ಕಾರವಾರ: ಮನೆಯ ನೆಲಮಾಳಿಗೆಯಲ್ಲಿ ಅಡಗಿಸಿಟ್ಟು ಮಾರಾಟ ಮಾಡುತಿದ್ದ ಗೋವಾ ಮದ್ಯವನ್ನು ಬೆಂಗಳೂರು ಮೂಲದ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ನಡೆಸಿ 20 ಲಕ್ಷ ರೂ. ಮೌಲ್ಯದ 289 ಮದ್ಯದ ಬಾಕ್ಸ್ ಅನ್ನು ವಶಕ್ಕೆ ಪಡೆದಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ರಾಮನಗರದ ನಾಗನಾಥ ಗಲ್ಲಿ ಹಾಗೂ ಗಣೇಶ್ ಗಲ್ಲಿಯ ಎರಡು ಮನೆಗಳ ಮೇಲೆ ದಾಳಿ ನಡೆಸಿದ ಬೆಂಗಳೂರಿನಿಂದ ಆಗಮಿಸಿದ ವಿಶೇಷ ತಂಡ ನೆಲ ಮಾಳಿಗೆಯಲ್ಲಿ ಹುದುಗಿಸಿಟ್ಟಿದ್ದ ಗೋವಾ ಮದ್ಯವನ್ನು ವಶಪಡಿಸಿಕೊಂಡಿದೆ. ನಾಗನಾಥ ಗಲ್ಲಿಯ ಚಂದ್ರಕಾಂತ್ ಹಾಗೂ ಗಣೇಶ್ ಗಲ್ಲಿಯ ಹರ್ಷ ಗಾಂವ್ಕರ್, ಪರುಶುರಾಮ್ ಎಂಬವರನ್ನು ಅಕ್ರಮ ಮದ್ಯ ಸಂಗ್ರಹಣೆ ಆರೋಪದಡಿ ವಶಕ್ಕೆ ಪಡೆಯಲಾಗಿದೆ.
ರಾಮನಗರದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಜಾಲ ಹಬ್ಬಿದ್ದು ಸ್ಥಳೀಯ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಯಾವುದೇ ಕ್ರಮ ಜರುಗಿಸಿರಲಿಲ್ಲ. ಈ ಹಿನ್ನಲೆಯಲ್ಲಿ ಸ್ಥಳೀಯರು ಬೆಂಗಳೂರಿನ ಅಬಕಾರಿ ಅಧಿಕಾರಿಗಳಿಗೆ ದೂರು ನೀಡಿದ್ದರು. ಬೆಂಗಳೂರಿನಿಂದ ಆಗಮಿಸಿದ ಅಬಕಾರಿ ಅಧಿಕಾರಿ ರವಿ ಕುಮಾರ್ ನೇತ್ರತ್ವದ ತಂಡ ದಾಳಿ ನಡೆಸಿ ದೊಡ್ಡ ಮೊತ್ತದ ಗೋವಾ ಮದ್ಯ ವಶಪಡಿಸಿಕೊಂಡಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್ಬುಕ್ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews