ಸರ್ಕಾರದ ವಿರುದ್ಧ ಸುಧಾಕರ್ ಪ್ರತಿಭಟನೆ- ಬೊಮ್ಮಾಯಿ ಸಾಥ್

Public TV
1 Min Read
SUDHAKAR

ಬೆಂಗಳೂರು: ಸರ್ಕಾರದ ವಿರುದ್ಧ ಮಾಜಿ ಸಚಿವ ಸುಧಾಕರ್ (Sudhakar) ಇಂದು ಪ್ರತಿಭಟನೆ ನಡೆಸಲಿದ್ದಾರೆ.

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಸೋತಿದ್ದ ಸುಧಾಕರ್ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗ 6 ತಿಂಗಳ ಕಾಲಾವಕಾಶ ಕೊಡ್ತೇನೆ, ಈ ಹೊಸ ಸರ್ಕಾರದ ವಿರುದ್ಧ ನಾನೇನು ಮಾತಾಡಲ್ಲ ಟೀಕೆ ಮಾಡಲ್ಲ ಅಂದಿದ್ರು. ಆದ್ರೆ ಇದೀಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ (Congress) ಸರ್ಕಾರ ಜನ ವಿರೋಧಿ, ರೈತ ವಿರೋಧಿ ನೀತಿ ತಾಳಿದೆ.

ರೈತರಿಗೆ ಕನಿಷ್ಠ ವಿದ್ಯುತ್ ಕೊಡುತ್ತಿಲ್ಲ, ಪ್ರಧಾನಿ ಮೋದಿಯವರ (Narendra Modi) ಕಿಸಾನ್ ಸಮ್ಮಾನ್ ಯೋಜನೆ (Pradhan Mantri Kisan Samman Yojana) ಸ್ಥಗಿತ ಮಾಡಿದೆ, ರೈತರ ಮಕ್ಕಳಿಗಾಗಿಯೇ ಬೊಮ್ಮಾಯಿ (Basavaraj Bommai) ಜಾರಿಗೆ ತಂದಿದ್ದ ವಿದ್ಯಾನಿಧಿ ಪ್ರೋತ್ಸಾಹ ಧನ ಯೋಜನೆ ರದ್ದು ಮಾಡಿದೆ. ಕೇವಲ 5 ತಿಂಗಳಲ್ಲೇ ಈ ಸರ್ಕಾರ ರೈತರನ್ನ ಆತ್ಮಹತ್ಯೆ ಮಾಡಿಕೊಳ್ಳುವಂತೆ ಮಾಡಿದೆ ಅಂತ ರಾಜ್ಯ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆಗೆ ಸುಧಾಕರ್ ನಿರ್ಧರಿಸಿದ್ದಾರೆ. ಇದನ್ನೂ ಓದಿ: ಆರ್.ಆರ್ ನಗರದ ಅನುದಾನಕ್ಕೆ ಕೊಕ್ಕೆ- ಮುನಿರತ್ನ ಉಪವಾಸ ಸತ್ಯಾಗ್ರಹ

ಈಗಾಗಲೇ ಪಂಚಾಯತಿವಾರು ಹಳ್ಳಿಹಳ್ಳಿಗೆ ಭೇಟಿ ನೀಡಿ ಕಾರ್ಯಕರ್ತರು, ಬೆಂಬಲಿಗರ ಸಭೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಸೇರುವ ನಿರೀಕ್ಷೆ ಇದೆ. ಪ್ರತಿಭಟನೆಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಚಿವ ಆರ್ ಆಶೋಕ್ ಸಹ ಭಾಗಿಯಾಗಲಿದ್ದಾರೆ.

Web Stories

Share This Article