ನವದೆಹಲಿ: ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ (Maha Kumbh Mela Stampede) ಸಾವನ್ನಪ್ಪಿದವರ ನಿಜವಾದ ಸಂಖ್ಯೆಯನ್ನು ಸರ್ಕಾರ ಮರೆಮಾಡುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ (Akhilesh Yadav) ಆರೋಪಿಸಿದ್ದಾರೆ. ಕಾಲ್ತುಳಿತದಲ್ಲಿ 30 ಜನರು ಸಾವನ್ನಪ್ಪಿದ್ದಾರೆ ಮತ್ತು 60 ಜನರು ಗಾಯಗೊಂಡಿದ್ದಾರೆ ಎಂದು ಸರ್ಕಾರ ಹೇಳಿದೆ. ಆದರೆ ಈ ಸಂಖ್ಯೆ ಹೆಚ್ಚಾಗಿದೆ ಎಂದು ಅಖಿಲೇಶ್ ಯಾದವ್ ಆರೋಪಿಸಿದ್ದಾರೆ.
ಲೋಕಸಭೆಯಲ್ಲಿ (Lok Sabha) ಬಜೆಟ್ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣಕ್ಕೆ ವಂದನಾ ನಿರ್ಣಯದ ಮೇಲೆ ಮಾತನಾಡಿದ ಅವರು, ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದ ಸಾವುನೋವುಗಳ ಬಗ್ಗೆ ಅಧಿಕೃತ ಡೇಟಾವನ್ನು ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರು. ಇದನ್ನೂ ಓದಿ: ಮಾರ್ಚ್ 7ಕ್ಕೆ ರಾಜ್ಯ ಬಜೆಟ್ ಮಂಡನೆ?
Advertisement
Advertisement
ಸರ್ಕಾರ ನಿರಂತರವಾಗಿ ಬಜೆಟ್ ಅಂಕಿ ಅಂಶಗಳನ್ನು ನೀಡುವ ಹಾಗೆ ಮಹಾ ಕುಂಭದಲ್ಲಿ ಮಡಿದವರ ಅಂಕಿ ಅಂಶಗಳನ್ನು ಸಹ ನೀಡಬೇಕು. ಮಹಾ ಕುಂಭದ ವ್ಯವಸ್ಥೆಗಳ ಬಗ್ಗೆ ಸ್ಪಷ್ಟೀಕರಣ ನೀಡಲು ಸರ್ವಪಕ್ಷ ಸಭೆ ಕರೆಯಬೇಕು. ಮಹಾ ಕುಂಭ ವಿಪತ್ತು ನಿರ್ವಹಣೆ ಜವಾಬ್ದಾರಿಯನ್ನು ಸೇನೆಗೆ ನೀಡಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಬೆಂಗಳೂರು ದೆಹಲಿ ಆಗೋದು ಬೇಡ: ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಸಾರಿಗೆ ಸಚಿವರಿಗೆ ಗುಂಡೂರಾವ್ ಪತ್ರ
Advertisement
ಕಾಲ್ತುಳಿತದ ಸ್ಥಳದಲ್ಲಿ ಸಾಕ್ಷ್ಯಗಳನ್ನು ನಾಶಮಾಡಲು ಜೆಸಿಬಿಗಳನ್ನು ಬಳಸಲಾಗಿದೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಅಖಿಲೇಶ್ ಗಂಭೀರ ಆರೋಪ ಮಾಡಿದರು. ಮಹಾ ಕುಂಭ ಅಪಘಾತದಲ್ಲಿ ಸಾವನ್ನಪ್ಪಿದವರ ಅಂಕಿಅಂಶಗಳು, ಗಾಯಾಳುಗಳ ಚಿಕಿತ್ಸೆ, ಔಷಧಿಗಳ ಲಭ್ಯತೆ, ವೈದ್ಯರು, ಆಹಾರ, ನೀರು, ಸಾರಿಗೆ ವಿವರಗಳನ್ನು ಸಂಸತ್ತಿನಲ್ಲಿ ಮಂಡಿಸಬೇಕು. ಮಹಾ ಕುಂಭ ದುರಂತಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಸತ್ಯವನ್ನು ಮರೆಮಾಚಿದವರಿಗೆ ಶಿಕ್ಷೆ ವಿಧಿಸಬೇಕು. ಯಾವುದೇ ಅಪರಾಧವಿಲ್ಲದಿದ್ದರೆ ಅಂಕಿ ಅಂಶಗಳನ್ನು ಏಕೆ ಮರೆಮಾಡಲಾಗಿದೆ ಎಂದು ಇದೇ ವೇಳೆ ಪ್ರಶ್ನಿಸಿದರು. ಇದನ್ನೂ ಓದಿ: ಅಮೆರಿಕದಿಂದ ಅಕ್ರಮ ವಲಸಿಗರು ಗಡಿಪಾರು – 205 ಭಾರತೀಯ ಪ್ರಯಾಣಿಕರಿಗೆ ವಿಮಾನದಲ್ಲಿ ಒಂದೇ ಟಾಯ್ಲೆಟ್
Advertisement
ಕಾಲ್ತುಳಿತದ ನಂತರ ನೂರಾರು ಜನರು ಕಾಣೆಯಾಗಿದ್ದಾರೆ. ಘಟನೆಯ ನಂತರ 15,000 ಜನರು ತಮ್ಮ ಕುಟುಂಬ ಸದಸ್ಯರು ಕಾಣೆಯಾಗಿದ್ದಾರೆ ಹೇಳಿದ್ದಾರೆ ಈ ಬಗ್ಗೆ ಸರ್ಕಾರ ಯಾವುದೇ ಮಾಹಿತಿಯನ್ನು ನೀಡುತ್ತಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ರಾಮ್ ಗೋಪಾಲ್ ಯಾದವ್ ಹೇಳಿದ್ದಾರೆ. ಮಹಾ ಕುಂಭಮೇಳದಲ್ಲಿ 30 ಜನರು ಸಾವನ್ನಪ್ಪಿದ ಕಾಲ್ತುಳಿತದ ಬಗ್ಗೆ ತಕ್ಷಣ ಚರ್ಚಿಸಬೇಕೆಂದು ಒತ್ತಾಯಿಸಿದರು. ಇದನ್ನೂ ಓದಿ: ವಿಸಿ ನಾಲೆಗೆ ಕಾರು ಬಿದ್ದು ದುರಂತ: ಮೃತರ ಸಂಖ್ಯೆ 3ಕ್ಕೆ ಏರಿಕೆ