Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಸರ್ಕಾರದಿಂದ ರಾಜ್ಯಗಳಿಗೆ ಆಗುತ್ತಿರುವ ಆರ್ಥಿಕ ಅನ್ಯಾಯ ನಿಲ್ಲಬೇಕು: ಎಲ್.ಹನುಮಂತಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿ ಸರ್ಕಾರದಿಂದ ರಾಜ್ಯಗಳಿಗೆ ಆಗುತ್ತಿರುವ ಆರ್ಥಿಕ ಅನ್ಯಾಯ ನಿಲ್ಲಬೇಕು: ಎಲ್.ಹನುಮಂತಯ್ಯ

Latest

ಮೋದಿ ಸರ್ಕಾರದಿಂದ ರಾಜ್ಯಗಳಿಗೆ ಆಗುತ್ತಿರುವ ಆರ್ಥಿಕ ಅನ್ಯಾಯ ನಿಲ್ಲಬೇಕು: ಎಲ್.ಹನುಮಂತಯ್ಯ

Public TV
Last updated: November 7, 2024 4:39 pm
Public TV
Share
2 Min Read
L Hanumanthaiah
SHARE

– ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಆರೋಪ; ದೆಹಲಿಯಲ್ಲಿ ಪ್ರತಿಭಟನಾ ಸಭೆ

ನವದೆಹಲಿ: ಕರ್ನಾಟಕಕ್ಕೆ ಕೇಂದ್ರ ಸರ್ಕಾರದಿಂದ (Union Government) ತೆರಿಗೆ ವಂಚನೆಯಾಗುತ್ತಿದೆ. ಇದರ ವಿರುದ್ಧ ಧ್ವನಿ ಎತ್ತುವ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಗಳ ಮೂಲಕ ಪ್ರಧಾನಿ ನರೇಂದ್ರ ಮೋದಿ (Narendra Modi) ಷಡ್ಯಂತ್ರ ರೂಪಿಸುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ಹಿಂದುಳಿದ ವರ್ಗಗಳ ಜಾಗೃತ ವೇದಿಕೆ ನೇತೃತ್ವದಲ್ಲಿ ಪ್ರತಿಭಟನಾ ಸಭೆ ನಡೆಸಲಾಯಿತು.

ದೆಹಲಿಯ ಕರ್ನಾಟಕ ಸಂಘದಲ್ಲಿ ರಾಜ್ಯಸಭೆ ಮಾಜಿ ಸಂಸದ ಎಲ್‌. ಹನುಮಂತಯ್ಯ (L Hanumanthaiah) ಅವರ ನೇತೃತದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ರಾಜ್ಯದ ಪ್ರಮುಖ ಸಾಹಿತಿಗಳು, ಚಿಂತಕರು, ಕನ್ನಡಪರ ಹೋರಾಟಗಾರರು, ರೈತ ನಾಯಕರು, ಮಹಿಳಾ ಹೋರಾಟಗಾರ್ತಿಯರು ಭಾಗಿಯಾಗಿದ್ದರು. ಪ್ರತಿಭಟನಾ ಸಭೆ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಅವರ ಕಚೇರಿಗೆ ಮನವಿ ಪತ್ರ ಸಲ್ಲಿಸಿದರು. ಇದನ್ನೂ ಓದಿ: ಎಸ್‌ಡಿಎ ರುದ್ರಣ್ಣ ಆತ್ಮಹತ್ಯೆ ಕೇಸ್‌ ಸಿಬಿಐಗೆ ವಹಿಸಬೇಕು: ಅರವಿಂದ ಬೆಲ್ಲದ್‌

ಸಭೆಯಲ್ಲಿ ಮಾತನಾಡಿದ ಎಲ್.ಹನುಮಂತಯ್ಯ, ಪ್ರಧಾನಿ ಮೋದಿ ಅವರ ಸರ್ಕಾರದಿಂದ ರಾಜ್ಯಗಳಿಗೆ ಆಗುತ್ತಿರುವ ಆರ್ಥಿಕ ಅನ್ಯಾಯ ನಿಲ್ಲಬೇಕು ಎಂದು ಒತ್ತಾಯಿಸಿದರು. ಪ್ರತಿಯೊಂದು ರಾಜ್ಯದ ಭಾಷೆ, ಸಂಸ್ಕೃತಿ ವೈವಿಧ್ಯತೆಯನ್ನು ಒಕ್ಕೂಟ ಸರ್ಕಾರ ಕಾಪಾಡಬೇಕು. ಅದರ ಬದಲು ಏಕಮುಖ ಸಂಸ್ಕೃತಿ ಏರಿಕೆ ಮಾಡಬಾರದು ಎಂದರು. ರಾಜ್ಯಕ್ಕೆ ಬರಬೇಕಿರುವ ನ್ಯಾಯಬದ್ಧವಾದ ತೆರಿಗೆಯನ್ನು ನೀಡಬೇಕು, ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹಿಂದುಳಿದ ವರ್ಗಗಳ ಜಾಗೃತ ವೇದಿಕೆಯ ಶಿವರಾಂ ಎಚ್ಚರಿಕೆ ನೀಡಿದರು.

ಮೈಸೂರು ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಡಾ.ಬಿ.ಜೆ ವಿಜಯ್‌ಕುಮಾರ್ ಮಾತನಾಡಿ, ದೇಶದ ಆತಂರಿಕ ಶಾಂತಿಗಾಗಿ ದೆಹಲಿಯಲ್ಲಿ ಸಭೆ ಮಾಡುವ ಅನಿವಾರ್ಯತೆ ಬಂದಿದೆ. ಬುದ್ಧಿ ಹೇಳುವ ವ್ಯವಸ್ಥೆಯ ವಿರುದ್ಧವೇ ನಾವು ಮಾತನಾಡಬೇಕಾದ ಅನಿವಾರ್ಯತೆ ಇದೆ. ಐಟಿ, ಇಡಿ ಸಿಬಿಐ ಅನ್ನು 65 ವರ್ಷ ಕಾಂಗ್ರೆಸ್‌ ನಡೆಸಿಕೊಂಡ ರೀತಗು, ಬಿಜೆಪಿ ನಡೆಸಿಕೊಂಡ ರೀತಿಗು ಭಿನ್ನವಾಗಿದೆ ಎಂದರು. ಇದನ್ನೂ ಓದಿ: ಅನುಷ್ಕಾ ಶೆಟ್ಟಿ ಫ್ಯಾನ್ಸ್‌ಗೆ ಡಬಲ್ ಧಮಾಕ- ‘ಘಾಟಿ’ ಚಿತ್ರದ ಫಸ್ಟ್ ಲುಕ್ ಔಟ್

ಕನ್ನಡ ಪ್ರಾಧಿಕಾರದ ಸದಸ್ಯ ಟಿ. ಗುರುರಾಜ್ ಮಾತನಾಡಿ, ಕರ್ನಾಟಕ, ಕನ್ನಡಿಗರು ವಿಷಮ ಪರಿಸ್ಥಿತಿಯಲ್ಲಿ ನರಳುತ್ತಿದ್ದಾರೆ. ತಾರತಮ್ಯ ಮಾಡದೇ ಆಡಳಿತ ಮಾಡಬೇಕಿದ್ದ ಕೇಂದ್ರ ಸರ್ಕಾರ ಉತ್ತರ ಭಾರತ, ದಕ್ಷಿಣ ಭಾರತದ ಎಂದು ಮಲತಾಯಿ ಧೋರಣೆ ಮಾಡುತ್ತಿದೆ. ಕರ್ನಾಟಕಕ್ಕೆ ನ್ಯಾಯಬದ್ಧವಾಗಿ ಬರಬೇಕಿರುವ ತೆರಿಗೆ ಹಣ ನೀಡುತ್ತಿಲ್ಲ. ನರೇಂದ್ರ ಮೋದಿ ಅವರು ಸಾಮ್ರಾಟನ ರೀತಿಯಲ್ಲಿ ವರ್ತಿಸುತ್ತಿದ್ದಾರೆ. ಅವರು ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದು ಮರೆತಿದ್ದಾರೆ. ನಮ್ಮ ತೆರಿಗೆ ಪಾಲು ಕೊಡಿ ಎಂದು ಕೇಂದ್ರ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಪ್ರತಿಭಟನೆ ನಡೆಸಿದರು ಎನ್ನುವ ಕಾರಣಕ್ಕೆ ಅವರ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆಗಳ ಬಳಕೆ ಮಾಡುತ್ತಿದೆ ಎಂದು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು.

ಪ್ರತಿಭಟನಾ ಸಭೆಯಲ್ಲಿ ಹಿರಿಯ ಕನ್ನಡ ಹೋರಾಟಗಾರ ಜಾಣಗೆರೆ ವೆಂಕಟರಾಮಯ್ಯ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ‌ ಮಾಜಿ ಅಧ್ಯಕ್ಷ ಪ್ರೊ. ಎಸ್‌.ಜಿ ಸಿದ್ದರಾಮಯ್ಯ, ವಿಧಾನ ಪರಿಷತ್ ಸದಸ್ಯ ಡಿ. ತಿಮ್ಮಯ್ಯ, ಖ್ಯಾತ ಸಾಹಿತಿ ಕಾಳೇಗೌಡ ನಾಗವಾರ, ಕನ್ನಡ ಪುಸ್ತಕ ಪ್ರಾಧಿಕಾರದ ಮಾಜಿ ಅಧ್ಯಕ್ಷ ಬಂಜಗೆರೆ ಜಯಪ್ರಕಾಶ್, ಪ್ರಗತಿಪರ ರೈತ ಆರ್‌.ಸ್ವಾಮಿ ಆನಂದ, ರೆಸ್ಪಾನ್ಸಿಬಲ್ ಸಿಟಿಝನ್ಸ್ ವಾಯ್ಸ್ ಫೋರಂ ಅಧ್ಯಕ್ಷ ಎಫ್.ಎಂ ಕಲೀಂ ಮತ್ತಿತರು ಭಾಗಿಯಾಗಿದ್ದರು‌.

TAGGED:Backward Classes ForumkarnatakaL. HanumanthaiahPM Modisiddaramaiahtaxಎಲ್‌ ಹನುಮಂತಯ್ಯಎಲ್.ಹನುಮಂತಯ್ಯಕರ್ನಾಟಕಕಾಂಗ್ರೆಸ್ಕೇಂದ್ರ ಸರ್ಕಾರನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

AMB Cinemas 2
ಬೆಂಗಳೂರಿನ ಕಪಾಲಿ ಥಿಯೇಟರ್ ಜಾಗದಲ್ಲಿ ಮಹೇಶ್ ಬಾಬು `ಎಎಂಬಿ ಸಿನಿಮಾಸ್’.. ಇದರ ಸ್ಪೆಷಾಲಿಟಿ ಏನು?
Bengaluru City Cinema Latest Main Post South cinema
Rajanikanth
ಸಂಕ್ರಾಂತಿ ದಿನವೇ ಅಭಿಮಾನಿಗಳಿಗೆ ಗುಡ್‌ನ್ಯೂಸ್ ಕೊಟ್ಟ ತಲೈವಾ.!
Cinema Latest South cinema Top Stories
Samruddhi Ram
ಗ್ಯಾಮ್ಲಿಂಗ್‌ನಲ್ಲಿ ಹಣ ಕಳೆದುಕೊಂಡೆ, 3 ವರ್ಷಗಳಿಂದ ಮನೆಯಿಂದಾಚೆಯಿದ್ದೀನಿ, ಇವರಿಂದ ಬದುಕೋಕೆ ಆಗ್ತಿಲ್ಲ: ಸಮೃದ್ಧಿ ರಾಮ್‌ ಕಣ್ಣೀರು
Bengaluru City Cinema Districts Karnataka Latest Main Post Sandalwood
Pratibha Shetty Samriddhi Ram Karunya Ram
ಮೋಸ ಮಾಡಿದವ್ರು ಉದ್ಧಾರ ಆಗಲ್ಲ – ಸಮೃದ್ಧಿ ರಾಮ್‌ ವಿರುದ್ಧ ಪ್ರತಿಭಾ ಶೆಟ್ಟಿ ಗರಂ
Bengaluru City Cinema Crime Karnataka Latest States Top Stories

You Might Also Like

02 14
Districts

Video | ಅಗ್ನಿ ಅವಘಡ – ಶೀಟ್‌ ಮನೆಯಲ್ಲಿದ್ದ 5 ಲಕ್ಷ ನಗದು ಭಸ್ಮ!

Public TV
By Public TV
15 minutes ago
Delhi Weather 1
Latest

ಬೆಚ್ಚಿ ಬೀಳಿಸಿದ ವರದಿ – ದೆಹಲಿಯಲ್ಲಿ ಒಂದೇ ವರ್ಷ 9,000 ಕ್ಕೂ ಹೆಚ್ಚು ಸಾವು!

Public TV
By Public TV
22 minutes ago
Mandya Sankranti Fire
Districts

ಸಂಕ್ರಾಂತಿ ವೇಳೆ ಕಿಚ್ಚು ಹಾಯಿಸುವಾಗ ಯಡವಟ್ಟು – ಜನರ ಮೇಲೆ ಎಗರಿದ ಎತ್ತುಗಳು, ಇಬ್ಬರಿಗೆ ಗಾಯ

Public TV
By Public TV
28 minutes ago
Dinesh Gundu Rao 1
Bengaluru City

ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Public TV
By Public TV
34 minutes ago
Harleen Deol
Cricket

ಡಿಯೋಲ್‌ ಡಿಚ್ಚಿ, ಮುಂಬೈ ಮೇಲೆ ವಾರಿಯರ್ಸ್‌ ಸವಾರಿ – ಹ್ಯಾಟ್ರಿಕ್‌ ಸೋಲಿನ ಬಳಿಕ ಗೆದ್ದ ಯುಪಿ

Public TV
By Public TV
47 minutes ago
supreme Court 1
Court

`ಜನನಾಯಗನ್’ ಮಧ್ಯಂತರ ಪರಿಹಾರಕ್ಕೆ ಸುಪ್ರೀಂ ನಕಾರ – KVN ಪ್ರೊಡಕ್ಷನ್ ಅರ್ಜಿ ವಜಾ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?