Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಜ್ಯದಲ್ಲಿ ನಕಲಿ ಎಸಿಬಿ ಹಾವಳಿ – ದಾಳಿ ನಡೆಸದೇ ಬಿ-ರಿಪೋರ್ಟ್ ಹಾಕಲು ಲಕ್ಷಾಂತರ ರೂ. ಬೇಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ರಾಜ್ಯದಲ್ಲಿ ನಕಲಿ ಎಸಿಬಿ ಹಾವಳಿ – ದಾಳಿ ನಡೆಸದೇ ಬಿ-ರಿಪೋರ್ಟ್ ಹಾಕಲು ಲಕ್ಷಾಂತರ ರೂ. ಬೇಡಿಕೆ

Districts

ರಾಜ್ಯದಲ್ಲಿ ನಕಲಿ ಎಸಿಬಿ ಹಾವಳಿ – ದಾಳಿ ನಡೆಸದೇ ಬಿ-ರಿಪೋರ್ಟ್ ಹಾಕಲು ಲಕ್ಷಾಂತರ ರೂ. ಬೇಡಿಕೆ

Public TV
Last updated: April 30, 2022 12:37 pm
Public TV
Share
2 Min Read
raichuru 2 1
SHARE

– ಎಸಿಬಿ ಅಧಿಕಾರಿಗಳ ಹೆಸರು ದುರ್ಬಳಕೆ ಮಾಡಿ ದಂಧೆ ನಡೆಸಿರುವ ಜಾಲ
– ರಾಯಚೂರಿನಲ್ಲಿ ಮೂವರು ಅಧಿಕಾರಿಗಳಿಗೆ ಬ್ಲಾಕ್ ಮೇಲ್

ರಾಯಚೂರು: ರಾಜ್ಯದಲ್ಲಿ ಮೇಲಿಂದ ಮೇಲೆ ಎಸಿಬಿ ದಾಳಿ ನಡೆದು ಭ್ರಷ್ಟರ ಬೇಟೆ ಸಂಚಲನ ಮೂಡಿಸಿದ ಬೆನ್ನಲ್ಲೇ ನಕಲಿ ಎಸಿಬಿ ಹಾವಳಿ ಶುರುವಾಗಿದೆ. ರಾಯಚೂರು ಸೇರಿ ಹಲವೆಡೆ ಎಸಿಬಿ ಅಧಿಕಾರಿಗಳ ಹೆಸರಲ್ಲಿ ವಿವಿಧ ಇಲಾಖೆ ಅಧಿಕಾರಿಗಳಿಗೆ ಕರೆ ಮಾಡಿ ದಾಳಿ ಮಾಡುವ ಬೆದರಿಕೆ ಹಾಕುತ್ತಿದ್ದಾರೆ. ಹಣವನ್ನು ನೀಡಿದೇ ಇದ್ದರೆ ಕೇಸ್ ಕ್ಲೋಸ್ ಮಾಡುತ್ತೇವೆ ಅಂತಿದ್ದಾರೆ. ಭಯಗೊಂಡವರು ಹಣಕೊಟ್ಟರೆ, ಅನುಮಾನ ಬಂದವರು ಪೊಲೀಸ್ ಕೇಸ್ ದಾಖಲು ಮಾಡಿದ್ದಾರೆ.

raichuru 1 1

ಭ್ರಷ್ಟ ಅಧಿಕಾರಿಗಳ ನಿದ್ದೆಕೆಡಿಸುವ ಎಸಿಬಿಯನ್ನೇ ಬಂಡವಾಳ ಮಾಡಿಕೊಂಡ ನಕಲಿ ಎಸಿಬಿ ಗ್ಯಾಂಗ್ ರಾಯಚೂರು ಸೇರಿ ರಾಜ್ಯದ ಯಾದಗಿರಿ, ಬೀದರ್ ಹಾಗೂ ಇತರೆಡೆ ದಾಳಿಯ ಬೆದರಿಕೆ, ಹಣ ವಸೂಲಿ ದಂಧೆ ನಡೆಸಿದೆ. ನೇರವಾಗಿ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಕರೆ ಮಾಡುವ ಈ ನಕಲಿ ಎಸಿಬಿ ಗ್ಯಾಂಗ್, ನಿಮ್ಮ ಇಲಾಖೆಯ ಅಧೀನ ಕಚೇರಿಯ ಇಂತಹ ಅಧಿಕಾರಿ ವಿರುದ್ಧ ಎಸಿಬಿಗೆ ದೂರು ಬಂದಿದೆ. ಅವರನ್ನು ವಿಚಾರಣೆ ಮಾಡಬೇಕು ನಮ್ಮ ಮೊಬೈಲ್ ಸಂಖ್ಯೆಗೆ ಕರೆ ಮಾಡಲು ಹೇಳಿ ಅಂತ ಹೇಳುತ್ತಾರೆ. ಬಳಿಕ ಟಾರ್ಗೆಟ್ ಮಾಡಿರುವವರಿಗೆ ಕರೆ ಮಾಡಿ ಬಿ ರಿಪೋರ್ಟ್ ಹಾಕಲು ಹಣದ ಬೇಡಿಕೆ ಇಡುವುದು ಈ ಜಾಲದ ದಂಧೆಯ ರೂಪ. ಇದನ್ನೂ ಓದಿ: ಮದುವೆ ಸಮಾರಂಭಗಳಿಗೆ ವಿಭಿನ್ನ ಶೈಲಿಯ ಪೇಟ-ಪರಂಪರೆಯ ಕಿರೀಟ

raichuru 3

ರಾಯಚೂರು ಎಸಿಬಿ, ಡಿವೈಎಸ್‌ಪಿ ವಿಜಯಕುಮಾರ್ ಹೆಸರಲ್ಲಿ ರಾಯಚೂರು ಜಿಲ್ಲಾ ಪಂಚಾಯತ್ ಸಿಇಓ ನೂರ್ ಜಹಾರ್ ಖಾನಂಗೆ ಕರೆ ಮಾಡಿ ನಿಮ್ಮ ಅಧೀನದ ಜಿ.ಪಂ.ಯೋಜನಾಧಿಕಾರಿ ಟಿ.ರೋಣಿ ಹಾಗೂ ರಾಯಚೂರು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ರಾಮರೆಡ್ಡಿ ವಿರುದ್ದ ದೂರು ಬಂದಿದೆ. ಅಬಕಾರಿ ಉಪ ಆಯುಕ್ತೆ ಲಕ್ಷ್ಮಿ ನಾಯಕ್‍ಗೆ ಕರೆ ಮಾಡಿ ರಾಯಚೂರು ವಲಯದ ಅಬಕಾರಿ ನಿರೀಕ್ಷಕ ಹಣಮಂತ ಗುತ್ತೆದಾರ ವಿರುದ್ಧ ಎಸಿಬಿಗೆ ದೂರು ಬಂದಿದೆ. ಅವರನ್ನ ವಿಚಾರಣೆ ಮಾಡಬೇಕು. ನನ್ನ ನಂಬರ್‍ಗೆ ಕರೆ ಮಾಡಲು ಹೇಳಿ ಅಂತ ತಿಳಿಸಿದ್ದಾರೆ. ಬಳಿಕ ನೇರವಾಗಿ ಅಧಿಕಾರಿಗಳಿಗೆ ಕರೆ ಮಾಡಿ ಹಣದ ಬೇಡಿಕೆ ಇಟ್ಟಿದ್ದಾರೆ.

raichuru 4

ನಿಮಗೆ ಸಹಾಯ ಮಾಡಲು ಕರೆ ಮಾಡಿದ್ದೇನೆ. ಹಣ ಫೋನ್ ಪೇ ಇಲ್ಲಾ ಗೂಗಲ್ ಪೇ ಮಾಡದಿದ್ದರೆ, ನಿಮ್ಮಿಷ್ಟ. ಮನೆ ಕಚೇರಿ ಮೇಲೆ ದಾಳಿ ಮಾಡಲು ಕೇಂದ್ರ ಕಚೇರಿಯಿಂದ ಆದೇಶ ಬಂದಿದೆ. ದಸ್ತಗಿರಿ ಮಾಡುತ್ತೇವೆ, ಇದು ಬೇಕಾ ನಿನಗೆ. ಇಬ್ಬರು ಎಸಿಬಿ ಅಧಿಕಾರಿಗಳು ಶ್ರೀಲಂಕಾ ಮಾನಸ ಸರೋವರ ಟ್ರಿಪ್ ಹೋಗುತ್ತಿದ್ದಾರೆ. ಹಾಗಾಗಿ ತಲಾ 75 ಸಾವಿರ ಒಟ್ಟು ಒಂದು ಲಕ್ಷದ ಐವತ್ತು ಸಾವಿರ ಹಣ ಹಾಕಿ. ಕೇಂದ್ರ ಕಚೇರಿ ಸ್ಟೆನೋ ನವೀನ್ ಕುಮಾರ್, ಉಮೇಶ್ ಕುಮಾರ್ ನಂಬರ್‌ಗೆ ಫೋನ್ ಪೇ, ಗೂಗಲ್ ಪೇ ಮಾಡಿ. ಮಾಡದಿದ್ದರೆ ಮುಂದಿನ ಪರಿಣಾಮ ಎದುರಿಸುತ್ತೀರಿ ಅಂತ ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: ದ್ವೇಷಕ್ಕೆ ಪ್ರಧಾನ ಮಂತ್ರಿ ಅಂತ್ಯ ಹಾಡಬೇಕು: ಓವೈಸಿ

ನಕಲಿ ಎಸಿಬಿ ಬೆದರಿಕೆ ಕರೆಗೆ ಹೆದರಿ ಕೆಲ ಅಧಿಕಾರಿಗಳು ಹಣವನ್ನು ನೀಡಿದ್ದಾರೆ ಅನ್ನೋ ಮಾಹಿತಿಯಿದೆ. ಆದರೆ ಅನುಮಾನ ಬಂದಿರುವ ರಾಯಚೂರಿನ ಅಧಿಕಾರಿಗಳು ಸಿಇಎನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರುಗಳನ್ನು ದಾಖಲಿಸಿದ್ದಾರೆ. ಅಧಿಕಾರಿಗಳ ಸಂಪೂರ್ಣ ಮಾಹಿತಿ ಕಲೆ ಹಾಕುವ ನಕಲಿ ಎಸಿಬಿ ಟೀಂ ಬೆದರಿಕೆ, ಹಣ ವಸೂಲಿ ದಂಧೆಯನ್ನು ನಡೆಸಿದೆ. ಪೊಲೀಸರು ನಕಲಿ ಎಸಿಬಿಗಳನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕಿದೆ.

TAGGED:B-reportFake ACBmoneyraichuruನಕಲಿ ಎಸಿಬಿಬಿ-ರಿಪೋರ್ಟ್ರಾಯಚೂರುಹಣ
Share This Article
Facebook Whatsapp Whatsapp Telegram

Cinema news

Rashmika Mandanna Father
ರಶ್ಮಿಕಾಗೆ ಮದುವೆಯ ಉಡುಗೊರೆಯಾಗಿ ತಮ್ಮ ಮನೆಯನ್ನೇ ನೀಡಿದ ತಂದೆ ಮದನ್‌ ಮಂದಣ್ಣ
Cinema Districts Karnataka Kodagu Latest South cinema Top Stories
DARSHAN RENUKASWAMY
ರೇಣುಕಾಸ್ವಾಮಿ ಕೊಲೆ ಕೇಸ್‌ ಆಧರಿತ ಸಿನಿಮಾ ‘ಬಾಸ್’‌ ರಿಲೀಸ್‌ಗೆ ಕೋರ್ಟ್‌ ತಡೆಯಾಜ್ಞೆ
Bengaluru City Cinema Court Latest Sandalwood Top Stories
Tamil Actress Subashini
ಪತಿಯೊಂದಿಗೆ ವಿಡಿಯೋ ಕಾಲ್‌ನಲ್ಲಿರುವಾಗಲೇ ನೇಣಿಗೆ ಶರಣು – ತಮಿಳು ನಟಿ ಸುಭಾಷಿಣಿ ಆತ್ಮಹತ್ಯೆ
Cinema Latest Main Post South cinema
shreyas manju
ಶ್ರೇಯಸ್ ಮಂಜುಗೆ ʻದಿಲ್‌ದಾರ್ʼ ಬರ್ತ್‌ಡೇ ಟೀಸರ್ ಗಿಫ್ಟ್‌!
Cinema Latest Sandalwood

You Might Also Like

PBKS
Cricket

ಮಳೆಯಿಂದ ಕೋಲ್ಕತ್ತಾ vs ಪಂಜಾಬ್‌ ಪಂದ್ಯ ರದ್ದು – ಆರ್‌ಸಿಬಿ ಹಿಂದಿಕ್ಕಿ ನಂ.1 ಸ್ಥಾನಕ್ಕೆ ಜಿಗಿದ ಶ್ರೇಯಸ್‌ ಪಡೆ

Public TV
By Public TV
9 minutes ago
Donald Trump 1
Latest

ಒಂದೇ ರಾತ್ರಿಯಲ್ಲಿ ಇಡೀ ಇರಾನ್‌ನ ಸರ್ವನಾಶ ಮಾಡಬಹುದು, ಅದು ಮಂಗಳವಾರ ಇರಬಹುದು: ಟ್ರಂಪ್‌ ಮತ್ತೆ ಎಚ್ಚರಿಕೆ

Public TV
By Public TV
24 minutes ago
udupi rescue
Latest

ಬಾವಿಗೆ ಬಿದ್ದ ವೃದ್ಧ ಮೂರು ದಿನ ಸಾವು-ಬದುಕಿನ ಮಧ್ಯೆ ಹೋರಾಟ; ಪ್ರಾಣ ಉಳಿಸಿದ ಗ್ಯಾಸ್ ಸಿಲಿಂಡರ್ ಒಟಿಪಿ

Public TV
By Public TV
46 minutes ago
Delhi Assembly Masked man arrested
Latest

ದೆಹಲಿ ವಿಧಾನಸೌಧದಲ್ಲಿ ಹೂಗುಚ್ಛ ಇಟ್ಟು, ಸ್ಪೀಕರ್ ಕಾರಿನ ಮೇಲೆ ಇಂಕ್ ಎರಚಿದ್ದವ 2 ಗಂಟೆಯಲ್ಲೇ ಅರೆಸ್ಟ್‌

Public TV
By Public TV
51 minutes ago
woman in Bengaluru Reached home Safely at late night with help of bmtc worker and rapido driver
Bengaluru City

ತಡರಾತ್ರಿ ಯುವತಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ BMTC ಸಿಬ್ಬಂದಿ, ರ‍್ಯಾಪಿಡೋ ಚಾಲಕ

Public TV
By Public TV
1 hour ago
Belagavi Fraud
Belgaum

ಇನ್‌ಸ್ಟಾದಲ್ಲಿ ಲವ್, ಮದ್ವೆ ಹೆಸರಲ್ಲಿ ಸೆಕ್ಸ್ – ವಿಡಿಯೋ ವೈರಲ್ ಮಾಡುವ ಬೆದರಿಕೆಯೊಡ್ಡಿ 150 ಗ್ರಾಂ ಚಿನ್ನ, 19 ಲಕ್ಷ ಪಡೆದು ವಂಚನೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?