ರಾಯಚೂರು: ಜಿಲ್ಲೆಯ ಲಿಂಗಸುಗೂರು (Lingasuguru) ತಾಲೂಕಿನ ಮಾಕಾಪುರ ಬಳಿ ಗ್ರಾನೈಟ್ ಕ್ವಾರಿಯಲ್ಲಿ (Granite Quarry) ಸಿಡಿಮದ್ದು ಜೋಡಿಸುವ ವೇಳೆ ಸ್ಫೋಟ ಸಂಭವಿಸಿ ಓರ್ವ ಕಾರ್ಮಿಕ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೋರ್ವನಿಗೆ ಗಂಭೀರ ಗಾಯಗಳಾಗಿವೆ.
ಮೈಮೇಲೆ ಕಲ್ಲುಬಿದ್ದು ಬಾಗಲಕೋಟೆಯ (Bagalkote) ಇಳಕಲ್ನ ವೆಂಕಟೇಶ (38) ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಯಲ್ಲಿ ಕೊಪ್ಪಳದ ಕುಷ್ಠಗಿ ಮೂಲದ ಮಹಾಲಿಂಗ ಎಂಬವರಿಗೆ ಗಂಭೀರ ಗಾಯಗಳಾಗಿವೆ. ಗ್ರಾನೈಟ್ ಕ್ವಾರಿ ಅಕ್ರಮವಾಗಿ ನಡೆಯುತ್ತಿದ್ದು, ಘಟನೆ ಹೊರಗೆ ಬಾರದಂತೆ ಮೃತದೇಹವನ್ನ ಬಾಗಲಕೋಟೆಗೆ ರವಾನಿಸಲಾಗಿತ್ತು. ಈಗ ಮೃತದೇಹವನ್ನ ಮುದಗಲ್ ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ. ಇದನ್ನೂ ಓದಿ: ಈ ಸರ್ಕಾರ ಪೋಸ್ಟ್ ಮಾರ್ಟಂಗೂ ದರ ವಿಧಿಸಿಬಿಟ್ರೆ ಸಾಯೋದಕ್ಕೂ ಜನ ಹಿಂಜರೀತಾರೆ – ಸಿ.ಟಿ ರವಿ ಲೇವಡಿ
ಗಾಯಾಳುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನೆ ನಡೆದು ಒಂದು ದಿನ ಕಳೆದರೂ ಪ್ರಕರಣ ದಾಖಲಾಗಿಲ್ಲ. ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬಾಲಕನ ಮೇಲೆ ಹಲ್ಲೆ ನಡೆಸಿ, ಚಡ್ಡಿಯೊಳಗೆ ಇರುವೆ ಬಿಟ್ಟು ವಿಕೃತಿ – ಆರೋಪಿಗಳು ಅಂದರ್