Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಿದ್ದಾನೆ ಎಂದುಕೊಂಡ್ವಿ, ಆದ್ರೆ ಮಚ್ಚಿನಿಂದ ಹೊಡೆದು ಓಡಿ ಹೋದ: ಪ್ರತ್ಯಕ್ಷದರ್ಶಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಿದ್ದಾನೆ ಎಂದುಕೊಂಡ್ವಿ, ಆದ್ರೆ ಮಚ್ಚಿನಿಂದ ಹೊಡೆದು ಓಡಿ ಹೋದ: ಪ್ರತ್ಯಕ್ಷದರ್ಶಿ

Districts

ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಿದ್ದಾನೆ ಎಂದುಕೊಂಡ್ವಿ, ಆದ್ರೆ ಮಚ್ಚಿನಿಂದ ಹೊಡೆದು ಓಡಿ ಹೋದ: ಪ್ರತ್ಯಕ್ಷದರ್ಶಿ

Public TV
Last updated: November 18, 2019 9:59 am
Public TV
Share
3 Min Read
TANVEER
SHARE

ಮೈಸೂರು: ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಿದ್ದಾನೆ ಎಂದುಕೊಂಡಿದ್ವಿ, ಆದರೆ ಆತ ಮಚ್ಚಿನಿಂದ ಹೊಡೆದು ಓಡಿ ಹೋದ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಶಾಸಕ ತನ್ವೀರ್ ಸೇಠ್ ಚಾಕು ಇರಿತ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ಭಾನುವಾರ ರಾತ್ರಿ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಬನ್ನಿ ಮಂಟಪ ಸಮೀಪದ ಪಾರ್ಟಿ ಹಾಲಿಗೆ ತಮ್ಮ ಆತ್ಮೀಯ ಮಗನ ಮದುವೆಯ ಬೀಗರೂಟಕ್ಕೆ ಆಗಮಿಸಿದ್ದರು. ಈ ವೇಳೆ ಯುವಕ ಫರಾನ್ (24) ಚಾಕುವಿನಿಂದ ಹಲ್ಲೆ ಮಾಡಿದ್ದಾನೆ.

MYS THANVEER SHET ATTACK

ಸಮಾರಂಭದಲ್ಲಿ ಕುಳಿತಿದ್ದ ತನ್ವೀರ್ ಸೇಠ್‍ಗೆ ಅವರ ಬಳಿ ಬಂದ ಫರಾನ್ ಚಾಕುವಿನಿಂದ ಕುತ್ತಿಗೆ ಭಾಗಕ್ಕೆ ಇರಿದು ಪರಾರಿಯಾಗಲು ಪ್ರಯತ್ನಿಸಿದಾಗ ಸ್ಥಳೀಯರು ಅವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಗಾಯಾಳು ತನ್ವೀರ್ ಸೇಠ್ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಫರಾನ್ ಎಸ್‍ಡಿಪಿಐ ಕಾರ್ಯಕರ್ತನಾಗಿದ್ದು ಹಲ್ಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಈ ಸಂಬಂಧ ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಫರಾನ್ ಅನ್ನು ಬಂಧಿಸಿ ವಿಚಾರಣೆ ಮಾಡುತ್ತಿದ್ದಾರೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತರಾದ ಕೆ.ಟಿ ಬಾಲಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಹೇಗಾಯ್ತು ಎಂಬುದನ್ನು ಪ್ರೊಫೆಸರ್ ನಬಿಜಾನ್ ಅವರು ಮಾಧ್ಯಮಗಳಿಗೆ ವಿವರಿಸಿದ್ದಾರೆ.

mys tanveer sait 3

ಪ್ರತ್ಯಕ್ಷದರ್ಶಿ ವಿವರಿಸಿದ್ದು ಹೀಗೆ:
ರಾತ್ರಿ 10 ಗಂಟೆಯ ವೇಳೆ ಬೀಗರೂಟ ಮಾಡಿದ ಮೇಲೆ ಸಂತೋಷವಾಗಿ ಎಲ್ಲಾ ಬಂದ್ವಿ. ಮುಂಬೈನಿಂದ ಗಾಯಕ ಬಂದಿದ್ದಾರೆ ಬನ್ನಿ ಸಾರ್ ಒಂದು ಹಾಡು ಹಾಡಿಸುತ್ತೇನೆ ಎಂದು ಅವರ ಮತ್ತೊಬ್ಬ ಸ್ನೇಹಿತರು ಕರೆದರು. ಅವರು ಕರೆದಾಗ ನಾವೆಲ್ಲಾ ಮುಂದಿನ ಸಾಲಿನಲ್ಲಿ ಕುಳಿತಿದ್ದೆವು.

ಗಾಯಕ ತುಂಬಾ ಚೆನ್ನಾಗಿ ಹಾಡುತ್ತಿದ್ದರು. ಅವರು ಹಾಡು ಹಾಡುತ್ತಲೇ ವೇದಿಕೆಯಿಂದ ಕೆಳಗೆ ಇಳಿದು ಶಾಸಕರ ಮುಂದೆ ನಿಂತು ಹಾಡು ಹಾಡಲು ಶುರು ಮಾಡಿದರು. ಆ ಸಮಯದಲ್ಲಿ ನಾವು ಹಾಡು ಎಂಜಾಯ್ ಮಾಡುತ್ತಿದ್ದೇವು. ಈ ನಡುವೆ ವ್ಯಕ್ತಿಯೊಬ್ಬ ಬಲಗೈಯಲ್ಲಿ ಒಂದು ಕಾಲು ಅಡಿಯಷ್ಟು ಮಚ್ಚು ಹಿಡಿದುಕೊಂಡಿದ್ದನು. ಬಳಿಕ ಮಚ್ಚಿನಿಂದ ಒಂದು ಏಟು ಹೊಡೆದು ಓಡಿ ಹೋದ.

mys tanveer sait 2

ಸಾಮಾನ್ಯವಾಗಿ ಜನರು ತನ್ವೀರ್ ಅವರ ಬಳಿ ಸೆಲ್ಫಿ ಕೇಳುತ್ತಾರೆ. ಅವರ ಬಳಿ ಮಾತನಾಡುತ್ತಾರೆ. ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಾರೆ. ಆ ವ್ಯಕ್ತಿ ಬಂದಾಗ ನಾನು ಹೀಗೆ ಎಂದುಕೊಂಡಿದ್ದೆ. ಆದರೆ ತನ್ವೀರ್ ಅವರ ದೇಹದ ಮೇಲೆ ರಕ್ತ ಬರುವುದನ್ನು ನೋಡಿ ರಕ್ತ, ರಕ್ತ ಎಂದು ಜೋರಾಗಿ ಕಿರುಚಿಕೊಂಡೆ. ನಾನು ಆ ವ್ಯಕ್ತಿ ಹಿಂದೆ ಓಡಲು ಆಗಲಿಲ್ಲ. ಏಕೆಂದರೆ ತನ್ವೀರ್ ಅವರು ರಕ್ತದ ಮಡುವಿನಲ್ಲಿದ್ದರು. ನಾನು ಅವರ ಕೈ ಹಿಡಿದುಕೊಂಡು ಕಾರಿನವರೆಗೂ ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದೆ.

mys tanveer sait 4

ತನ್ವೀರ್ ಅಂತಹ ಒಳ್ಳೆಯ ವ್ಯಕ್ತಿ, ಜನಪರ ವ್ಯಕ್ತಿ, ಅವರು ಮುಗ್ಧ ಮನಸ್ಸಿನ ಮಗುವಿನಂತಹ ಮನುಷ್ಯ, ಇವರ ಮೇಲೆ ಇಂದು ಮಾರಣಾಂತಿಕ ಹಲ್ಲೆ ಆಗಿದ್ದು, ಇದನ್ನು ಖಂಡಿಸಬೇಕು. ಅವರ ಆರೋಗ್ಯ ಸರಿ ಹೋಗಲಿ ಹಾಗೂ ಮತ್ತೆ ನಮ್ಮ ಜೊತೆ ಬೆರೆಯಲಿ. ದೇವರು ಅವರಿಗೆ ಆರೋಗ್ಯ ಕೊಡಲಿ ಹಾಗೂ ಅವರಿಗೆ ಏನೂ ಆಗದೇ ಇರಲಿ ಎಂದು ಕೇಳಿಕೊಳ್ಳುತ್ತೇನೆ. ಈಗ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಲ್ಲರೂ ಅವರಿಗಾಗಿ ಪ್ರಾರ್ಥನೆ ಮಾಡಿ ಎಂದು ಮನವಿ ಮಾಡಿಕೊಂಡರು.

ವೈದ್ಯರು ನಮಗೆ ಒಳಗೆ ಬಿಡುತ್ತಿಲ್ಲ. ರೆಡ್ ಜಾಕೆಟ್ ಹಾಕಿದ ವ್ಯಕ್ತಿ ತನ್ವೀರ್ ಅವರ ಕಾಲಿಗೆ ಬಿದ್ದು ಆಶೀರ್ವಾದ ಪಡೆಯುತ್ತಿದ್ದಾನೆ ಎಂದುಕೊಂಡಿದ್ದೇವು. ಆದರೆ ಆತ ಮಚ್ಚಿನಿಂದ ಒಂದು ಏಟು ಹೊಡೆದು ಓಡಿ ಹೋದ. ಬಳಿಕ ಆ ಮಚ್ಚನ್ನು ಅಲ್ಲಿಯೇ ಎಸೆದು ಓಡಿ ಹೋದ. ಈಗ ಮಚ್ಚು ಸಿಕ್ಕಿದೆ. ತನ್ವೀರ್ ಮೇಲೆ ಯಾವುದೇ ತರಹದ ಭ್ರಷ್ಟಚಾರ, ಹಗರಣದ ಆರೋಪಗಳಿಲ್ಲ. ಆದರೆ ವ್ಯಕ್ತಿ ಏಕೆ ಹಲ್ಲೆ ಮಾಡಿದ್ದಾನೆ ಎಂಬುದರ ಮಾಹಿತಿ ಇಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ.

TAGGED:MLAmysurupersonPublic TVTanveer Saitತನ್ವೀರ್ ಸೇಠ್ಪಬ್ಲಿಕ್ ಟಿವಿಮೈಸೂರುವ್ಯಕ್ತಿಶಾಸಕ
Share This Article
Facebook Whatsapp Whatsapp Telegram

Cinema news

sudeep 6
ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಹೂಡಿದ್ದ ಕಿಚ್ಚ ಸುದೀಪ್‌ – ನಟನಿಗೆ ಕಷ್ಟವಾಯ್ತಾ ಕ್ರಾಸ್ ಎಕ್ಸಾಮಿನೇಷನ್?
Bengaluru City Cinema Court Districts Karnataka Latest Sandalwood Top Stories
Ranbir Kapoor Yash Sai Pallavi
ಟೀಸರ್‌ ರಿಲೀಸ್‌ ಬೆನ್ನಲ್ಲೇ ‘ರಾಮಾಯಣ’ ನಟರ ಸಂಭಾವನೆ ಬಹಿರಂಗ – ರಣಬೀರ್‌ಗೆ 150 ಕೋಟಿ, ಯಶ್‌ಗೆ ಎಷ್ಟು?
Bollywood Cinema Latest Top Stories
Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories

You Might Also Like

British Flight Attendant Arrest
Latest

ಡ್ರೋನ್ ದಾಳಿಯ ಪೋಟೊ ಹಂಚಿಕೊಂಡಿದ್ದಕ್ಕೆ ಬ್ರಿಟಿಷ್ ಫ್ಲೈಟ್ ಅಟೆಂಡೆಂಟ್ ದುಬೈನಲ್ಲಿ ಅರೆಸ್ಟ್‌

Public TV
By Public TV
15 minutes ago
f 15e strike eagle how rescued
Latest

ಫೈಟರ್‌ ಜೆಟ್‌ನಿಂದ ಬಿದ್ದ ಪೈಲಟ್‌ನನ್ನು ಅಮೆರಿಕ ನಿಖರವಾಗಿ ಇರಾನ್‌ ನೆಲದಲ್ಲಿ ಪತ್ತೆ ಹಚ್ಚಿ ರಕ್ಷಿಸಿದ್ದು ಹೇಗೆ?

Public TV
By Public TV
30 minutes ago
Mohsin Naqvi
Cricket

ಐಪಿಎಲ್‌ ಅನ್ನು ಪಿಎಸ್‌ಎಲ್‌ ಹಿಂದಿಕ್ಕಿ ವಿಶ್ವದ ನಂ.1 ಲೀಗ್‌ ಆಗುತ್ತೆ: ಮೊಹ್ಸಿನ್‌ ನಖ್ವಿ

Public TV
By Public TV
54 minutes ago
Siddaganga Mutt
Districts

ಸಿದ್ದಗಂಗಾ ಮಠದಲ್ಲಿ 119 ಮಕ್ಕಳಿಗೆ ಶಿವಕುಮಾರ ಶ್ರೀಗಳ ಹೆಸರು ನಾಮಕರಣ

Public TV
By Public TV
1 hour ago
zameer ahmed s.s.mallikarjun
Davanagere

ಎಷ್ಟೇ ಒತ್ತಾಯ ಮಾಡಿದ್ರೂ ದಾವಣಗೆರೆಯಲ್ಲಿ ಪ್ರಚಾರಕ್ಕೆ ಒಪ್ಪದೇ ತೆರಳಿದ ಜಮೀರ್

Public TV
By Public TV
1 hour ago
Hyderabad truck accident
Crime

ಸ್ಕೂಟಿಗೆ ಡಿಕ್ಕಿ ಹೊಡೆದು 1 ಕಿಮೀ ಎಳೆದೊಯ್ದ ಟ್ರಕ್‌ – ಮಹಿಳೆ ಸಾವು, ಪತಿಗೆ ಗಾಯ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?