Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಓಕೆ ಎಂದ ಕೇರಳ ಸರ್ಕಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಓಕೆ ಎಂದ ಕೇರಳ ಸರ್ಕಾರ

Latest

ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಓಕೆ ಎಂದ ಕೇರಳ ಸರ್ಕಾರ

Public TV
Last updated: July 18, 2018 8:15 pm
Public TV
Share
3 Min Read
sabarimala temple 1515059214
SHARE

– 4 ಬಾರಿ ಅಭಿಪ್ರಾಯ ಬದಲಾಗಿದ್ದೇಕೆ ಎಂದು ಸುಪ್ರೀಂ ಪ್ರಶ್ನೆ
– ‘ಅಧಿಕಾರ ಬದಲಾದಂತೆ ಅಭಿಪ್ರಾಯಗಳೂ ಬದಲಾಗುತ್ತದೆ’
– ಸುಪ್ರೀಂ ಕೋರ್ಟ್ ಮುಂದೆ ಕೇರಳ ಸರ್ಕಾರ ಉತ್ತರ

ನವದೆಹಲಿ: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲಕ್ಕೆ ಮಹಿಳೆಯರ ಪ್ರವೇಶಕ್ಕೆ ಕೇರಳ ರಾಜ್ಯ ಸರ್ಕಾರ ಸಮ್ಮತಿ ಸೂಚಿಸಿದೆ. ಮಹಿಳೆಯರ ದೇಗುಲ ಪ್ರವೇಶದ ವಿಚಾರಕ್ಕೆ ಸಂಬಂಧಪಟ್ಟಂತೆ ಇಂದು ನಡೆದ ವಿಚಾರಣೆ ವೇಳೆ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಮುಂದೆ ತನ್ನ ಅಭಿಪ್ರಾಯ ತಿಳಿಸಿದೆ.

ಕೇರಳ ಸರ್ಕಾರ ನಾಲ್ಕನೇ ಬಾರಿ ತನ್ನ ನಿರ್ಧಾರವನ್ನು ಬದಲಾಯಿಸಿದೆಯಲ್ಲಾ ಎಂಬ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ದೀಪಕ್ ಮಿಶ್ರಾ ಪ್ರಶ್ನೆಗೆ ಉತ್ತರಿಸಿದ ಕೇರಳ ಸರ್ಕಾರದ ಪರ ವಕೀಲರು, ಅಧಿಕಾರ ಬದಲಾದಾಗ ಸರ್ಕಾರದ ನಿರ್ಧಾರಗಳೂ ಬದಲಾಗುತ್ತವೆ ಎಂದು ಹೇಳಿದರು.

ಶಬರಿಮಲೆ ದೇಗುಲದಲ್ಲಿ ದೇವರ ಆರಾಧನೆಗೆ ಎಲ್ಲರಿಗೂ ಸಮಾನವಾದ ಅಧಿಕಾರವಿದೆ. ಹೀಗಿದ್ದಾಗ ಯಾವ ಆಧಾರದಲ್ಲಿ ಪ್ರವೇಶ ನಿಷೇಧಿಸುತ್ತೀರಿ. ರಾಜ್ಯ ಸರ್ಕಾರದ ಈ ನಡೆ ಸಂವಿಧಾನ ವಿರೋಧಿ. ಜನ ಸಾಮಾನ್ಯರಿಗೆ ದೇಗುಲ ತೆರೆದಾಗ ಅಲ್ಲಿಗೆ ಎಲ್ಲರೂ ಹೋಗುವಂತಾಗಬೇಕು. ಇಲ್ಲಿನ ಆಡಳಿತ ವರ್ಗ ಮಹಿಳೆಯರಿಗೆ ನಿಷೇಧ ಹೇರುತ್ತಿರುವುದು ಯಾಕೆ ಎಂದು ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ನ್ಯಾ. ರೋಹಿಂಟನ್ ಫಾಲಿ ನಾರಿಮನ್, ನ್ಯಾ. ಎ.ಎಂ ಖಾನ್ವಿಲ್ಕರ್, ನ್ಯಾ. ಡಿವೈ ಚಂದ್ರಚೂಡ್ ಹಾಗೂ ನ್ಯಾ. ಇಂದು ಮಲ್ಹೋತ್ರಾ ಒಳಗೊಂಡ ಸಾಂವಿಧಾನಿಕ ಪೀಠ ಪ್ರಶ್ನಿಸಿತು.

Sabarimala

ಪ್ರಾರ್ಥನೆ ಸಲ್ಲಿಸುವಾಗ ಪುರುಷರಿಗುವಷ್ಟೇ ಸಮಾನತೆ ಮಹಿಳೆಯರಿಗೂ ಇರುತ್ತದೆ. ಈ ಅವಕಾಶ ತಡೆಯಲು ಕಾನೂನಿನಲ್ಲಿ ಯಾವುದೇ ಅವಕಾಶವಿಲ್ಲ ಎಂದು ನ್ಯಾ. ಡಿ.ವೈ.ಚಂದ್ರಚೂಡ್ ಹೇಳಿದರು.

ಮಹಿಳೆಯರ ಋತುಸ್ರಾವದ ಕಾಲಘಟ್ಟ ಎಂದು 10ರಿಂದ 50 ವರ್ಷದವರೆಗಿನ ಮಹಿಳೆಯರಿಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂಬ ಆಮಿಕಸ್ ಕ್ಯೂರಿ ಅಭಿಪ್ರಾಯಕ್ಕೆ ಸುಪ್ರೀಂ ಕೋರ್ಟ್, ಹೆಣ್ಣು ಮಕ್ಕಳಿಗೆ 10 ವರ್ಷಕ್ಕೂ ಮೊದಲೇ ಋತುಸ್ರಾವ ಆರಂಭವಾಗಬಹುದು. 50 ವರ್ಷದ ನಂತರವೂ ಇದು ಮುಂದುವರಿಯಬಹುದು ಎಂದು ಹೇಳಿದೆ. ದೇವಸ್ಥಾನ ಎನ್ನುವುದು ಯಾವತ್ತೂ ಖಾಸಗಿ ಸ್ವತ್ತಲ್ಲ. ಅದು ಸಾರ್ವಜನಿಕ ಆಸ್ತಿ. ಸಾರ್ವಜನಿಕ ಆಸ್ತಿಗೆ ಯಾರಿಗೆ ಯಾವಾಗ ಬೇಕಾದರೂ ಪ್ರವೇಶ ಮಾಡಬಹುದು ಎಂದು ಹೇಳಿದೆ.

ನಮಗೆ ಪೂಜೆ ಮಾಡಲು ಅವಕಾಶ ಬೇಡ, ನಮಗೆ ಪ್ರಾರ್ಥನೆ ಸಲ್ಲಿಸಲು ಅವಕಾಶ ಕಲ್ಪಿಸಿ ಎಂದು ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಅರ್ಜಿ ಸಲ್ಲಿಸಿದ ಹ್ಯಾಪಿ ಟು ಬ್ಲೀಡ್ ಸಂಘಟನೆ ಕೋರ್ಟ್ ಮುಂದೆ ವಾದ ಮಂಡಿಸಿತು.

supreme

ಶಬರಿಮಲೆ ದೇಗುಲದಲ್ಲಿ ಮಹಿಳೆಯರಿಗೂ ಪ್ರಾರ್ಥನೆಗೆ ಅವಕಾಶ ನೀಡಬೇಕೆನ್ನುವುದು ಸರ್ಕಾರದ ಅಭಿಪ್ರಾಯ ಎಂದು ಕೇರಳದ ಮುಜರಾಯಿ ಸಚಿವ ಕಡಕಂಪಳ್ಳಿ ಸುರೇಂದ್ರನ್ ಹೇಳಿದ್ದಾರೆ. ಇದಕ್ಕೆ ಸಂಬಂಧಿಸಿದ ಅಫಿಡವಿಟ್ ನಾವು ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದೇವೆ. ಸುಪ್ರೀಂ ಕೋರ್ಟ್ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಬೇಕು. ನ್ಯಾಯಾಲಯದ ಆದೇಶವನ್ನು ನಾವು ಪಾಲಿಸುತ್ತೇವೆ ಎಂದು ಹೇಳಿದ್ದಾರೆ.

ಏನಿದು ಪ್ರಕರಣ?: ಕೇರಳದ ಶಬರಿಮಲೆ ದೇವಾಲಯದಲ್ಲಿ 800 ವರ್ಷಗಳಿಂದ ನಡೆದು ಬಂದಿರುವ ಮಹಿಳೆಯರ ಪ್ರವೇಶ ನಿಷೇಧ ಆಚರಣೆಯನ್ನು ವಿರೋಧಿಸಿ ಇಂಡಿಯನ್ ಯಂಗ್ ಲಾಯರ್ಸ್ ಅಸೋಸಿಯೇಷನ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿತ್ತು. ಶಬರಿಮಲೆ ಅಯ್ಯಪ್ಪ ದೇವಾಲಯ ಪ್ರವೇಶಕ್ಕೆ 10 ರಿಂದ 50 ವರ್ಷಗಳ ಒಳಗಿನ ಮಹಿಳೆಯರಿಗೆ ಅನುಮತಿ ನೀಡುವಂತೆ ಕೇರಳ ರಾಜ್ಯ ಸರ್ಕಾರ, ದೇವಾಲಯ ಆಡಳಿತ ಮಂಡಳಿ, ಪತ್ತನಂತಿಟ್ಟ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಿತ್ತು.

sabarimalatemple 759

ಅರ್ಜಿದಾರರ ಪರ ಸಲಹೆಗಾರ ಪ್ರಕಾಶ್ ಗುಪ್ತಾ ಅವರು ನ್ಯಾಯಾಲಯಕ್ಕೆ ಮಾಹಿತಿ ನೀಡಿ, ಮಹಿಳೆಯರ ದೇವಾಲಯದ ಪ್ರವೇಶದ ಬಗ್ಗೆ ತಾರತಮ್ಯ ತೋರುವುದು ಹಿಂದೂ ಧರ್ಮದ ಭಾಗವಲ್ಲ. ಯಾವುದೇ ಮಹಿಳೆಯ ನೋಟದಿಂದ ಯಾರ ಬ್ರಹ್ಮಚರ್ಯದ ಮೇಲೂ ಪರಿಣಾಮ ಬೀರುವುದಿಲ್ಲ. ಅದ್ದರಿಂದ ಅಂತಹ ಆಚರಣೆಗಳಿಗೆ ಅರ್ಥವಿಲ್ಲ ಎಂದು ಹೇಳಿದ್ದಾರೆ.

ಸಂವಿಧಾನದ 14ನೇ ವಿಧಿ ಸಮಾನತೆಯ ಹಕ್ಕು. 15ನೇ ವಿಧಿ ಧರ್ಮ, ಜಾತಿ, ಲಿಂಗ ಅಥವಾ ಸ್ಥಳದ ಆಧಾರ ಮೇಲೆ ಅಸಮಾನತೆ ತೋರುವಂತಿಲ್ಲ. 17ನೇ ವಿಧಿ ಅಸ್ಪೃಶ್ಯತೆಯನ್ನು ಆಚರಣೆ ಮಾಡುವುದನ್ನು ನಿಷೇಧಿಸಿದೆ. ಕಳೆದ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಸುಪ್ರೀಂ ಕೋರ್ಟ್ ಈ ಅರ್ಜಿಯನ್ನು ಸಾಂವಿಧಾನಿಕ ಪೀಠಕ್ಕೆ ವರ್ಗಾಯಿಸಿತ್ತು.

TAGGED:EntrykeralaNew DelhiPILPublic TVSabarimale TempleSupreme Courtwomanಕೇರಳನವದೆಹಲಿಪಬ್ಲಿಕ್ ಟಿವಿಪಿಐಎಲ್ಪ್ರವೇಶಮಹಿಳೆಶಬರಿಮಲೆ ದೇವಾಲಯಸುಪ್ರೀಂ ಕೋರ್ಟ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ರಶ್ಮಿಕಾ, ವಿಜಯ್ ಮದುವೆಗೆ ಫೋನ್ ಬ್ಯಾನ್ – ವಿಡಿಯೋ ಚಿತ್ರೀಕರಣ ತಂಡದಿಂದಲೂ NDAಗೆ ಸಹಿ
Bollywood Cinema Latest Main Post
Rajanivasa
ʻರಾಜನಿವಾಸʼದಲ್ಲಿ ʻಕಾಂತಾರʼದ ಝಲಕ್‌ – ಕುತೂಹಲ ಹೆಚ್ಚಿಸಿದ ಟ್ರೇಲರ್‌!
Cinema Latest Sandalwood
salman khan salim khan
ಸಲ್ಮಾನ್‌ ಖಾನ್‌ ತಂದೆ ಸಲೀಂ ಖಾನ್‌ ಆಸ್ಪತ್ರೆಗೆ ದಾಖಲು
Bollywood Cinema Latest Main Post
Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories

You Might Also Like

PM Narendra Modis car diplomacy on display again as he rides with France President Macron in Mumbai
Latest

Car Diplomacy| ಮ್ಯಾಕ್ರನ್‌ ಜೊತೆ ಕಾರಿನಲ್ಲಿ ಮೋದಿ ಮಾತುಕತೆ

Public TV
By Public TV
5 minutes ago
PM Modi 3
Latest

ಭಾರತ, ಫ್ರಾನ್ಸ್ ಬಾಂಧವ್ಯ ಮತ್ತಷ್ಟು ಗಟ್ಟಿ – 20 ಒಪ್ಪಂದಗಳಿಗೆ ಸಹಿ ಹಾಕಿದ ಮೋದಿ

Public TV
By Public TV
13 minutes ago
Goods Train Derailment near ramanagar
Bengaluru City

ಬಿಡದಿ-ರಾಮನಗರ ಮಧ್ಯೆ ಹಳಿ ತಪ್ಪಿದ ಗೂಡ್ಸ್ ರೈಲು – ಬೆಂಗಳೂರು-ಮೈಸೂರು ರೈಲ್ವೆ ಸಂಚಾರದಲ್ಲಿ ವ್ಯತ್ಯಯ

Public TV
By Public TV
17 minutes ago
PM Narendramodi and Emmanuel Macron virtually inaugurated the Tata Airbus Light Helicopter Final Assembly Line facility at Vemagal in Kolar
Karnataka

ಕೋಲಾರದಲ್ಲಿ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣಾ ಘಟಕಕ್ಕೆ ಚಾಲನೆ – 20 ವರ್ಷಗಳಲ್ಲಿ 500 ಕಾಪ್ಟರ್ ನಿರ್ಮಾಣ

Public TV
By Public TV
1 hour ago
DK Shivakumar 3
Bengaluru City

ಮಹದೇವಪ್ಪ ದೊಡ್ಡವರು, ಈಗ ಅವ್ರೂ ನಮ್ಮ ಹೈಕಮಾಂಡ್‌ನ ಭಾಗ: ಡಿಕೆಶಿ ಸೈಲೆಂಟ್‌ ಪಂಚ್‌

Public TV
By Public TV
1 hour ago
indian railways
Bengaluru City

ಹೋಳಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?