Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಡಿಕೆ ಬೆಳೆ GST ವ್ಯಾಪ್ತಿಯಿಂದ ಹೊರಗಿಡಿ, ಹಳದಿ ಎಲೆ ರೋಗ ಬಿದ್ದ ಭೂಮಿಗೆ ಪರಿಹಾರ ನೀಡಿ – ರಾಜ್ಯ ಸಂಸದರ ನಿಯೋಗ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಅಡಿಕೆ ಬೆಳೆ GST ವ್ಯಾಪ್ತಿಯಿಂದ ಹೊರಗಿಡಿ, ಹಳದಿ ಎಲೆ ರೋಗ ಬಿದ್ದ ಭೂಮಿಗೆ ಪರಿಹಾರ ನೀಡಿ – ರಾಜ್ಯ ಸಂಸದರ ನಿಯೋಗ ಮನವಿ

Latest

ಅಡಿಕೆ ಬೆಳೆ GST ವ್ಯಾಪ್ತಿಯಿಂದ ಹೊರಗಿಡಿ, ಹಳದಿ ಎಲೆ ರೋಗ ಬಿದ್ದ ಭೂಮಿಗೆ ಪರಿಹಾರ ನೀಡಿ – ರಾಜ್ಯ ಸಂಸದರ ನಿಯೋಗ ಮನವಿ

Public TV
Last updated: August 21, 2025 9:53 pm
Public TV
Share
4 Min Read
HD Kumaraswamy
SHARE

-ಕೇಂದ್ರ ಸಚಿವರಿಗೆ ಅಡಿಕೆ ಬೆಳಗಾರರ ಸಮಸ್ಯೆ ಬಗ್ಗೆ ಚರ್ಚೆ, ಪರಿಹಾರಕ್ಕೆ ಒತ್ತಾಯ

ನವದೆಹಲಿ: ಅಡಿಕೆ ಬೆಳೆಯನ್ನು ಜಿಎಸ್‌ಟಿ ವ್ಯಾಪ್ತಿಯಿಂದ ಹೊರ ಇಡಬೇಕು ಮತ್ತು ಹಳದಿ ಎಲೆ ರೋಗ ಬಂದ ಭೂಮಿಗೆ ಕೇಂದ್ರ ಸರ್ಕಾರ ಒಮ್ಮೆ ನೀಡಬಹುದಾದ ಪರಿಹಾರ ನೀಡಬೇಕು ಎಂದು ರಾಜ್ಯ ಸಂಸದರ ನಿಯೋಗ ಕೇಂದ್ರ ಕೃಷಿ ಸಚಿವರಾದ ಶಿವರಾಜ್ ಸಿಂಗ್ ಚೌಹಾನ್ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತರಾಮನ್ ಅವರಿಗೆ ಮನವಿ ಮಾಡಿದೆ.

ಅಡಿಕೆ ಬೆಳೆಗಾರರ ಸಮಸ್ಯೆ ಕುರಿತು ಕೇಂದ್ರ ಸರ್ಕಾರದ ಗಮನ ಸೆಳೆಯುವ ದೃಷ್ಠಿಯಿಂದ ಗುರುವಾರ (ಆ.21) ರಾಜ್ಯ ಸಂಸದರ ನಿಯೋಗ ಕೇಂದ್ರ ಸಚಿವರ ಭೇಟಿಯಾಗಿ ಚರ್ಚಿಸಿದೆ. ಭೇಟಿ ವೇಳೆ ಕರ್ನಾಟಕ ಸೇರಿ ದೇಶದ ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.ಇದನ್ನೂ ಓದಿ: ಐದೇ ನಿಮಿಷದಲ್ಲಿ ಆಟೋ, ಇಲ್ಲವಾದಲ್ಲಿ 50 ರೂ. ಆಫರ್ ನೀಡಿ ವಂಚನೆ – ರಾಪಿಡೋಗೆ 10 ಲಕ್ಷ ದಂಡ

ಬಳಿಕ ಕರ್ನಾಟಕ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಂಸದ ವಿಶ್ವೇಶ್ವರ ಹೆಗೆಡೆ ಕಾಗೇರಿ, WHOದಿಂದ ಅಡಿಕೆ ಆರೋಗ್ಯಕ್ಕೆ ಹಾನಿಕಾರಕ, ಕ್ಯಾನ್ಸರ್‌ಗೆ ಕಾರಣ ಆಗುತ್ತದೆ ಎಂದು ಹೇಳಿದೆ. ಈ ಬಗ್ಗೆ ಸುಪ್ರೀಂಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದ್ದು, ಕೋರ್ಟ್ ಕೇಂದ್ರಕ್ಕೆ ವರದಿ ಕೇಳಿದೆ. ವರದಿ ವಿಳಂಬವಾಗುತ್ತಿರುವ ಹಿನ್ನಲೆ ಕೇಂದ್ರ ಸರ್ಕಾರದ ಅಧ್ಯಯನ ವರದಿ ಶೀಘ್ರ ಕೋರ್ಟ್‌ಗೆ ಸಲ್ಲಿಸಬೇಕು ಮತ್ತು ಅಧ್ಯಯನ ಮಾಡುತ್ತಿರುವ ಉನ್ನತ ಸಮಿತಿ ಜೊತೆಗೆ ಒಂದು ಸಭೆ ಏರ್ಪಡಿಸಲು ಮನವಿ ಮಾಡಿದ್ದೇವೆ ಎಂದರು.

ಹಳದಿ ಎಲೆ ರೋಗ, ಎಲೆ ಚುಕ್ಕೆ ರೋಗದ ಬಗ್ಗೆಯೂ ಚರ್ಚೆಯಾಗಿದೆ. ಹಳದಿ ಎಲೆ ರೋಗ ಬಂದರೆ ಆ ಪ್ರದೇಶದಲ್ಲಿ ಮತ್ತೆ ಅಡಿಕೆ ಬೆಳೆಯಲು ಸಾಧ್ಯವಿಲ್ಲ. ಇಂತಹ ಪ್ರದೇಶ ಗುರುತಿಸಿ ಅದಕ್ಕೆ ಪರಿಹಾರ ಹೇಗೆ ನೀಡಬೇಕು ಹಾಗೂ ಹಳದಿ ಎಲೆ ರೋಗಕ್ಕೆ ಔಷಧಿ ಬೇಕಿದೆ. ಇದಕ್ಕೆ ಪರಿಹಾರ ಕಂಡುಕೊಳ್ಳಲು ಕೇಳಿಕೊಂಡಿದ್ದೇವೆ. ಈ ಬಗ್ಗೆ ಶಿವರಾಜ್ ಸಿಂಗ್ ಚೌಹಾನ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ತಿಳಿಸಿದರು.

ನಿರ್ಮಲಾ ಸೀತರಾಮನ್ ಜೊತೆಗೆ ಸಭೆ ನಡೆಸಿ ವಿದೇಶದಿಂದ ಬರುವ ಅಡಿಕೆ ಬಗ್ಗೆ ಚರ್ಚಿಸಿದೆ, ಕಳ್ಳ ಮಾರ್ಗದಲ್ಲಿ ಅಡಿಕೆ ಬಾರದಂತೆ ತಡೆಯಲು ಕಠಿಣ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದೇವೆ. ಅಡಿಕೆಗೆ 11% ತೇವಾಂಶ ಇದ್ದೇ ಇರುತ್ತೆ, ನಿಯಮಗಳ ಪ್ರಕಾರ ಅದು ಅದು 7% ಇರಬೇಕು ಎಂದಿದೆ. ಆದರೆ ಇದು ನೈಸರ್ಗಿಕವಾಗಿ ಸಾಧ್ಯವಿಲ್ಲ. ಹೀಗಾಗಿ ತೇವಾಂಶದ ಪ್ರಮಾಣ 11% ಹೆಚ್ಚಿಸಿ, 7% ನೀಡುವ ಬೆಲೆಯನ್ನು 11% ತೇವಾಂಶ ಇರುವ ಅಡಿಕೆ ನೀಡಬೇಕು ಎಂದು ಕೇಳಿದೆ.ಇದನ್ನೂ ಓದಿ: ಕನ್ನಡಕ್ಕೆ ಅಜಯ್ ದೇವಗನ್ – ಜೆಪಿ ತುಮಿನಾಡ್‌ ಸಿನಿಮಾದಲ್ಲಿ ಅಭಿನಯ!

ಅಡಿಕೆ ಸೈಜ್‌ನಿಂದ ದರದಲ್ಲಿ ವ್ಯತ್ಯಾಸವಾಗುತ್ತಿದೆ. ಇದು ಆಗಬಾರದು ಎಂದು ಮನವಿ ಮಾಡಿದೆ, ಅಡಿಕೆಗೆ ಹೆಚ್ಚು ತೆರಿಗೆ ವಿಧಿಸಲಾಗುತ್ತಿದೆ. ಸದ್ಯ 5% ಜಿಎಸ್‌ಟಿ ಇದೆ, ಇದನ್ನು ಕಡಿಮೆ ಮಾಡಿ ಅಥವಾ ತೆರವು ಮಾಡಲು ಮನವಿ ಮಾಡಿದೆ. ಅಡಿಕೆ ಕುಯ್ಲಿಗೆ ಕಾರ್ಮಿಕರ ಸಮಸ್ಯೆಯಾಗಿದೆ. ಅದಕ್ಕೆ ಫೈಬರ್ ದೋಟಿಗೆ ಬೇಡಿಕೆ ಹೆಚ್ಚಿದೆ. ಆದರೆ ಇದು ವಿದೇಶದಿಂದ ಆಮದು ಮಾಡಿಕೊಳ್ಳಬೇಕಿದ್ದು, ಇದಕ್ಕೆ 48% ಕಸ್ಟಮ್ಸ್ ಇದೆ. ಅದನ್ನು ಕಡಿಮೆ ಮಾಡಲು ಮನವಿ ಮಾಡಿದೆ, ಅಡಿಕೆ ಕೊಳೆ ರೋಗಕ್ಕೆ ಬಳಕೆಯಾಗುವ ಕಾಪರ್ ಸಲ್ಫೇಟ್‌ಗೆ 18% ಜಿಎಸ್‌ಟಿ ಇದೆ .ಅದನ್ನು 5% ಇಳಿಕೆಗೆ ಕೇಳಿದೆ, ಅಡಿಕೆ ಬೆಳೆಗಾರರಿಗೆ ಬ್ಯಾಂಕುಗಳಲ್ಲಿ ಇರುವ ಸಾಲ ಸೌಲಭ್ಯ ಹೆಚ್ಚಿಸಬೇಕು ಮತ್ತು ಕಡಿಮೆ ಬಡ್ಡಿ ವಿಧಿಸಲು ಮನವಿ ಮಾಡಿದೆ.

ಅಡಿಕೆ ಹಾಳೆ ಬಗ್ಗೆ ಅನಗತ್ಯ ಗೊಂದಲ ಸೃಷ್ಟಿಯಾಗುತ್ತಿದೆ, ಈ ಬಗ್ಗೆ ಸರ್ಕಾರ ಜಾಗೃತಿ ಮೂಡಿಸಬೇಕು, ಹವಾಮಾನ ಆಧರಿತ ಬೆಳೆ ವಿಮೆ ಯೋಜನೆಯಿಂದ ಅಡಿಕೆ ಬೆಳೆಗಾರರಿಗೆ ಅನುಕೂಲ ಆಗುತ್ತಿದೆ. ಪರಿಹಾರ ನೀಡಲು ಮಳೆ ಮಾಪನ ಯಂತ್ರಗಳು ಆಧಾರಿಸಲಾಗುತ್ತದೆ. ಇದು ಪ್ರತಿ ಪಂಚಾಯತ್‌ನಲ್ಲಿರುತ್ತವೆ, ಆದರೆ ರಾಜ್ಯದಲ್ಲಿ 130 ಯಂತ್ರಗಳು ಕೆಟ್ಟು ನಿಂತಿವೆ, ಅದನ್ನು ಸರಿಪಡಿಸಲು, ಮೇಲ್ವಿಚಾರಣೆ ಮಾಡಲು ಮನವಿ ಮಾಡಿದೆ ಎಂದು ಹೇಳಿದರು.

ಬಳಿಕ ಮಾತನಾಡಿದ ಶಾಸಕ ಅರಗ ಜ್ಞಾನೇಂದ್ರ, ಕಳೆದ ಇಪ್ಪತ್ತು ವರ್ಷಗಳಿಂದ ದೆಹಲಿಗೆ ಬರುತ್ತಿದ್ದೇವೆ, ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಹಂತ ಹಂತವಾಗಿ ನಿಭಾಯಿಸುತ್ತಿದ್ದೇವೆ, ಯಾವ ಬೆಳೆಗೂ ಸಂಘಟಿತ ಹೋರಾಟ ಇಲ್ಲ, ನಾವು ಅಡಿಕೆಗೆ ಹೋರಾಟ ಮಾಡುತ್ತಿದ್ದೇವೆ, ವಿದೇಶಿ ಅಡಿಕೆಯನ್ನು ನಿಯಂತ್ರಣ ಮಾಡುವ ಪ್ರಯತ್ನ ಮಾಡಿದೆ, ಇದು ಇನ್ನಷ್ಟು ಹೆಚ್ಚಿಸಬೇಕು, ನ್ಯಾಯಲಯದಲ್ಲೂ ನಾವು ಹೋರಾಟ ಮಾಡುತ್ತಿದ್ದೇವೆ ಎಂದರು.

ಇದೇ ವೇಳೆ ಮೈಸೂರು ಸಂಸದ ಯದುವೀರ್ ಒಡೆಯರ್ ಮಾತನಾಡಿ, ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಕೇಂದ್ರದ ಗಮನಕ್ಕೆ ತಂದಿದೆ, ಸದ್ಯ ಸಚಿವರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ. ಪೂರಕ ಕೆಲಸಗಳು ಆಗುವ ಭರವಸೆ ಇದೆ ಎಂದರು. ನಿಯೋಗದಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಸಂಸದರಾದ ಬಿವೈ ರಾಘವೇಂದ್ರ, ಗೋವಿಂದ್ ಕಾರಜೋಳ, ಬ್ರಿಜೇಶ್ ಚೌಟಾ, ಪ್ರಭಾ ಮಲ್ಲಿಕಾರ್ಜುನ್ ಸೇರಿ ಇನ್ನಿತರಿದ್ದರು. ಇದೇ ವೇಳೆ ಕ್ಯಾಂಪ್ಕೊದ ಅಧಿಕಾರಿಗಳು ಉಪಸ್ಥಿತರಿದ್ದರು.ಇದನ್ನೂ ಓದಿ: ಧರ್ಮಸ್ಥಳಕ್ಕೆ ಹೋಗಲು ಭಯವಿದೆ – ಪೊಲೀಸರ ಮುಂದೆ ಹಲವು ಬೇಡಿಕೆ ಇಟ್ಟ ಸಮೀರ್‌

 

TAGGED:hd kumaraswamyNew Delhiನವದೆಹಲಿ
Share This Article
Facebook Whatsapp Whatsapp Telegram

Cinema news

Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories
Bhushan Kumar Vivek Agnihotri 2
ಸೆಟ್ಟೇರುತ್ತಿದೆ ʻಆಪರೇಷನ್‌ ಸಿಂಧೂರʼ ಸಿನಿಮಾ – ಭೂಷಣ್ ಕುಮಾರ್, ವಿವೇಕ್ ಅಗ್ನಿಹೋತ್ರಿ ಅಧಿಕೃತ ಘೋಷಣೆ
Bollywood Cinema Latest Main Post National
Zubeen Garg
ಮದ್ಯಪಾನ ಮಾಡಿ ಈಜಲು ತೆರಳಿದ್ದೇ ಗಾಯಕ ಜುಬೀನ್ ಗಾರ್ಗ್ ಸಾವಿಗೆ ಕಾರಣ: ಸಿಂಗಾಪುರ ಕೋರ್ಟ್‌
Bollywood Cinema Court Latest National Top Stories World
Harshil Kalia jaipur accident
ಡಿವೈಡರ್‌ಗೆ ಕಾರು ಡಿಕ್ಕಿ – ಭೀಕರ ಅಪಘಾತದಲ್ಲಿ ನಟಿ ಸಾವು
Cinema Latest Main Post National

You Might Also Like

R Ashok 1
Bengaluru City

ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿದ ಸರ್ಕಾರ, ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ: ಅಶೋಕ್

Public TV
By Public TV
16 minutes ago
reliance industries mukesh ambani
Latest

ಇರಾನ್‌ನಿಂದ ನಾವು ಕಚ್ಚಾ ತೈಲ ಖರೀದಿಸಿಲ್ಲ: ರಿಲಯನ್ಸ್‌ ಇಂಡಸ್ಟ್ರೀಸ್‌

Public TV
By Public TV
45 minutes ago
ಸಾಂದರ್ಭಿಕ ಚಿತ್ರ
Latest

ಶೌರ್ಯ ಪ್ರಶಸ್ತಿ ಪಡೆದವರಿಗೆ ಜೀವಿತಾವಧಿಯ ರೈಲು ಪ್ರಯಾಣ ಉಚಿತ – ಕೇಂದ್ರದ ಮಹತ್ವದ ನಿರ್ಣಯ

Public TV
By Public TV
1 hour ago
LPG Vessel Apollo Ocean Arrives at New Mangaluru Port
Dakshina Kannada

ಮಂಗಳೂರಿಗೆ ಬಂತು ಎಲ್‌ಪಿಜಿ ಹೊತ್ತ ಟ್ಯಾಂಕರ್‌

Public TV
By Public TV
2 hours ago
Russian Oil
Latest

‌ರಷ್ಯಾದ 10 ಲಕ್ಷ ಬ್ಯಾರಲ್‌ ಕಚ್ಚಾ ತೈಲ ಹೊತ್ತೊಯ್ಯುತ್ತಿದ್ದ ಟರ್ಕಿ ಚಾಲಿತ ಟ್ಯಾಂಕರ್‌ ಮೇಲೆ ದಾಳಿ

Public TV
By Public TV
3 hours ago
Chinnaswamy Stadium
Bengaluru City

ಚಿನ್ನಸ್ವಾಮಿಯಲ್ಲಿ ಕ್ರಿಕೆಟ್‌ ನೋಡಲು 4 ಟಿಕೆಟ್‌ ಕೊಡಿಸಿ: ಶಾಸಕರಿಂದ ಪಕ್ಷಾತೀತ ಬೇಡಿಕೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?