Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Latest

ಮೋದಿ ಸರ್ಕಾರದಿಂದ ರಾಜ್ಯಗಳಿಗೆ ಆಗುತ್ತಿರುವ ಆರ್ಥಿಕ ಅನ್ಯಾಯ ನಿಲ್ಲಬೇಕು: ಎಲ್.ಹನುಮಂತಯ್ಯ

Public TV
Last updated: November 7, 2024 4:39 pm
Public TV
Share
2 Min Read
L Hanumanthaiah
SHARE

– ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಆರೋಪ; ದೆಹಲಿಯಲ್ಲಿ ಪ್ರತಿಭಟನಾ ಸಭೆ

ನವದೆಹಲಿ: ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ (Union Government) ತೆರಿಗೆ ವಂಚನೆಯಾಗುತ್ತಿದೆ. ಇದರ ವಿರುದ್ಧ ಧ್ವನಿ ಎತ್ತುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಗಳ ಮೂಲಕ ಪ್ರಧಾನಿ ನರೇಂದ್ರ ಮೋದಿ (Narendra Modi) ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು.

ದೆಹಲಿಯ ಕರ್ನಾಟಕ ಸಂಘದಲ್ಲಿ ರಾಜ್ಯಸಭೆ ಮಾಜಿ ಸಂಸದ ಎಲ್‌. ಹನುಮಂತಯ್ಯ (L Hanumanthaiah) ಅವರ ನೇತೃತದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ರಾಜ್ಯದ ಪ್ರಮುಖ ಸಾಹಿತಿಗಳು, ಚಿಂತಕರು, ಕನ್ನಡಪರ ಹೋರಾಟಗಾರರು, ರೈತ ನಾಯಕರು, ಮಹಿಳಾ ಹೋರಾಟಗಾರ್ತಿಯರು ಭಾಗಿಯಾಗಿದ್ದರು. ಪ್ರತಿಭಟನಾ ಸಭೆ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು. ಇದನ್ನೂ ಓದಿ: ಎಸ್‌ಡಿಎ ರುದ್ರಣ್ಣ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಬೇಕು: ಅರವಿಂದ ಬೆಲ್ಲದ್‌

ಸಭೆಯಲ್ಲಿ ಮಾತನಾಡಿದ ಎಲ್.ಹನುಮಂತಯ್ಯ, ಪ್ರಧಾನಿ ಮೋದಿ ಅವರ ಸರ್ಕಾರದಿಂದ ರಾಜ್ಯಗಳಿಗೆ ಆಗುತ್ತಿರುವ ಆರ್ಥಿಕ ಅನ್ಯಾಯ ನಿಲ್ಲಬೇಕು ಎಂದು ಒತ್ತಾಯಿಸಿದರು. ಪ್ರತಿಯೊಂದು ರಾಜ್ಯದ ಭಾಷೆ, ಸಂಸ್ಕೃತಿ ವೈವಿಧ್ಯತೆಯನ್ನು ಒಕ್ಕೂಟ ಸರ್ಕಾರ ಕಾಪಾಡಬೇಕು. ಅದರ ಬದಲು ಏಕಮುಖ ಸಂಸ್ಕೃತಿ ಏರಿಕೆ ಮಾಡಬಾರದು ಎಂದರು. ರಾಜ್ಯಕ್ಕೆ ಬರಬೇಕಿರುವ ನ್ಯಾಯಬದ್ಧವಾದ ತೆರಿಗೆಯನ್ನು ನೀಡಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಶಿವರಾಂ ಎಚ್ಚರಿಕೆ ನೀಡಿದರು.

ಮೈಸೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ ವಿಜಯ್‌ಕುಮಾರ್ ಮಾತನಾಡಿ, ದೇಶದ ಆತಂರಿಕ ಶಾಂತಿಗಾಗಿ ದೆಹಲಿಯಲ್ಲಿ ಸಭೆ ಮಾಡುವ ಅನಿವಾರ್ಯತೆ ಬಂದಿದೆ. ಬುದ್ಧಿ ಹೇಳುವ ವ್ಯವಸ್ಥೆಯ ವಿರುದ್ಧವೇ ನಾವು ಮಾತನಾಡಬೇಕಾದ ಅನಿವಾರ್ಯತೆ ಇದೆ. ಐಟಿ, ಇಡಿ ಸಿಬಿಐ ಅನ್ನು 65 ವರ್ಷ ಕಾಂಗ್ರೆಸ್‌ ನಡೆಸಿಕೊಂಡ ರೀತಗು, ಬಿಜೆಪಿ ನಡೆಸಿಕೊಂಡ ರೀತಿಗು ಭಿನ್ನವಾಗಿದೆ ಎಂದರು. ಇದನ್ನೂ ಓದಿ: ಅನುಷ್ಕಾ ಶೆಟ್ಟಿ ಫ್ಯಾನ್ಸ್‌ಗೆ ಡಬಲ್ ಧಮಾಕ- ‘ಘಾಟಿ’ ಚಿತ್ರದ ಫಸ್ಟ್ ಲುಕ್ ಔಟ್

ಕನ್ನಡ ಪ್ರಾಧಿಕಾರದ ಸದಸ್ಯ ಟಿ. ಗುರುರಾಜ್ ಮಾತನಾಡಿ, ಕರ್ನಾಟಕ, ಕನ್ನಡಿಗರು ವಿಷಮ ಪರಿಸ್ಥಿತಿಯಲ್ಲಿ ನರಳುತ್ತಿದ್ದಾರೆ. ತಾರತಮ್ಯ ಮಾಡದೇ ಆಡಳಿತ ಮಾಡಬೇಕಿದ್ದ ಕೇಂದ್ರ ಸರ್ಕಾರ ಉತ್ತರ ಭಾರತ, ದಕ್ಷಿಣ ಭಾರತದ ಎಂದು ಮಲತಾಯಿ ಧೋರಣೆ ಮಾಡುತ್ತಿದೆ. ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ಬರಬೇಕಿರುವ ತೆರಿಗೆ ಹಣ ನೀಡುತ್ತಿಲ್ಲ. ನರೇಂದ್ರ ಮೋದಿ ಅವರು ಸಾಮ್ರಾಟನ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಅವರು ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದು ಮರೆತಿದ್ದಾರೆ. ನಮ್ಮ ತೆರಿಗೆ ಪಾಲು ಕೊಡಿ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಪ್ರತಿಭಟನೆ ನಡೆಸಿದರು ಎನ್ನುವ ಕಾರಣಕ್ಕೆ ಅವರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಗಳ ಬಳಕೆ ಮಾಡುತ್ತಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಪ್ರತಿಭಟನಾ ಸಭೆಯಲ್ಲಿ ಹಿರಿಯ ಕನ್ನಡ ಹೋರಾಟಗಾರ ಜಾಣಗೆರೆ ವೆಂಕಟರಾಮಯ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ‌ ಮಾಜಿ ಅಧ್ಯಕ್ಷ ಪ್ರೊ. ಎಸ್‌.ಜಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಡಿ. ತಿಮ್ಮಯ್ಯ, ಖ್ಯಾತ ಸಾಹಿತಿ ಕಾಳೇಗೌಡ ನಾಗವಾರ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಂಜಗೆರೆ ಜಯಪ್ರಕಾಶ್, ಪ್ರಗತಿಪರ ರೈತ ಆರ್‌.ಸ್ವಾಮಿ ಆನಂದ, ರೆಸ್ಪಾನ್ಸಿಬಲ್ ಸಿಟಿಝನ್ಸ್ ವಾಯ್ಸ್ ಫೋರಂ ಅಧ್ಯಕ್ಷ ಎಫ್.ಎಂ ಕಲೀಂ ಮತ್ತಿತರು ಭಾಗಿಯಾಗಿದ್ದರು‌.

TAGGED:Backward Classes ForumkarnatakaL. HanumanthaiahPM Modisiddaramaiahtaxಎಲ್‌ ಹನುಮಂತಯ್ಯಎಲ್.ಹನುಮಂತಯ್ಯಕರ್ನಾಟಕಕಾಂಗ್ರೆಸ್ಕೇಂದ್ರ ಸರ್ಕಾರನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

You Might Also Like

kalaburagi Sanitary Pad
Districts

8 ವರ್ಷಗಳಿಂದ ವಿತರಿಸದೇ ಇದ್ದ 1 ಲಕ್ಷಕ್ಕೂ ಹೆಚ್ಚು ಸ್ಯಾನಿಟರಿ ಪ್ಯಾಡ್‌ಗಳಿಗೆ ಬೆಂಕಿ

Public TV
By Public TV
9 minutes ago
Byrathi Suresh
Bengaluru City

ಸಿಎಂ ಬದಲಾವಣೆ ವಿಚಾರ ಹೈಕಮಾಂಡ್ ತೀರ್ಮಾನ ಮಾಡಲಿದೆ: ಬೈರತಿ ಸುರೇಶ್

Public TV
By Public TV
16 minutes ago
Shubhanshu Shukla 6
Latest

ಗಗನಯಾತ್ರಿ ಶುಭಾಂಶು ಜೊತೆಗೆ ಮೋದಿ ಸಂವಾದ – 16 ಬಾರಿ ಸೂರ್ಯೋದಯ, ಸೂರ್ಯಾಸ್ತ ನೋಡ್ತಿದ್ದೇವೆ ಎಂದ ಶುಕ್ಲಾ

Public TV
By Public TV
31 minutes ago
yathindra siddaramaiah
Bengaluru City

ಕೆಲವರಿಗೆ ಸಿಎಂ ಆಗ್ಬೇಕು ಅಂತಿರುತ್ತೆ, ಅಂಥವರೇ ಬದಲಾವಣೆಯ ಊಹಾಪೋಹಗಳನ್ನು ಹಬ್ಬಿಸ್ತಿದ್ದಾರೆ: ಯತೀಂದ್ರ

Public TV
By Public TV
40 minutes ago
CRIME
Bengaluru City

ಮದ್ವೆ ಆದ್ಮೇಲೆ ಗಂಡನ ಜೊತೆ ಹೇಗಿರಬೇಕು ಅಂತ ಹೇಳ್ಕೊಡ್ತೀನಿ – ತಾಯಿಯಿಂದಲೇ ಮಗಳ ಮೇಲೆ ಲೈಂಗಿಕ ದೌರ್ಜನ್ಯ!

Public TV
By Public TV
1 hour ago
Siddaramaiah 10
Bengaluru City

ಸಿದ್ದರಾಮಯ್ಯಗೆ ಶ್ರೀ ಕೃಷ್ಣ ಮಠದಿಂದ ಆಹ್ವಾನ – 2 ದಶಕಗಳ ಬಳಿಕ ಮಠಕ್ಕೆ ಭೇಟಿ ಕೊಡ್ತಾರಾ ಸಿಎಂ?

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?