ಹಾಸನ: ಸಾಮಾಜಿಕ ಜಾಲತಾಣಗಳಲ್ಲಿ ಮಾಜಿ ಪ್ರಧಾನಿ ಹೆಚ್ಡಿ ದೇವೇಗೌಡರನ್ನು ಅವಮಾನಿಸಿರೊದನ್ನು ವಿರೋಧಿಸಿ ಇಂದು ಹೊಳೇನರಸೀಪುರ ಬಂದ್ ಗೆ ಕರೆ ನೀಡಲಾಗಿದ್ದು, ಬಂದ್ಗೆ ಪಟ್ಟಣದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.
ತುರ್ತು ಸೇವೆಗಳನ್ನು ಹೊರತುಪಡಿಸಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ವರ್ತಕರು ಬಂದ್ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಮುಂಜಾನೆಯಿಂದಲೇ ಪಟ್ಟಣದಲ್ಲಿ ಬಂದ್ ವಾತಾವರಣ ಕಂಡುಬಂದಿದೆ. ಜೆಡಿಎಸ್ ಪಕ್ಷ, ದೇವೇಗೌಡರ ಅಭಿಮಾನಿಗಳು, ವರ್ತಕರ ಸಂಘ ಸೇರಿದಂತೆ ವಿವಿಧ ಸಂಘಟನೆಗಳು ಬಂದ್ಗೆ ಬೆಂಬಲ ನೀಡಿವೆ.
ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್ ಮತ್ತು ವಾಟ್ಸಪ್ಗಳಲ್ಲಿ ಮಾಜಿ ಪ್ರಧಾನಿಯನ್ನು ಅವಹೇಳನ ಮಾಡಿರೊದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು ಇದೀಗ ದೇವೇಗೌಡರ ಸ್ವಕ್ಷೇತ್ರ ಹೊಳೇನರಸೀಪುರದಲ್ಲಿ ಪ್ರತಿಭಟನೆ ನಡೆಯುತ್ತಿದೆ. 11ಗಂಟೆಗೆ ಪಟ್ಟಣದಲ್ಲಿ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.