ರಾತ್ರೋರಾತ್ರಿ ಬಜೆಟ್ ಮಂಡನೆ ಪಾಲಿಕೆ ಇತಿಹಾಸಕ್ಕೆ ಕಪ್ಪು ಚುಕ್ಕೆ: ರಾಮಲಿಂಗಾ ರೆಡ್ಡಿ

Public TV
1 Min Read
BBMP

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ವತಿಯಿಂದ ಬಿಬಿಎಂಪಿ ರಾತ್ರೋರಾತ್ರಿ ಮಂಡನೆ ಮತ್ತು ಬಜೆಟ್ ಲೋಪದೋಷಗಳ ಬಗ್ಗೆ ಇಂದು ಪತ್ರಿಕಾಗೋಷ್ಠಿ ಜರುಗಿತು.

ramalinga reddy

 

ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿರವರು ಮಾತನಾಡಿ, 83 ರಿಂದ 88ರವರಗೆ ಪಾಲಿಕೆ ಸದಸ್ಯನಾಗಿದ್ದೇ 35ವರ್ಷ ಶಾಸಕನಾಗಿದ್ದೇ 40ಪಾಲಿಕೆ ಬಜೆಟ್ ಮಂಡನೆ ನೋಡಿದ್ದೇನೆ. ಪಾಲಿಕೆ ಬಜೆಟ್ ಮಂಡನೆಯಲ್ಲಿ ಪೂರ್ವಭಾವಿಯಾಗಿ ಸಂಘಸಂಸ್ಥೆಗಳ, ಅಧಿಕಾರಿಗಳು, ಜನರ ಅಭಿಪ್ರಾಯ ಸಂಗ್ರಹಿಸಿ ಬಜೆಟ್ ಮಂಡನೆ ಮಾಡುತ್ತಿದ್ದರು. ಆದರೆ ಇಂದು ಆನ್‍ಲೈನ್ ಮೂಲಕ ರಾತ್ರೋರಾತ್ರಿ ಮಂಡನೆ ಮಾಡಿ, ಪಾಲಿಕೆ ಬಜೆಟ್ ಮಂಡನೆ ಇತಿಹಾಸದಲ್ಲಿ ಕಪ್ಪುಚುಕ್ಕೆಯಾಗಿದೆ ಎಂದರು.

BBMP 1 1

ಆನ್ ಲೈನ್ ಮತ್ತು ಅಫ್ ಲೈನ್ ಮೂಲಕ 150ಕೋಟಿ ಅಷ್ಟು ಡಬಲ್ ಬಿಲ್ಲು ಪಾವತಿ ಮಾಡಲಾಗಿದೆ. ಮುಖ್ಯಮಂತ್ರಿಗಳು ಬಜೆಟ್ ಆನ್ನು ರದ್ದುಗೊಳಿಸಿ, ಪುನರ್ ಪರಿಶೀಲಿಸಿ ವಾಸ್ತವಿಕ ಬಜೆಟ್ ಮಂಡಿಸಬೇಕು ಎಂದು ಹೇಳಿದರು. ಇದನ್ನೂ ಓದಿ: ಮುಸ್ಲಿಮನೊಬ್ಬ ಪ್ರಧಾನಿಯಾದರೆ ಶೇ.50ರಷ್ಟು ಹಿಂದೂಗಳು ಮತಾಂತರಗೊಳ್ಳುತ್ತಾರೆ: ಯತಿ ನರಸಿಂಹಾನಂದ್

BBMP

ಮಾಜಿ ಮಹಾಪೌರರುಗಳಾದ ರಾಮಚಂದ್ರಪ್ಪ, ಜೆ.ಹುಚ್ಚಪ್ಪ, ಜಿ.ಪದ್ಮಾವತಿ, ಗಂಗಾಬಿಕೆ ಮಲ್ಲಿಕಾರ್ಜುನ್, ಸಂಪತ್ ರಾಜ್, ಮಾಜಿ ಆಡಳಿತ ಪಕ್ಷದ ನಾಯಕ ಎಮ್.ಶಿವರಾಜು, ವಿರೋಧ ಪಕ್ಷದ ನಾಯಕ ಅಬ್ದುಲ್ ವಾಜಿದ್ ರವರು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

 

Share This Article
Leave a Comment

Leave a Reply

Your email address will not be published. Required fields are marked *