Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಉಗ್ರ ಹಫೀಜ್‌ ಸಯೀದ್‌ ಜೊತೆ ಸಭೆ ನಡೆಸಿದ್ದಕ್ಕೆ ಸಿಂಗ್‌ ನನಗೆ ಥ್ಯಾಂಕ್ಸ್‌ ಹೇಳಿದ್ದರು: ಭಯೋತ್ಪಾದಕ ಯಾಸಿನ್ ಮಲಿಕ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಉಗ್ರ ಹಫೀಜ್‌ ಸಯೀದ್‌ ಜೊತೆ ಸಭೆ ನಡೆಸಿದ್ದಕ್ಕೆ ಸಿಂಗ್‌ ನನಗೆ ಥ್ಯಾಂಕ್ಸ್‌ ಹೇಳಿದ್ದರು: ಭಯೋತ್ಪಾದಕ ಯಾಸಿನ್ ಮಲಿಕ್

Latest

ಉಗ್ರ ಹಫೀಜ್‌ ಸಯೀದ್‌ ಜೊತೆ ಸಭೆ ನಡೆಸಿದ್ದಕ್ಕೆ ಸಿಂಗ್‌ ನನಗೆ ಥ್ಯಾಂಕ್ಸ್‌ ಹೇಳಿದ್ದರು: ಭಯೋತ್ಪಾದಕ ಯಾಸಿನ್ ಮಲಿಕ್

Public TV
Last updated: September 19, 2025 1:26 pm
Public TV
Share
4 Min Read
Ex PM Manmohan Singh Thanked Me For Meeting Hafiz Saeed Yasin Maliks Explosive Claim
SHARE

– ಭಾರತದ ಸರ್ಕಾರದ ಕೋರಿಕೆ ಮೇಲೆ ಪಾಕ್‌ನಲ್ಲಿ ಉಗ್ರರ ಜೊತೆ ಸಭೆ
– ದೆಹಲಿ ಹೈಕೋರ್ಟ್‌ಗೆ ಸಲ್ಲಿಸಿದ ಅಫಿಡವಿಟ್‌ನಲ್ಲಿ ಮಲಿಕ್‌ ಉಲ್ಲೇಖ

ನವದೆಹಲಿ: ಲಷ್ಕರ್-ಎ-ತೈಬಾ ((LeT) ಸಂಸ್ಥಾಪಕ ಮತ್ತು 26/11 ದಾಳಿಯ ಮಾಸ್ಟರ್‌ಮೈಂಡ್ ಹಫೀಜ್ ಸಯೀದ್‌ನನ್ನು (Hafiz Saeed) ಭೇಟಿಯಾದ ನಂತರ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ವೈಯಕ್ತಿಕವಾಗಿ ತನಗೆ ಧನ್ಯವಾದ ಹೇಳಿದ್ದರು ಎಂದು ಭಯೋತ್ಪಾದಕ ಯಾಸಿನ್ ಮಲಿಕ್ (Yasin Malik) ಹೇಳಿದ್ದು ಈಗ ದೇಶದಲ್ಲಿ ಬಿರುಗಾಳಿ ಎಬ್ಬಿಸಿದೆ.

ಹೌದು. ಉಗ್ರರಿಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿ ಸದ್ಯ ತಿಹಾರ್‌ ಜೈಲಿನಲ್ಲಿರುವ ಜಮ್ಮು ಮತ್ತು ಕಾಶ್ಮೀರ ಲಿಬರೇಷನ್ ಫ್ರಂಟ್ (JKLF) ಭಯೋತ್ಪಾದಕ ಯಾಸಿನ್ ಮಲಿಕ್ 2006 ರಲ್ಲಿ ಪಾಕಿಸ್ತಾನದಲ್ಲಿ ಹಫೀಜ್ ಸಯೀದ್‌ನನ್ನು ಭೇಟಿಯಾಗಿದ್ದ.

ಹಫೀಜ್ ಸಯೀದ್‌ ಭೇಟಿಯ ಬಳಿಕ ಮನಮೋಹನ್‌ ಸಿಂಗ್‌ ಅವರು ನನಗೆ ವೈಯಕ್ತಿಕವಾಗಿ ಧನ್ಯವಾದ ಹೇಳಿದ್ದರು ಎಂದು ಯಾಸಿನ್ ಮಲಿಕ್ ಆಗಸ್ಟ್ 25 ರಂದು ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಿದ ಅಫಿಡವಿಟ್‌ನಲ್ಲಿ ಉಲ್ಲೇಖಿಸಿದ್ದಾನೆ. ಈ ಭೇಟಿಯನ್ನು ನಾನು ನಿಗದಿ ಮಾಡಿರಲಿಲ್ಲ. ಬದಲಾಗಿ ಹಿರಿಯ ಭಾರತೀಯ ಗುಪ್ತಚರ ಅಧಿಕಾರಿಗಳ ಕೋರಿಕೆಯ ಮೇರೆಗೆ ಉಗ್ರರ ಜೊತೆ ಸಭೆ ಮಾಡಿದ್ದೆ ಎಂದು ತಿಳಿಸಿದ್ದಾನೆ.

ಉಗ್ರ ಯಾಸಿನ್‌ ಮಲಿಕ್‌ ಕೈ ಕುಲುಕುತ್ತಿರುವ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌
ಉಗ್ರ ಯಾಸಿನ್‌ ಮಲಿಕ್‌ ಕೈ ಕುಲುಕುತ್ತಿರುವ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌

ಅಫಿಡವಿಟ್‌ನಲ್ಲಿ ಹೇಳಿದ್ದೇನು?
2005 ರಲ್ಲಿ ಕಾಶ್ಮೀರದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದ ಬಳಿಕ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದೆ. ಈ ಭೇಟಿಗೂ ಮೊದಲು ಆಗಿನ ಗುಪ್ತಚರ ದಳದ (ಐಬಿ) ವಿಶೇಷ ನಿರ್ದೇಶಕ ವಿ.ಕೆ. ಜೋಶಿ ಅವರು ದೆಹಲಿಯಲ್ಲಿ ನನ್ನನ್ನು ಭೇಟಿ ಮಾಡಿದ್ದರು.

ಈ ಭೇಟಿಯ ಸಂದರ್ಭದಲ್ಲಿ ಪಾಕಿಸ್ತಾನ ರಾಜಕೀಯ ನಾಯಕರನ್ನು ಮಾತ್ರವಲ್ಲದೇ ಉಗ್ರ ಸಂಘಟನೆಗಳ ಜೊತೆ ಮಾತನಾಡಿ ಶಾಂತಿಗೆ ಸಹಕಾರ ನೀಡುವಂತೆ ಕೇಳಿಕೊಳ್ಳಬೇಕು ಎಂದು ಅವರು ನನ್ನ ಜೊತೆ ವಿನಂತಿ ಮಾಡಿದ್ದರು. ಪ್ರಧಾನಿ ಮನಮೋಹನ್‌ ಸಿಂಗ್‌ ಅವರ ಶಾಂತಿ ಪ್ರಯತ್ನದ ಭಾಗವಾಗಿ ಈ ಕೆಲಸ ಮಾಡಬೇಕು ಎಂದು ಕೇಳಿಕೊಂಡಿದ್ದರು. ಇದನ್ನೂ ಓದಿ:  ಭಾರತದ ಸಿಂಧೂರ ದಾಳಿಗೆ ಮಸೂದ್ ಕುಟುಂಬ ಕಳೆದುಕೊಂಡ – ಪಾಕ್ ಉಗ್ರ ಇಲ್ಯಾಸ್ ಸಾಕ್ಷ್ಯ

ಮಾತುಕತೆಯ ವೇಳೆ ಭಯೋತ್ಪಾದಕ ನಾಯಕರ ಜೊತೆ ಮಾತುಕತೆ ನಡೆಸದ ಹೊರತು ಶಾಂತಿ ಮಾತುಕತೆ ಪೂರ್ಣವಾಗುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದ್ದೆ. ಸರ್ಕಾರದ ವಿನಂತಿಯ ಮೇರೆಗೆ ಪಾಕಿಸ್ತಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಯೀದ್ ಮತ್ತು ಯುನೈಟೆಡ್ ಜಿಹಾದ್ ಕೌನ್ಸಿಲ್‌ನ ಇತರ ನಾಯಕರನ್ನು ಭೇಟಿ ಮಾಡಲು ಒಪ್ಪಿಕೊಂಡಿದ್ದೆ.

ಉಗ್ರರ ಜೊತೆ ಸಭೆ ನಡೆಸಿ ನಾನು ಫೆಬ್ರವರಿ, 2006 ರಲ್ಲಿ ಭಾರತಕ್ಕೆ ಮರಳಿದೆ. ಮರಳಿದ ಬಳಿಕ ಐಬಿ ವಿಶೇಷ ನಿರ್ದೇಶಕ ವಿ ಕೆ ಜೋಶಿ ಅವರು ಮಾತುಕತೆಯ ಭಾಗವಾಗಿ ಹೋಟೆಲ್‌ನಲ್ಲಿ ನನ್ನನ್ನು ಭೇಟಿಯಾಗಿ ಪ್ರಧಾನಿಗೆ ತಕ್ಷಣ ವಿವರಿಸುವಂತೆ ವಿನಂತಿಸಿದರು. ಅಂದು ಸಂಜೆ ನಾನು ಆಗಿನ ರಾಷ್ಟ್ರೀಯ ಭದ್ರತಾ ಸಲಹೆಗಾರ ಎಂ.ಕೆ. ನಾರಾಯಣನ್ ಅವರ ಸಮ್ಮುಖದಲ್ಲಿ ಮನಮೋಹನ್‌ ಸಿಂಗ್‌ ಅವರನ್ನು ಭೇಟಿಯಾದೆ.

Jammu & Kashmir Liberation Front (JKLF) terrorist Yasin Malik, serving a life sentence in a terror-funding case, has made a shocking claim.

In an affidavit filed in the Delhi High Court on August 25, Malik says:

•He met Lashkar-e-Taiba founder and 26/11 mastermind Hafiz Saeed… pic.twitter.com/D8xLdWDizG

— Amit Malviya (@amitmalviya) September 19, 2025

ಈ ಸಭೆಯಲ್ಲಿ ಪಾಕಿಸ್ತಾನದ ಉಗ್ರರ ಜೊತೆ ಮಾತುಕತೆಯಲ್ಲಿ ತೊಡಗಿಸಿಕೊಳ್ಳುವಲ್ಲಿ ನಾನು ತೋರಿಸಿದ ಪ್ರಯತ್ನ, ತಾಳ್ಮೆ ಮತ್ತು ಸಮರ್ಪಣೆಗೆ ಸಿಂಗ್ ಅವರು ನನಗೆ ವೈಯಕ್ತಿಕವಾಗಿ ಧನ್ಯವಾದ ಅರ್ಪಿಸಿದರು. ಮನಮೋಹನ್‌ ಸಿಂಗ್ ನನ್ನ ಕೈ ಕುಲುಕಿ “ಕಾಶ್ಮೀರದಲ್ಲಿ ಅಹಿಂಸಾತ್ಮಕ ಚಳವಳಿಯ ಪಿತಾಮಹ” ಎಂದು ನನ್ನನ್ನು ಕರೆದರು.

ಮನ ಮೋಹನ್‌ ಸಿಂಗ್‌ ಮಾತ್ರವಲ್ಲ ಮಲಿಕ್ ತನ್ನ ಅಫಿಡವಿಟ್‌ನಲ್ಲಿ, ಅಟಲ್ ಬಿಹಾರಿ ವಾಜಪೇಯಿ, ಸೋನಿಯಾ ಗಾಂಧಿ, ಪಿ ಚಿದಂಬರಂ, ಐಕೆ ಗುಜ್ರಾಲ್ ಮತ್ತು ರಾಜೇಶ್ ಪೈಲಟ್ ಸೇರಿದಂತೆ ಹಲವಾರು ಉನ್ನತ ರಾಜಕೀಯ ನಾಯಕರೊಂದಿಗಿನ ಮಾತುಕತೆಯ ಬಗ್ಗೆ ಉಲ್ಲೇಖಿಸಿದ್ದಾನೆ.

1990 ರಲ್ಲಿ ನನ್ನ ಬಂಧನದ ನಂತರ, ವಿಪಿ ಸಿಂಗ್, ಚಂದ್ರಶೇಖರ್, ಪಿವಿ ನರಸಿಂಹ ರಾವ್, ಎಚ್‌ಡಿ ದೇವಗೌಡ, ಇಂದರ್ ಕುಮಾರ್ ಗುಜ್ರಾಲ್, ಅಟಲ್ ಬಿಹಾರಿ ವಾಜಪೇಯಿ ಸರ್ಕಾರ ಇದ್ದಾಗಲೂ ನಾನು ಸರ್ಕಾರದ ಜೊತೆ ಮಾತನಾಡುತ್ತಿದ್ದೆ. ಅಧಿಕಾರದಲ್ಲಿರುವ ಸರ್ಕಾರಗಳಿಂದ ನಾನು ಸಹಾಯ ಪಡೆದುಕೊಂಡಿದ್ದೆ ಮತ್ತು ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಮಾತನಾಡುತ್ತಿದ್ದೆ ಎಂದಿದ್ದಾನೆ.

1990 ರ ಜನವರಿಯಲ್ಲಿ ಶ್ರೀನಗರದಲ್ಲಿ ನಾಲ್ವರು ಭಾರತೀಯ ವಾಯುಪಡೆಯ ಅಧಿಕಾರಿಗಳನ್ನು ಕೊಂದ ಆರೋಪ ಮಲಿಕ್ ಮೇಲಿದೆ. ಮಾಜಿ ಕೇಂದ್ರ ಗೃಹ ಸಚಿವ ಮುಫ್ತಿ ಮೊಹಮ್ಮದ್ ಸಯೀದ್ ಅವರ ಪುತ್ರಿ ರುಬಿಯಾ ಸಯೀದ್ ಅವರ ಅಪಹರಣ, 1990 ರಲ್ಲಿ ಕಾಶ್ಮೀರದಲ್ಲಿ ಪಂಡಿತರ ನರಮೇಧ ಮಾಡಿರುವ ಆರೋಪವೂ ಈತನ ಮೇಲಿದೆ.

ಆಗಸ್ಟ್ 11 ರಂದು, ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಭಯೋತ್ಪಾದಕರಿಗೆ ಹಣಕಾಸು ನೆರವು ನೀಡಿದ ಪ್ರಕರಣದಲ್ಲಿ ಪ್ರತ್ಯೇಕತಾವಾದಿ ನಾಯಕ ಯಾಸಿನ್ ಮಲಿಕ್‌ಗೆ ಮರಣದಂಡನೆ ವಿಧಿಸುವಂತೆ ಕೇಳಿದೆ. ನ್ಯಾಯಾಲಯವು ಯಾಸಿನ್ ಮಲಿಕ್‌ಗೆ ಪ್ರತಿಕ್ರಿಯೆ ಸಲ್ಲಿಸಲು ನಾಲ್ಕು ವಾರಗಳ ಕಾಲಾವಕಾಶ ನೀಡಿ ಪ್ರಕರಣವನ್ನು ನವೆಂಬರ್ 10ಕ್ಕೆ ಮುಂದೂಡಿದೆ.

2022 ರಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾದ ಯಾಸಿನ್ ಮಲಿಕ್, ದೇಶದ ಸಾರ್ವಭೌಮತ್ವಕ್ಕೆ ಬೆದರಿಕೆಯೊಡ್ಡುವ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಾನೆ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರಗಾಮಿತ್ವಕ್ಕೆ ನಿಕಟ ಸಂಬಂಧ ಹೊಂದಿದ್ದಾನೆ ಎಂದು ಕೇಂದ್ರ ಸರ್ಕಾರ ಹೇಳಿದೆ.

TAGGED:Hafiz SaeedindiaManmohan Singhpakistanಪಾಕಿಸ್ತಾನಭಾರತಮನಮೋಹನ್ ಸಿಂಗ್ಯಾಸಿನ್ ಮಲಿಕ್ಹಫೀಜ್ ಸಯೀದ್
Share This Article
Facebook Whatsapp Whatsapp Telegram

Cinema news

rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood
Toxic
ʻಟಾಕ್ಸಿಕ್‌ʼ ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ – ಸಿನಿಮಾ ವಿರುದ್ಧ ಕ್ರೈಸ್ತರ ಒಕ್ಕೂಟ ದೂರು
Bengaluru City Cinema Latest Main Post Sandalwood
nandini milk sudha rani
ನಂದಿನಿ ಉತ್ಪನ್ನಗಳ ಪ್ರಚಾರ ರಾಯಭಾರಿಯಾಗಿ ನಟಿ ಸುಧಾರಾಣಿ ಆಯ್ಕೆ
Bengaluru City Cinema Latest Main Post Sandalwood

You Might Also Like

Dr. K.Sudhakar Chandan Kumar
Bengaluru Rural

ಕೆನಡಾದಿಂದ ಚಂದನ್ ಕುಮಾರ್ ಪಾರ್ಥಿವ ಶರೀರ ಫೆ.16 ಕ್ಕೆ ತಾಯ್ನಾಡಿಗೆ: ಸಂಸದ ಡಾ.ಕೆ.ಸುಧಾಕರ್

Public TV
By Public TV
23 minutes ago
Ashok Pattan
Karnataka

ಸಿದ್ದರಾಮಯ್ಯ ಅಲ್ಲದೇ ಬೇರೆ ಯಾರೇ ಸಿಎಂ ಆದ್ರೂ ಸರ್ಕಾರ ನಡೆಸೋದು ಕಷ್ಟ: ಅಶೋಕ್‌ ಪಟ್ಟಣ್

Public TV
By Public TV
56 minutes ago
siddaramaiah sunil kumar
Bengaluru City

ಸಿಎಂ ವಿರುದ್ಧ ಶಾಸಕ ಸುನಿಲ್ ಕುಮಾರ್ ಲೆಟರ್ ಬಾಂಬ್ – ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ಶಿಫಾರಸ್ಸು ಮಾಡಿದ್ರಾ!?

Public TV
By Public TV
1 hour ago
Accident 4
Bengaluru City

ಹೊಸಕೋಟೆ ಡೆಡ್ಲಿ ಆಕ್ಸಿಡೆಂಟ್ – ಬದುಕಿ ಬಾಳಬೇಕಿದ್ದ, ಮನೆಗೆ ಆಧಾರ ಸ್ತಂಭವಾಗಿದ್ದ ಮಕ್ಕಳು ಬೀದಿ ಹೆಣ

Public TV
By Public TV
1 hour ago
Lucknow Accident
Crime

ಫೇರ್‌ವೆಲ್‌ ಪಾರ್ಟಿ ಮುಗಿಸಿ ವಾಪಸ್‌ ಆಗ್ತಿದ್ದ ವಿದ್ಯಾರ್ಥಿ ಕಾರು ಡಿಕ್ಕಿ; 6 ವರ್ಷದ ಬಾಲಕ ಸಾವು

Public TV
By Public TV
1 hour ago
DK Shivakumar 1
Bengaluru City

ಅಕ್ಕಪಕ್ಕದಲ್ಲಿ ಕುಳಿತರೂ ಮಾತನಾಡದ ಸಿಎಂ-ಡಿಸಿಎಂ; ʻಕುರ್ಚಿ ಕದನʼ ಮುನಿಸು ಜೋರಾಯ್ತಾ?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?