Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ದಶಪಥ ಹೆದ್ದಾರಿಯ ಕ್ರೆಡಿಟ್ ರೇವಣ್ಣಗೆ ಸಲ್ಲಬೇಕು: ಸಿ.ಎಂ ಇಬ್ರಾಹಿಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ದಶಪಥ ಹೆದ್ದಾರಿಯ ಕ್ರೆಡಿಟ್ ರೇವಣ್ಣಗೆ ಸಲ್ಲಬೇಕು: ಸಿ.ಎಂ ಇಬ್ರಾಹಿಂ

Bengaluru City

ದಶಪಥ ಹೆದ್ದಾರಿಯ ಕ್ರೆಡಿಟ್ ರೇವಣ್ಣಗೆ ಸಲ್ಲಬೇಕು: ಸಿ.ಎಂ ಇಬ್ರಾಹಿಂ

Public TV
Last updated: July 7, 2023 10:33 am
Public TV
Share
3 Min Read
BNG CM IBRAHIM 2
SHARE

ಬೆಂಗಳೂರು: ಬೆಂಗಳೂರು-ಮೈಸೂರು ದಶಪಥ (Bengaluru-Mysuru Expressway) ಹೆದ್ದಾರಿಯ ಕ್ರೆಡಿಟ್ ರೇವಣ್ಣ (H.D.Revanna) ಅವರಿಗೆ ಸಲ್ಲಬೇಕು. ಅವರ ಚಿಂತನೆಯಿಂದಲೇ ಈ ಹೆದ್ದಾರಿ ನಿರ್ಮಾಣವಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ (C.M.Ibrahim) ಹೇಳಿದ್ದಾರೆ.

ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ ಕ್ರೆಡಿಟ್ ವಾರ್ ವಿಚಾರವಾಗಿ ಬೆಂಗಳೂರಿನಲ್ಲಿ (Bengaluru) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಶಪಥ ಹೆದ್ದಾರಿಯ ಕ್ರೆಡಿಟ್ ರೇವಣ್ಣಗೆ ಸಲ್ಲಬೇಕು. ಇದರ ಉದ್ಘಾಟನೆಯನ್ನು ಮೋದಿಯವರು (Narendra Modi) ಮಾಡುತ್ತಿದ್ದಾರೆ. ಇದು ಸಂತೋಷದ ವಿಷಯ. ಆದರೆ ಇದನ್ನು ಚುನಾವಣೆಗೆ ಬಳಸುತ್ತೇವೆ ಎಂದರೆ ಆ ರೋಡಿನಲ್ಲಿ ಬಿಜೆಪಿ ಪಕ್ಷಕ್ಕೆ ಒಂದು ಸೀಟೂ ಬರುವುದಿಲ್ಲ. ಎಷ್ಟೇ ಶೋಗಳನ್ನು ಮಾಡಿದರೂ ಆಗುವುದಿಲ್ಲ. ಸುಮಲತಾ (Sumalatha Ambareesh) ಬಿಜೆಪಿಗೆ (BJP) ಸೇರಬೇಕು ಎನ್ನುತ್ತಿದ್ದಾರೆ. ಅವರು ತುಂಬಾ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ನಾರಾಯಣ ಗೌಡ (Narayana Gowda) ಕಾಂಗ್ರೆಸ್‌ಗೆ (Congress) ಹೋಗುತ್ತಾರೆ ಎನ್ನುತ್ತಾರೆ. ಹೀಗಾದರೆ ರಾಜಕೀಯದಲ್ಲಿ ನೈತಿಕತೆ ಎಲ್ಲಿ ಉಳಿಯಿತು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬಿಜೆಪಿ ಎಂಎಲ್‌ಸಿ ಪುಟ್ಟಣ್ಣ ಕಾಂಗ್ರೆಸ್‌ ಸೇರ್ಪಡೆ

ಜನತಾ ದಳದ (JDS) ವಿಷನ್ ಕ್ಲಿಯರ್ ಆಗಿದೆ. ಜೈಲು, ಬೇಲ್ ಇಲ್ಲದವರಿಗೆ ಮಾತ್ರ ಜೆಡಿಎಸ್ ಟಿಕೆಟ್ ನೀಡುತ್ತಿದೆ. 17ರಲ್ಲಿ ಎಷ್ಟು ಜನ ಕಾಂಗ್ರೆಸ್ ಗೆ ಹೋಗುತ್ತಿದ್ದಾರೆ. ಇವರಲ್ಲಿ ನಾವು ಯಾರನ್ನೂ ಸೇರಿಸಿಕೊಳ್ಳುವುದಿಲ್ಲ. ಅವರೇ ಬಂದರೂ ನಾವು ಕರೆದುಕೊಳ್ಳುವುದಿಲ್ಲ ಎಂದು ಸ್ಪಷ್ಟ ತೀರ್ಮಾನ ಮಾಡಿದ್ದೇವೆ. ಇವತ್ತು ನಾವು ಒಬ್ಬೊಬ್ಬರನ್ನು ತೂಕ ಮಾಡಿ, ಅಳತೆ ಮಾಡಿ ತೆಗೆದುಕೊಳ್ಳುತ್ತಿದ್ದೇವೆ. ಇದಕ್ಕೆ ಕಾರಣ ಈ ಪಕ್ಷವನ್ನು ಒಂದು ಬುನಾದಿ ಮೇಲೆ ತೆಗೆದುಕೊಂಡು ಹೋಗಬೇಕು. ನಾವು ಕಾರ್ಯಕ್ರಮದ ಮೇಲೆ ಚುನಾವಣೆಗೆ ಹೋಗುತ್ತಿದ್ದೇವೆ ಹೊರತು ರೋಡ್ ಶೋ (Road Show) ಮೇಲಲ್ಲ ಎಂದರು.

ಬಿಜೆಪಿ ಮೋದಿ ಹೆಸರಿನ ಮೇಲೆ, ಕಾಂಗ್ರೆಸ್ ಸೋನಿಯಾ ಹೆಸರಿನ ಮೇಲೆ ಚುನಾವಣೆಗೆ ಹೋಗುತ್ತಿದೆ. ಆದರೆ ನಾವು ಪಂಚರತ್ನ ಕಾರ್ಯಕ್ರಮದ ಮೇಲೆ ಹೋಗುತ್ತಿದ್ದೇವೆ. ಅವರೆಲ್ಲಾ ಉಚಿತ ಖಚಿತ ಎನ್ನುತ್ತಾರೆ. ಯಾರಿಗೆ ಕೊಡುತ್ತಾರೆ? ಸೊಸೆಗಾ ಅಥವಾ ಅತ್ತೆಗಾ? ಹೀಗಾಗಿ ನಾವು 65 ವರ್ಷ ವಯಸ್ಸಾದವರಿಗೆ ಪೆನ್ಷನ್ ಹಾಗೂ ವಿಧವೆಯರಿಗೆ 500 ರೂ. ನೀಡುತ್ತೇವೆ ಎಂದು ಖಚಿತವಾಗಿ ಹೇಳಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿರುವುದಕ್ಕೂ ಸಿಜೆಐಗೆ ಪತ್ರ ಬರೆದಿದ್ದಕ್ಕೂ ಸಂಬಂಧ ಇಲ್ಲ: ವಿವೇಕ್ ರೆಡ್ಡಿ

ಸೋಮಣ್ಣ (V.Somanna) ಕಾಂಗ್ರೆಸ್‌ಗೆ ಸೇರ್ಪಡೆ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಸೋಮಣ್ಣ ಕಾಂಗ್ರೆಸ್‌ಗೆ ಹೋಗುವುದಿಲ್ಲ. ನಾನು ಅವರ ಬಳಿ ಮಾತನಾಡಿದ್ದೇನೆ. ಅವರಿಗೂ, ಬಿ.ಎಸ್.ಯಡಿಯೂರಪ್ಪನವರಿಗೂ (B.S.Yediyurappa) ಭಿನ್ನಾಭಿಪ್ರಾಯವಿದೆ ಅಷ್ಟೇ. ಇದು ಆಂತರಿಕ ಸಮಸ್ಯೆಯಾಗಿದ್ದು ಅವರಿಗೂ, ಇವರಿಗೂ, ವಿಜಯೇಂದ್ರಗೂ ಸರಿ ಹೊಂದುತ್ತಿಲ್ಲ ಅಷ್ಟೇ. ಸೋಮಣ್ಣನವರಿಗೆ ಇದ್ದ ವರ್ಚಸ್ಸು ಅವರಿಗೆ ಇದ್ದೇ ಇದೆ. ಸೋಮಣ್ಣನಿಗೆ ಶಕ್ತಿ ದೊರತಿದ್ದೇ ಜನತಾ ದಳದಿಂದ ಎಂದರು.

BNG CM IBRAHIM 1

ಈಶ್ವರ್ ಖಂಡ್ರೆ ಅವರು ಲೋಕಸಭೆ ಚುನಾವಣೆಯಲ್ಲಿ ನಿಂತಿದ್ದರಲ್ಲಾ, ಒಂದು ಲಿಂಗಾಯತರ ಮತ ಬಂತಾ ಅವರಿಗೆ? ಈಶ್ವರ್ ಖಂಡ್ರೆಗೂ ಶಾಮನೂರು ಅವರಿಗೂ ಲಿಂಗಾಯತರಿಂದ ಒಂದು ಮತ ಬರಲಿಲ್ಲ. ಅವರ ಹೆಂಡತಿಯೇ ಒಂದು ಮತ ಹಾಕಲಿಲ್ವೇನೋ ಗೊತ್ತಿಲ್ಲ. ಮತ ಹಾಕುವುದು ಸಾಬರು. ಆದರೆ ವೀರಶೈವ ಎಂದು ಹೇಳಿಕೊಳ್ಳುತ್ತಾರೆ ಎಂದು ಟೀಕೆ ಮಾಡಿದರು. ಇದನ್ನೂ ಓದಿ: ದಶಪಥ ರಸ್ತೆ ಜೆಡಿಎಸ್ ಸರ್ಕಾರದ ಕೊಡುಗೆ – ಶಾಸಕ ಪುಟ್ಟರಾಜು

ಯಡಿಯೂರಪ್ಪ ರಾಜಕಾರಣದಲ್ಲಿ ಬೆಳೆಯಲು ವೀರೇಂದ್ರ ಪಾಟೀಲ್ ಕಾಂಗ್ರೆಸ್‌ನಿಂದ ಹೊರ ಹೋಗಿದ್ದೇ ಕಾರಣ. ಇದು ಅವರಿಗೆ ವರದಾನವಾಯಿತು. ಇಲ್ಲವೆಂದರೆ ಯಡಿಯೂರಪ್ಪ ರಾಜಕಾರಣದಲ್ಲಿ ಬೆಳೆಯುತ್ತಿರಲಿಲ್ಲ. ಇವರ ಶಕ್ತಿಯೇನು ಎಂದು ನಮಗೆ ಗೊತ್ತಿದೆ ಎಂದು ಹೇಳಿದರು.

ನಮ್ಮ ಪ್ರತಿನಿಧಿಗಳು ಚುನಾವಣಾ ಆಯೋಗದ ಸಭೆಗೆ ಹೋಗಿದ್ದಾರೆ. ಕುಕ್ಕರ್ ಹಂಚುವಿಕೆ ಹಾಗೂ ಸೀರೆ ಹಂಚುವುದನ್ನು ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷ ಬಹಿರಂಗವಾಗಿ ಮಾಡುತ್ತಿದೆ. ಕುಕ್ಕರ್ ಬ್ಲಾಸ್ಟ್ ಆಗಿ ಇಬ್ಬರು ಗಂಭೀರಗೊಂಡಿದ್ದಾರೆ. ಇದರ ಬಗ್ಗೆ ಪೊಲೀಸರು ಅಥವಾ ಚುನಾವಣಾ ಆಯೋಗ ಇದನ್ನು ಗಮನಕ್ಕೆ ತೆಗೆದುಕೊಂಡಿದೆಯಾ? ಈ ಕುರಿತು ಬೀದರ್ ಡಿಸಿ ಹಾಗೂ ಎಸ್ಪಿ ಕ್ರಮ ಕೈಗೊಳ್ಳದೇ ಇದ್ದರೆ ನಾನು 15ನೇ ತಾರೀಕಿನಂದು ಡಿಸಿ ಕಚೇರಿ (DC Office) ಮುಂದೆ ಸತ್ಯಾಗ್ರಹ ಮಾಡಬೇಕಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಬಗ್ಗೆ ಚರ್ಚೆ ನಡೆಯುತ್ತಿದೆ. ಕಾಂಗ್ರೆಸ್, ಬಿಜೆಪಿ ಪಕ್ಷ ರಿಲೀಸ್ ಆಗಲಿ ಎಂದು ಹೇಳಿದ್ದೇವೆ. ಚರ್ಚೆ ಇನ್ನೂ ಮುಗಿದಿಲ್ಲ. ಹಾಗಾಗಿ ಪಟ್ಟಿ ರಿಲೀಸ್ ಫೈನಲ್ ಆಗಲಿಲ್ಲ ಎಂದರು. ಅಪ್ಲಿಕೇಷನ್ ಶುಲ್ಕ ಒಂದು ಲಕ್ಷ ರೂ. ಮಾಡಿದ್ದೇವೆ. ದಲಿತ ಅಭ್ಯರ್ಥಿಗಳಿಗೆ 50 ಸಾವಿರ ರೂ. ಮಾಡಿದ್ದೇವೆ. ಕುರುಬ ನಾಯಕರು ಇದ್ದೇ ಇದ್ದಾರೆ. ಜಿಲ್ಲೆಗೊಂದು, ತಾಲೂಕಿಗೊಂದು ಎಂದು ಏನಿಲ್ಲ. ಸಾಮಾಜಿಕ ನ್ಯಾಯ ಮನಸಿನಲ್ಲಿ ಇಟ್ಟುಕೊಂಡು ಮಾಡುತ್ತಿದ್ದೇವೆ ಎಂದರು. ಇದನ್ನೂ ಓದಿ: ಹೆಂಡತಿ ಹೆಸರಿನಲ್ಲಿ ಬಿಜೆಪಿ ರಾಜಕಾರಣ ಮಾಡಲ್ಲ: ಕಟೀಲ್

TAGGED:bengaluruBengaluru-Mysuru ExpresswaybjpC.M Ibrahimcongresselectionh d revannajdsಕಾಂಗ್ರೆಸ್ಚುನಾವಣೆಜೆಡಿಎಸ್ಬಿಜೆಪಿಬೆಂಗಳೂರುಬೆಂಗಳೂರು-ಮೈಸೂರು ದಶಪಥ ಹೆದ್ದಾರಿಸಿ ಎಂ ಇಬ್ರಾಹಿಂಹೆಚ್ ಡಿ ರೇವಣ್ಣ
Share This Article
Facebook Whatsapp Whatsapp Telegram

Cinema news

Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema
Rashmika Mandanna Vijay Devarakonda 1
ವಿರೋಶ್‌ ಕಲ್ಯಾಣಕ್ಕೆ ಸ್ಯಾಂಡಲ್‌ವುಡ್‌ನ 11 ಮಂದಿಗೆ ಆಹ್ವಾನ
Cinema Latest Sandalwood Top Stories

You Might Also Like

Ranji Trophy Final Jammu Kashmir vs Karnataka
Cricket

477 ರನ್‌ಗಳ ಭಾರೀ ಮುನ್ನಡೆಯಲ್ಲಿ ಜಮ್ಮು ಕಾಶ್ಮೀರ – ಹುಬ್ಬಳ್ಳಿಗೆ ಬರುತ್ತಿದ್ದಾರೆ ಸಿಎಂ ಒಮರ್‌ ಅಬ್ದುಲ್ಲಾ

Public TV
By Public TV
19 minutes ago
Allegations of marijuana and drug supply in Ballari College ABVP protests
Bellary

ಬಳ್ಳಾರಿ ಕಾಲೇಜಿನಲ್ಲಿ ಗಾಂಜಾ, ಡ್ರಗ್ಸ್ ಸಪ್ಲೈ ಆರೋಪ – ಎಬಿವಿಪಿಯಿಂದ ಪ್ರತಿಭಟನೆ, ಪೀಠೋಪಕರಣ ಧ್ವಂಸ

Public TV
By Public TV
2 hours ago
ramalingareddy
Bengaluru City

ಮೇ ತಿಂಗಳಿಗೆ ಜಿಬಿಎ ಚುನಾವಣೆ ನಡೆಯುತ್ತೆ: ರಾಮಲಿಂಗಾರೆಡ್ಡಿ

Public TV
By Public TV
2 hours ago
udupi lokayukta raid
Latest

ಉಡುಪಿಯ ಹಲವೆಡೆ ಉಪಲೋಕಾಯುಕ್ತ ದಿಢೀರ್ ದಾಳಿ – ಜೀನ್ಸ್ ಪ್ಯಾಂಟ್ ಧರಿಸಿ ಬಂದ ಸರ್ಕಾರಿ ನೌಕರರಿಗೆ ತರಾಟೆ

Public TV
By Public TV
3 hours ago
Chikkaballapura 5
Chikkaballapur

ಚಿಕ್ಕಬಳ್ಳಾಪುರದಲ್ಲಿ ಕಂದಾಯ ಇಲಾಖೆ ಸಮಾವೇಶ – 25,000 ಫಲಾನುಭವಿಗಳಿಗೆ ಸವಲತ್ತು ಸಮರ್ಪಣೆ

Public TV
By Public TV
3 hours ago
Dalits denied haircuts Government opens barber shop Gadag 2
Districts

ದಲಿತರಿಗೆ ಕ್ಷೌರ ನಿರಾಕರಣೆ – ಸರ್ಕಾರದಿಂದಲೇ ಕ್ಷೌರದಂಗಡಿ ಆರಂಭ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?