾರ್ಯಗಳನ್ನು ವಹಿಸುವ ಮೂಲಕ ನೇರವಾಗಿ ತಾರತಮ್ಯವನ್ನುಂಟುಮಾಡುತ್ತದೆ (Caste Based Discrimination). ಉನ್ನತ ಜಾತಿಯವರಿಗೆ ಅಡುಗೆ ಕೆಲಸ ನಿಯೋಜಿಸುವ ಆರೋಪ ಕೇಳಿಬಂದಿದೆ ಇದು ಆರ್ಟಿಕಲ್-15ರ ಉಲ್ಲಂಘನೆಯಾಗಿದೆ ಎಂದು ಹೇಳಿತು. ಇದನ್ನೂ ಓದಿ: ನವರಾತ್ರಿ ವಿಶೇಷ – 1 | ಕೋಲ್ಕತ್ತಾದ ಕುರ್ಮಾತುಲಿ ಪಾರ್ಕ್‌ ದುರ್ಗಾ ಪೆಂಡಾಲ್‌ ಮಹತ್ವದ ನಿಮಗೆ ಗೊತ್ತೆ?

SUPREME COURT

ಇಂತಹ ಆಚರಣೆ ತಡೆಯಲು ಜೈಲು ಕೈಪಿಡಿ ನಿಬಂಧನೆಗಳನ್ನು (Jail Rules) ಪರಿಷ್ಕರಿಸವ ಅಗತ್ಯವಿದೆ. ಈ ನಿಟ್ಟಿನಲ್ಲಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಜೈಲು ಕೈಪಿಡಿ ನಿಬಂಧನೆಗಳನ್ನು ಬದಲಿಸಬೇಕು. ಅಪರಾಧಿ ಅಥವಾ ಅಂಡರ್ ಟ್ರಯಲ್ ರಿಜಿಸ್ಟ್ರಾರ್‌ಗಳಲ್ಲಿನ ಜಾತಿ ಕಾಲಂ ಅನ್ನು ತೆಗೆದು ಹಾಕಬೇಕು ಎಂದು ಹೇಳಿತು. ನ್ಯಾಯಾಲಯದ ಮುಂದೆ ಈ ತೀರ್ಪಿನ ಪಾಲನೆ ವರದಿಯನ್ನು ರಾಜ್ಯಗಳು ಸಲ್ಲಿಸಬೇಕು ಎಂದು ಕೋರ್ಟ್ ಸೂಚನೆ ನೀಡಿದೆ. ಇದನ್ನೂ ಓದಿ: ಹತ್ರಾಸ್‌ನ ಸತ್ಸಂಗದಲ್ಲಿ ಕಾಲ್ತುಳಿತದಿಂದ 121 ಸಾವು ಪ್ರಕರಣ; 3,200 ಪುಟಗಳ ಈ ಚಾರ್ಜ್‌ ಶೀಟ್‌ ಸಲ್ಲಿಕೆ

DY Chandrachud

ಕೈದಿಗಳಿಗೆ ಘನತೆ ನೀಡದಿರುವುದು ವಸಾಹತುಶಾಹಿ ಅವಧಿಯ ಕುರುಹು, ಅಲ್ಲಿ ಅವರನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಯಿತು. ಕೈದಿಗಳನ್ನು ಮಾನವೀಯವಾಗಿ ನಡೆಸಿಕೊಳ್ಳಬೇಕು ಮತ್ತು ಜೈಲು ವ್ಯವಸ್ಥೆಗೆ ಕೈದಿಗಳ ಮಾನಸಿಕ ಮತ್ತು ದೈಹಿಕ ಸ್ಥಿತಿಯ ಬಗ್ಗೆ ತಿಳಿದಿರಬೇಕು ಎಂದು ಸಂವಿಧಾನವು ಆದೇಶಿಸುತ್ತದೆ. ಜೈಲು ಶಿಕ್ಷೆಗೆ ಒಳಗಾಗುವ ಯಾವುದೇ ವ್ಯಕ್ತಿಯು ಅವನ ಜಾತಿ ಆಧಾರದ ಕೆಲಸಗಳನ್ನು ಮಾಡದ ಹೊರತು ಕೀಳು ಕೆಲಸವನ್ನು ಮಾಡುವುದಿಲ್ಲ ಎನ್ನುವುದಿಲ್ಲ ಎನ್ನುವ ಅಂಶವನ್ನು ಗಮಸಿತು. ಅಂತೆಯೇ ಹರಿ ಅಥವಾ ಚಂಡಾಲ್ ಜಾತಿಗಳಿಂದ ಕಸಗುಡಿಸುವವರನ್ನು ಆಯ್ಕೆ ಮಾಡಬೇಕು ಎಂದು ಹೇಳುವ ಜೈಲು ಕೈಪಿಡಿ ನಿಯಮಗಳನ್ನು ಕೋರ್ಟ್ ಟೀಕಿಸಿತು.

ಇಂತಹ ವಿಧಾನವು ಸಾಧಾರಣ ಸಮಾನತೆಗೆ ಸಂಪೂರ್ಣವಾಗಿ ವಿರುದ್ಧವಾಗಿದೆ. ಇಂತಹ ಅಭ್ಯಾಸಗಳು ಕಾರಾಗೃಹಗಳಲ್ಲಿ ಕಾರ್ಮಿಕರ ಅನ್ಯಾಯದ ವಿಭಜನೆಗೆ ಕಾರಣವಾಗುತ್ತವೆ. ಜಾತಿ ಇತ್ಯಾದಿಗಳ ಆಧಾರದ ಮೇಲೆ ಕಾರ್ಮಿಕ ನಿಯೋಜನೆಯ ಅನುಮತಿಸಲಾಗುವುದಿಲ್ಲ.
ಒಳಚರಂಡಿ ಟ್ಯಾಂಕರ್‌ಗಳನ್ನು ಶುಚಿಗೊಳಿಸುವಂತಹ ಅಪಾಯಕಾರಿ ಕೆಲಸಗಳನ್ನು ಯಾವ ಕೈದಿಗಳೂ ಮಾಡಬಾರದು ಎಂದು ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ. ಇದನ್ನೂ ಓದಿ: ದೆಹಲಿ ವಾಯು ಮಾಲಿನ್ಯ – ವಾಯು ಗುಣಮಟ್ಟ ನಿರ್ವಹಣಾ ಆಯೋಗಕ್ಕೆ ಸುಪ್ರೀಂ ಛೀಮಾರಿ

ಜೈಲು ಬ್ಯಾರಕ್‌ಗಳಲ್ಲಿನ ಜಾತಿ ಆಧಾರಿತ ತಾರತಮ್ಯದ ಬಗ್ಗೆ ವ್ಯಾಪಕವಾಗಿ ವರದಿ ಮಾಡಿದ ಬಳಿಕ ಪತ್ರಕರ್ತೆ ಸುಕನ್ಯಾ ಶಾಂತಾ ಅವರು ಅರ್ಜಿ ಸಲ್ಲಿಸಿದ್ದರು. ಹಲವಾರು ರಾಜ್ಯಗಳಲ್ಲಿನ ಜೈಲು ಕೈಪಿಡಿಗಳು ಜಾತಿ ತಾರತಮ್ಯವನ್ನು ಪ್ರೋತ್ಸಾಹಿಸುತ್ತವೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು. ಉತ್ತರ ಪ್ರದೇಶ, ಪಶ್ಚಿಮ ಬಂಗಾಳ, ಮಧ್ಯಪ್ರದೇಶ, ಆಂಧ್ರಪ್ರದೇಶ, ತೆಲಂಗಾಣ, ಪಂಜಾಬ್, ಒಡಿಶಾ, ಜಾರ್ಖಂಡ್, ಕೇರಳ, ತಮಿಳುನಾಡು ಮತ್ತು ಮಹಾರಾಷ್ಟ್ರದ ಜೈಲು ಕೈಪಿಡಿಗಳಲ್ಲಿ ಕಂಡುಬರುವ ತಾರತಮ್ಯದ ನಿಬಂಧನೆಗಳನ್ನು ರದ್ದುಗೊಳಿಸುವಂತೆ ಅರ್ಜಿಯಲ್ಲಿ ಕೋರಲಾಗಿತ್ತು. ಈ ಅರ್ಜಿ ಮೇರೆಗೆ ಕೋರ್ಟ್ ವಿಚಾರಣೆ ನಡೆಸಿತ್ತು.

TAGGED:Caste Based DiscriminationDY ChandraChudJail RulesPrison JobsSupreme Courtಜಾತಿಜೈಲುಡಿ.ವೈ ಚಂದ್ರಚೂಡ್ನವದೆಹಲಿಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema Updates

samantha
ಒಂದೇ ಕಾರ್ಯಕ್ರಮದಲ್ಲಿ ಕಾಣಿಸಕೊಂಡ ಮಾಜಿ ಅತ್ತೆ, ಸೊಸೆ – ಸಮಂತಾ ಮಾತಿಗೆ ಅಮಲಾ ಚಪ್ಪಾಳೆ
3 hours ago
KENISHA 1
ಕೆನಿಶಾಗೆ ಕೊಲೆ ಬೆದರಿಕೆ – ಆರತಿ ಸಮಸ್ಯೆಗೆ ನಾನು ಕಾರಣ ಆಗಿದ್ರೆ ಕೋರ್ಟ್‌ ಮುಂದೆ ನಿಲ್ಲಿಸಿ ಎಂದ ಗಾಯಕಿ
4 hours ago
janhvi kapoor 1
ಕಾನ್ ಫೆಸ್ಟಿವಲ್| ರೆಡ್ ಕಾರ್ಪೆಟ್‌ನಲ್ಲಿ ಜಾನ್ವಿ ವಾಕ್ – ‘ನನ್ನ ದೇವತೆ’ ಎಂದ ಬಾಯ್‌ಫ್ರೆಂಡ್
4 hours ago
Tamanna Bhatia
Video | ತಮನ್ನಾಗೆ 6.20 ಕೋಟಿ – ನಟಿ ತಾರಾ ಬೇಸರ
5 hours ago

You Might Also Like

Lucknow Super Gaints
Cricket

ಆಟಕ್ಕುಂಟು ಲೆಕ್ಕಕ್ಕಿಲದ ಪಂದ್ಯದಲ್ಲಿ ರೋಷಾವೇಶ – ಗುಜರಾತ್‌ ವಿರುದ್ಧ ಲಕ್ನೋಗೆ 33 ರನ್‌ಗಳ ಭರ್ಜರಿ ಗೆಲುವು

Public TV
By Public TV
2 minutes ago
Shaurya Chakras
Latest

ಮೇಜರ್ ಆಶಿಶ್ ದಹಿಯಾ ಸೇರಿ 33 ಶೌರ್ಯ ಚಕ್ರ ಪ್ರಶಸ್ತಿ, 6 ಕೀರ್ತಿ ಚಕ್ರ ಪ್ರಶಸ್ತಿ ಪ್ರದಾನ

Public TV
By Public TV
21 minutes ago
IndiGo Flight 1
Latest

ಡೇಂಜರ್‌ನಲ್ಲಿದ್ದರೂ ದೆಹಲಿ-ಶ್ರೀನಗರ ಇಂಡಿಗೋ ವಿಮಾನಕ್ಕೆ ತನ್ನ ವಾಯುಸೀಮೆ ಬಳಸಲು ನಿರಾಕರಿಸಿದ ಪಾಕ್‌

Public TV
By Public TV
45 minutes ago
Dinesh Gundurao 1
Bengaluru City

ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧ ಮಾರಾಟ ಸರಿಯಲ್ಲ – ಜನೌಷಧಿ ಕೇಂದ್ರಗಳ ಸ್ಥಗಿತದ ಹಿಂದೆ ರಾಜಕೀಯ ಉದ್ದೇಶವಿಲ್ಲ – ಗುಂಡೂರಾವ್

Public TV
By Public TV
1 hour ago
Manohar Lal Khattar 1
Latest

ವಸತಿ ಹಂಚಿಕೆಯಲ್ಲಿ ಅಂಗವಿಕಲರಿಗೆ 4% ಮೀಸಲಾತಿ ಕಡ್ಡಾಯ: ಕೇಂದ್ರ ಸರ್ಕಾರ

Public TV
By Public TV
2 hours ago
Chalavadi Complaint To Governor
Bengaluru City

ಚಿತ್ತಾಪುರದಲ್ಲಿ ಛಲವಾದಿ ನಾರಾಯಣಸ್ವಾಮಿಗೆ ಘೇರಾವ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?