ವಿಜಯಪುರ: ಹಿಂದಿ ಭಾಷೆ ವಿಚಾರವಾಗಿ ನಟ ಸುದೀಪ್ -ಅಜಯ್ ದೇವಗನ್ ಮಧ್ಯೆ ನಡೆಯುತ್ತಿರುವ ವಿವಾದದಿಂದ ಜನರಿಗೆ ಪ್ರಯೋಜನವಿಲ್ಲ. ಇವೆಲ್ಲ ಕಟ್ಟಿಕೊಂಡು ಏನ್ ಮಾಡ್ತೀರಾ? ಎಂದು ವ್ಯಂಗ್ಯವಾಡಿದ್ದಾರೆ.
ವಿಜಯಪುರದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, 108 ಸಮಸ್ಯೆಗಳು ನಮ್ಮನ್ನು ಕಾಡುತ್ತಿವೆ. ಅವುಗಳಿಗೆ ನಾವು ಪರಿಹಾರ ಹುಡುಕೋಣ. ಇವೆಲ್ಲ ಕಟ್ಟಿಕೊಂಡು ಏನಾಗಬೇಕು. ಇದು ಜನರ ಗಮನ ಬೇರೆಡೆ ಸೆಳೆಯೋದಕ್ಕೆ ಸೃಷ್ಟಿ ಮಾಡುವಂತಹ ವಿವಾದ ಎಂದು ಟೀಕಿಸಿದ್ದಾರೆ. ಇದನ್ನೂ ಓದಿ: ರಾಷ್ಟ್ರ ಭಾಷೆ ಹಿಂದಿ: ಅಜಯ್ ದೇವಗನ್ ಪ್ರಶ್ನೆಗೆ ಕಿಚ್ಚ ಸುದೀಪ್ ಖಡಕ್ ಉತ್ತರ
ಇದೇ ವೇಳೆ ದಲಿತ ಸಿಎಂ ಬಗ್ಗೆ ರಮೇಶ್ ಜಿಗಜಿಣಗಿ ಕೂಗು ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿ, ಯಾಕಪ್ಪಾ ಅವೆಲ್ಲಾ ಚರ್ಚೆ? ಯಾವ ಪಾರ್ಟಿ ಆಯ್ಕೆ ಆಗುತ್ತೋ- ಆ ಪಾರ್ಟಿಯವರು ಏನು ತೀರ್ಮಾನ ಮಾಡ್ತಾರೋ? ಸುಮ್ಮನೆ ಅವೆಲ್ಲಾ ಮಾತನಾಡುವುದರಿಂದ ಏನು ಶಕ್ತಿ ಬರುತ್ತೆ? ನಾನು ಸಿಎಂ ಆಕಾಂಕ್ಷಿ ಅಲ್ಲದಿರುವುದರಿಂದ ದಲಿತ ಸಿಎಂ ಮಾಡಿದರೆ, ಖುಷಿ ಪಡುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಷ್ಟ್ರ ಭಾಷೆ ಹಿಂದಿ : ಸುದೀಪ್ ಸರಣಿ ಟ್ವಿಟ್ ಗೆ ತಪ್ಪಾಗಿ ತಿಳ್ಕೊಂಡಿದ್ದೆ ಎಂದ ಅಜಯ್ ದೇವಗನ್