ರಾಂಚಿ: ಜಾರ್ಖಂಡ್ (Jharkhand) ಮಾಜಿ ಮುಖ್ಯಮಂತ್ರಿ ಹೇಮಂತ್ ಸೊರೇನ್ (Hemant Soren) ಅವರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ಜಾರ್ಖಂಡ್ ಮುಕ್ತಿ ಮೋರ್ಚಾ ನಾಯಕನನ್ನು ಜಾರಿ ನಿರ್ದೇಶನಾಲಯ (ಇಡಿ) ಜ.31 ರಂದು ಬಂಧಿಸಿತ್ತು. ನಕಲಿ ದಾಖಲೆ ಸೃಷ್ಟಿಸಿ ರಾಂಚಿಯಲ್ಲಿ ಕೋಟ್ಯಂತರ ಮೌಲ್ಯದ 8.86 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ (Land Scam Case) ಯೋಜನೆ ಹೊಂದಲಾಗಿತ್ತು ಎಂದು ಇಡಿ ಆರೋಪಿಸಿದೆ. ಇದನ್ನೂ ಓದಿ: ಮನೆ ಮೇಲೆ ಮಸಿ ಎರಚಿದ ಕಿಡಿಗೇಡಿಗಳು- ನಾನು ಯಾವುದಕ್ಕೂ ಹೆದರಲ್ಲ ಎಂದ ಓವೈಸಿ
ಕಳೆದ ತಿಂಗಳು ಎರಡು ಬಾರಿ ಹಿನ್ನಡೆಯ ನಂತರ ಇಂದು ಜಾಮೀನು ಆದೇಶ ಬಂದಿದೆ. ಮೊದಲಿಗೆ, ರಾಂಚಿ ವಿಶೇಷ ನ್ಯಾಯಾಲಯವು ಸೊರೇನ್ ಜಾಮೀನನ್ನು ನಿರಾಕರಿಸಿತ್ತು.
ಪ್ರಕರಣ ಸಂಬಂಧ ಇಡಿ ವಿಚಾರಣೆ ಎದುರಿಸಿದ್ದ ಹೇಮಂತ್ ಸೊರೇನ್ ಜನವರಿ 31 ರಂದು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರು. ನಂತರ ಅವರನ್ನು ಬಂಧಿಸಲಾಯಿತು. ಇದನ್ನೂ ಓದಿ: T20 World Cup: ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ – ಫೈನಲ್ಗೆ ಭಾರತ ಗ್ರ್ಯಾಂಡ್ ಎಂಟ್ರಿ